ಸುರತ್ಕಲ್ : ಮಕ್ಕಳಿಗೆ ಟ್ರಾಫಿಕ್ ಅರಿವು ಕಾರ್ಯಕ್ರಮ
Team Udayavani, Jul 24, 2017, 7:50 AM IST
ಸುರತ್ಕಲ್: ಕೂಳೂರು ಸರಕಾರಿ ಪ್ರೌಢಶಾಲೆಯಲ್ಲಿ ರೋಟರಿ ಕ್ಲಬ್ ಸುರತ್ಕಲ್ ಮತ್ತು ಮಿಸ್ಬಾ ಶಾಲೆ ಕಾಟಿಪಳ್ಳ ಸಹಯೋಗದಲ್ಲಿ ಇತ್ತೀಚೆಗೆ ಟ್ರಾಫಿಕ್ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸುವ ಕಾರ್ಯ ಕ್ರಮ ನಡೆಯಿತು.
ಮಂಗಳೂರು ಉತ್ತರ ಸಂಚಾರಿ ಪೊಲೀಸ್ ಇನ್ಸ್ಪೆಕ್ಟರ್ ಮಂಜುನಾಥ್ ಅವರು ಆಡಿಯೋ ವಿಷುವಲ್ ಮೂಲಕ ಕಾರ್ಯಕ್ರಮ ನಡೆಸಿಕೊಟ್ಟರು.
ಮಂಜುನಾಥ್ ಅವರು ಈಗಾಗಲೇ ಮಂಗಳೂರು ಉತ್ತರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಅನೇಕ ಶಾಲೆಗಳಿಗೆ ಭೇಟಿ ಕೊಟ್ಟು ಮಕ್ಕಳಲ್ಲಿ ರಸ್ತೆ ಸುರಕ್ಷೆ ಮತ್ತು ವಾಹನ ಚಲಾವಣೆಯಲ್ಲಿ ಚಾಲಕರು ನಿರ್ವಹಿಸಬೇಕಾದ ಎಚ್ಚರಿಕೆ ಕ್ರಮಗಳನ್ನು ತಿಳಿಸಿಕೊಟ್ಟಿದ್ದು, ಚಿತ್ರಾಪುರದ ಪ್ರೌಢಶಾಲೆ ಮತ್ತು ಕುಳಾಯಿಯ ವೆಂಕಟರಮಣ ಪ್ರೌಢಶಾಲೆಯಲ್ಲಿ ಕೂಡ ಟ್ರಾಫಿಕ್ ಸಮಸ್ಯೆಯ ಬಗ್ಗೆ ಮಕ್ಕಳಲ್ಲಿ ಅರಿವು ಕಾರ್ಯಕ್ರಮವನ್ನು ಅವರು ಹಮ್ಮಿಕೊಂಡಿದ್ದರು. ಪ್ರತಿಶಾಲೆಯಲ್ಲಿ ಮಕ್ಕಳಿಗೆ ಸ್ಪರ್ಧೆ ಏರ್ಪಡಿಸಿ ಆ ಮೂಲಕ ಬಹುಮಾನ ನೀಡಿ ಪ್ರೋತ್ಸಾಹಿಸುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಟ್ರಾಫಿಕ್ ನಿಯಮವನ್ನು ಮೈಗೂಡಿಸಿ ಅಪಘಾತ ಮುಕ್ತ ಸಮಾಜ ನಿರ್ಮಾಣ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಬಹುದಾಗಿದೆ ಎಂಬುದು ಮಂಜುನಾಥ ಅವರು ಅಭಿಪ್ರಾಯ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
ತಿಮ್ಮಾಪುರ ಮಾತಿಗೆ ಯತ್ನಾಳ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ
Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ
Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ
Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ
Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.