![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Aug 3, 2017, 8:55 AM IST
ಹೊಸದಿಲ್ಲಿ: ಸಾರ್ವಜನಿಕ ಕ್ಷೇತ್ರದಲ್ಲಿರುವ ವ್ಯಕ್ತಿಗಳ ಖಾಸಗಿ ಮಾಹಿತಿಯನ್ನು ಹಾಲಿ ತಾಂತ್ರಿಕ ದಿನಮಾನಗಳಲ್ಲಿ ಸುರಕ್ಷತೆಯಿಂದ ಇರಿಸಿಕೊಳ್ಳುವುದೇ ಸವಾಲಾಗಿದೆ ಎಂದಿದೆ ಸುಪ್ರೀಂಕೋರ್ಟ್. ಬುಧವಾರ ನಡೆದ ಅಂತಿಮ ವಿಚಾರಣೆ ವೇಳೆ ಸಾರ್ವಜನಿಕವಾಗಿ ಸಲ್ಲಿಕೆಯಾಗಿರುವ ಖಾಸಗಿ ಮಾಹಿತಿ ರಕ್ಷಣೆಗೆ ಕಠಿಣಾತಿ ಕಠಿಣ ರಕ್ಷಣಾ ನೀತಿಗಳನ್ನು ಜಾರಿಗೊಳಿ ಸುವುದೇ ಅಂತಿಮ ಪರಿಹಾರ ಮಾರ್ಗ ಎಂದು ಅಭಿಪ್ರಾಯ ಪಟ್ಟಿದೆ. ಯಾವ ಕಾರಣಕ್ಕಾಗಿ ಮಾಹಿತಿ ಪಡೆದುಕೊಳ್ಳಲಾಗುತ್ತಿದೆ ಎಂಬುದು ಅರ್ಥವಾಗುತ್ತಿಲ್ಲ. ಇದು ನಿಜಕ್ಕೂ ಕಳವಳಕಾರಿ. ತೀರಾ ತಾಂತ್ರಿಕ ದಿನಮಾನಗಳಲ್ಲಿ ಖಾಸಗಿತನ ರಕ್ಷಣೆಗೆ ಹೋರಾಡಬೇಕಾದ ಅನಿವಾರ್ಯತೆ ಇದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ. ಖಾಸಗಿತನದ ಪ್ರಾಮುಖ್ಯತೆಯನ್ನು ಕಾಯ್ದುಕೊಳ್ಳಲೇಬೇಕಾಗಿದೆ ಎಂದಿದೆ ನ್ಯಾಯಪೀಠ.
6 ದಿನಗಳಿಂದ ಆಧಾರ್ ಕಡ್ಡಾಯದ ಬಗ್ಗೆ ಮುಖ್ಯ ನ್ಯಾಯಮೂರ್ತಿ ಜೆ.ಎಸ್. ಖೇಹರ್ ನೇತೃತ್ವದ 9 ನ್ಯಾಯಮೂರ್ತಿಗಳ ಪೀಠದ ಎದುರು ನಡೆಯುತ್ತಿದ್ದ ವಿಚಾರಣೆ ಬುಧವಾರ ಮುಕ್ತಾಯದ ವೇಳೆ ಈ ಅಭಿಪ್ರಾಯ ವ್ಯಕ್ತವಾಗಿದೆ. ತೀರ್ಪನ್ನು ನ್ಯಾಯಪೀಠ ಕಾಯ್ದಿರಿಸಿದೆ. ಆ.27 ಅಥವಾ ಅದಕ್ಕಿಂತ ಮೊದಲು ತೀರ್ಪು ನೀಡುವ ಸಾಧ್ಯತೆ ಇದೆ. ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್, ಹೆಚ್ಚುವರಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ನ್ಯಾಯವಾದಿಗಳಾದ ಕಪಿಲ್ ಸಿಬಲ್, ಅರವಿಂದ್ ದಾತಾರ್ ಸೇರಿ ಪ್ರಮುಖರು ವಾದಿಸಿದ್ದರು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.