ಸರ್ಕಾರಗಳಿಂದ ಶಿಕ್ಷಣ ಹಕ್ಕು ಖಾಸಗಿಗೆ ಒತ್ತೆ: ಮಂಜುಳಾ


Team Udayavani, Jul 26, 2017, 12:31 PM IST

hub5.jpg

ಧಾರವಾಡ: ಅಖೀಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆಯ (ಎಐಎಂಎಸ್ಸೆಸ್‌) ಜಿಲ್ಲಾ ಸಮಿತಿ ವತಿಯಿಂದ ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ 150 ವರ್ಷಗಳ ಹಿಂದೆಯೇ ಧ್ವನಿಯೆತ್ತಿದ ಈಶ್ವರಚಂದ್ರ ವಿದ್ಯಾಸಾಗರ್‌ ಅವರ 125ನೇ ಸ್ಮರಣ ದಿನದ ಅಂಗವಾಗಿ ನಗರದಲ್ಲಿ ವಿದ್ಯಾರ್ಥಿನಿಯರ ರ್ಯಾಲಿ ನಡೆಯಿತು.

ಕಲಾಭವನದಿಂದ ಹೊರಟ ರ್ಯಾಲಿ ಜುಬಿಲೀ ಸರ್ಕಲ್‌ನಲ್ಲಿ ಮಾನವ ಸರಪಳಿ ನಿರ್ಮಿಸಿ ಮತ್ತೆ ಕಲಾಭವನ ಮೈದಾನದಲ್ಲಿ ಕೊನೆಗೊಂಡಿತು. ರ್ಯಾಲಿ ಮುಗಿದ ನಂತರ ಹೆಣ್ಣು ಮಕ್ಕಳ ಶೈಕ್ಷಣಿಕ ವಿವಿಧ  ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಎಐಎಂಎಸ್ಸೆಸ್‌ ರಾಜ್ಯ ಉಪಾಧ್ಯಕ್ಷರಾದ ಎಂ.ಎನ್‌. ಮಂಜುಳಾ ಮಾತನಾಡಿ, ದೇಶಕ್ಕೆ ಸ್ವಾತಂತ್ರ ದೊರೆತು 70 ವರ್ಷ ಕಳೆದರೂ ಮಹಿಳೆ ಇಂದಿಗೂ ಶಿಕ್ಷಣದಿಂದ ವಂಚಿತಳಾಗಿದ್ದಾಳೆ.

ದುಬಾರಿ ಶಿಕ್ಷಣದಿಂದಾಗಿ ಹೆಣ್ಣು ಮಕ್ಕಳು ಶೈಕ್ಷಣಿಕ ಅವಕಾಶಗಳಿಂದ ಮತ್ತಷ್ಟು ದೂರವುಳಿಯುವಂತಾಗಿದೆ. ಮೂಲಭೂತ ಹಕ್ಕಾದ “ಶಿಕ್ಷಣದ ಹಕ್ಕನ್ನು’ ಸರ್ಕಾರಗಳು ಇಂದು ಖಾಸಗಿಯವರಿಗೆ ಒತ್ತೆಯಿಟ್ಟಿವೆ ಎಂದರು. ಮಹಿಳಾ ಶಿಕ್ಷಣದ ಮಹತ್ವ ಅರಿತಿದ್ದ ಈಶ್ವರಚಂದ್ರ ವಿದ್ಯಾಸಾಗರ ಅವರ ಶ್ರಮದ ಫಲವಾಗಿ ಇಂದು ಕೆಲ ಹೆಣ್ಣು ಮಕ್ಕಳಾದರೂ ಉನ್ನತ ಶಿಕ್ಷಣ ಪಡೆಯುವ ವಾತಾವರಣ ನಿರ್ಮಾಣವಾಗಿದೆ. 

ಆದರೂ ಸ್ವತಂತ್ರ ಭಾರತದಲ್ಲಿ ಅಕ್ಷರಸ್ಥರಾಗಿರುವ ಮಹಿಳೆಯರು ಕೇವಲ ಶೇ. 30ರಷ್ಟು ಮಾತ್ರ. ಉನ್ನತ ವ್ಯಾಸಂಗಕ್ಕೆ ಹೋಗುವವರ ಸಂಖ್ಯೆ ಕೇವಲ ಶೇ. 1 ಮಾತ್ರ. ನಮ್ಮ ಸರ್ಕಾರಗಳು ಶಿಕ್ಷಣಕ್ಕೆ ಕೇವಲ ಶೇ.3 ಕ್ಕಿಂತ ಕಡಿಮೆ ವೆಚ್ಚ ಮಾಡುತ್ತಿವೆ. ಬಜೆಟ್‌ನಲ್ಲಿ ಶಿಕ್ಷಣಕ್ಕೆ ನೀಡುವ ಅನುದಾನವನ್ನು ಕನಿಷ್ಠ ಶೇ.10 ಕ್ಕೆ ಹೆಚ್ಚಿಸಬೇಕು ಎಂದು ಆಗ್ರಹಿಸಿದರು. 

