ಪಾಕಿಸ್ಥಾನದ 18ನೇ ಪ್ರಧಾನಿಯಾಗಿ ಶಾಹೀದ್ ಖಾನ್ ಅಬ್ಟಾಸಿ ಆಯ್ಕೆ
Team Udayavani, Aug 1, 2017, 7:03 PM IST
ಇಸ್ಲಾಮಾಬಾದ್ : ಪಾಕಿಸ್ಥಾನದ ಮಾಜಿ ಪೆಟ್ರೋಲಿಯಂ ಸಚಿವ ಶಾಹೀದ್ ಖಾನ್ ಅಬ್ಟಾಸಿ ಅವರು ನವಾಜ್ ಷರೀಫ್ ಅವರ ಉತ್ತರಾಧಿಕಾರಿಯಾಗಿ, ಪಾಕಿಸ್ಥಾನದ 18ನೇ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ.
ಪನಾಮಾ ಗೇಟ್ ಹಗರಣದಲ್ಲಿ ಭ್ರಷ್ಟರೆಂದು ಸುಪ್ರೀಂ ಕೋರ್ಟ್ ನಿಂದ ಘೋಷಿಸಲ್ಪಟ್ಟ ಪ್ರಧಾನಿ ನವಾಜ್ ಷರೀಫ್ ಹುದ್ದೆಗೆ ಅನರ್ಹರಾದ ನಾಲ್ಕು ದಿನಗಳ ತರುವಾಯ ಪಾಕ್ ಸಂಸದರು ಅಬ್ಟಾಸಿ ಅವರನ್ನು ನೂತನ ಪ್ರಧಾನಿಯನ್ನಾಗಿ ಇಂದು ಆಯ್ಕೆ ಮಾಡಿದರು.
ಪಿಎಂಎಲ್ಎನ್ ನಾಯಕ ಶಾಹೀದ್ ಅಬ್ಟಾಸಿ ಅವರು ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಇಂದು ನಡೆದ ಮತದಾನದಲ್ಲಿ 221 ಮತಗಳನ್ನು ಪಡೆದು ಪ್ರಧಾನಿ ಹುದ್ದೆಗೆ ಆಯ್ಕೆಯಾದರು.
ಹಾಗಿದ್ದರೂ ಅಬ್ಟಾಸಿ ಅವರು ತತ್ಕಾಲೀನ ಪ್ರಧಾನಿ ಆಗಿದ್ದಾರೆ. ಪಂಜಾಬ್ ಮುಖ್ಯಮಂತ್ರಿಯಾಗಿರುವ ನವಾಜ್ ಷರೀಫ್ ಅವರ ಸಹೋದರ ಶಹಬಾಜ್ ಷರೀಫ್ ಅವರು ಒಕ್ಕೂಟ ಸರಕಾರದ ಅಧಿಕಾರವನ್ನು ಔಪಚಾರಿಕವಾಗಿ ವಹಿಸಿಕೊಳ್ಳುವ ತನಕದ ಅವಧಿಗೆ ಅಬ್ಟಾಸಿ ತತ್ಕಾಲೀನ ಪ್ರಧಾನಿಯಾಗಿರುತ್ತಾರೆ.
ಅಬ್ಟಾಸಿ ಅವರನ್ನು ತತ್ಕಾಲೀನ ಪ್ರಧಾನಿಯನ್ನಾಗಿ ಆಯ್ಕೆ ಮಾಡುವುದು ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಬಹುಮತ ಹೊಂದಿರುವ ಪಿಎಂಎಲ್ಎನ್ಗೆ ಏನೇನೂ ಕಷ್ಟವಾಗಲಿಲ್ಲ.
ನವಾಜ್ ಷರೀಫ್ ಅವರ ಸಹೋದರ, ವಿಶಾಲ ಪಂಜಾಬ್ ಪ್ರಾಂತ್ಯದ ಮುಖ್ಯಮಂತ್ರಿಯಾಗಿರುವ ಶಹಬಾಜ್ ಸಂಸದೀಯ ಚುನಾವಣೆಯನ್ನು ಗೆದ್ದ ಬಳಿಕವಷ್ಟೇ ಪಿಎಂಎಲ್ಎನ್ ಸಂಸದರು ಅವರನ್ನು ದೇಶದ ಪ್ರಧಾನಿ ಹುದ್ದೆಗೆ ಆಯ್ಕೆ ಮಾಡಬಹುದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್ ಇಸ್ರೇಲ್ ದಾಳಿಯಲ್ಲಿ ಸಾವು
Israel- ಹೆಜ್ಬುಲ್ಲಾ ನಡುವೆ ಬಾಂಬ್ಗಳ ಸುರಿಮಳೆ! ; 100 ರಾಕೆಟ್ ಲಾಂಚರ್ ಧ್ವಂಸ
Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!
China: ಪಾಂಡಾ ಎಂದು ನಾಯಿಗೆ ಬಣ್ಣ ಬಳಿದು ಪ್ರವಾಸಿಗರಿಗೆ ಮೋಸ: ಬೌ.. ಬೌ.. ಎಂದಾಗಲೇ ಗೊತ್ತು
Labanon: ಲೆಬನಾನ್ ಪ್ರಯಾಣಿಕರು ಪೇಜರ್ಸ್, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್ ಏರ್ ವೇಸ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Belagavi; ದರ್ಬಾರ್ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್!
Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ
Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ
Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್ ಮಲ್ಪೆ ತಂಡದ ಕಾರ್ಯಾಚರಣೆ
World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.