“ಪೊಲೀಸರಿಗೆ  ಸಾರ್ವಜನಿಕರ  ಸಹಕಾರ  ಅಗತ್ಯ’


Team Udayavani, Jul 24, 2017, 8:10 AM IST

agatya.jpg

ಉಪ್ಪಿನಂಗಡಿ : ಪೊಲೀಸ್‌ ಇಲಾಖೆಯ ಪ್ರತಿಯೊಂದು ಕೆಲಸ ಗಳಲ್ಲೂ ಸಾರ್ವಜನಿಕರ ಸಹಕಾರ ಅತೀ ಅಗತ್ಯ. ಈ ನಿಟ್ಟಿನಲ್ಲಿ ಗ್ರಾಮದ ಬೀಟ್‌ ಪೊಲೀಸ್‌ ಸಿಬಂದಿಗೆ ಗ್ರಾಮಸ್ಥರು ಸಹಕಾರ ನೀಡಬೇಕು ಎಂದು ದ.ಕ. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸುಧೀರ್‌ ರೆಡ್ಡಿ ಹೇಳಿದರು.

ಅವರು ಉಪ್ಪಿನಂಗಡಿಯಲ್ಲಿ ಠಾಣಾ ವ್ಯಾಪ್ತಿಯ ಗ್ರಾಮ ಗಸ್ತು ಸಭೆಯಲ್ಲಿ ಮಾತನಾಡಿದರು. 
ಗ್ರಾಮದ ಮಟ್ಟಿಗೆ ಬೀಟ್‌ ಪೊಲೀಸ್‌ ಅಲ್ಲಿನ ಪೊಲೀಸ್‌ ಅಧಿಕಾರಿ ಆಗಿರುತ್ತಾರೆ. ಗ್ರಾಮದಲ್ಲಿ ನಡೆಯುವ, ಆಗು-ಹೋಗುಗಳ ಪ್ರತಿಯೊಂದು ವಿಚಾರವನ್ನು ಬೀಟ್‌ ಪೊಲೀಸ್‌ ಗಮನಕ್ಕೆ ತರಬೇಕು. ಯಾವುದೇ ಅಕ್ರಮ, ಅನಾಚಾರದ ಬಗ್ಗೆಯೂ ಬೀಟ್‌ ಪೋಲಿಸ್‌ಗೆ ತಿಳಿಸಬಹುದು. ಬೀಟ್‌ ಸಮಿತಿಯ ಮೂಲಕವೂ ತಿಳಿಸಬಹುದು. ಬೀಟ್‌ ಪೊಲೀಸರಿಂದ ಸಾಧ್ಯವಾಗದ್ದನ್ನು ಠಾಣೆಗೆ, ನನ್ನ ಗಮನಕ್ಕೂ ತರಬಹುದು ಎಂದು ಅವರು ತಿಳಿಸಿದರು.

ಉಪ್ಪಿನಂಗಡಿ ಠಾಣಾ ವ್ಯಾಪ್ತಿಯಲ್ಲಿ ಒಟ್ಟು 38 ಬೀಟ್‌ಗಳಿವೆ. ಬಹುತೇಕ 1 ಬೀಟ್‌ಗೆ ಓರ್ವ ಪೊಲೀಸ್‌ ಇದ್ದಾರೆ. ಇನ್ನು ಕೆಲವು ಕಡೆಗಳಲ್ಲಿ 2 ಬೀಟ್‌ಗಳಿಗೆ ಓರ್ವ ಪೊಲೀಸ್‌ ಇರುತ್ತಾರೆ. ಒಟ್ಟು 24 ಪೊಲೀಸ್‌ ಬೀಟ್‌ ಪೊಲೀಸ್‌ ಆಗಿ ಕೆಲಸ ಮಾಡಲಿದ್ದಾರೆ. ಗ್ರಾಮಸ್ಥರು ಆಯಾ ಗ್ರಾಮದ ಬೀಟ್‌ ಪೊಲೀಸ್‌ ಬಗ್ಗೆ ತಿಳಿದುಕೊಳ್ಳುವಂತೆ ಅವರು ಸಭೆಗೆ ತಿಳಿಸಿದರು. ಸಭೆಯಲ್ಲಿ ಬೀಟ್‌ ಪೊಲೀಸ್‌ ಪರಿಚಯ ಮಾಡಿಸಿದರು.

