ರಾಜ್ಯಾದ್ಯಂತ ಹರತಾಳ ಯಶಸ್ವಿ: ಅಲ್ಲಲ್ಲಿ  ಕಲ್ಲೆಸೆತ, ಹಿಂಸಾಚಾರ


Team Udayavani, Jul 31, 2017, 6:45 AM IST

rajesh.jpg

ತಿರುವನಂತಪುರ: ಆರ್‌ಎಸ್‌ಎಸ್‌ ಕಾರ್ಯಕರ್ತ ರಾಜೇಶ್‌ ಹತ್ಯೆ ಪ್ರತಿಭಟಿಸಿ ಬಿಜೆಪಿ ಕರೆ ನೀಡಿದ್ದ ರಾಜ್ಯ ಹರತಾಳ ಸಂಪೂರ್ಣ ಯಶಸ್ವಿಯಾಗಿದೆ. ತಿರುವನಂತಪುರ, ಕೋಟ್ಟೆಯಂ, ಎರ್ನಾಕುಳಂ, ಆಲಪ್ಪುಳ  ಮತ್ತು ಮಲಪ್ಪುರಂ ಜಿಲ್ಲೆಗಳಲ್ಲಿ ಅಲ್ಲಲ್ಲಿ ವ್ಯಾಪಕ ಹಿಂಸಾಚಾರ ನಡೆದಿದೆ. 

ವಿವಿಧೆಡೆಗಳಲ್ಲಿ ಬಿಜೆಪಿ ಕಾರ್ಯಕರ್ತರು ನಿಷೇಧಾಜ್ಞೆಯನ್ನು ಲೆಕ್ಕಿಸದೆ ಮೆರವಣಿಗೆ ಮಾಡಿದ್ದಾರೆ. ಬಸ್ಸಿಗೆ ಕಲ್ಲೆಸೆದ , ಅಂಗಡಿ ಮುಂಗಟ್ಟುಗಳನ್ನು ಬಲವಂತವಾಗಿ ಮುಚ್ಚಿಸಿದ  ಘಟನೆಗಳು ವರದಿಯಾಗಿವೆ. ಕೆಎಸ್‌ಆರ್‌ಟಿಸಿ ಬಸ್‌ಗಳು ಮತ್ತು ಖಾಸಗಿ ಬಸ್‌ಗಳು ರಸ್ತೆಗಿಳಿಯಲಿಲ್ಲ. ಕೆಲವು ಖಾಸಗಿ ವಾಹನಗಳು ಮಾತ್ರ ಓಡಾಡಿವೆ. ದೂರದೂರುಗಳಿಂದ ಬಂದ ಪ್ರಯಾಣಿಕರಿಗೆ ಬಂದ್‌ನಿಂದಾಗಿ ಸಮಸ್ಯೆಯಾಯಿತು. ಬಸ್‌ ಮತ್ತು ಸಾರ್ವಜನಿಕ ವಾಹನಗಳು ಇಲ್ಲದ ಕಾರಣ ಜನರು ರೈಲು ಮತ್ತು ವಿಮಾನ ನಿಲ್ದಾಣದಲ್ಲಿ ತಾಸುಗಟ್ಟಲೆ ಕಾಯಬೇಕಾಯಿತು. 