ಎಐಎಂಎಸ್ಸೆಸ್‌ ನಗರ ಸಮಿತಿ ಅಧ್ಯಕ್ಷೆ ವಿಜಯಲಕ್ಷ್ಮೀ ದೇವತ್ಕಲ್‌ ಮಾತನಾಡಿ, ಹೆಣ್ಣು ಮಕ್ಕಳ ಉಚಿತ ಶಿಕ್ಷಣಕ್ಕಾಗಿ ಸರ್ಕಾರ ಹೆಚ್ಚೆಚ್ಚು ಶಾಲಾ- ಕಾಲೇಜುಗಳನ್ನು ತೆರೆಯುವ ಬದಲಾಗಿ ಮುಚ್ಚುತ್ತಿದೆ. ಸರ್ಕಾರಿ ಶಾಲಾ-ಕಾಲೇಜುಗಳಲ್ಲೂ ಉತ್ತಮ ಶಿಕ್ಷಣ ಲಭಿಸುವಂತೆ ಮಾಡಬೇಕು ಎಂದು ಒತ್ತಾಯಿಸಿದರು. ಜಿಲ್ಲಾಧ್ಯಕ್ಷೆ ಭುವನಾ, ಕಾರ್ಯದರ್ಶಿ ಪ್ರಭಾವತಿ ಗುಗಲ್‌, ಗಂಗೂಬಾಯಿ ಕೋಕರೆ, ಭಾಗ್ಯಶ್ರೀ ನಿಂಗಮ್ಮ, ದೇವಮ್ಮ, ಮಾಣಿಕ್ಯ ಇತರರಿದ್ದರು.

ಟಾಪ್ ನ್ಯೂಸ್

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

Tirupati Case; Hurtful work for Hindus by converted Jagan: KS Eshwarappa

Tirupati Case; ಮತಾಂತರಗೊಂಡ ಜಗನ್‌ ರಿಂದ ಹಿಂದೂಗಳಿಗೆ ನೋವುಂಟು ಮಾಡುವ ಕೆಲಸ: ಈಶ್ವರಪ್ಪ

11-bantwala

Bantwala: ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿದ್ದ ಯುವತಿ ನಾಪತ್ತೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

CM Siddaramaiah slams BJP about Ganeshotsav riot

Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ

Hubli; ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ

ಅಪರಾಧ ರಹಿತ ಸಮಾಜ ನಿರ್ಮಾಣಕ್ಕೆ ಮುಂದಾಗಿ-ನ್ಯಾ| ಸಂತೋಷ ಹೆಗ್ಡೆ

ಅಪರಾಧ ರಹಿತ ಸಮಾಜ ನಿರ್ಮಾಣಕ್ಕೆ ಮುಂದಾಗಿ-ನ್ಯಾ| ಸಂತೋಷ ಹೆಗ್ಡೆ

Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಬೈರಪ್ಪ

Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಭೈರಪ್ಪ

basavaraj

Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ

Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ

Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

13-bng

Bengaluru: ನಮ್ಮ ಕ್ಲಿನಿಕ್‌ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ

Malpe: ಪೊಟ್ಟುಕೆರೆ ಅಭಿವೃದ್ಧಿಪಡಿಸಿದರೆ ಶಾಶ್ವತ ನೀರಿನ ಒರತೆ

Malpe: ಪೊಟ್ಟುಕೆರೆ ಅಭಿವೃದ್ಧಿಪಡಿಸಿದರೆ ಶಾಶ್ವತ ನೀರಿನ ಒರತೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Bellary; poor food supply; Protest in SC, ST hostel

Bellary; ಕಳಪೆ ಆಹಾರ ಪೂರೈಕೆ; ಎಸ್‌ಸಿ, ಎಸ್ಟಿ ವಸತಿ ನಿಲಯದಲ್ಲಿ ಪ್ರತಿಭಟನೆ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.