ದುರುಪಯೋಗ ಆಗದಿರಲಿ 
ಸಭೆಯಲ್ಲಿ ಎಸ್‌.ಪಿ. ಈ ಬಗ್ಗೆ ಮಾಹಿತಿ ನೀಡುತ್ತಿದ್ದಂತೆ ಮಾತನಾಡಿದ ಗ್ರಾಮಸ್ಥರು, ಕೆಲವೊಂದು ಗ್ರಾಮದಲ್ಲಿ ಗ್ರಾಮ ಸಮಿತಿ ಆಗಿದೆ. ಆ ಸಮಿತಿಯಲ್ಲಿ ಯಾರಿದ್ದಾರೆ ಎನ್ನುವುದೇ ಗೊತ್ತಿಲ್ಲ. ಕೆಲ ವೊಂದು ಕಡೆ ಸಭೆಯೂ ನಡೆದಿದೆ. ಆದರೆ ಯಾವುದೇ ಕಾರಣಕ್ಕೂ ಈ ಸಮಿತಿಯ ಸದಸ್ಯರು ಇದರಲ್ಲಿ ಅಧಿಕಾರ ದುರುಪಯೋಗ ಮಾಡಿಕೊಂಡು ಯಾರನ್ನೋ, ಯಾವುದೋ ಕಾರಣ ದಿಂದ ದೂರು ನೀಡುವ ಹಾಗೆ ಆಗದಿರಲಿ. ಆ ರೀತಿಯಿಂದಾಗಿ ಅಮಾ ಯಕರು ಸಮಸ್ಯೆಗೆ ಒಳಗಾಗದಂತೆ ನೋಡಿಕೊಳ್ಳಬೇಕು ಎಂದರು.

ದುರುಪಯೋಗ ಆಗದು
ಇದಕ್ಕೆ ಪ್ರತಿಕ್ರಿಯಿಸಿದ ಎಸ್‌.ಪಿ. ಅಧಿಕಾರ ದುರುಪಯೋಗ ಆಗಲು ಸಾಧ್ಯ ಇಲ್ಲ. ಅಂತಹ ಸನ್ನಿವೇಶ ನಡೆದರೆ, ಆ ರೀತಿಯ ಅನುಮಾನಗಳು ಇದ್ದರೆ ನೇರವಾಗಿ ನನಗೆ ತಿಳಿಸಬಹುದಾಗಿದೆ. ಅಷ್ಟಕ್ಕೂ ಸಮಿತಿಯಲ್ಲಿ ಇರುವ ಯಾರೂ ಕೂಡ ಯಾವುದೇ ಕಾರಣಕ್ಕೂ ಸಮಿತಿಯನ್ನು ದುರುಪಯೋಗ ಮಾಡಿಕೊಳ್ಳಬಾರದು. ಈ ರೀತಿಯ ಜನಸ್ನೇಹಿ ಪೊಲೀಸ್‌ ವ್ಯವಸ್ಥೆಯ ಮೂಲಕ ಗ್ರಾಮದಲ್ಲಿ ಅಪರಾಧ ಕಡಿಮೆ ಆಗಬೇಕು ಮತ್ತು ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಇದು ಕೆಲಸ ಮಾಡಬೇಕು ಎಂದರು.

ಸಭೆಯಲ್ಲಿ ಉಪ್ಪಿನಂಗಡಿ ವರ್ತಕ ಸಂಘದ ಯು.ಜಿ. ರಾಧಾ, ಕೈಲಾರ್‌ ರಾಜ್‌ಗೊàಪಾಲ್‌ ಭಟ್‌, ಗ್ರಾಮ ಪಂಚಾಯತ್‌ ಸದಸ್ಯ ಸುನಿಲ್‌, ಕರಾಯ ಗ್ರಾಮದ ನಾರಾಯಣ ಭಟ್‌, ಇಲ್ಯಾಸ್‌, ಪೆರ್ನೆ ಗ್ರಾಮದ ಗ್ರಾಮ ಪಂಚಾಯತ್‌ ಸದಸ್ಯರಾದ ಅಬ್ದುಲ್ಲ, ಅಬ್ದುಲ್‌ ರಜಾಕ್‌, ಶ್ರೀಧರ ಗೌಡ ಮೊದಲಾದವರು ಮಾತನಾಡಿ ಸಲಹೆ ಸೂಚನೆ ನೀಡಿದರು.
ಸಭೆಯಲ್ಲಿ ಉಪ್ಪಿನಂಗಡಿ ಗ್ರಾಮ ಪಂಚಾಯತ್‌ ಅಧ್ಯಕ್ಷ ಕೆ. ಅಬ್ದುಲ್‌ ರಹಿ ಮಾನ್‌, ನೆಲ್ಯಾಡಿ ಗ್ರಾಮ ಪಂಚಾಯತ್‌ಅಧ್ಯಕ್ಷ ಜಯಾನಂದ ಬಂಟ್ರಿಯಾಲ್‌, ತಾಲೂಕು ಪಂಚಾಯತ್‌ ಸದಸ್ಯೆ ಸುಜಾತಾ ಕೃಷ್ಣ,  ಗ್ರಾಮ ಪಂಚಾಯತ್‌ ಸದಸ್ಯ ಯು.ಟಿ. ತೌಸೀಫ್, ವಿವಿಧ ಸಂಘ ಸಂಸ್ಥೆ ಪದಾಧಿಕಾರಿಗಳಾದ ಜಗದೀಶ್‌ ಶೆಟ್ಟಿ, ಎಂ. ವಿಶ್ವನಾಥ್‌, ಮಾಣಿಕ್ಯರಾಜ್‌ ಪಡಿವಾಳ್‌, ಪೌಲ್‌ ಡಿ’ಸೋಜಾ, ಕೆ.ಇ. ಅಬೂಬಕ್ಕರ್‌ ಮತ್ತಿತರರು ಉಪಸ್ಥಿತರಿದ್ದರು.

