ನಟನೆಯ ಅಪೇಕ್ಷೆ
Team Udayavani, Aug 11, 2017, 7:35 AM IST
ಹೊಸ ಹೊಸ ಸಿನಿಮಾಗಳು ಬಂದಂತೆ ಹೊಸ ನಟ-ನಟಿಯರ ಆಗಮನ ಕೂಡಾ ಆಗುತ್ತಿರುತ್ತದೆ. ಅದರಲ್ಲಿ ಕೆಲವರು ಭರವಸೆ ಮೂಡಿಸುತ್ತಾರೆ. ಈಗ ಅಪೇಕ್ಷಾ ಪುರೋಹಿತ್ ಕೂಡಾ ಚಿತ್ರರಂಗಕ್ಕೆ ಎಂಟ್ರಿಕೊಟ್ಟಿದ್ದು, ತಮ್ಮ ಚೊಚ್ಚಲ ಸಿನಿಮಾ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟಿದ್ದಾರೆ. ಅಷ್ಟಕ್ಕೂ ಯಾರು ಅಪೇಕ್ಷಾ ಎಂದರೆ, ಉದಾಹರಣೆಯಾಗಿ “ಕಾಫಿ ತೋಟ’ವಿದೆ. ಟಿ.ಎನ್.ಸೀತಾರಾಂ ನಿರ್ದೇಶನದ “ಕಾಫಿತೋಟ’ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿರುವ ಅಪೇಕ್ಷಾಗೆ ಈಗ ಸಾಕಷ್ಟು ಅವಕಾಶಗಳು ಬರುತ್ತಿವೆ.
ಪಾತ್ರವೊಂದಕ್ಕೆ ತುಂಬಾ ಫ್ರೆಶ್ ಫೇಸ್ಬೇಕು ಮತ್ತು ವಿಭಿನ್ನವಾಗಿರಬೇಕೆಂದುಕೊಂಡು ಟಿಎನ್ಎಸ್ ಆಲೋಚಿಸುತ್ತಿದ್ದಾಗ ಸಿಕ್ಕಿದ್ದು ಅಪೇಕ್ಷಾ. ಅದರಂತೆ ಅಪೇಕ್ಷಾಗೆ “ಕಾಫಿ ತೋಟ’ದಲ್ಲಿ ಪ್ರಮುಖ ಪಾತ್ರ ಸಿಕ್ಕಿದೆ. ಸದ್ಯ ಅಪೇಕ್ಷಾ ಧಾರಾವಾಹಿಯಲ್ಲೂ ಬಿಝಿ ಇದ್ದಾರೆ. ಈಗಾಗಲೇ ಕೆಲವು “ಶ್ರೀಮತಿ ಭಾಗ್ಯಲಕ್ಷ್ಮೀ’ ಧಾರಾವಾಹಿಯಲ್ಲಿ ನಟಿಸಿದ್ದಾರೆ. ಅಪೇಕ್ಷಾ ಮೂಲತಃ ಬಾಗಲಕೋಟೆಯ ಹುಡುಗಿ. ಬಿಬಿಎಂ ಮುಗಿಸಿ, ಫ್ಯಾಶನ್ ಡಿಸೈನಿಂಗ್ನಲ್ಲಿ ಸ್ನಾತಕೋತ್ತರ ಪದವಿ ಮಾಡಿರುವ ಅಪೇಕ್ಷಾ ಈಗ ಬಣ್ಣದ ಲೋಕದಲ್ಲಿ ಬಿಝಿಯಾಗುತ್ತಿದ್ದಾರೆ. ಅಪೇಕ್ಷಾಗೆ ಟಿ.ಎನ್.ಸೀತಾರಾಂ ಅವರ ಧಾರಾವಾಹಿಯಲ್ಲಿ ನಟಿಸುವ ಆಸೆ ಇತ್ತಂತೆ. ಆದರೆ ಧಾರಾವಾಹಿಯಲ್ಲಿ ಆ ಅವಕಾಶ ಸಿಗದಿದ್ದರೂ ಈಗ ಅವರ ಸಿನಿಮಾದಲ್ಲಿ ನಟಿಸುವ ಅವಕಾಶ ಸಿಕ್ಕಿರುವುದರಿಂದ ಸಹಜವಾಗಿಯೇ ಅಪೇಕ್ಷಾ ಖುಷಿಯಾಗಿದ್ದಾರೆ.
