ಸಾವಯವ ಕೃಷಿಯಲ್ಲಿದೆ ನೆಮ್ಮದಿ


Team Udayavani, Jul 26, 2017, 12:31 PM IST

hub2.jpg

ಧಾರವಾಡ: ಸಾವಯವ ಕೃಷಿಯಿಂದ ರೈತರು ಮಾತ್ರವಲ್ಲ, ಪ್ರಕೃತಿ, ಪ್ರಾಣಿ-ಪಕ್ಷಿಗಳು ನೆಮ್ಮದಿಯಿಂದ ಬದುಕಲು ಸಾಧ್ಯವಿದೆ. ರೈತರು ಸಾವಯವ ಕೃಷಿಯತ್ತ ಇನ್ನಾದರೂ ಹೆಜ್ಜೆ ಹಾಕಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿನಯ್‌ ಕುಲಕರ್ಣಿ ಸಲಹೆ ನೀಡಿದರು. 

ಇಲ್ಲಿನ ಜಿಲ್ಲಾ ತರಬೇತಿ ಕೇಂದ್ರದಲ್ಲಿ ಕೃಷಿ ಇಲಾಖೆ, ಜಿಪಂ ಹಾಗೂ ಜಿಲ್ಲಾಡಳಿತದಿಂದ ಹಮ್ಮಿಕೊಂಡಿದ್ದ ಸಮಗ್ರ ಕೃಷಿ ಅಭಿಯಾನ ಮತ್ತು ಸಾವಯವ, ಸಿರಿಧಾನ್ಯ ಮೇಳದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕೇವಲ ಎರಡು ದಶಕದಲ್ಲಿ ಧಾರವಾಡ ಜಿಲ್ಲೆಯ ಕೃಷಿಯಲ್ಲಿ ಮಹತ್ವದ ಬೆಳವಣಿಗೆಗಳು ನಡೆದು ಹೋಗಿವೆ.

ಇದೀಗ ಎಲ್ಲರೂ ಯಂತ್ರಾಧಾರಿತ ಕೃಷಿ ಮಾತ್ರ ಮಾಡುತ್ತಿದ್ದಾರೆ. ಅನವಶ್ಯಕ ರಾಸಾಯನಿಕ ಗೊಬ್ಬರ ಮತ್ತು ಕ್ರಿಮಿನಾಶಕಗಳ ಬಳಕೆಯಿಂದ ಭೂಮಿ ಮಾತ್ರವಲ್ಲ ಆಹಾರವೇ ಕಲ್ಮಶವಾಗಿ ಆರೋಗ್ಯ ಸಮಸ್ಯೆಗಳು ಎಲ್ಲರನ್ನು ಬಾಧಿಸುತ್ತಿದೆ. ಹೀಗಾಗಿ ಮತ್ತೆ ನಮ್ಮ ಪೂರ್ವಜರು ಹಾಕಿಕೊಟ್ಟ ಮಾರ್ಗದಲ್ಲಿಯೇ ಸಾವಯವ ಕೃಷಿ ಮಾಡುವ ಅಗತ್ಯವಿದೆ. 

ಪ್ರತಿಯೊಬ್ಬ ರೈತರು ಕೃಷಿಯೊಂದಿಗೆ ಹೈನುಗಾರಿಕೆ ಮಾಡಲೇಬೇಕು. ಅಂದಾಗ ಮಾತ್ರ ಬದುಕಲು ಸಾಧ್ಯ. ಕೇವಲ ವಾಣಿಜ್ಯ ಬೆಳೆಯ ಬೆನ್ನು ಹತ್ತಿದರೆ ಹಣ ಗಳಿಸಬಹುದು, ಆದರೆ ಆರೋಗ್ಯ-ನೆಮ್ಮದಿ ಸಾಧ್ಯವಿಲ್ಲ ಎಂದರು. 

ರೈತರಿಗೆ ಸಲಹೆಗಳು: ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ರೈತರಿಗೆ ಸಚಿವ ವಿನಯ್‌ ಕೃಷಿ ಸಂಬಂಧಿ ಸಲಹೆಗಳನ್ನು ನೀಡಿದರು. ರೈತರು ಹಾಸಿಗೆ ಇದ್ದಷ್ಟು ಕಾಲು ಚಾಚುವುದನ್ನು ಕಲಿಯಬೇಕು. ಚಟಗಳಿಂದ ದೂರವಾಗಿ, ಗ್ರಾಮೀಣ ಬದುಕಿಗೆ ಹೊಂದುವಂತೆ ಉತ್ತಮ ಬದುಕು ಕಟ್ಟಿಕೊಳ್ಳಬೇಕು. ಎಂತಹದೆ ಕಷ್ಟ ಬಂದರೂ ಸ್ವಾಭಿಮಾನಿಯಾಗಿ ಬದುಕಬೇಕು ಎಂದು ಹೇಳಿದರು. 

