ಪಾಕ್ ದಾಳಿ: ಶಾಲೆಯಲ್ಲಿ ಸಿಲುಕಿಕೊಂಡ 50 ಮಕ್ಕಳು
Team Udayavani, Jul 19, 2017, 3:45 AM IST
ಜಮ್ಮು: ಗಡಿಯಲ್ಲಿ ಅತಿರೇಕದ ವರ್ತನೆ ತೋರುತ್ತಿರುವ ಪಾಕಿಸ್ಥಾನ ಮಂಗಳವಾರ ಒಂದೇ ದಿನ 4 ಬಾರಿ ಕದನ ವಿರಾಮ ಉಲ್ಲಂ ಸಿದೆ. ಪಾಕಿಸ್ಥಾನದ ದುಂಡಾವರ್ತನೆಯಿಂದ ಗಡಿ ಗ್ರಾಮದ ಜನರು ಭಯಭೀತರಾಗಿದ್ದಾರೆ. ಇದೇ ವೇಳೆ, ನಿರಂತರ ಶೆಲ್ ದಾಳಿಯಿಂದಾಗಿ ನೌಶೇರಾ ವಲಯದಲ್ಲಿ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸರಕಾರಿ ಶಾಲೆಯೊಂದರಲ್ಲಿ ಸಿಲುಕಿದ್ದು, ವಿಷಯ ತಿಳಿಯುತ್ತಿದ್ದಂತೆಯೇ ಅಲ್ಲಿಗೆ ಧಾವಿಸಿದ ಯೋಧರು 12 ಮಂದಿ ವಿದ್ಯಾರ್ಥಿಗಳನ್ನು ರಕ್ಷಿಸಿದ್ದಾರೆ.
ರಜೌರಿ, ಪೂಂಛ… ಜಿಲ್ಲೆಯಲ್ಲಿ ಗಡಿಯುದ್ದಕ್ಕೂ ಪಾಕ್ ಪಡೆ ಗುಂಡಿನ ದಾಳಿ ನಡೆಸಿದ್ದು,ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.
ಬುಲೆಟ್ಪ್ರೂಫ್ ವಾಹನದಲ್ಲಿ ಕರೆತಂದರು: ನೌಶೇರಾದ ಸೆಹಾರ್ನ ಶಾಲೆಯಲ್ಲಿ 50 ಮಕ್ಕಳು ಸೋಮವಾರ ಸಿಲುಕಿಕೊಂಡಿದ್ದರು. ಈ ಪೈಕಿ 12 ಮಂದಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳೂ ಇದ್ದರು. ಶೆಲ್ಗಳು ನಿರಂತರವಾಗಿ ಬಂದು ಬೀಳುತ್ತಿದ್ದ ಕಾರಣ, ಹೊರಬರ ಲಾ ಗದೇ ಮಕ್ಕಳು ಒಳಗೇ ಉಳಿಯಬೇಕಾಯಿತು. 12 ಮಕ್ಕಳನ್ನು 3 ಬುಲೆಟ್ಪ್ರೂಫ್ ವಾಹನಗಳಿಂದ ಕರೆತರಲಾ ಯಿತು. ಶೆಲ್ಲಿಂಗ್ನ ತೀವ್ರತೆ ಕಡಿಮೆಯಾದ ಬಳಿಕ ಎಲ್ಲ ವಿದ್ಯಾರ್ಥಿಗಳನ್ನೂ ರಕ್ಷಿಸಲಾಗುವುದು ಎಂದು ಸೇನಾ ವಕ್ತಾರರು ತಿಳಿಸಿದ್ದಾರೆ.
ನುಸುಳಲು ಯತ್ನಿಸಿದ ಉಗ್ರನ ಹತ್ಯೆ: ಗುಜೇರ್ ವಲಯದಲ್ಲಿ ಒಳನುಸುಳಲು ಯತ್ನಿಸುತ್ತಿದ್ದ ಉಗ್ರನೊಬ್ಬನನ್ನು ಸೇನಾಪಡೆ ಸೋಮವಾರ ಸದೆಬಡಿದಿದೆ.