ಕೊಲ್ಲಂ ಜಿಲ್ಲೆಯ ವೈಕ್ಕಂನಲ್ಲಿ ಬೆಂಗಳೂರಿನಿಂದ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿಗೆ ಕಲ್ಲು ತೂರಿ ಗಾಜು ಪುಡಿ ಮಾಡಿದ್ದಾರೆ. ತಿರುವನಂತಪುರಕ್ಕೆ ಹೋಗುತ್ತಿದ್ದ ಈ ಬಸ್ಸಿನ ಪ್ರಯಾಣವನ್ನು ಕೊಲ್ಲಂಗೆ ಮೊಟಕುಗೊಳಿಸಲಾಯಿತು. ಪ್ರತಿಭಟನೆ ನಿರತರು ವಿವಿಧೆಡೆಗಳಲ್ಲಿ ಪೆಟ್ರೋಲ್‌ ಪಂಪ್‌ಗ್ಳನ್ನು ಬಲವಂತವಾಗಿ ಮುಚ್ಚಿಸಿದ್ದಾರೆ. ಕೋಟ್ಟೆಯಂನಲ್ಲಿ ಪ್ರತಿಭಟನೆ ಹಿಂಸೆಗೆ ತಿರುಗಿದಾಗ ಲಾಠಿ ಚಾರ್ಜ್‌ ಮಾಡಲಾಯಿತು. ಪೊಲೀಸರು ಮತ್ತು ಮಾಧ್ಯಮದವರತ್ತ ಪ್ರತಿಭಟನೆಕಾರರು ಕಲ್ಲು ತೂರಿದ್ದಾರೆ. ತಿರುವನಂತಪುರದಲ್ಲಿ ನಿಷೇಧಾಜ್ಞೆ ಇದ್ದರೂ ಹರತಾಳ ನಡೆದಿದೆ. ನಗರದಲ್ಲಿ ಬಿಗುವಿನ ವಾತಾವರಣ ಇರುವ ಕಾರಣ ಮೂರು ದಿನ ಕರ್ಫ್ಯೂ ವಿಸ್ತರಿಸಲಾಗಿದೆ. 

ಬಿಜೆಪಿ ಕಾರ್ಯವಾಹ ಆಗಿದ್ದ ರಾಜೇಶ್‌ ಎಡವಕೋಡ್‌ ಶನಿವಾರ ರಾತ್ರಿ ಸಂಘದ ಸಭೆಯಲ್ಲಿ ಭಾಗವಹಿಸಿ ಮನೆಗೆ ವಾಪಸು ಹೋಗುತ್ತಿದ್ದಾಗ ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಕಡಿದು ಕೊಲೆ ಮಾಡಿದ್ದಾರೆ. ಅವರ ಎಡಗೈಯನ್ನು ಕತ್ತರಿಸಿ ದೂರ ಎಸೆದಿದ್ದರು. ಇದು ಸಿಪಿಎಂ ಕಾರ್ಯಕರ್ತರ ಕೃತ್ಯ ಎಂದು ಆರೋಪಿಸಿ ಬಿಜೆಪಿ ರಾಜ್ಯಬಂದ್‌ಗೆ ಕರೆ ನೀಡಿದೆ. ಶುಕ್ರವಾರ ಮುಂಜಾನೆ ರಾಜಧಾನಿಯಲ್ಲಿರುವ ಬಿಜೆಪಿ ರಾಜ್ಯ ಕಚೇರಿ ಮೇಲೆ ಸಿಪಿಎಂ ಕಾರ್ಯಕರ್ತರು ದಾಳಿ ಮಾಡಿ ಕಿಟಿಕಿ ಗಾಜುಗಳು ಮತ್ತು ಕಾರುಗಳ ಗಾಜುಗಳನ್ನು ಒಡೆದು ಹಾಕಿದ ಘಟನೆ ಬೆನ್ನಿಗೆ ಈ ಹತ್ಯೆ ಸಂಭವಿಸಿದೆ. 

ತಾಳ್ಮೆಗೆ ಮಿತಿಯಿದೆ: ರಾಜ್ಯ ಸರಕಾರವೇ ಹಿಂಸೆಯೆ ಪ್ರಾಯೋಜಕತ್ವ ವಹಿಸಿಕೊಂಡಿರುವುದರಿಂದ ನಿರಂತರವಾಗಿ ಆರ್‌ಎಸ್‌ಎಸ್‌ ಮತ್ತು ಬಿಜೆಪಿ ಕಾರ್ಯಕರ್ತರ ಹತ್ಯೆಯಾಗುತ್ತಿದೆ. ಇಷ್ಟರ ತನಕ ನಾವು ತಾಳ್ಮೆ ವಹಿಸಿದ್ದೆವು. ನಮ್ಮ ಪಕ್ಷದ ಕೇಂದ್ರ ಕಚೇರಿಗೆ ದಾಳಿಯಾದಲೂ ಸಂಯಮ ತಪ್ಪಲಿಲ್ಲ. ಆದರೆ ಸರಕಾರ ಮತ್ತು ಸಿಪಿಎಂ ನಮ್ಮ ತಾಳ್ಮೆಯನ್ನೇ ದೌರ್ಬಲ್ಯ ಎಂದು ತಿಳಿದು ಹತ್ಯೆಗಳನ್ನು ಮಾಡುತ್ತಿದೆ. ಹಿಂಸಾಚಾರದ ಮೂಲಕ ಆರ್‌ಎಸ್‌ಎಸ್‌ ಮತ್ತು ಬಿಜೆಪಿಯನ್ನು ನಿರ್ನಾಮ ಮಾಡುವುದು ಸಿಪಿಎಂ ಉದ್ದೇಶ  ಎಂದು ಬಿಜೆಪಿ ಅಧ್ಯಕ್ಷ ಕುಮ್ಮನಂ ರಾಜಶೇಖರನ್‌ ಗುಡುಗಿದ್ದಾರೆ. 

