ಅವಳಿ ನಗರದ ನಿವಾಸಿಗಳಲ್ಲಿ 15 ದಿನ ಡೆಂಘೀ ಜಾಗೃತಿ


Team Udayavani, Jul 26, 2017, 12:31 PM IST

hub4.jpg

ಹುಬ್ಬಳ್ಳಿ: ಡೆಂಘೀ ತಡೆಯುವ ದಿಸೆಯಲ್ಲಿ 15 ದಿನಗಳ ಕಾಲ ಅವಳಿ ನಗರದ ಜನರಲ್ಲಿ ಜಾಗೃತಿ ಮೂಡಿಸಲಾಗುವುದು ಎಂದು ಪಾಲಿಕೆ ಆಯುಕ್ತ ಸಿದ್ದಲಿಂಗಯ್ಯ ಹಿರೇಮಠ ಹೇಳಿದರು. ಪಾಲಿಕೆ ಆಯುಕ್ತರ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ವಲಯ ಕಚೇರಿ ಸಹಾಯಕ ಆಯುಕ್ತರು ವಾರ್ಡ್‌ ಸದಸ್ಯರ ಸಹಕಾರ ಪಡೆದುಕೊಂಡು ವಾರ್ಡ್‌ಗಳಲ್ಲಿ ಜನರಲ್ಲಿ ಜಾಗೃತಿ ಮೂಡಿಸಬೇಕು. ಜಾಗೃತಿ ಸಭೆಗಳನ್ನು ಆಯೋಜಿಸಬೇಕು ಎಂದರು. ಡೆಂಘೀ ಕುರಿತು ಜಾಗೃತಿ ಮೂಡಿಸಲು ಕಸ ಸಂಗ್ರಹ ವಾಹನಗಳಲ್ಲಿ ಆರೋಗ್ಯ ಇಲಾಖೆ ಮಾಡಿದ ಧ್ವನಿಸುರಳಿ ಪ್ರಸಾರ ಮಾಡಲಾಗುವುದು.

ಅಲ್ಲದೇ ಕೆಎಲ್‌ಇ ಎಫ್ ಎಂನಲ್ಲಿ ಡೆಂಘೀ ಮುನ್ನೆಚರಿಕೆ, ಚಿಕಿತ್ಸೆ ಕುರಿತು ಪ್ರಸಾರ ಮಾಡುವಂತೆ ಕೋರಲಾಗುವುದು  ಎಂದು ತಿಳಿಸಿದರು. ಮಹಾಪೌರ ಡಿ.ಕೆ. ಚವ್ಹಾಣ ಮಾತನಾಡಿ, ಡೆಂಘೀ ಕುರಿತು ಕರಪತ್ರಗಳನ್ನು ಪ್ರಕಟಿಸಿ ಜನರಿಗೆ ಹಂಚಬೇಕು. ಸದ್ಯ ನಗರದಲ್ಲಿ ಕೇವಲ 8 ಫಾಗಿಂಗ್‌ ಯಂತ್ರಗಳಿದ್ದು, ಅವುಗಳ ಸಂಖ್ಯೆಯನ್ನು 20ಕ್ಕೆ ಹೆಚ್ಚಿಸಬೇಕು.

ಡೆಂಘೀ ರೋಗಿಗಳ ಕುರಿತು ಖಾಸಗಿ ಸೇರಿದಂತೆ ಎಲ್ಲ ಆಸ್ಪತ್ರೆಗಳ ವರದಿ ತರಿಸಿಕೊಳ್ಳಬೇಕು ಎಂದರು. ಪಾಲಿಕೆ ಸದಸ್ಯ ಡಾ| ಪಾಂಡುರಂಗ ಪಾಟೀಲ ಮಾತನಾಡಿ, ಪ್ಲೇಟ್‌ಲೆಟ್‌ಗಳ ಸಂಖ್ಯೆ ಕಡಿಮೆಯಾದರೆ ನೀಡುವ ಮಾತ್ರೆಗಳನ್ನು ಪಾಲಿಕೆ ವತಿಯಿಂದ ನೀಡುವ ಕ್ರಮ ಕೈಗೊಳ್ಳುವುದು ಸೂಕ್ತ ಎಂದರು. 

ರಾಜಣ್ಣ ಕೊರವಿ ಮಾತನಾಡಿ, ಹುಬ್ಬಳ್ಳಿ-ಧಾರವಾಡದಲ್ಲಿ ಎಷ್ಟು ಆಸ್ಪತ್ರೆಗಳಿವೆ ಹಾಗೂ ಎಷ್ಟು ಲ್ಯಾಬ್‌ಗಳಿವೆ ಎಂಬುದರ ಮಾಹಿತಿ ಪಡೆದು ಅಲ್ಲಿಂದ ನಿರಂತರ ಡೆಂಘೀ ರೋಗಿಗಳ ಕುರಿತು ಮಾಹಿತಿ ಪಡೆಯಬೇಕು ಎಂದು ತಿಳಿಸಿದರು. ವೀರಣ್ಣ ಸವಡಿ, ಅಲ್ತಾಫ‌ ಕಿತ್ತೂರ, ಗಣೇಶ ಟಗರಗುಂಟಿ ಮಾತನಾಡಿ, ಸ್ವತ್ಛತೆಗೆ ಆದ್ಯತೆ ನೀಡಬೇಕು ಎಂದರು. 

