ಅಡ್ಡಗಾಲು ಹಾಕುವವರು ಲಿಂಗಾಯತ ವಿರೋಧಿಗಳು


Team Udayavani, Jul 25, 2017, 12:07 PM IST

hub3.jpg

ಧಾರವಾಡ: ಲಿಂಗಾಯತ ಧರ್ಮ ಸ್ವತಂತ್ರ ಧರ್ಮ ಆಗಲು ಅಡ್ಡಗಾಲು ಹಾಕುವವರು ಧರ್ಮ ವಿರೋಧಿಗಳು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್‌.ಆರ್‌. ಪಾಟೀಲ ಹೇಳಿದರು. ನಗರದ ಮುರುಘಾಮಠದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಒಂದು ತಿಂಗಳ ಕಾಲ ಹಮ್ಮಿಕೊಂಡಿರುವ ಬೀದರ್‌ ಜಿಲ್ಲೆಯ ಬಸವ ಕಲ್ಯಾಣದ ಅನುಭವ ಮಂಟಪದ ಶ್ರೀ ಸಂಗಮೇಶ್ವರ ದೇವರು ನೀಡಲಿರುವ “ವಚನ ದರ್ಶನ’ ಪ್ರವಚನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. 

ಲಿಂಗಾಯತ ಧರ್ಮ ಸ್ವತಂತ್ರ ಧರ್ಮವಾಗಿ ಘೋಷಣೆ ಆಗುವವರೆಗೂ ನಾವು ವಿಶ್ರಮಿಸಬಾರದು. ಅದು ಕಾರ್ಯರೂಪಕ್ಕೆ ಬರಲು ನಾವೆಲ್ಲರೂ ಒಕ್ಕೊರಲಿನಿಂದ ಕೆಲಸ ಮಾಡೋಣ. ಸ್ವತಂತ್ರ ಧರ್ಮಕ್ಕೆ ಎಲ್ಲಾ ಮಂತ್ರಿ- ಶಾಸಕರನ್ನು ಗಮನಕ್ಕೆ ಪಡೆದು ಸಾಂಕೇತಿಕವಾಗಿ ಶ್ರಮಿಸೋಣ. ಲಿಂಗಾಯತ ಧರ್ಮಕ್ಕೆ ಮಾನ್ಯತೆ ಸಿಗಲೇಬೇಕಿದೆ.

ಅದು ಸಿಕ್ಕರೆ ಸಮಾಜಕ್ಕೆ ಸೌಲಭ್ಯಗಳು ಸಿಗಲಿದ್ದು, ಕೆಳಮಟ್ಟದಿಂದ ಎಲ್ಲರಿಗೂ ಅವಕಾಶ ಲಭಿಸಲಿದೆ  ಎಂದರು. ಪ್ರವಚನ ಕೇಳಿದರಷ್ಟೇ ಸಾಲದು. ಅದರಲ್ಲಿರುವ ಸಾರ ಚಿಂತನ ಹಾಗೂ ಶರಣ-ಸಂತ ದಾಸರ ವಿಚಾರಧಾರೆ ಅರಿತು ಚಿಂತನ-ಮಂತನ ಮಾಡಬೇಕು. ಶ್ರಾವಣ ಮಾಸ ಎಂಬುದು ಮಹತ್ವದ ದಿನ.

ಇಲ್ಲಿ ಪ್ರವಚನಕಾರರು ಹೇಳುವ ಅರ್ಥಪೂರ್ಣ ವಿಚಾರಗಳನ್ನು ನಾವೆಲ್ಲ ಮನನ ಮಾಡಿಕೊಳ್ಳಬೇಕು ಎಂದು ಹೇಳಿದರು. ಕೇವಲ ಶ್ರಾವಣ ಮಾಸದಲ್ಲಿ ಅಷ್ಟೇ ಅಲ್ಲದೆ ನಿರಂತರ ನಡೆಯುವ ಸತ್ಸಂಗದಲ್ಲಿ ಭಾಗವಹಿಸಿ, ಮೌಲ್ಯಯುತ ವಿಚಾರಧಾರೆ ಅರಿತು ಅನುಷ್ಠಾನ ಮಾಡಿಕೊಂಡರೆ ಜೀವನ ಸಾರ್ಥಕ ಆಗುವುದು.

