ಕಡಿಮೆ ಮಳೆಯಾದ ಕಡೆ ಆಗಸ್ಟ್‌ನಲ್ಲಿ ಮೋಡ ಬಿತ್ತಲು ಸರಕಾರ ಸಿದ್ಧತೆ


Team Udayavani, Jul 22, 2017, 6:25 AM IST

Patil-H-K-600.jpg

ಬೆಂಗಳೂರು: ರಾಜ್ಯದಲ್ಲಿ ಮೋಡ ಬಿತ್ತನೆಗೆ ಸರಕಾರ ಅಂತಿಮ ಸಿದ್ಧತೆ ನಡೆಸಿದ್ದು, ಆಗಸ್ಟ್‌ ಮೊದಲ ವಾರದಲ್ಲಿ ಮೋಡ ಬಿತ್ತನೆ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ ಎಚ್‌.ಕೆ. ಪಾಟೀಲ್‌ ಅವರು ಹೇಳಿದ್ದಾರೆ. ರಾಜ್ಯದಲ್ಲಿ ಈಗ ಉತ್ತಮ ಮಳೆಯಾಗುತ್ತಿದೆ ಯಾದರೂ ಅನೇಕ ಕಡೆಗಳಲ್ಲಿ ಮಳೆ ಪ್ರಮಾಣ ಕಡಿಮೆ ಇದೆ. ಈ ಹಿನ್ನೆಲೆಯಲ್ಲಿ ಮಳೆ ಕಡಿಮೆ ಇರುವ ಪ್ರದೇಶಗಳನ್ನು ಗುರುತಿಸಿ ಮೋಡ ಬಿತ್ತನೆ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು. ವಿಧಾನಸೌಧದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಮೋಡ ಬಿತ್ತನೆ ಕುರಿತ ಟೆಂಡರ್‌ ಪ್ರಕ್ರಿಯೆಯಲ್ಲಿ ಎರಡು ಕಂಪೆನಿಗಳು ಭಾಗವಹಿಸಿದ್ದವು. ಈ ಪೈಕಿ ಬೆಂಗಳೂರು ಮೂಲದ ಹೊಯ್ಸಳ ಕಂಪೆನಿ ಬಿಡ್‌ನ‌ಲ್ಲಿ ಯಶಸ್ವಿಯಾಗಿದ್ದು, 30 ಕೋಟಿ ರೂ. ವೆಚ್ಚದಲ್ಲಿ ಮೋಡ ಬಿತ್ತನೆ ಮಾಡಲಿದೆ ಎಂದರು.

ಮೋಡ ಬಿತ್ತನೆಗಾಗಿ ಮೂರು ರಡಾರ್‌ ಹಾಗೂ ಎರಡು ವಿಮಾನಗಳನ್ನು ಬಳಸಿ ಕೊಳ್ಳಲಾಗುತ್ತಿದೆ. ಬೆಂಗಳೂರು, ಸುರಪುರ ಮತ್ತು ಗದಗ್‌ನಲ್ಲಿ ತಲಾ ಒಂದು ರಡಾರ್‌ಗಳನ್ನು ಸ್ಥಾಪಿಸಲಾಗುತ್ತದೆ. ಎರಡು ವಿಮಾನಗಳ ಮೂಲಕ ಒಟ್ಟು 60 ದಿನಗಳ ಕಾಲ 300 ಗಂಟೆ ಅವಧಿಯಲ್ಲಿ ಮೋಡ ಬಿತ್ತನೆ ಕಾರ್ಯ ನಡೆಯಲಿದೆ. ಮೋಡ ಬಿತ್ತನೆಗೆ ಅಂತಾರಾಷ್ಟ್ರೀಯ ತಜ್ಞರು ಅಮೆರಿಕಾದಿಂದ ಆಗಮಿಸಬೇಕಾಗಿದ್ದು, ಇದಕ್ಕೆ ಕೇಂದ್ರ ಸರಕಾರದ ಅನುಮತಿ ಬೇಕಾಗುತ್ತದೆ. ಆದ್ದರಿಂದ ಈಗಾಗಲೇ ಕೇಂದ್ರ ಗೃಹ ಸಚಿವರಿಗೆ ಅನುಮತಿ ಕೋರಿ ಪತ್ರ ಬರೆಯಲಾಗಿದೆ ಎಂದು ಹೇಳಿದರು. ಮೋಡ ಬಿತ್ತನೆಗೆ ಸಂಬಂಧಿಸಿದಂತೆ ಡಾ| ಆರ್‌.ವಿ. ಶರ್ಮಾ ನೇತೃತ್ವದ ತಾಂತ್ರಿಕ ತಂಡ ಕಾರ್ಯ ನಿರ್ವಹಿಸಲಿದೆ. ಹುಬ್ಬಳ್ಳಿ ಹಾಗೂ ಬೆಂಗಳೂರು ವಿಮಾನ ನಿಲ್ದಾಣದಿಂದ ಕಾರ್ಯಾಚರಣೆ ನಡೆಯಲಿದ್ದು, ಅಗತ್ಯ ಬಿದ್ದರೆ ಬೀದರ್‌ ವಿಮಾನ ನಿಲ್ದಾಣದಿಂದಲೂ ಕಾರ್ಯಾಚರಣೆ ನಡೆಸಲು ಚಿಂತಿಸಲಾಗಿದೆ ಎಂದು ತಿಳಿಸಿದರು.

