ಎಲ್ಲೆಂದರಲ್ಲಿ ಕಸ ಸುರಿದರೆ ಕ್ಯಾಮೆರಾ ಕಣ್ಣಿಗೆ ಬೀಳ್ತೀರಿ!
Team Udayavani, Aug 14, 2017, 12:04 PM IST
ಬೆಂಗಳೂರು: ಎಲ್ಲೆಂದರಲ್ಲಿ ತ್ಯಾಜ್ಯ ಸುರಿಯುವವರನ್ನು ಪತ್ತೆ ಹಚ್ಚಿ ಕಠಿಣ ಕ್ರಮಕೈಗೊಳ್ಳಲು ಮುಂದಾಗಿರುವ ಬಿಬಿಎಂಪಿ, ಪ್ರಾಯೋಗಿಕವಾಗಿ ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದ ನಾಲ್ಕು ವಾರ್ಡ್ಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲು ಟೆಂಡರ್ ಆಹ್ವಾನಿಸಿದೆ.
ಮೂಲದಲ್ಲಿಯೇ ಕಸ ವಿಂಗಡಣೆ ಮಾಡದ ಸಾರ್ವಜನಿಕರಿಂದ ಪೌರಕಾರ್ಮಿಕರು ಕಸ ಸ್ವೀಕರಿವುದನ್ನು ಈಗಾಗಲೇ ಸ್ಥಗಿತಗೊಳಿಸಲಾಗಿದೆ. ಪರಿಣಾಮ ಕೆಲ ಸಾರ್ವಜನಿಕರು ರಸ್ತೆ ಬದಿ ಹಾಗೂ ಖಾಲಿ ಜಾಗದಲ್ಲಿ ತ್ಯಾಜ್ಯ ಎಸೆದು “ಬ್ಲಾಕ್ ಸ್ಪಾಟ್’ ಸೃಷ್ಟಿಸುತ್ತಿದ್ದಾರೆ. ಆ ಹಿನ್ನೆಲೆಯಲ್ಲಿ ಕಸ ಹಾಕುವವರನ್ನು ಪತ್ತೆ ಮಾಡಿ ದಂಡ ವಿಧಿಸಲು ಬಿಬಿಎಂಪಿಯು ಈ ಕ್ರಮಕ್ಕೆ ಮುಂದಾಗಿದೆ.
ಮೊದಲ ಹಂತವಾಗಿ ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಅರಮನೆ ನಗರ ವಾರ್ಡ್ (35), ಮತ್ತಿಕೆರೆ ವಾರ್ಡ್ (36), ರಾಜಮಹಲ್ ವಾರ್ಡ್ (64), ಗಾಯತ್ರಿ ನಗರ ವಾರ್ಡ್ (74) ವ್ಯಾಪ್ತಿಯಲ್ಲಿ ತಲಾ 10 ಲಕ್ಷ ವೆಚ್ಚದಲ್ಲಿ ಸಿಸಿಟಿವಿ ಅಳವಡಿಕೆಗೆ ಟೆಂಡರ್ ಆಹ್ವಾನಿಸಲಾಗಿದೆ. ಟೆಂಡರ್ಗೆ ಅರ್ಜಿ ಸಲ್ಲಿಸಲು ಆಗಸ್ಟ್ 18 ಕೊನೆಯ ದಿನಾಂಕವಾಗಿದ್ದು, ಆಗಸ್ಟ್ 22 ರಂದು ಟೆಂಡರ್ ಅಂತಿಮಗೊಳ್ಳಲಿದೆ.
ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ಯಶಸ್ವಿಯಾದ ಬಳಿಕ ನಗರದ 1 ಸಾವಿರ ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಕೆ ಬಿಬಿಎಂಪಿ ಮುಂದಾಗಲಿದೆ. ಈಗಾಗಲೇ ಕಸ ಹೆಚ್ಚಾಗಿ ಬೀಳುವ 450 ಸ್ಥಳಗಳನ್ನು ಬಿಬಿಎಂಪಿ ಪತ್ತೆ ಹಚ್ಚಿದ್ದು, ಇದಲ್ಲದೆ ಸಣ್ಣ ಆಟೋಗಳಿಂದ ದೊಡ್ಡ ದೊಡ್ಡ ಟಿಪ್ಪರುಗಳಿಗೆ ಕಸ ವರ್ಗಾವಣೆ ಮಾಡುವ 600 ಕೇಂದ್ರಗಳಲ್ಲಿಯೂ ಸಿಸಿಟಿವಿ ಅಳವಡಿಸಲು ಬಿಬಿಎಂಪಿ ಅಧಿಕಾರಿಗಳು ತೀರ್ಮಾನಿಸಿದ್ದಾರೆ.
ಕೆಲ ವಾರ್ಡ್ಗಳಲ್ಲಿ ಟಿಪ್ಪರ್ ವ್ಯವಸ್ಥೆ ಇದ್ದರೂ, ಜನರು ಬೀದಿ ಬದಿ ಕಸ ಎಸೆದು ಹೋಗುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಲು ಸಿಸಿಟಿವಿ ಕ್ಯಾಮೆರಾ ಅಳವಡಿಕೆ ಮಾಡುತ್ತಿದ್ದೇವೆ. ಡಾಲರ್ಸ್ ಕಾಲೋನಿಯಲ್ಲಿ ಇಂತಹ ಘಟನೆಗಳು ನಡೆದಿವೆ. ಕ್ಯಾಮೆರಾ ಅಳವಡಿಕೆ ಬಳಿಕ ಅಲ್ಲಿ ಕಸ ಹಾಕುವುದು ನಿಂತಿದೆ. ಹೀಗಾಗಿ ಪ್ರತಿ ವಾರ್ಡ್ಗಳಲ್ಲಿ ಎರಡು ಕ್ಯಾಮರಾ ಅಳವಡಿಸಲು ತೀರ್ಮಾನಿಸಲಾಗಿದೆ”.
-ಜಿ.ಪದ್ಮಾವತಿ, ಮೇಯರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Flipkart Big Billion Day ಸೆ. 27 ರಿಂದ ಆರಂಭ
Bengaluru: ನಮ್ಮ ಕ್ಲಿನಿಕ್ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ
Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್ಸರ್ವೀಸ್ ಸೆಂಟರ್ಗೆ 12 ಸಾವಿರ ದಂಡ!
Bengaluru: ʼರಾಹುಲ್ ಭಯೋತ್ಪಾದಕ’ ಹೇಳಿಕೆ: ಕೇಂದ್ರ ಸಚಿವ ರವನೀತ್ ವಿರುದ್ಧ ಕೇಸ್
Bengaluru: ಉದ್ಯಮಿಗೆ ಹನಿಟ್ರ್ಯಾಪ್ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Flipkart Big Billion Day ಸೆ. 27 ರಿಂದ ಆರಂಭ
FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ
Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ: ಶೆಟ್ಟರ್
Ankola: ಶಿರೂರು ಗುಡ್ಡ ಕುಸಿತ ಪ್ರಕರಣ; ಗೋವಾದಿಂದ ಯಂತ್ರ; ಇಂದಿನಿಂದ ಶೋಧ ಕಾರ್ಯ
Moradabad ರಕ್ತದಾನಿಯಂತೆ ಪೋಸ್ ನೀಡಿ ಸಿಕ್ಕಾಪಟ್ಟೆ ಟ್ರೋಲ್ ಆದ ಬಿಜೆಪಿ ಮೇಯರ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.