ಮೇಜರ್ನನ್ನು ಗುಂಡಿಕ್ಕಿ ಕೊಂದ ಯೋಧ
ಮೊಬೈಲ್ ಬಳಕೆ ಮಾಡಬೇಡಿ ಎಂದಿದ್ದಕ್ಕೆ ಸೇನೆಯ ಮೇಜರ್ವೊಬ್ಬರನ್ನು ಯೋಧನೇ ಗುಂಡಿಕ್ಕಿ ಕೊಂದ ಘಟನೆ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ನಡೆದಿದೆ. ಸೂಕ್ಷ್ಮ ಪ್ರದೇಶದಲ್ಲಿ ಮೊಬೈಲ್ ಬಳಕೆ ಮಾಡಿದ್ದಕ್ಕೆ ಮೇಜರ್ ಶಿಖರ್ ಥಾಪಾ ಅವರು ಯೋಧ ಕದಿರೇಶನ್ ಜಿ. ಅವರನ್ನು ತರಾಟೆಗೆ ತೆಗೆದುಕೊಂಡಿದ್ದಲ್ಲದೆ, ಯೋಧನ ಕೈಯಿಂದ ಮೊಬೈಲನ್ನು ಕಸಿದುಕೊಂಡಿದ್ದಾರೆ. ಆಕ್ರೋಶಗೊಂಡ ಕದಿರೇಶನ್ ಅವರು ಥಾಪಾ ಅವರ ಮೇಲೆ 5 ಸುತ್ತು ಗುಂಡು ಹಾರಿಸಿ ಹತ್ಯೆಗೈದಿದ್ದಾರೆ .
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Digital arrest ವಂಚನೆಗೆ ಬಲಿಯಾಗಬೇಡಿ: ಕೇಂದ್ರ ಎಚ್ಚರಿಕೆ ಸಂದೇಶ
Sabarimala;ಅಯ್ಯಪ್ಪ ದರ್ಶನಕ್ಕೆ ಇನ್ನು ಆನ್ಲೈನ್ ನೋಂದಣಿ ಕಡ್ಡಾಯ
Controversial Maldives President ಭಾರತಕ್ಕೆ !; ಇಂದು ರಾಷ್ಟ್ರಪತಿ, ಪ್ರಧಾನಿ ಮೋದಿ ಭೇಟಿ
Bhopal;1,800 ಕೋ.ರೂ. ಡ್ರಗ್ಸ್ ವಶ!; ದಿಲ್ಲಿಯಲ್ಲಿ ಕೊಕೇನ್ ಪತ್ತೆ ಬೆನ್ನಲ್ಲೇ ಘಟನೆ
Chennai Airshow; ಸುಡು ಬಿಸಿಲಿಗೆ 4 ಸಾ*ವು:200 ಮಂದಿ ಆಸ್ಪತ್ರೆಗೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Mudigere: ಚಲಿಸುತ್ತಿರುವ ಕಾರಿನ ಬಾಗಿಲಲ್ಲಿ ಕುಳಿತು ಮಹಿಳೆ ಹುಚ್ಚಾಟ…
Mumtaz Ali Missing: ಮೊದಿನ್ ಬಾವಾ ಸೋದರ ಮಮ್ತಾಜ್ ಆಲಿ ಆತ್ಮಹ*ತ್ಯೆ?
Hebri: ವರುಣನ ರುದ್ರ ನರ್ತನ: ಮುದ್ರಾಡಿ ಬಲ್ಲಾಡಿ ಪರಿಸರ ತತ್ತರ
Mangaluru: ಅಸಭ್ಯ ವರ್ತನೆ, ಹಲ್ಲೆ ಘಟನೆ ಯುವಕನನ್ನು ಕೆಲಸದಿಂದ ತೆಗೆದ ಮಾಲಕರು
Gangolli: ಶ್ರೀ ಮಹಾಂಕಾಳಿ ದೇಗುಲದ ಅಡವಿರಿಸಿದ್ದ 256 ಗ್ರಾಂ ಚಿನ್ನಾಭರಣ ವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.