ಉತ್ತಮ ಬಾಂಧವ್ಯ ಹೊಂದಿದ್ದ ರಾಣೆ
Team Udayavani, Jul 24, 2017, 12:21 PM IST
ಹುಬ್ಬಳ್ಳಿ: ಎಲ್ಲ ಪಕ್ಷಗಳ ರಾಜಕಾರಣಿಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಿದ ಪೊಲೀಸ್ ಆಯುಕ್ತ ಪಾಂಡುರಂಗ ರಾಣೆ ಅವರು ಅವಳಿ ನಗರದಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡುವಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಲಕರ್ಣಿ ಹೇಳಿದರು.
ಹು-ಧಾ ಪೊಲೀಸ್ ಆಯುಕ್ತ ಪಾಂಡುರಂಗ ರಾಣೆ ಸೇವಾ ನಿವೃತ್ತಿ ಹೊಂದಲಿರುವುದರಿಂದ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಶ°ರೇಟ್ ಗೋಕುಲ ಗಾರ್ಡನ್ನಲ್ಲಿ ರವಿವಾರ ಸಂಜೆ ಆಯೋಜಿಸಿದ್ದ ಸ್ನೇಹಕೂಟದಲ್ಲಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಕಳಸಾ-ಬಂಡೂರಿ ಹೋರಾಟ ತೀವ್ರ ಗತಿಯಲ್ಲಿ ನಡೆಯಿತು.
ಹಲವೆಡೆ ಹೋರಾಟ ನಡೆಸುತ್ತಿದ್ದ ರೈತರ ಮೇಲೆ ಹಲ್ಲೆ ನಡೆಯಿತು. ಆದರೆ ಹುಬ್ಬಳ್ಳಿಯಲ್ಲಿ ಹೋರಾಟಗಳು ನಡೆದರೂ ಶಾಂತಿ ಕದಡದಂತೆ ಕ್ರಮ ಕೈಗೊಂಡರು ಎಂದರು. ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಮಾತನಾಡಿ, ಹುಬ್ಬಳ್ಳಿ- ಧಾರವಾಡ ಕಮೀಶ°ರೇಟ್ ಆರಂಭಗೊಂಡ ನಂತರ ಮೊದಲ ಬಾರಿ ಒಬ್ಬ ಆಯುಕ್ತರು ಸೇವಾ ನಿವೃತ್ತಿ ಹೊಂದುತ್ತಿರುವ ಸಂದರ್ಭದಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು, ಸಾರ್ವಜನಿಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ ಎಂದು ತಿಳಿಸಿದರು.
ಅವಳಿ ನಗರದಲ್ಲಿ ಶಾಂತಿ ಸುವ್ಯವಸ್ಥೆಗೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ. ಅವಳಿ ನಗರದಲ್ಲಿ ಇದೇ ಪರಂಪರೆ ಮುಂದುವರೆಯಬೇಕು. ಅಧಿಕಾರಿಗಳು ಅವರ ಮಾರ್ಗದರ್ಶನದಲ್ಲಿ ಸಾಗಬೇಕು. ಒಬ್ಬ ಅಧಿಕಾರಿ ಎಲ್ಲರ ಪ್ರೀತಿಗಳಿಸುವುದು ಕಷ್ಟಕರ. ಪಾಂಡುರಂಗ ರಾಣೆ ಅವಳಿ ನಗರದ ಎಲ್ಲ ಜನರ ಪ್ರೀತಿ ಗಳಿಸಿದರು.
ಇಂಥ ಅಧಿಕಾರಿಗಳ ಸಂಖ್ಯೆ ಹೆಚ್ಚಾಗಬೇಕೆಂದರು. ಮಾಜಿ ಸಚಿವ ಎ.ಎಂ. ಹಿಂಡಸಗೇರಿ ಮಾತನಾಡಿ, ಅವಳಿ ನಗರದಲ್ಲಿ ಯಾವುದೇ ಕೋಮು ಗಲಭೆ ಘಟನೆ ನಡೆಯದಂತೆ ನೋಡಿಕೊಂಡ ಹಿರಿಮೆ ರಾಣೆ ಅವರಿಗೆ ಸಲ್ಲುತ್ತದೆ ಎಂದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ ಮಾನೆ, ಮಾಜಿ ವಿಧಾನ ಪರಿಷತ್ ಸದಸ್ಯ ಡಾ| ವಿಜಯ ಸಂಕೇಶ್ವರ, ಮಾಜಿ ಸಂಸದ ಐ.ಜಿ. ಸನದಿ, ಮೋಹನ ಲಿಂಬಿಕಾಯಿ, ಪಾಲಿಕೆ ಆಯುಕ್ತ ಸಿದ್ದಲಿಂಗಯ್ಯ ಹಿರೇಮಠ, ಸದಾನಂದ ಡಂಗನವರ, ಶಂಕ್ರಣ್ಣ ಮುನವಳ್ಳಿ, ರಮೇಶ ಪಾಟೀಲ, ಮೋತಿಲಾಲ್ ಕಬಾಡಿ ಮೊದಲಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubbali: ಅಪಾರ್ಟ್ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು
Dr G Parameshwar: ಸೆನ್ ಠಾಣೆಗಳಿಗೂ ಎಸ್ಪಿ ಕೇಡರ್: ಗೃಹ ಸಚಿವ
Hubli: ಸ್ಥಾನಮಾನ ಸಿಗದಿದ್ದವರಿಂದ ಪಕ್ಷ ವಿರೋಧಿ ಹೇಳಿಕೆ: ಜಿಟಿಡಿ ವಿರುದ್ದ ಜೋಶಿ ಕಿಡಿ
ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್
Alnavar: ಸ್ನಾನಕ್ಕೆಂದು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Udupi; ಗೀತಾರ್ಥ ಚಿಂತನೆ 57: ದುರ್ಯೋಧನನಲ್ಲಿ ಮಾನಸಿಕ ಸ್ಥೈರ್ಯ ಕುಸಿತ
Gwalior T20: ಬಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ
BBK11: ಮೊದಲ ವಾರದಲ್ಲೇ ಬಿಗ್ ಬಾಸ್ ಆಟ ಮುಗಿಸಿದ ಯಮುನಾ ಶ್ರೀನಿಧಿ!
By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್.ಡಿ.ಕುಮಾರಸ್ವಾಮಿ
Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್ಆರ್!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.