ಮಠಗಳಲ್ಲಿ ಅಷ್ಟೇ ಅಲ್ಲದೇ ಮನೆ-ಮನಗಳಲ್ಲಿ ಚಿಂತನ ಮಂಥನ ನಡೆಸಿದರೆ ದೇಶದ ಅಭಿವೃದ್ಧಿಗೆ ಪೂರಕವಾಗಲಿದೆ. ಜಾತಿ ವರ್ಗದ ಭೇದ ಭಾವ ಇರದ ಶ್ರೀಮಠಗಳು ಜ್ಞಾನ ದಾಸೋಹ ಮಾಡುತ್ತಿವೆ. ಕೆಲವು ಮಠಗಳು ಒಂದೇ ಜಾತಿ-ಮತಕ್ಕೆ ಸೀಮಿತವಾಗಿ ಕೆಲಸ ಮಾಡುತ್ತಿರುವುದು ವಿಷಾದನೀಯ ಎಂದರು. 

ಜಾತ್ಯತೀತ ಮಠಗಳು ಸಮಾಜ ಕಲ್ಯಾಣ ಪರ ಕೆಲಸ ಮಾಡಿ ಪ್ರೇರಣೆ ನೀಡುತ್ತವೆ. ಚುನಾಯಿತ ಸರಕಾರಗಳು ಕೂಡ ಬಸವಾದಿ ಶರಣರ ತತ್ವ ಪಾಲನೆ ಮಾಡಿದರೆ ಎಲ್ಲರ ಅಭಿವೃದ್ಧಿ ಆಗುತ್ತದೆ. ಇದರೊಂದಿಗೆ ಉತ್ತಮ ಸಮಾಜ ನಿರ್ಮಾಣವಾಗುತ್ತದೆ. ಈಗಿನ ಕರ್ನಾಟಕ ಸರಕಾರ ಕೂಡ ಶರಣದ ಆಶಯದಂತೆ ನುಡಿದಂತೆ ನಡೆದ ಸರಕಾರ.

ನುಡಿದಂತೆಯೇ ನಡೆಯುತ್ತಿದೆ. ಚುನಾವಣೆ ಪೂರ್ವದಲ್ಲಿ ಭರವಸೆ ನೀಡಿದ ನಮ್ಮ ಸರಕಾರ 150ಕ್ಕೂ ಹೆಚ್ಚು ಯೋಜನೆ ಜಾರಿ ಮಾಡಿ ಅನುಷ್ಠಾನಗೊಳಿಸಿದೆ ಎಂದರು. ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಲಕರ್ಣಿ ವಚನ ಪರಿಮಳ ಭಾಗ-2 ಗ್ರಂಥ ಬಿಡುಗಡೆ ಮಾಡಿದರು.

ತಿಪಟೂರಿನ ರುದ್ರಮುನಿ ಸ್ವಾಮೀಜಿ, ಮುರುಘಾಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ, ಸುಪ್ರದ ಕಟ್ಟಡ ನಿರ್ಮಾಣ ಸಂಸ್ಥೆಯ ನಿರ್ದೇಶಕ ಭುಜಂಗ ಶೆಟ್ಟಿ ಇದ್ದರು. ಡಾ| ಶಂಭುಲಿಂಗ ಹೆಗಡಾಳ ಪ್ರಾಸ್ತಾವಿಕ ಮಾತನಾಡಿದರು. ಗಾಯಕ  ಜಯದೇವಿ ಜಂಗಮಶೆಟ್ಟಿ ಅವರಿಂದ ವಚನ ಸಂಗೀತ ಕಛೇರಿ ನಡೆಯಿತು. ಎಪಿಎಂಸಿ ಸದಸ್ಯ ಶ್ರೀಶೈಲ ಸುರೇಬಾನ ಹಾಗೂ ವಕೀಲರ ಸಂಘದ ಅಧ್ಯಕ್ಷ ರಾಜಶೇಖರ ಬೆಳ್ಳಕ್ಕಿ ಅವರನ್ನು ಸನ್ಮಾನಿಸಲಾಯಿತು. 

ಟಾಪ್ ನ್ಯೂಸ್

Mangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರMangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರ

Mangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರ

Heavy Rain ದಕ್ಷಿಣ ಕನ್ನಡದಲ್ಲಿ ಸೋಮವಾರವೂ ಭಾರೀ ಮಳೆ

Heavy Rain ದಕ್ಷಿಣ ಕನ್ನಡದಲ್ಲಿ ಸೋಮವಾರವೂ ಭಾರೀ ಮಳೆ

CM-Siddaramaiah

Government ಜಮೀನು ಒತ್ತುವರಿ ನಿರ್ದಾಕ್ಷಿಣ್ಯ ತೆರವು: ಸಿಎಂ ಸಿದ್ದರಾಮಯ್ಯ

Rain ಮೈದುಂಬಿದ ನೇತ್ರಾವತಿ, ಕುಮಾರಧಾರಾ ನದಿ

Rain ಮೈದುಂಬಿದ ನೇತ್ರಾವತಿ, ಕುಮಾರಧಾರಾ ನದಿ

1-tej

RJD; ಶಿವಲಿಂಗ ತಬ್ಬಿದ‌ ತೇಜ್‌ಪ್ರತಾಪ್‌: ವೀಡಿಯೋ ವೈರಲ್‌

ಪರಿಸರ ಸಂರಕ್ಷಣೆಗೆ ಸಾರ್ವಜನಿಕರ ಸಹಭಾಗಿತ್ವವೂ ಅಗತ್ಯ

Brijesh Chowta ಪರಿಸರ ಸಂರಕ್ಷಣೆಗೆ ಸಾರ್ವಜನಿಕರ ಸಹಭಾಗಿತ್ವವೂ ಅಗತ್ಯ

Congress ಹಿಂದೂ ವಿರೋಧಿ ಪಕ್ಷ: ಸಂಸದ ಕ್ಯಾ| ಬ್ರಿಜೇಶ್‌ ಚೌಟ

Congress ಹಿಂದೂ ವಿರೋಧಿ ಪಕ್ಷ: ಸಂಸದ ಕ್ಯಾ| ಬ್ರಿಜೇಶ್‌ ಚೌಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha Hiremath Case; 483-page charge sheet was submitted by the CID

Neha Hiremath Case; 483 ಪುಟಗಳ ದೋಷಾರೋಪಣ ಪಟ್ಟಿ ಸಲ್ಲಿಸಿದ ಸಿಐಡಿ

ಹುಬ್ಬಳ್ಳಿ: ಗಾರ್ಮೆಂಟ್‌ನಲ್ಲಿ ತೆರೆದುಕೊಳ್ಳುತ್ತಿವೆ ದೊಡ್ಡ ಅವಕಾಶಗಳು-ಜೋಶಿ

ಹುಬ್ಬಳ್ಳಿ: ಗಾರ್ಮೆಂಟ್‌ನಲ್ಲಿ ತೆರೆದುಕೊಳ್ಳುತ್ತಿವೆ ದೊಡ್ಡ ಅವಕಾಶಗಳು-ಜೋಶಿ

Prahalad-Joshi

Bharath Rice, ಹಿಟ್ಟು ಬಂದ್‌ ಆಗಿಲ್ಲ, 2 ದಿನದಲ್ಲಿ ಪುನರಾರಂಭ:  ಕೇಂದ್ರ ಸಚಿವ ಜೋಶಿ 

Joshi

Congress Government ಬಳಿ ಅಕ್ಕಿ ಖರೀದಿಗೂ ಹಣವಿಲ್ಲ: ಕೇಂದ್ರ ಸಚಿವ ಜೋಶಿ

Hubli; CM-DCM issue not to be debated on sidewalks: RB Thimmapura

Hubli; ಸಿಎಂ-ಡಿಸಿಎಂ ವಿಚಾರ ಹಾದಿಬೀದಿಯಲ್ಲಿ ಚರ್ಚೆ ಮಾಡುವುದಲ್ಲ: ಆರ್.ಬಿ ತಿಮ್ಮಾಪುರ

MUST WATCH

udayavani youtube

ಬೆನ್ನು ನೋವು ನಿವಾರಣೆ | ಬೆನ್ನು ನೋವಿನ ಸಮಸ್ಯೆಗೆ ಪರಿಹಾರ

udayavani youtube

ಉಡುಪಿ ಜಿಲ್ಲಾದ್ಯಂತ ಭಾರೀ ಮಳೆ – ಜಲಾವೃತಗೊಂಡ ಮುಖ್ಯ ರಸ್ತೆಗಳು

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

ಹೊಸ ಸೇರ್ಪಡೆ

Ullal ಜು. 10- 16: ಸೋಮೇಶ್ವರ‌ ರೈಲ್ವೇಗೇಟ್‌ ಬಂದ್‌

Ullal ಜು. 10- 16: ಸೋಮೇಶ್ವರ‌ ರೈಲ್ವೇಗೇಟ್‌ ಬಂದ್‌

supreem

Supreme Court; ದಿವ್ಯಾಂಗರ ಅವಹೇಳನ ತಡೆಗೆ ಮಾರ್ಗಸೂಚಿ

suicide (2)

Puri ಜಗನ್ನಾಥ ರಥಯಾತ್ರೆ ವೇಳೆ ನೂಕುನುಗ್ಗಲು: ಸಾವು 2ಕ್ಕೇರಿಕೆ

Mangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರMangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರ

Mangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರ

amarnath

Amarnath ಯಾತ್ರೆ ದಾರೀಲಿ 115 ಟನ್‌ ತ್ಯಾಜ್ಯ ಸಂಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.