ವರಮಹಾಲಕ್ಷ್ಮೀ ಹಬ್ಬದಂದು ಅಯೋಗ್ಯ ಶುರು
Team Udayavani, Aug 2, 2017, 10:36 AM IST
ವರಮಹಾಲಕ್ಷ್ಮೀ ಹಬ್ಬದಂದು ಸತೀಶ್ ನೀನಾಸಂ ಅಭಿನಯದ ಹೊಸ ಚಿತ್ರ “ಅಯೋಗ್ಯ’ ಶುರುವಾಗುತ್ತಿರುವ ಸುದ್ದಿ ಎಲ್ಲರಿಗೂ ಗೊತ್ತೇ ಇದೆ. ಈ ಮಧ್ಯೆ ಸತೀಶ್ ಫೋಟೋ ಶೂಟ್ ಆಗಿರುವುದಷ್ಟೇ, ಆ ಫೋಟೋಗಳನ್ನು ಬಿಡುಗಡೆ ಮಾಡಲಾಗಿದೆ. ಗ್ರಾಮ ಪಂಚಾಯ್ತಿ ಸದಸ್ಯನ ಪಾತ್ರದಲ್ಲಿ ಸತೀಶ್ ಈ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಅವರ ಹಲವು ಭಂಗಿಗಳ ಫೋಟೋಗಳನ್ನು ಸೆರೆಹಿಡಿಯಲಾಗಿದೆ.
ಅಂದ ಹಾಗೆ, “ಅಯೋಗ್ಯ’ ಚಿತ್ರದ ಮುಹೂರ್ತ ಇದೇ ಶುಕ್ರವಾರ ಕಂಠೀರವ ಸ್ಟುಡಿಯೋದಲ್ಲಿ ನಡೆಯಲಿದೆ. ಅಂದು ಚಿತ್ರದ ಮೊದಲ ದೃಶ್ಯದ ನಿರ್ದೇಶವನ್ನು ಯೋಗರಾಜ್ ಭಟ್ ಮಾಡಲಿದ್ದಾರೆ. ಇನ್ನು “ದುನಿಯಾ’ ಸೂರಿ ಕ್ಯಾಮರಾ ಚಾಲನೆ ಮಾಡಿದರೆ, ಸುದೀಪ್ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡಲಿದ್ದಾರೆ.
ಇದೇ ಸಂದರ್ಭದಲ್ಲಿ ಮುತ್ತಪ್ಪ ರೈ ಮತ್ತು ಕಲ್ಪನ ನಾರಾಯಣ್ ಅವರು ಮೊದಲ ಟೈಟಲ್ ಟೀಸರ್ ಬಿಡುಗಡೆ ಮಾಡಲಿದ್ದಾರೆ. ಅಂದು ಮುಖ್ಯ ಆಹ್ವಾನಿತರಾಗಿ ಜಯಂತ ಕಾಯ್ಕಿಣಿ, ಪುನೀತ್ ರಾಜಕುಮಾರ್, ಯಶ್, ಗಣೇಶ್, “ದುನಿಯಾ’ ವಿಜಯ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಸಾ.ರಾ. ಗೋವಿಂದು ಮುಂತಾದವರು ಭಾಗವಹಿಸಲಿದ್ದಾರೆ.
“ಅಯೋಗ್ಯ’ ಚಿತ್ರವನ್ನು ಯೋಗರಾಜ್ ಭಟ್ ಶಿಷ್ಯ ಮಹೇಶ್ ನಿರ್ದೇಶಿಸುತ್ತಿದ್ದಾರೆ. ಚಿತ್ರಕ್ಕೆ ಕಥೆ ಮತ್ತು ಚಿತ್ರಕಥೆ ಸಹ ಅವರದ್ದೇ. ಸುರೇಶ್ ಅವರು ಈ ಚಿತ್ರವನ್ನು ನಿರ್ಮಿಸಿದರೆ, ವಿ. ಹರಿಕೃಷ್ಣ ಸಂಗೀತ ಸಂಯೋಜಿಸುತ್ತಿದ್ದಾರೆ. ಪ್ರೀತಮ್ ತೆಗ್ಗಿನಮನೆ ಛಾಯಾಗ್ರಹಣ ಮಾಡುತ್ತಿದ್ದಾರೆ.
ಇನ್ನು ಸತೀಶ್ಗೆ ನಾಯಕಿ ಆಯ್ಕೆ ಇನ್ನಷ್ಟೇ ಆಗಬೇಕಿದ್ದು, ಮಿಕ್ಕಂತೆ ಚಿತ್ರದಲ್ಲಿ ಚಿಕ್ಕಣ್ಣ, ಶಿವರಾಜ್ ಕೆ.ಆರ್. ಪೇಟೆ, ಸರಿತ, ರವಿಶಂಕರ್, ರಂಗಾಯಣ ರಘು, ತಬಲಾ ನಾಣಿ, ಸಾಧು ಕೋಕಿಲ, ಬುಲೆಟ್ ಪ್ರಕಾಶ್, ಕುರಿ ಪ್ರತಾಪ್ ಸೇರಿದಂತೆ ಹಲವರು ನಟಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.