ರಾಷ್ಟ್ರೀಯ ಮಾನವಾಧಿಕಾರಗಳ ಆಯೋಗ, ಪ್ರಧಾನ ಮಂತ್ರಿ ಕೇಂದ್ರ ಗೃಹ ಸಚಿವರಿಗೆ ದೂರು ನೀಡಲು ಬಿಜೆಪಿ ತೀರ್ಮಾನಿಸಿದೆ. ಆದರೆ ರಾಜೇಶ್‌ ಹತ್ಯೆ ತನ್ನ ಕಾರ್ಯಕರ್ತರ ಕೃತ್ಯವಲ್ಲ ಎಂದು ಸಿಪಿಎಂ ಸ್ಪಷ್ಟನೆ ನೀಡಿದೆ. ಈ ಕೃತ್ಯದಲ್ಲಿ ಸಿಪಿಎಂ ಪಾತ್ರವಿಲ್ಲ. ಸ್ಥಳೀಯ ಮನಸ್ತಾಪದಿಂದಾಗಿ ಕೃತ್ಯ ಸಂಭವಿಸಿದೆ. ಆದರೆ ಬಿಜೆಪಿ ಎಲ್ಲ ಕೃತ್ಯಗಳನ್ನು ಸಿಪಿಎಂ ತಲೆಗೆ ಕಟ್ಟುತ್ತಿದೆ ಎಂದು ಸಿಪಿಎಂ ತಿರುವನಂತಪುರ ಜಿಲ್ಲಾ ಕಾರ್ಯದರ್ಶಿ ಅಣವೂರು ನಾಗಪ್ಪನ್‌ ಹೇಳಿದ್ದಾರೆ.

ರಾಜನಾಥ್‌ ಕಳವಳ: ಇದೇ ವೇಳೆ ಕೇಂದ್ರ ಗೃಹ ಸಚಿವ ರಾಜನಾಥ್‌ ಸಿಂಗ್‌ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರನ್ನು ಫೋನ್‌ ಮೂಲಕ ಸಂಪರ್ಕಿಸಿ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಹಿಂಸಾಚಾರಕ್ಕೆ ಕಳವಳ ವ್ಯಕ್ತಪಡಿಸಿ ಇದು ಎಷ್ಟು ಮಾತ್ರಕ್ಕೂ ಸಮ್ಮತವಲ್ಲ ಎಂದಿದ್ದಾರೆ.

ರಾಜೇಶ್‌ ಹತ್ಯೆಯಾದ ಘಟನೆ ಬಳಿಕ ಪಿಣರಾಯಿಗೆ ಕರೆ ಮಾಡಿದ ರಜನಾಥ್‌ ಹತ್ಯೆ ಮತ್ತು ಹಿಂಸೆಯನ್ನು ನಿಲ್ಲಿಸಲು ತಕ್ಷಣ ಕ್ರಮಕೈಗೊಳ್ಳಬೇಕೆಂದು ಸೂಚಿಸಿದ್ದಾರೆ. ಇದಕ್ಕೆ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ ಪಿಣರಾಯಿ  ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.  ಪ್ರಜಾಪ್ರಭುತ್ವದಲ್ಲಿ ರಾಜಕೀಯ ಹಿಂಸಾಚಾರಕ್ಕೆ ಸ್ಥಳವಿಲ್ಲ ಎನ್ನುವುದನ್ನು ತಿಳಿಸಿದ್ದೇನೆ. ಕೇರಳದ ಕಾನೂನು ಮತ್ತು ಶಿಸ್ತು ಪಾಲನೆ ಹದಗೆಟ್ಟಿರುವ ಕುರಿತು ಮುಖ್ಯಮಂತ್ರಿಯ ಗಮನ ಸೆಳೆದಿದ್ದೇನೆ ಎಂದು ರಾಜನಾಥ್‌ ಹೇಳಿದ್ದಾರೆ. 

