50 ವರ್ಷ ಹಿಂದೆ ಪತನಗೊಂಡ ವಿಮಾನ ಪ್ರಯಾಣಿಕರ ಅಂಗಾಂಗ ಪತ್ತೆ?


Team Udayavani, Jul 30, 2017, 7:10 AM IST

Air-India-Tragedy-29-7.jpg

– ಫ್ರಾನ್ಸ್‌ನ ಮೌಂಟ್‌ ಬ್ಲಾಂಕ್‌ ಪರ್ವತ ಪ್ರದೇಶದಲ್ಲಿ ಸಿಕ್ಕಿತು ಜೆಟ್‌ ಎಂಜಿನ್‌, ಮನುಷ್ಯರ ಕೈ- ಕಾಲುಗಳ ಅವಶೇಷ

– 1966ರಲ್ಲಿ ಪತನಗೊಂಡ ಏರ್‌ಇಂಡಿಯಾ ವಿಮಾನದ ಎಂಜಿನ್‌ ಹಾಗೂ  ಪ್ರಯಾಣಿಕರ ದೇಹದ ಭಾಗಗಳು ಎಂಬ ಶಂಕೆ

ಗ್ರೆನೋಬಲ್‌: ಕೇವಲ 10 ದಿನಗಳ ಕೆಳಗೆ ಯುರೋಪ್‌ನ ಆಲ್ಫ್ಸ್ ಪರ್ವತಗಳಲ್ಲಿ 75 ವರ್ಷಗಳ ಕೆಳಗೆ ನಾಪತ್ತೆಯಾಗಿದ್ದ ದಂಪತಿಯ ಮೃತದೇಹ ಪತ್ತೆಯಾಗಿತ್ತು. ಅದು ಈಗಲೂ ಗುರುತು ಹಿಡಿಯುವಂಥ ಸ್ಥಿತಿಯಲ್ಲೇ ಇದ್ದು, ಎಲ್ಲರ ಅಚ್ಚರಿಗೂ ಕಾರಣವಾಗಿತ್ತು. ಅದರ ಬೆನ್ನಲ್ಲೇ ಇದೀಗ ಸುಮಾರು 50 ವರ್ಷಗಳ ಕೆಳಗೆ ಇದೇ ಶ್ರೇಣಿಯ ‘ಮೌಂಟ್‌ ಬ್ಲಾಂಕ್‌’ ಪರ್ವತದಲ್ಲಿ ಪತನವಾಗಿದ್ದ ಏರ್‌ಇಂಡಿಯಾ ವಿಮಾನಗಳ ಪ್ರಯಾಣಿಕರದ್ದು ಎನ್ನಲಾದ ಶರೀರದ ಭಾಗಗಳು ಪತ್ತೆಯಾಗಿವೆ.


‘ಮೌಂಟ್‌ ಬ್ಲಾಂಕ್‌’ ಪರ್ವತಗಳಲ್ಲಿ ಸಂಭವಿಸಿದ ವಿಮಾನ ದುರಂತಗಳ ಬಗ್ಗೆ ಮಾಹಿತಿ ಕಲೆಹಾಕುತ್ತಿರುವ ಡೇನಿಯಲ್‌ ರೋಶ್‌ ಎಂಬ ವ್ಯಕ್ತಿಗೆ ಈ ಭಾಗಗಳು ದೊರೆತಿವೆ. ಜೊತೆಗೆ ಒಂದು ವಿಮಾನದ ಎಂಜಿನ್‌ ಕೂಡ ಇಲ್ಲಿ ಸಿಕ್ಕಿದೆ. ಇಲ್ಲಿ ಸಿಕ್ಕಿರುವಂಥ ಕೈ ಹಾಗೂ ಕಾಲಿನ ಭಾಗಗಳನ್ನು ವೈದ್ಯಕೀಯ ಕೇಂದ್ರದಲ್ಲಿ ಪರೀಕ್ಷಿಸಿದಾಗ, ಇವು ಇಬ್ಬರು ಬೇರೆ ಬೇರೆ ವ್ಯಕ್ತಿಗಳ ಅಂಗಾಂಗಗಳು ಎಂದು ತಿಳಿದು ಬಂದಿದೆ.

