ಜನಸಂಖ್ಯೆ ಹೆಚ್ಚಳದಿಂದ ನಿಸರ್ಗಕ್ಕೂ ಧಕ್ಕೆ: ದೇಶಪಾಂಡೆ


Team Udayavani, Jul 25, 2017, 12:07 PM IST

hub4.jpg

ಧಾರವಾಡ: ದೇಶ ಬೆಳೆದಂತೆಯೆಲ್ಲಾ ಉತ್ತಮ ಪರಿಸರ, ಕಾಡು, ಗುಡ್ಡ-ಬೆಟ್ಟಗಳು ಕರಗಿ ಹೋಗುತ್ತಿದ್ದು, ಮಳೆಯೂ ಮಾಯವಾಗುತ್ತಿದೆ ಎಂದು ನಿವೃತ್ತ ಹಿರಿಯ ಗ್ರಂಥಪಾಲಕ ಡಾ| ಕೆ.ಎಸ್‌. ದೇಶಪಾಂಡೆ ಹೇಳಿದರು. ಎಫ್‌ಪಿಎಐನ 68ನೇ ಸಂಸ್ಥಾಪನಾ ದಿನಾಚರಣೆ ಹಿನ್ನೆಲೆಯಲ್ಲಿ ದೇಶಪಾಂಡೆ ಅವರ ನಿವಾಸದಲ್ಲಿ ಫ್ಯಾಮಿಲಿ ಪ್ಲಾನಿಂಗ್‌ ಅಸೋಶಿಯೇಶನ್‌ ಆಫ್‌ ಇಂಡಿಯಾ ಧಾರವಾಡ ಶಾಖೆ ವತಿಯಿಂದ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಈ ಸಂಕಷ್ಟದಲ್ಲಿ ಜನರ ಜೀವನಮಟ್ಟ ಸುಧಾರಣೆ ಯಾಗಬೇಕಾದರೆ ನಮ್ಮ ಸುತ್ತಲು ಉತ್ತಮ ಪರಿಸರ ನಿರ್ಮಾಣ ಮಾಡುವುದು ಇಂದಿನ ತುರ್ತು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಗಂಭೀರ ಚಿಂತನೆ ನಡೆಸಬೇಕಿದೆ ಎಂದರು. ಫ್ಯಾಮಿಲಿ ಪ್ಲಾನಿಂಗ್‌ ಅಸೋಶಿಯೇಶನ್‌ ಆಫ್‌ ಇಂಡಿಯಾ ಜನಸಂಖ್ಯಾ ನಿಯಂತ್ರಣಕ್ಕೆ ಮುಂದಾದ ಸಂದರ್ಭದಲ್ಲಿ ಜನ ನಮ್ಮನ್ನು ಕೆಟ್ಟ ದೃಷ್ಟಿಯಿಂದ ನೋಡುತ್ತಿದ್ದರು. 

ಇದನ್ನು ಪಾಪದ ಕೆಲಸ ಎಂದು ಹೀಯಾಳಿಸುತ್ತಿದ್ದರು. ಆಗ ಕೇವಲ 30 ಕೋಟಿ ಇದ್ದ ಜನಸಂಖ್ಯೆ ಇಂದು ನೂರು ಕೋಟಿಯ ಗಡಿ ದಾಟಿದೆ. ಆದರೆ ಭೌತಿಕ ಪ್ರಗತಿ ನಿರೀಕ್ಷಿತ ಪ್ರಮಾಣದಲ್ಲಿ ಆಗಿಲ್ಲ. ನಾಡು ಬೆಳೆದಂತೆ ನಮ್ಮ ಪರಿಸರ ಹಾಳಾಗಿದೆ. ಹೀಗಾಗಿ ಗುಣಮಟ್ಟ ಜೀವನ ನಡೆಸಲು ಸಾಧ್ಯವಾಗುತ್ತಿಲ್ಲ. ಉತ್ತಮ ನೀರು, ಗಾಳಿ, ಪರಿಸರವಿಲ್ಲದಿದ್ದರೆ ಬದುಕು ಆನಂದಿಸಲು ಸಾಧ್ಯವಿಲ್ಲ ಎಂದು ಕಳವಳ ವ್ಯಕ್ತಪಡಿಸಿದರು. 

