ಹಾಪ್‌ಕಾಮ್ಸ್‌ಗೆ 2.39 ಲಕ್ಷ ರೂ. ಲಾಭ


Team Udayavani, Aug 4, 2017, 2:49 PM IST

04-CHIT-4.jpg

ಚಿತ್ರದುರ್ಗ: ಜಿಲ್ಲಾ ತೋಟದ ಉತ್ಪನ್ನಗಳ ಬೆಳೆಗಾರರ ಸಹಕಾರ ಮಾರಾಟ ಮತ್ತು ಸಂಸ್ಕರಣ ಸಂಘ (ಹಾಪ್‌ ಕಾಮ್ಸ್‌) 80.04 ಲಕ್ಷ ರೂ. ವ್ಯಾಪಾರ ವಹಿವಾಟು ನಡೆಸಿ 2.39 ರೂ. ನಿವ್ವಳ ಲಾಭ ಗಳಿಸಿದೆ ಎಂದು ಸಂಘದ ವ್ಯವಸ್ಥಾಪಕ ನಿರ್ದೇಶಕ ಎಚ್‌.ಆರ್‌. ವೆಂಕಟೇಶಮೂರ್ತಿ
ತಿಳಿಸಿದರು.

ಹಾಪಕಾಮ್ಸ್‌ ಆವರಣದಲ್ಲಿ ಗುರುವಾರ ನಡೆದ 2016-17ನೇ ಸಾಲಿನ 32ನೇ ವಾರ್ಷಿಕ ಮಹಾಸಭೆಯಲ್ಲಿ 2017-18ನೇ ಸಾಲಿನ 88 ಲಕ್ಷ ರೂ.ಗಳ ಬಜೆಟ್‌ ಮಂಡಿಸಿ ಅವರು ಮಾತನಾಡಿದರು. ಕಳೆದ ವರ್ಷ ಮತ್ತು ಪ್ರಸಕ್ತ ಸಾಲಿನ ಖರ್ಚು, ವೆಚ್ಚಗಳಿಗೆ ಅನುಮೋದನೆ ಪಡೆದರು. 1986-87ರಲ್ಲಿ ಕೆಲವೇ ಕೆಲವು ಸದಸ್ಯರಿಂದ ಆರಂಭವಾದ ಸಂಘ, ಪ್ರಸಕ್ತ ಸಾಲಿನ ಅಖೈರಿಗೆ ಒಟ್ಟು 811 ಮಂದಿ ಸದಸ್ಯರನ್ನು ಹೊಂದಿದೆ. 3 ಲಕ್ಷ 22 ಸಾವಿರದ 293 ರೂ.ಗಳ ಶೇರು ಬಂಡವಾಳ ಸಂಗ್ರಹಿಸಲಾಗಿದೆ. ಪ್ರಸಕ್ತ ವರ್ಷ ತೋಟಗಾರಿಕೆ ಇಲಾಖೆಯಿಂದ ಜಿಲ್ಲೆಯ ರೈತರಿಗೆ ಬೇಕಾಗಿರುವ
ಉತ್ತಮ ತಳಿಯ ನುಗ್ಗೆ ಬೀಜಗಳನ್ನು ಧಾರವಾಡ ಮತ್ತು ಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾನಿಲಯದಿಂದ ಖರೀದಿಸಿ ವಿತರಣೆ ಮಾಡಲಾಗಿದೆ ಎಂದರು.