ಚೆನ್ನಿತ್ತಲ ಪ್ರತಿಭಟನೆ : ವಿಪಕ್ಷ ನಾಯಕ ರಮೇಶ್‌ ಚೆನ್ನಿತ್ತಲ ಮತ್ತು ಕೆಪಿಸಿಸಿ ಅಧ್ಯಕ್ಷ ಎಂ. ಎಂ. ಹಸನ್‌ ಕೋಝಿಕ್ಕೋಡ್‌ನ‌ಲ್ಲಿ ರಾಜಕೀಯ ಹಿಂಸಾಚಾರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಸಿಪಿಎಂ ಮತ್ತು ಬಿಜೆಪಿ ರಕ್ತದಾಹದಿಂದಾಗಿ ಕೇರಳಕ್ಕೆ ಕೆಟ್ಟ ಹೆಸರು ಬಂದಿದೆ. ಎರಡೂ ಪಕ್ಷಗಳು ಹಿಂಸಾಚಾರವನ್ನು ನಿಲ್ಲಿಸಬೇಕೆಂದು ಚೆನ್ನಿತ್ತಲ ಹೇಳಿದ್ದಾರೆ. 

10 ಮಂದಿ ಕಸ್ಟಡಿಗೆ, ವಾಹನ ವಶಕ್ಕೆ
ಆರ್‌ಎಸ್‌ಎಸ್‌ ಇಡಲಕ್ಕೋಡಾಟ್‌ ಶಾಖೆಯ ಕಾರ್ಯವಾಹ ತಿರುವನಂತಪುರ ಕಲ್ಲಂಬಳ್ಳಿ ವಿನಾಯಕ ನಗರದ ಕುನ್ನಿಲ್‌ ವೀಟಿಲ್‌ ರಾಜೇಶ್‌ ಕೊಲೆ ಪ್ರಕರಣಕ್ಕೆ ಸಂಬಂಧಿಸಿ 10 ಮಂದಿಯನ್ನು ತಿರುವನಂತಪುರ ಪೊಲೀ ಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಈ ಪೈಕಿ ಮುಖ್ಯ ಆರೋ ಪಿಯ ಮನೆಗೆ ಪೊಲೀಸರು ಮುತ್ತಿಗೆ ಹಾಕಿದಾಗ ಆತ ಅಲ್ಲಿಂದ ತಪ್ಪಿಸಿಕೊಂಡು ಇಗರ್ಜಿಗೆ ಓಡಿ ಹೋಗಿದ್ದಾನೆ. 

ಇಗರ್ಜಿಯಲ್ಲಿ ಪ್ರಾರ್ಥನೆ ಮಾಡುತ್ತಿದ್ದವರು ಈತನನ್ನು ಹಿಡಿದು ಪೊಲೀಸರಿಗೊಪ್ಪಿಸಿದರು ಈತ ಹಲವು ಕ್ರಿಮಿನಲ್‌ ಪ್ರಕರಣಗಳಲ್ಲಿ ಆರೋಪಿಯಾಗಿದ್ದಾನೆಂದೂ ಗೂಂಡಾ ಕಾನೂನು ಪ್ರಕಾರವೂ ಈತನನ್ನು ಈ ಹಿಂದೆ ಬಂಧಿಸಲಾಗಿತ್ತೆಂದು ಪೊಲೀಸರು ತಿಳಿಸಿದ್ದಾರೆ. ಕೊಲೆಗೈ ಯಲು ಬಂದ ವಾಹನವೊಂದನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಸಿಪಿಎಂ ಕಾರ್ಯಕರ್ತರನ್ನು ರಕ್ಷಿಸುವ ಯತ್ನ: ಬಿಜೆಪಿ 
ಆದರೆ ಬಿಜೆಪಿ ಇದನ್ನು ಅಲ್ಲಗಳೆದಿದ್ದು, ಸರಕಾರ ಸಿಪಿಎಂ ಕಾರ್ಯಕರ್ತರನ್ನು ಬಚಾವು ಮಾಡಲು ಪುಡಿ ರೌಡಿಗಳನ್ನು ಬಂಧಿಸಿದೆ ಎಂದು ಆರೋಪಿಸಿದೆ. 