ಸದ್ಯ ಅಪೇಕ್ಷಾಗೆ ಸಿನಿಮಾ ಹಾಗೂ ಧಾರಾವಾಹಿಗಳಿಂದ ಒಂದಷ್ಟು ಅವಕಾಶಗಳು ಬರುತ್ತಿವೆ. ಅಪೇಕ್ಷಾಗೆ ತಮಿಳು ಚಿತ್ರಗಳಲ್ಲೂ ನಟಿಸಬೇಕೆಂಬ ಆಸೆ ಇರುವುದರಿಂದ ಮೊದಲ ಹಂತವಾಗಿ ತಮಿಳು ಧಾರಾವಾಹಿಯೊಂದರಲ್ಲಿ ನಟಿಸುತ್ತಿದ್ದಾರೆ. ಮುಂದೆ ಕನ್ನಡದಲ್ಲೂ ಒಳ್ಳೆಯ ಪಾತ್ರ ಮಾಡುವ ಆಸೆ ಅಪೇಕ್ಷಾಗಿದೆ. “ಕಾಫಿ ತೋಟದಲ್ಲಿ ನಟಿಸಿದ್ದು ಒಳ್ಳೆಯ ಅನುಭವ. ಈ ಪಾತ್ರದ ಮೂಲಕ ಮತ್ತಷ್ಟು ಒಳ್ಳೆಯ ಪಾತ್ರಗಳು ಸಿಗುವ ನಿರೀಕ್ಷೆ ಇದೆ’ ಎನ್ನುತ್ತಾರೆ ಅಪೇಕ್ಷಾ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood; ‘ಮುಂದಿನ ಭಾಗದಲ್ಲಿ ನಿರೀಕ್ಷಿಸಿ..’ ಸ್ಯಾಂಡಲ್ವುಡ್ನ ಪಾರ್ಟ್-2 ಕ್ರೇಜ್
Upendra Movie: ರೀ ರಿಲೀಸ್ ನಲ್ಲೂ ʼಉಪೇಂದ್ರʼನಿಗೆ ಜೈ ಎಂದ ಪ್ರೇಕ್ಷಕ
Nite Road; ಇಂದು ತೆರೆಗೆ ಬರುತ್ತಿದೆ ಕ್ರೈಂ ಕಹಾನಿ ʼನೈಟ್ ರೋಡ್ʼ
Sanju Movie; ಯತಿ ಕಣ್ಣಲ್ಲಿ ಸಂಜು ಕನಸು: ಹರೆಯದ ಪ್ರೀತಿಯ ಏರಿಳಿತದ ಪಯಣ
Priya Shatamarshan: ಇನ್ಸ್ ಪೆಕ್ಟರ್ ಗಿರಿಜಾ ರಿಪೋರ್ಟಿಂಗ್ ಸಾರ್..
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
India ವರ, ಇರಾಕ್, ಇರಾನ್ ಶಾಪ: ವಿಶ್ವಸಂಸ್ಥೆಯಲ್ಲಿ ಇಸ್ರೇಲ್ ಪ್ರಧಾನಿ ನೆತನ್ಯಾಹು
ATM ದರೋಡೆಕೋರರ ಬೆನ್ನತ್ತಿ ರೋಚಕ ಕಾರ್ಯಾಚರಣೆ
CM Siddaramaiah ಕಂಡಲ್ಲೆಲ್ಲ ಕಪ್ಪುಪಟ್ಟಿ ಪ್ರದರ್ಶನಕ್ಕೆ ಬಿಜೆಪಿ ಸಜ್ಜು
Karnataka; ಮಳಿಗೆಯಲ್ಲಿ 10 ಸಿಬಂದಿ ಇದ್ದರೆ 24 ತಾಸೂ ವ್ಯವಹಾರಕ್ಕೆ ಅವಕಾಶ
Puttur: ತಿರುಪತಿ ಲಡ್ಡು ಅಪವಿತ್ರಗೊಳಿಸಿದವರ ವಿರುದ್ಧ ದೂರು ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.