ಗುತ್ತಿಗೆದಾರರ ಭದ್ರತಾ ಠೇವಣಿ ಜಪ್ತಿ: ರಸ್ತೆ ಕಾಮಗಾರಿ ಮಾಡಿದ ಗುತ್ತಿಗೆದಾರರು ಗುತ್ತಿಗೆ ಅವಧಿ ಪೂರ್ಣಗೊಳ್ಳದ ರಸ್ತೆಗಳ ಗುಂಡಿ ಮುಚ್ಚಲು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಗುತ್ತಿಗೆದಾರರ ಭದ್ರತಾ ಠೇವಣಿ ಜಪು¤ ಮಾಡಿಕೊಳ್ಳಲಾಗುವುದು ಎಂದು ಪಾಲಿಕೆ ಆಯುಕ್ತ ಸಿದ್ದಲಿಂಗಯ್ಯ ಹಿರೇಮಠ ಎಚ್ಚರಿಕೆ ನೀಡಿದರು.

ರಸ್ತೆಗಳಲ್ಲಿನ ಗುಂಡಿಗಳಿಂದಾಗಿ ಸಂಚರಿಸುವುದು ದುಸ್ತರವಾಗಿದೆ. ಕೂಡಲೇ ಗುತ್ತಿಗೆದಾರರು ಗುಂಡಿ ಮುಚ್ಚಲು ಕ್ರಮ ಕೈಗೊಳ್ಳಬೇಕು. ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳನ್ನು ಹೊಣೆ ಮಾಡಲಾಗುವುದು. ಉಳಿದ ರಸ್ತೆಗಳಲ್ಲಿ ಗುಂಡಿಗಳನ್ನು ಮುಚ್ಚಲು ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳಬೇಕು. ಟ್ರಕ್‌ಗಳಲ್ಲಿ ಕಾಂಕ್ರೀಟ್‌, ಸಕ್ಕರ್‌, ರೋಲರ್‌ ಗಳನ್ನು ಬಳಸಿ ತ್ವರಿತ ಗತಿಯಲ್ಲಿ ಕಾಮಗಾರಿ ನಡೆಸಬೇಕು ಎಂದು ಸೂಚಿಸಿದರು. 

ಮಹಾಪೌರ ಡಿ.ಕೆ. ಚವ್ಹಾಣ ಮಾತನಾಡಿ, ನಗರದ ಹಲವು ರಸ್ತೆಗಳಲ್ಲಿ ತೆಗ್ಗುಗಳಿಂದಾಗಿ ಸಂಚಾರ ಕಷ್ಟವಾಗುತ್ತಿದೆ. ಒಂದೆರಡು ದಿನಗಳಿಂದ ಮಳೆ ಬೀಳುವ ಪ್ರಮಾಣ ಕಡಿಮೆಯಾಗಿರುವುದರಿಂದ ರಸ್ತೆ ಗುಂಡಿಗಳನ್ನು ಮುಚ್ಚಲು ಮುಂದಾಗಬೇಕು ಎಂದರು. ಪಾಲಿಕೆ ಅಧಿಕಾರಿಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸಿಬ್ಬಂದಿ ಪಾಲ್ಗೊಂಡಿದ್ದರು. 

ಟಾಪ್ ನ್ಯೂಸ್

Stock Market: ಸಾರ್ವಕಾಲಿಕ ದಾಖಲೆ ಬರೆದ ಷೇರುಪೇಟೆ; ಹೂಡಿಕೆದಾರರಿಗೆ 6 ಲಕ್ಷ ಕೋಟಿ ರೂ. ಲಾಭ

Stock Market: ಸಾರ್ವಕಾಲಿಕ ದಾಖಲೆ ಬರೆದ ಷೇರುಪೇಟೆ; ಹೂಡಿಕೆದಾರರಿಗೆ 6 ಲಕ್ಷ ಕೋಟಿ ರೂ. ಲಾಭ

1-frr

Bail ಪಡೆದು ಬಿಡುಗಡೆಯಾದ ಬೆನ್ನಲ್ಲೇ ಮುನಿರತ್ನ ಮತ್ತೆ ಬಂಧನ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

1-gttt

Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್‌ ಗಾಂಧಿ

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

16-flipkart

Flipkart Big Billion Day ಸೆ. 27 ರಿಂದ ಆರಂಭ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ

Hubli; ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ

ಅಪರಾಧ ರಹಿತ ಸಮಾಜ ನಿರ್ಮಾಣಕ್ಕೆ ಮುಂದಾಗಿ-ನ್ಯಾ| ಸಂತೋಷ ಹೆಗ್ಡೆ

ಅಪರಾಧ ರಹಿತ ಸಮಾಜ ನಿರ್ಮಾಣಕ್ಕೆ ಮುಂದಾಗಿ-ನ್ಯಾ| ಸಂತೋಷ ಹೆಗ್ಡೆ

Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಬೈರಪ್ಪ

Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಭೈರಪ್ಪ

basavaraj

Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Stock Market: ಸಾರ್ವಕಾಲಿಕ ದಾಖಲೆ ಬರೆದ ಷೇರುಪೇಟೆ; ಹೂಡಿಕೆದಾರರಿಗೆ 6 ಲಕ್ಷ ಕೋಟಿ ರೂ. ಲಾಭ

Stock Market: ಸಾರ್ವಕಾಲಿಕ ದಾಖಲೆ ಬರೆದ ಷೇರುಪೇಟೆ; ಹೂಡಿಕೆದಾರರಿಗೆ 6 ಲಕ್ಷ ಕೋಟಿ ರೂ. ಲಾಭ

1-frr

Bail ಪಡೆದು ಬಿಡುಗಡೆಯಾದ ಬೆನ್ನಲ್ಲೇ ಮುನಿರತ್ನ ಮತ್ತೆ ಬಂಧನ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

1-gttt

Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್‌ ಗಾಂಧಿ

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.