ಟಾಪ್ ನ್ಯೂಸ್

HDK (3)

MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

1-satyendrar

ED ಯಿಂದ ಬಂಧನಕ್ಕೊಳಗಾಗಿದ್ದ ಆಪ್ ನಾಯಕ ಸತ್ಯೇಂದ್ರ ಜೈನ್‌ ಗೆ ಜಾಮೀನು

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

sanjay-raut

Maharashtra; ಕೈ ನಾಯಕರಿಗೆ ಸಾಮರ್ಥ್ಯವಿಲ್ಲ..: ಸೀಟು ಹಂಚಿಕೆ ಕುರಿತು ರಾವತ್ ಅಸಮಾಧಾನ

UP: ಟೊಮ್ಯಾಟೋ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೋ ಕಾದು ಕೂತ ಪೊಲೀಸರು

UP: ಟೊಮ್ಯಾಟೊ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೊ ಕಾದು ಕೂತ ಪೊಲೀಸರು

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

de

Kasaragod: ಬೋಟ್‌ ಮುಳುಗಡೆ; ನಾಪತ್ತೆಯಾಗಿದ್ದ ಮುಜೀಬ್‌ ಮೃತದೇಹ ಪತ್ತೆ

8

Kumbla: ಕುಸಿದು ಬೀಳುವ ಅಪಾಯದಲ್ಲಿದೆ ಉರ್ಮಿ-ಪಲ್ಲೆಕೂಡೆಲು ಕಿರು ಸೇತುವೆ

Kodagu: ತಲಕಾವೇರಿಯಲ್ಲಿ ನಿಗಧಿತ ಸಮಯಕ್ಕೆ ತೀಥ೯ರೂಪಿಣಿಯಾದ ಕಾವೇರಿ ಮಾತೆ

Kodagu: ತಲಕಾವೇರಿಯಲ್ಲಿ ನಿಗಧಿತ ಸಮಯಕ್ಕೆ ತೀಥ೯ರೂಪಿಣಿಯಾದ ಕಾವೇರಿ ಮಾತೆ

17

Kasaragod: ಜಿಲ್ಲಾ ನ್ಯಾಯಾಲಯದ ತೀರ್ಪಿನ ವಿರುದ್ಧ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಸರಕಾರ

courts

Kasaragod: ಕೊಲೆ ಪ್ರಕರಣ: 8 ವರ್ಷ ಕಠಿಣ ಸಜೆ, ದಂಡ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

ಟಿಕೆಟ್‌ ಕೊಡಿಸದೆ ವಂಚನೆ: ಸಚಿವ ಜೋಶಿ ಸೋದರ, ಸೋದರಿ, ಅಳಿಯನ ವಿರುದ್ಧ ಕೇಸ್‌

ಟಿಕೆಟ್‌ ಕೊಡಿಸದೆ ವಂಚನೆ: ಸಚಿವ ಜೋಶಿ ಸೋದರ, ಸೋದರಿ, ಅಳಿಯನ ವಿರುದ್ಧ ಕೇಸ್‌

HDK (3)

MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

1-satyendrar

ED ಯಿಂದ ಬಂಧನಕ್ಕೊಳಗಾಗಿದ್ದ ಆಪ್ ನಾಯಕ ಸತ್ಯೇಂದ್ರ ಜೈನ್‌ ಗೆ ಜಾಮೀನು

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.