ಆರ್ಎಸ್ಎಸ್-ಬಿಜೆಪಿ ದರ್ಪಕ್ಕೆ ದೇಶ ಬಲಿ: ಡಾ| ಸಾಕೆ
Team Udayavani, Aug 5, 2017, 1:11 PM IST
ಸೇಡಂ: ದೇಶದಲ್ಲಿ ಆರ್ಎಸ್ಎಸ್ ಮತ್ತು ಬಿಜೆಪಿ ದರ್ಪದ ರಾಜಕೀಯದಿಂದ ಇಡೀ ದೇಶ ಬಲಿಯಾಗುತ್ತಿದೆ ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ಜಿಲ್ಲಾ ವಿಭಾಗೀಯ ಉಸ್ತುವಾರಿ ಡಾ| ಸಾಕೆ ಶೈಲಜಾನಾಥ ಆರೋಪಿಸಿದರು.
ಪಟ್ಟಣದ ಕೆ.ಎನ್.ಝಡ್ ಫಂಕ್ಷನ್ ಹಾಲ್ ನಲ್ಲಿ ಕಾಂಗ್ರೆಸ್ ವತಿಯಿಂದ ಆಯೋಜಿಸಿದ್ದ ವಿಧಾನಸಭಾ ವ್ಯಾಪ್ತಿಯ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿದರು. ಕೇವಲ ಧರ್ಮದ ಆಧಾರದ ಮೇಲೆ ಜನರನ್ನು ಪರಿವರ್ತಿಸುವ ಬಿಜೆಪಿ ಮತ್ತು ಆರ್ ಎಸ್ಎಸ್ ಹುನ್ನಾರ ಎಂದಿಗೂ ಫಲಿಸದು. ಸಮಾಜದಲ್ಲಿ ಕೋಮುವಾದಿತನ ಸೃಷ್ಟಿಸಿ ದೇಶವನ್ನು ಇಬ್ಟಾಗ ಮಾಡುವ ಮಟ್ಟಿಗೆ ಈ ಸಂಘಟನೆಗಳು ಕೆಲಸ ಮಾಡುತ್ತಿವೆ. ಜಾತಿ- ಜಾತಿಗಳ ನಡುವೆ ಜಗಳ ಸೃಷ್ಟಿಸಿ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಮುಂದಾಗಿರುವುದು ಖಂಡನೀಯ ಎಂದು ಗುಡುಗಿದರು.
ನರೇಂದ್ರ ಮೋದಿ ಸರ್ಕಾರ ಎಷ್ಟೇ ಕಾಂಗ್ರೆಸ್ ಪಕ್ಷವನ್ನು ಬಗ್ಗು ಬಡಿಯಲು ಯತ್ನಿಸಿದರೂ ಪಕ್ಷ ಮತ್ತಷ್ಟು ಗಟ್ಟಿಯಾಗುತ್ತದೆ. ಕಾಂಗ್ರೆಸ್ ಪಕ್ಷಕ್ಕೆ ಬಿಜೆಪಿಯವರಿಂದ ದೇಶಭಕ್ತಿ ಪಾಠ ಕಲಿಯುವ ಅವಶ್ಯಕತೆ ಇಲ್ಲ ಎಂದು ಖಾರವಾಗಿ ನುಡಿದರು. ವೈದ್ಯಕೀಯ ಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ| ಶರಣಪ್ರಕಾಶ ಪಾಟೀಲ ಮಾತನಾಡಿ, ಜನಪರ ಆಡಳಿತ ನೀಡುವ ಮೂಲಕ ಜನರ ಮನಸಲ್ಲಿ ಉಳಿದಿರುವ ಕಾಂಗ್ರೆಸ್ ಪಕ್ಷವನ್ನು ಕೇವಲ ಹೆದರಿಸಿ, ಬೆದರಿಸಿ ದೂರ ಮಾಡಲು ಯಾರಿಂದಲೂ ಸಾಧ್ಯವಿಲ್ಲ. ಈ ರೀತಿಯ ಬೆಳವಣಿಗೆಗಳ ನೆರಳಲ್ಲೇ ಪಕ್ಷವನ್ನು ಮತ್ತಷ್ಟು ಸಂಘಟಿಸಿ, ಬೆಳೆಸುವ ಕೆಲಸವಾಗಬೇಕಿದೆ. ಬಿಜೆಪಿಯವರ ಡೊಂಬರಾಟದ ರಾಜಕೀಯ ಜನರಿಗೆ ತಿಳಿಸಬೇಕಾಗಿದೆ ಎಂದು ಹೇಳಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವಸಂತಕುಮಾರ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಭಾಗಣ್ಣಗೌಡ ಸಂಕನೂರ, ಕಾಡಾ ಅಧ್ಯಕ್ಷ ಮಹಾಂತಪ್ಪ ಸಂಗಾವಿ, ಮುಖಂಡ ತಿಪ್ಪಣಪ್ಪ ಕಮಕನೂರ, ಜಿಪಂ ಮಾಜಿ ಸದಸ್ಯ ಡಾ| ವೆಂಕಟರೆಡ್ಡಿ ಪಾಟೀಲ ಕೋಲಕುಂದಾ, ಹಿರಿಯ ಮುಖಂಡ ಸತೀಶರೆಡ್ಡಿ ರಂಜೋಳ