ಹಸುಕಟ್ಟಿ ಮಾತಾಡಿ: ರೈತರು ಕಾಲು ಮುರಿದ ಎತ್ತು, ಎಮ್ಮೆ, ದನಗಳನ್ನು ಮಾರಾಟ ಮಾಡುವುದರಲ್ಲಿ ತಪ್ಪೇನು ಇಲ್ಲ. ಕೆಲವರು ಬರೀ ಗೋ ಸಂರಕ್ಷಣೆ ಬಗ್ಗೆ ಮಾತನಾಡುತ್ತಾರೆ. ಆದರೆ, ಅವರ್ಯಾರೂ ಮನೆಯಲ್ಲಿ ಆಕಳು ಸಾಕುವುದಿಲ್ಲ. ಈ ಕುರಿತು ನಾನು ಅವರಿಗೆ ಸವಾಲು ಹಾಕುತ್ತೇನೆ. ಗೋರಕ್ಷಣೆ ಬಗ್ಗೆ ಮಾತನಾಡುವವರ ಮನೆಯಲ್ಲಿ ಇಂದಿಗೂ ಒಂದೇ ಒಂದು ಗೋವು ಸಾಕಿಲ್ಲ.

ಅವರು ಮಾತಾಡೋದಾದ್ರೆ ಮೊದಲು ನಾಲ್ಕು ಗೋವು ಸಾಕಲಿ ಎಂದು ವಿನಯ್‌ ಸವಾಲು ಹಾಕಿದರು. ಕೃಷಿ ಇಲಾಖೆ ಜಂಟಿ ನಿರ್ದೇಶಕ ಟಿ. ರುದ್ರೇಶಪ್ಪ ಮಾತನಾಡಿ, ಇಂದಿನ ದಿನಗಳಲ್ಲಿ ರೈತರು ಬರೀ ಮಳೆಯನ್ನೆ ನಂಬಿಕೊಂಡು ಕೃಷಿ ಮಾಡುತ್ತಿದ್ದಾರೆ.

ಆದರೆ, ಕಡಿಮೆ ಮಳೆಯಾದರೂ ಉತ್ತಮ ಫಸಲು ಬರುವ ಸಿರಿಧಾನ್ಯ ಕೃಷಿಯತ್ತ ಹೆಚ್ಚಿನ ಗಮನ ಹರಿಸಬೇಕು. ಅದನ್ನು ಉತ್ತೇಜಿಸಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು. ಜಿಪಂ ಅಧ್ಯಕ್ಷೆ ಚೈತ್ರಾ ಶಿರೂರ, ಜಿಪಂ ಸದಸ್ಯ ಚೆನ್ನಬಸಪ್ಪ ಮಟ್ಟಿ, ಕಲ್ಲಪ್ಪ ಪುಡಕಲಕಟ್ಟಿ, ಬಸಪ್ಪ ಮಾದರ, ನಿಂಗಪ್ಪ ಘಾಟೀನ ಸೇರಿದಂತೆ ಇತರರಿದ್ದರು.  

ಟಾಪ್ ನ್ಯೂಸ್

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

kejriwal-2

AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ

Hubli; ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ

ಅಪರಾಧ ರಹಿತ ಸಮಾಜ ನಿರ್ಮಾಣಕ್ಕೆ ಮುಂದಾಗಿ-ನ್ಯಾ| ಸಂತೋಷ ಹೆಗ್ಡೆ

ಅಪರಾಧ ರಹಿತ ಸಮಾಜ ನಿರ್ಮಾಣಕ್ಕೆ ಮುಂದಾಗಿ-ನ್ಯಾ| ಸಂತೋಷ ಹೆಗ್ಡೆ

Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಬೈರಪ್ಪ

Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಭೈರಪ್ಪ

basavaraj

Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

13

Udupi: ಅಪಾಯಕಾರಿಯಾಗಿ ಬಸ್‌ ಚಾಲನೆ: ಪ್ರಕರಣ ದಾಖಲು

11

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

1-aaccc

Mangaluru; ಕುಂಟಿಕಾನದಲ್ಲಿ ಅಪಘಾತ: ಕಾಲೇಜು ವಿದ್ಯಾರ್ಥಿ ಸಾ*ವು

3

Uppala: ಸುಮಾರು 3.5 ಕೋಟಿ ರೂ. ಮೌಲ್ಯದ ಅಮಲು ಪದಾರ್ಥ ವಶಕ್ಕೆ : ಬಂಧನ

sand

Malpe: ಮರಳು ಅಕ್ರಮ ಸಂಗ್ರಹ, ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.