ಗೊಬ್ಬರ, ಕೀಟನಾಶಕ, ಔಷ ಧ ಇತ್ಯಾದಿಗಳನ್ನು ರೈತರಿಗೆ ಒದಗಿಸಲಾಗಿದೆ. ಬಾಳೆ, ಮಾವು, ತರಕಾರಿ ಬೆಳೆಗಾರರಿಗೆ ಐಐಎಚ್‌ಆರ್‌ ತಂತ್ರಜ್ಞಾನದಿಂದ ಅಭಿವೃದ್ಧಿಪಡಿಸಿದ ಬನಾನಾ, ಮ್ಯಾಂಗೋ ಹಾಗೂ ವೆಜಿಟೇಬಲ್‌ ಸ್ಪೆಷಲ್‌ ಖರೀದಿಸಿ ರೈತರಿಗೆ ಮಾರಾಟ ಮಾಡಲಾಗುತ್ತಿದೆ ಎಂದರು. ಹಾಪಕಾಮ್ಸ್‌ ಸದಸ್ಯ ಹೆಂಜಾರಪ್ಪ ಮಾತನಾಡಿ, ಜಿಲ್ಲೆ ಸಂಪೂರ್ಣವಾಗಿ ಬರಗಾಲಕ್ಕೆ ತುತ್ತಾಗಿರುವುದರಿಂದ ತೋಟಗಾರಿಕಾ ಬೆಳೆಗಳು ನಷ್ಟವಾಗಿವೆ. ಹಾಗಾಗಿ ಮುಖ್ಯಮಂತ್ರಿಗಳ ಬಳಿ ನಿಯೋಗ ಹೋಗಿ ಅಡಿಕೆ, ತೆಂಗು ಹಾಗೂ ಹಣ್ಣಿನ ಬೆಳೆಗಳಿಗೆ ಸೂಕ್ತ ಪರಿಹಾರ ಕೊಡಿಸಬೇಕೆಂದು ಒತ್ತಾಯಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಬಾಲಕೃಷ್ಣ, ಜಿಲ್ಲಾಡಳಿತದ ಮೂಲಕ ಈಗಾಗಲೇ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ನಷ್ಟಕ್ಕೊಳಗಾಗಿರುವ ತೋಟಗಾರಿಕೆ ಬೆಳೆಗಾರರಿಗೆ ಪರಿಹಾರ ಒದಗಿಸುವುದಾಗಿ ಭರವಸೆ ನೀಡಿದರು. ತೋಟದ ಉತ್ಪನ್ನಗಳ ಬೆಳೆಗಾರರ ಸಹಕಾರ ಮಾರಾಟ ಮತ್ತು ಸಂಸ್ಕರಣ ಸಂಘದ ಅಧ್ಯಕ್ಷ ಕೆ.ಎಸ್‌.ತಿಮ್ಮಾರೆಡ್ಡಿ, ನಿದೇಕರಾದ ಎಚ್‌. ಕುಬೇರ, ಜಿ. ಶ್ರೀಕಂಠನ್‌, ವೈ.
ಎಸ್‌. ಉಮಾಶಂಕರ್‌, ಬಿ.ಆರ್‌. ಯಶೋದಾ, ಕೆ.ಎಚ್‌. ಅನಂತ ರೆಡ್ಡಿ, ಜಿ.ಕೆ. ಸಿದ್ದಮ್ಮ, ಟಿ. ತಿಪ್ಪಮ್ಮ, ರೇಣುಕಮ್ಮ, ಪುರದ ದೊಡ್ಡಮಾರಣ್ಣ, ಟಿ.ಜಿ. ಸಂತೋಷ್‌ಕುಮಾರ್‌ ಇದ್ದರು.

ಟಾಪ್ ನ್ಯೂಸ್

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

laTirumala Tirupa ಲಡ್ಡು ಪ್ರಸಾದ ಪ್ರಮಾದ!

Tirumala Tirupa ಲಡ್ಡು ಪ್ರಸಾದ ಪ್ರಮಾದ!

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

Daily Horoscope:

Daily Horoscope: ಹೇಗಿದೆ ನೋಡಿ ಶನಿವಾರದ ನಿಮ್ಮ ಗ್ರಹಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಣ್ಣ-ಮಧ್ಯಮ ಕೈಗಾರಿಕೆಗೆ ಸಿಗಲಿ ಪ್ರೋತ್ಸಾಹ-ಸಂಸದ ಗೋವಿಂದ ಕಾರಜೋಳ

ಸಣ್ಣ-ಮಧ್ಯಮ ಕೈಗಾರಿಕೆಗೆ ಸಿಗಲಿ ಪ್ರೋತ್ಸಾಹ-ಸಂಸದ ಗೋವಿಂದ ಕಾರಜೋಳ

ಮಳೆ ಬಂದರೆ ಸೋರುತ್ತೆ ಕುಂಬಾರಹಟ್ಟಿ ಶಾಲೆ; ಹೊಸ ಆರ್‌ ಸಿಸಿ ಕೊಠಡಿಯೂ ಶಿಥಿಲ

ಮಳೆ ಬಂದರೆ ಸೋರುತ್ತೆ ಕುಂಬಾರಹಟ್ಟಿ ಶಾಲೆ; ಹೊಸ ಆರ್‌ ಸಿಸಿ ಕೊಠಡಿಯೂ ಶಿಥಿಲ

Renukaswamy

Renukaswamy Case: ಮಗ ಬೇಡಿಕೊಂಡ ಫೋಟೋ ನೋಡಲಾರೆ: ತಾಯಿ ರತ್ನಪ್ರಭಾ ಕಣ್ಣೀರು

Sirigere: ಶವ ಸಾಗಿಸುತ್ತಿದ್ದ ಅಂಬುಲೆನ್ಸ್ ಲಾರಿಗೆ ಡಿಕ್ಕಿ.. ಓರ್ವ ಮೃತ್ಯು, ಇಬ್ಬರಿಗೆ ಗಾಯ

Sirigere: ಶವ ಸಾಗಿಸುತ್ತಿದ್ದ ಆಂಬುಲೆನ್ಸ್ ಲಾರಿಗೆ ಡಿಕ್ಕಿ.. ಓರ್ವ ಮೃತ್ಯು, ಇಬ್ಬರಿಗೆ ಗಾಯ

1-ddaaa

Darshan ಫೋಟೋ ವೈರಲ್;ಕಣ್ಣೀರಿಟ್ಟ ರೇಣುಕಾಸ್ವಾಮಿ ತಂದೆ: ಸಿಬಿಐ ತನಿಖೆಗೆ ಒತ್ತಾಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

laTirumala Tirupa ಲಡ್ಡು ಪ್ರಸಾದ ಪ್ರಮಾದ!

Tirumala Tirupa ಲಡ್ಡು ಪ್ರಸಾದ ಪ್ರಮಾದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.