ಪ್ರೊ| ಉಷಾ ಮೂರ್ತಿ ಮಾತನಾಡಿ, ಕೆ.ಎಸ್‌. ದೇಶಪಾಂಡೆಯವರ ಮಾರ್ಗದರ್ಶನದಲ್ಲಿ ಸಾಕಷ್ಟು ಕೆಲಸ ಕಾರ್ಯಗಳನ್ನು ಮಾಡಲಾಗಿದೆ. ಆನಂತರ ಎರಡು ಬಾರಿ ಎಫ್‌ಪಿಎಐ ಅಧ್ಯಕ್ಷಳಾಗಿ ಸಾಕಷ್ಟು ಹೊಸ ಹೊಸ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಜನಮನ ಸೆಳೆಯಲಾಯಿತು. ಇದೀಗ ಎಫ್‌ಪಿಎಐ ಧಾರವಾಡ ಶಾಖೆ ಹಲವು ಸೇವೆಗಳನ್ನು ನೀಡುತ್ತಿದೆ ಎಂದರು. ಎಫ್‌ಪಿಎಐ ಶಾಖೆ ವ್ಯವಸ್ಥಾಪಕಿ ಸುಜಾತ ಆನಿಶೆಟ್ಟರ್‌ ಮಾತನಾಡಿದರು. 

ಇದಕ್ಕೂ ಮುನ್ನ ಎಫ್‌ಪಿಎಐ ಸಂಸ್ಥಾಪಕ ಅಧ್ಯಕ್ಷ ಕೆ.ಎಸ್‌. ದೇಶಪಾಂಡೆ, ಪೋಷಕ ಡಾ| ಎಂ.ಎನ್‌. ತಾವರಗೇರಿ, ಸಂಸ್ಥೆಯ ಸ್ವಯಂ ಸೇವಕಿ ಉಷಾ ಮೂರ್ತಿ ಹಾಗೂ 37 ವರ್ಷಗಳ ಕಾಲ ಆಯಾ  ಆಗಿ ಕೆಲಸ ನಿರ್ವಹಿಸಿದ ಸುನಂದಾ ಕುಲಕರ್ಣಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ರಮಾಕಾಂತ ಜೋಶಿ, ಪಾರ್ವತಿ ಹಾಲಬಾವಿ, ಇಂದಿರಾ ಪ್ರಸಾದ, ಕುಸುಮ ದೇಶಪಾಂಡೆ, ಶೈಲಾ ಛಬ್ಬಿ, ಸುಕನ್ಯ ಹಿರೇಮಠ, ಭೀಮಸೇನ ಸಾರಥಿ, ಪಿ.ಪಿ. ಗಾಯಕವಾಡ ಇದ್ದರು.  

ಟಾಪ್ ನ್ಯೂಸ್

Cap-Brijesh-Chowta

Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ

Shettar (3)

R. Ashoka ಪ್ರಕರಣವನ್ನು ಮುಡಾಕ್ಕೆ ಹೋಲಿಸಿದ್ದು ಸರಿಯಲ್ಲ:ಜಗದೀಶ ಶೆಟ್ಟರ್

1-rain-hebri

Heavy Rain: ಹೆಬ್ರಿಯಲ್ಲಿ ಮೇಘಸ್ಫೋಟ: ನೀರಲ್ಲಿ ಕೊಚ್ಚಿ ಹೋದ ಕಾರು!

1-deee

Bidar; ತೊಗರಿ ಹೊಲದಲ್ಲಿ 700ಕ್ಕೂ ಹೆಚ್ಚು ಗಾಂಜಾ ಗಿಡಗಳು!; ಪೊಲೀಸ್ ದಾಳಿ

1-ind-a

ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

4

Dr G Parameshwar: ಸೆನ್‌ ಠಾಣೆಗಳಿಗೂ ಎಸ್ಪಿ ಕೇಡರ್‌: ಗೃಹ ಸಚಿವ

ಸ್ಥಾನಮಾನ ಸಿಗದಿದ್ದವರಿಂದ ಪಕ್ಷ ವಿರೋಧಿ ಹೇಳಿಕೆ: ಜಿಟಿಡಿ ವಿರುದ್ದ ಜೋಶಿ ಕಿಡಿ

Hubli: ಸ್ಥಾನಮಾನ ಸಿಗದಿದ್ದವರಿಂದ ಪಕ್ಷ ವಿರೋಧಿ ಹೇಳಿಕೆ: ಜಿಟಿಡಿ ವಿರುದ್ದ ಜೋಶಿ ಕಿಡಿ

ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್

ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್

8

Alnavar: ಸ್ನಾನಕ್ಕೆಂದು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

dw

Padubidri: ರಸ್ತೆ ಅಪಘಾತ; ಗಾಯಾಳು ಸಾವು

Cap-Brijesh-Chowta

Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

crimebb

Kasaragod ಅಪರಾಧ ಸುದ್ದಿಗಳು

13

Malpe: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.