ಗ್ರಾಮೀಣ ರಸ್ತೆಗೆ ಅನುದಾನ: ಕೇಂದ್ರಕ್ಕೆ ಮನವಿ
ಬೆಂಗಳೂರು: ರಾಜ್ಯದ ಗ್ರಾಮೀಣ ರಸ್ತೆಗಳ ನವೀಕರಣ ಮತ್ತು ನಿರ್ವಹಣೆಗೆ ಸರಕಾರ ಹೊಸ ನೀತಿ ಜಾರಿಗೆ ತಂದಿದೆ ಎಂದು ಸಚಿವ ಎಚ್‌.ಕೆ. ಪಾಟೀಲ್‌ ಹೇಳಿದ್ದಾರೆ. ಹೊಸ ನೀತಿಯಡಿ ಗ್ರಾಮೀಣ ರಸ್ತೆಗಳ ನವೀಕರಣಕ್ಕೆ 11 ಸಾವಿರ ಕೋಟಿ ರೂ. ಹಾಗೂ ನಿರ್ವಹಣೆಗೆ 8,082 ಕೋಟಿ ರೂ. ಬೇಕಾಗುತ್ತದೆ. ಆದ್ದರಿಂದ ಕೇಂದ್ರ ಸರಕಾರ ಈ ಉದ್ದೇಶಕ್ಕಾಗಿ 10 ಸಾವಿರ ಕೋಟಿ ರೂ. ಅನುದಾನ ನೀಡಬೇಕು ಎಂದು ಒತ್ತಾಯಿಸಿದ ಅವರು, ಈ ಬಗ್ಗೆ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಪೌರಾಡಳಿತ ಸಚಿವ ಈಶ್ವರ್‌ ಖಂಡ್ರೆ ಅವರು ಮಧ್ಯಪ್ರದೇಶ, ಗುಜರಾತ್‌ ಮತ್ತು ತಮಿಳುನಾಡುಗಳಲ್ಲಿ ಅಧ್ಯಯನ ನಡೆಸಿ ಗ್ರಾಮೀಣ ರಸ್ತೆಗಳ ಸುಧಾರಣೆ ಹಾಗೂ ನಿರ್ವಹಣೆ ಕುರಿತು ವರದಿ ನೀಡಿದ್ದರು. ಆ ವರದಿ ಆಧರಿಸಿ ರಾಜ್ಯ ಸರಕಾರ ಉತ್ತಮ ನೀತಿ ರೂಪಿಸಿದೆ. ಇದರಿಂದ ಕನಿಷ್ಠ 10 ವರ್ಷಗಳ ಕಾಲ ಗ್ರಾಮೀಣ ರಸ್ತೆಗಳ ನಿರ್ವಹಣೆಗೆ ಅನುಕೂಲವಾಗಲಿದೆ ಎಂದು ಹೇಳಿದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-74: ಕುಲನಾಶದ ಕಳವಳ

Udupi: ಗೀತಾರ್ಥ ಚಿಂತನೆ-74: ಕುಲನಾಶದ ಕಳವಳ

1-bjp

Water pollution; ಮಲಿನ ಯಮುನೆಯಲ್ಲಿ ಮಿಂದು ಬಿಜೆಪಿ ದಿಲ್ಲಿ ಘಟಕದ ಅಧ್ಯಕ್ಷ ಪ್ರತಿಭಟನೆ

1-prr

Piracy;ಕಳೆದ ವರ್ಷ 22,400 ಕೋಟಿ ರೂ. ನಷ್ಟ!