ಪತನಗೊಂಡಿದ್ದವು ಏರ್‌ಇಂಡಿಯಾ ವಿಮಾನಗಳು
1966ರ ಜನವರಿಯಲ್ಲಿ ಮುಂಬಯಿಯಿಂದ ನ್ಯೂಯಾರ್ಕ್‌ಗೆ ತೆರಳುತ್ತಿದ್ದ ಏರ್‌ಇಂಡಿಯಾ ಬೋಯಿಂಗ್‌ 707 ಮೌಂಟ್‌ ಬ್ಲಾಂಕ್‌ ಪರ್ವತ ಪ್ರದೇಶದಲ್ಲಿ ಪತನವಾಗಿತ್ತು. ಆ ಸಮಯದಲ್ಲಿ ವಿಮಾನದಲ್ಲಿ 117 ಮಂದಿ ಪ್ರಯಾಣಿಕರಿದ್ದರು. ಅದಕ್ಕೂ ಮೊದಲು, ಅಂದರೆ 1950ರಲ್ಲಿ ಇದೇ ಪರ್ವತದಲ್ಲಿ ಮತ್ತೂಂದು ಏರ್‌ಇಂಡಿಯಾ ವಿಮಾನ ಪತನವಾಗಿ, 48 ಪ್ರಯಾಣಿಕರು ಸಾವಿಗೀಡಾಗಿದ್ದರು. ಈಗ ದೊರೆತಿರುವ ಮೃತದೇಹಗಳ ಭಾಗಗಳು 1966ರಲ್ಲಿ ಆದ ಅಪಘಾತದಲ್ಲಿ ಮೃತಪಟ್ಟ ಪ್ರಯಾಣಿಕರದ್ದು ಎಂದು ರೋಶ್‌ ಅಭಿಪ್ರಾಯಪಟ್ಟಿದ್ದಾರೆ. ದೇಹದ ಭಾಗಗಳು ಪತ್ತೆಯಾದೊಡನೆ ರೋಶ್‌ ಅವರು ಸ್ಥಳೀಯ ತುರ್ತು ಸೇವಾ ಸಂಸ್ಥೆಯನ್ನು ಸಂಪರ್ಕಿಸಿದ್ದು, ಹೆಲಿಕಾಪ್ಟರ್‌ ಮೂಲಕ ಅವುಗಳನ್ನು ಸಾಗಿಸಿ, ತಜ್ಞರು ಪರಿಶೀಲನೆ ನಡೆಸಿದ್ದಾರೆ.

ಇತ್ತೀಚೆಗಷ್ಟೇ ಹಿಮಗಲ್ಲಿನ ಪರ್ವತಶ್ರೇಣಿಯಲ್ಲಿ ಅಕ್ಕಪಕ್ಕವೇ ದಂಪತಿಯ ಮೃತದೇಹಗಳು ಪತ್ತೆಯಾಗಿದ್ದವು. ಡಿಎನ್‌ಎ ಪರೀಕ್ಷೆ ನಡೆಸಿದಾಗ, ಅವು 75 ವರ್ಷಗಳ ಹಿಂದೆ ಮೃತಪಟ್ಟ ಮಾರ್ಸೆಲಿನ್‌ ಡ್ಯುಮೋಲಿನ್‌ ಮತ್ತು ಪತ್ನಿ ಫ್ರಾನ್ಸಿನ್‌ ಅವರ ಮೃತದೇಹ ಎಂಬುದು ದೃಢಪಟ್ಟಿತ್ತು.

ಟಾಪ್ ನ್ಯೂಸ್

Air Force Chief: ವಾಯುಪಡೆ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

Air Force Chief: ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

crime (2)

Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!

1-muni

BJP MLA ಮುನಿರತ್ನಗೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ

Ayodhya: 8 ಕಾಲುಳ್ಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

Ayodhya: 8 ಕಾಲುಗಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

Vijayapura: ತಿರುಪತಿ ಲಡ್ಡು ಪಾವಿತ್ರ‍್ಯತೆ ಹಾಳು ಮಾಡಿದವರನ್ನು ಗಲ್ಲಿಗೇರಿಸಬೇಕು: ಯತ್ನಾಳ್

Dandeli: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ದ್ವಿಚಕ್ರ ವಾಹನ: ಇಬ್ಬರಿಗೆ ಗಾಯ

Dandeli: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ದ್ವಿಚಕ್ರ ವಾಹನ: ಇಬ್ಬರಿಗೆ ಗಾಯ

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

ISREL

Israel- ಹೆಜ್ಬುಲ್ಲಾ ನಡುವೆ ಬಾಂಬ್‌ಗಳ ಸುರಿಮಳೆ! ; 100 ರಾಕೆಟ್‌ ಲಾಂಚರ್‌ ಧ್ವಂಸ

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Chinese Zoo: ಪಾಂಡಾ ಎಂದು ನಾಯಿಗೆ ಬಣ್ಣ ಬಳಿದು ಪ್ರವಾಸಿಗರಿಗೆ ಮೋಸ…

China: ಪಾಂಡಾ ಎಂದು ನಾಯಿಗೆ ಬಣ್ಣ ಬಳಿದು ಪ್ರವಾಸಿಗರಿಗೆ ಮೋಸ: ಬೌ.. ಬೌ.. ಎಂದಾಗಲೇ ಗೊತ್ತು

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಕಳಸಾ ನಾಲಾದಲ್ಲಿ ರಾಜಕೀಯ ಕೊಳಕು: ಸರ್ವ ಪಕ್ಷ ನಿಯೋಗ ಒಯ್ಯುವ ಚಕಾರವೇ ಇಲ್ಲ!

ಕಳಸಾ ನಾಲಾದಲ್ಲಿ ರಾಜಕೀಯ ಕೊಳಕು: ಸರ್ವ ಪಕ್ಷ ನಿಯೋಗ ಒಯ್ಯುವ ಚಕಾರವೇ ಇಲ್ಲ!

Air Force Chief: ವಾಯುಪಡೆ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

Air Force Chief: ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

crime (2)

Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!

Desi Swara: ಯುಎಐಯಲ್ಲಿ “ನಮ್ಮವರು ವಿಶ್ವಕರ್ಮ ಸಮಿತಿ’ ಉದ್ಘಾಟನೆ

Desi Swara: ಯುಎಐಯಲ್ಲಿ “ನಮ್ಮವರು ವಿಶ್ವಕರ್ಮ ಸಮಿತಿ’ ಉದ್ಘಾಟನೆ

1-muni

BJP MLA ಮುನಿರತ್ನಗೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.