ಗ್ರಾಮಾಂತರ ಪೊಲೀಸ್‌ ಇನ್‌ಸ್ಪೆಕ್ಟರ್‌ ಅನಿಲ್‌ ಕುಲಕರ್ಣಿ ಸ್ವಾಗತಿಸಿ, ಪೊಲೀಸ್‌ ಸಿಬಂದಿ ಮನೋಹರ್‌ ವಂದಿಸಿದರು. ದೇವಿದಾಸ್‌ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

supreme-Court

Court: ರಾಜ್ಯಕ್ಕೆ ಖನಿಜ ತೆರಿಗೆ ಅಧಿಕಾರ: ಪರಿಶೀಲನ ಅರ್ಜಿ ಸುಪ್ರೀಂ ವಜಾ

Cheluvaray-swamy

Dasara: ಶ್ರೀರಂಗಪಟ್ಟಣ ದಸರಾಗೆ ಯಾವುದೇ ತಡವಾಗಿಲ್ಲ: ಸಚಿವ ಚಲುವರಾಯಸ್ವಾಮಿ

MNG-Deeraj

Mangaluru: ಒಂದೂವರೆ ಕೋಟಿಗೂ ಅಧಿಕ ಬಿಜೆಪಿ ಸದಸ್ಯತ್ವ ಗುರಿ: ಧೀರಜ್‌ ಮುನಿರಾಜು

Kapu

Navarathiri: ಉಚ್ಚಿಲ ದಸರಾ: ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ

krishna bhaire

FIR ದಾಖಲಾದ ಬಿಜೆಪಿಯವರು ರಾಜೀನಾಮೆ ನೀಡಲಿ: ಕೃಷ್ಣ ಭೈರೇಗೌಡ

Udupi: ಗೀತಾರ್ಥ ಚಿಂತನೆ-55: ಧೀಶಕ್ತಿ, ಬುದ್ಧಿಶಕ್ತಿಯ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-55: ಧೀಶಕ್ತಿ, ಬುದ್ಧಿಶಕ್ತಿಯ ವ್ಯತ್ಯಾಸ

Madikeri

Madikeri: ಕುಶಾಲನಗರದಲ್ಲಿ ಕೊಡಲಿಯಿಂದ ಕಡಿದು ಇಬ್ಬರ ಕೊ*ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Electric

Uppinangady: ವಿದ್ಯುತ್‌ ಆಘಾತ: ಕೊಯಿಲ ಗ್ರಾಮದ ವ್ಯಕ್ತಿ ಸಾವು

dw

Belthangady: ಮರದಿಂದ ಬಿದ್ದು ವ್ಯಕ್ತಿ ಸಾವು

arest

BC Road: ಕಳವಾದ ಸ್ಕೂಟರ್‌ ಪತ್ತೆ; ಆರೋಪಿ ಬಂಧನ

Vitla: ಟಿಪ್ಪರ್ ಡಿಕ್ಕಿ ಹೊಡೆದು ಬೈಕ್ ಸವಾರನಿಗೆ ಗಾಯ

Vitla: ಟಿಪ್ಪರ್ ಡಿಕ್ಕಿ ಹೊಡೆದು ಬೈಕ್ ಸವಾರನಿಗೆ ಗಾಯ

12-bantwala

Sand Mining: ಬಂಟ್ವಾಳ ಅಕ್ರಮ ಮರಳು ಅಡ್ಡೆಗೆ ದಾಳಿ; 20 ದೋಣಿ ವಶ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

supreme-Court

Court: ರಾಜ್ಯಕ್ಕೆ ಖನಿಜ ತೆರಿಗೆ ಅಧಿಕಾರ: ಪರಿಶೀಲನ ಅರ್ಜಿ ಸುಪ್ರೀಂ ವಜಾ

1-aaaa

Bandipur ಸಫಾರಿ ವೀಕ್ಷಿಸಿದ CJI ಡಿ.ವೈ.ಚಂದ್ರಚೂಡ್‌: ಕಾಡಾನೆಗಳ ದರ್ಶನ

Cheluvaray-swamy

Dasara: ಶ್ರೀರಂಗಪಟ್ಟಣ ದಸರಾಗೆ ಯಾವುದೇ ತಡವಾಗಿಲ್ಲ: ಸಚಿವ ಚಲುವರಾಯಸ್ವಾಮಿ

MNG-Deeraj

Mangaluru: ಒಂದೂವರೆ ಕೋಟಿಗೂ ಅಧಿಕ ಬಿಜೆಪಿ ಸದಸ್ಯತ್ವ ಗುರಿ: ಧೀರಜ್‌ ಮುನಿರಾಜು

1-asdd

PDOಗಳ ಅನಿರ್ದಿಷ್ಟಾವಧಿ ಧರಣಿ: ರಾಜ್ಯಾದ್ಯಂತ ಗ್ರಾ.ಪಂ. ಸೇವೆ ಸ್ಥಗಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.