ಮಾತನಾಡಿದರು. ಶಂಭುರೆಡ್ಡಿ ಮದ್ನಿ, ಶ್ರೀನಿವಾಸ ದೇಶಪಾಂಡೆ, ಎಪಿಎಂಸಿ ಅಧ್ಯಕ್ಷ ಗುರುನಾಥರೆಡ್ಡಿ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ನರೇಂದ್ರರೆಡ್ಡಿ, ಜಿಪಂ ಸದಸ್ಯ ದಾಮೋದರೆಡ್ಡಿ ಪಾಟೀಲ, ಟಿಎಪಿಸಿಎಂ ಅಧ್ಯಕ್ಷ ವೆಂಕಟರಾಮರೆಡ್ಡಿ ಹೈಯಾಳ, ಗಣಪತರಾವ ಚಿಮ್ಮನಚೋಡಕರ್, ಕರೆಪ್ಪ ಪಿಲ್ಲಿ, ಜೈಭೀಮ ಊಡಗಿ, ರಾಮಯ್ಯ ಪೂಜಾರಿ, ಬಸಮ್ಮ ಪಾಟೀಲ, ರವಿ ಸಾಹು ತಂಬಾಕೆ, ವಿಶ್ವನಾಥ ಪಾಟೀಲ, ಸಿದ್ದು ಬಾನರ್,
ಅಬ್ದುಲ್ ಗಫೂರ ಹಾಜರಿದ್ದರು. ಮುಧೋಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೆಂಕಟರಾಮರೆಡ್ಡಿ ಕಡತಾಲ ಸ್ವಾಗತಿಸಿದರು. ನಗರ ಯೋಜನಾ ಪ್ರಾ ಕಾರದ ಅಧ್ಯಕ್ಷ ನಾಗೇಶ್ವರಾವ ಮಾಲಿಪಾಟೀಲ ನಿರೂಪಿಸಿ, ವಂದಿಸಿದರು.
ದೇಶದಲ್ಲಿ ಅರಾಜಕತೆ ಸೃಷ್ಟಿ
ರಾಜ್ಯದ ಸಚಿವರೊಬ್ಬರ ಮನೆ ಮೇಲೆ ಹುನ್ನಾರ ನಡೆಸುವ ಮೂಲಕ ದಾಳಿ ನಡೆಸಲು ಉಸ್ತುವಾರಿ ಹೊತ್ತಿರುವ ಬಿಜೆಪಿಯ ರಾಷ್ಟ್ರಾಧ್ಯಕ್ಷ ಅಮಿತ್ ಶಾ ತಾವೇ ದೊಡ್ಡ ಅಕ್ರಮದಲ್ಲಿ ತೊಡಗಿರುವುದು ಮಾಧ್ಯಮಗಳಿಗೆ ತಿಳಿಯುತ್ತಿಲ್ಲ. ಅಷ್ಟರ ಮಟ್ಟಿಗೆ ದೇಶದಲ್ಲಿ ಅರಾಜಕತೆ ಸೃಷ್ಟಿಯಾಗಿದೆ.
ಡಾ| ಸಾಕೆ ಶೈಲಜಾನಾಥ, ಎಐಸಿಸಿ ಕಾರ್ಯದರ್ಶಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ
ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ
Chittapur: ತಾಯಿಯನ್ನೇ ಕೊ*ಲೆಗೈದ ಮಗ: ಆರೋಪಿಯ ಬಂಧನ
Kalaburagi Honeytrap; ಇಬ್ಬರು ಜೈಲು ಅಧಿಕಾರಿಗಳ ಅಮಾನತು
Kalaburagi: ಬಿಜೆಪಿ ಎಂಎಲ್ಸಿ ಸುನೀಲ ವಲ್ಯಾಪುರೆ ಮನೆ ಮೇಲೆ ಸಿಐಡಿ ದಾಳಿ
MUST WATCH
ಹೊಸ ಸೇರ್ಪಡೆ
Kaup LaxmiJanardhana Temple: ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಮನೋಹರ್ ಶೆಟ್ಟಿ ಆಯ್ಕೆ
Hosapete: ಜ್ವರದಿಂದ ಮಗು ಸಾವು; ವೈದ್ಯರ ನಿರ್ಲಕ್ಷ್ಯ ಕಾರಣವೆಂದು ಪಾಲಕರ ಆಕ್ರೋಶ
BJP: ವಿಜಯೇಂದ್ರ ನಾಯಕತ್ವವನ್ನು ನಾನು ಒಪ್ಪುವುದಿಲ್ಲ: ರಮೇಶ ಜಾರಕಿಹೊಳಿ
Kerala: ವಿಡಿಯೋ ಅಪ್ಲೋಡ್ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ
Explainer: ವಯನಾಡ್ ಲೋಕಸಮರ-ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್ ಅಖಾಡಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.