1-kashmir

Kashmir; ರಾಜ್ಯ ಸ್ಥಾನಮಾನ ವಾಪಸ್‌ ಮಾಡಿ: ಪ್ರಧಾನಿಗೆ ಒಮರ್‌ ಮನವಿ

Kaup: ಮಾರಿಯಮ್ಮ ದೇವಿಯ ಸ್ವರ್ಣ ಗದ್ದುಗೆ: ಸ್ವರ್ಣ ಸಮರ್ಪಣೆಗೆ ಅಮಿತೋತ್ಸಾಹ

Kaup: ಮಾರಿಯಮ್ಮ ದೇವಿಯ ಸ್ವರ್ಣ ಗದ್ದುಗೆ: ಸ್ವರ್ಣ ಸಮರ್ಪಣೆಗೆ ಅಮಿತೋತ್ಸಾಹ

gold

Kerala; ಆಭರಣ ಘಟಕಕ್ಕೆ ದಾಳಿ: ದಾಖಲೆ ಇಲ್ಲದ 104 ಕೆ.ಜಿ. ಚಿನ್ನ ವಶ!

Udupi: ಅಧಿಕ ಲಾಭಾಂಶದ ಆಮಿಷ: ಲಕ್ಷಾಂತರ ರೂ.ವಂಚನೆ

Udupi: ಅಧಿಕ ಲಾಭಾಂಶದ ಆಮಿಷ: ಲಕ್ಷಾಂತರ ರೂ.ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Results: 8, 9, 10ನೇ ತರಗತಿಯ ಮಧ್ಯ ವಾರ್ಷಿಕ ಪರೀಕ್ಷೆ ಫ‌ಲಿತಾಂಶಕ್ಕೆ ತಡೆ

Results: 8, 9, 10ನೇ ತರಗತಿಯ ಮಧ್ಯ ವಾರ್ಷಿಕ ಪರೀಕ್ಷೆ ಫ‌ಲಿತಾಂಶಕ್ಕೆ ತಡೆ

CM Siddaramaiah: ನೀತಿಸಂಹಿತೆ ಬಳಿಕ ಜಾತಿ ಗಣತಿ ತೀರ್ಮಾನ

CM Siddaramaiah: ನೀತಿಸಂಹಿತೆ ಬಳಿಕ ಜಾತಿ ಗಣತಿ ತೀರ್ಮಾನ

Siddaramaiah: ಅನಧಿಕೃತ ಕಟ್ಟಡ ಕುಸಿದರೆ ಅಧಿಕಾರಿಗಳೇ ಹೊಣೆ

Siddaramaiah: ಅನಧಿಕೃತ ಕಟ್ಟಡ ಕುಸಿದರೆ ಅಧಿಕಾರಿಗಳೇ ಹೊಣೆ

Congress: ಸಿ.ಪಿ. ಯೋಗೇಶ್ವರ್‌ಗೆ ಸಿ.ಟಿ. ರವಿ ಸಹಕಾರವಿದೆ: ಡಿ.ಕೆ.ಸು. ಬಾಂಬ್‌

Congress: ಸಿ.ಪಿ. ಯೋಗೇಶ್ವರ್‌ಗೆ ಸಿ.ಟಿ. ರವಿ ಸಹಕಾರವಿದೆ: ಡಿ.ಕೆ.ಸು. ಬಾಂಬ್‌

congress

Maharashtra Election; ಕಾಂಗ್ರೆಸ್‌ 48 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-74: ಕುಲನಾಶದ ಕಳವಳ

Udupi: ಗೀತಾರ್ಥ ಚಿಂತನೆ-74: ಕುಲನಾಶದ ಕಳವಳ

1-bjp

Water pollution; ಮಲಿನ ಯಮುನೆಯಲ್ಲಿ ಮಿಂದು ಬಿಜೆಪಿ ದಿಲ್ಲಿ ಘಟಕದ ಅಧ್ಯಕ್ಷ ಪ್ರತಿಭಟನೆ

death

Pimpri Chinchwad; ನೀರಿನ ಟ್ಯಾಂಕ್‌ ಕುಸಿತ: 5 ಕಾರ್ಮಿಕರು ಸಾ*ವು

Terror 2

Pakistan; ಖೈಬರ್‌ ಪ್ರಾಂತದಲ್ಲಿ 9 ಭಯೋತ್ಪಾದಕರ ಹ*ತ್ಯೆ

suicide

Ayodhya: ಹೆಚ್ಚುವರಿ ಡೀಸಿ ಅನುಮಾನಾಸ್ಪದ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.