![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Aug 15, 2017, 10:53 AM IST
ಚಿಂಚೋಳಿ: ರೈತರು ಕೃಷಿ ಇಲಾಖೆಯಿಂದ ಖರೀದಿಸುವ ಕೃಷಿ ಯಂತ್ರೋಪಕರಣಗಳ ಮೇಲೆ ಕೇಂದ್ರ ಸರಕಾರಿ ವಿಧಿಸಿರುವ ಜಿಎಸ್ಟಿ ರದ್ದುಗೊಳಿಸಬೇಕು ಎಂದು ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಸಿದ್ರಾಮಪ್ಪ ಪಾಟೀಲ ಧಂಗಾಪುರ ಒತ್ತಾಯಿಸಿದರು.
ತಾಲೂಕಿನ ಪೋಲಕಪಳ್ಳಿಯಲ್ಲಿ ಹಾನಿಯಾದ ಮುಂಗಾರು ಬೆಳೆಗಳಾದ ಹೆಸರು, ಉದ್ದು ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ
ಮಾತನಾಡಿದ ಅವರು, ಕೇಂದ್ರ ಸರಕಾರ ಕೃಷಿ ಪರಿಕರಗಳ ಮೇಲೆ ಜಿಎಸ್ಟಿ ಹೇರಿದೆ. ಇದು ರೈತರಿಗೆ ತುಂಬಾ ಹೊರೆಯಾಗುತ್ತದೆ. ಆದ್ದರಿಂದ ಅದು ಅನ್ವಯ ಆಗದಂತೆ ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು. ಜಿಲ್ಲೆಯಲ್ಲಿ ಮಳೆ ಅಭಾವದಿಂದಾಗಿ ಹೆಸರು,
ಉದ್ದು, ಸೋಯಾಬಿನ್ ಬೆಳೆ ಶೇ. 80ರಷ್ಟು ಹಾನಿಯಾಗಿದೆ. ರಾಜ್ಯ ಮತ್ತು ಕೇಂದ್ರ ಸರಕಾರ ರೈತರಿಗೆ ಬೆಳೆ ಪರಿಹಾರ ನೀಡಬೇಕು ಮತ್ತು ಬೆಳೆ ಸಾಲ ಮನ್ನಾ ಮಾಡಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ಸಹಕಾರಿ ಸಂಘಗಳಿಂದ ಪಡೆದಿರುವ ಬೆಳೆ ಸಾಲ 50 ಸಾವಿರ ರೂ. ರೂ. ಮನ್ನಾ ಮಾಡಿದ್ದಾರೆ. ಅದರಂತೆ ಕೇಂದ್ರ ಸರಕಾರ ರಾಷ್ಟ್ರಿಕೃತ ಬ್ಯಾಂಕುಗಳಿಂದ ಪಡೆದ ಸಾಲ ಮನ್ನಾ ಮಾಡಬೇಕು ಎಂದು ಒತ್ತಾಯಿಸಿದರು. ರೈತರಿಗೆ ಬೆಳೆ ಪರಿಹಾರ ಮತ್ತು ಸಾಲ ಮನ್ನಾ ಮಾಡುವಂತೆ ಕಾಂಗ್ರೆಸ್ ಪಕ್ಷದ ಯುವ ಧುರೀಣ ರಾಹುಲ್ ಗಾಂಧಿ ಅವರು ರಾಯಚೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮನವಿ ನೀಡಲಾಗಿದೆ. ಅಲ್ಲದೇ ಮುಖ್ಯಮಂತ್ರಿಗಳು ಆ.13 ರಂದು ಆಳಂದ ತಾಲೂಕಿಗೆ ಭೇಟಿ ನೀಡಿದ ಸಂದರ್ಭದಲ್ಲಿಯೂ ರೈತರ ಪರವಾಗಿ ಮನವಿ
ಸ್ಪಂದಿಸುವುವಾಗಿ ಭರವಸೆ ನೀಡಿದ್ದಾರೆ ಎಂದು ಹೇಳಿದರು. ಸಹಾಯಕ ಕೃಷಿ ನಿರ್ದೇಶಕ ಎಸ್. ಎಚ್. ಗಡಗಿಮನಿ, ತಾಪಂ ಅಧಿ ಕಾರಿ ಅನೀಲಕುಮಾರ ರಾಠೊಡ, ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಮಲ್ಲಿಕಾರ್ಜುನ ಭೂಶೆಟ್ಟಿ, ಸದಸ್ಯರಾದ ಚಂದ್ರಪ್ಪ ಮೇಲಗಿರಿ, ಅಮೃತರಾವ ಹಾಸೆಕರ, ಬಾಬುರಾವ ಬೋಯಿ, ಮಲಕಪ್ಪ ಬೀರಾಪುರ, ಬಸಲಿಂಗಯ್ಯ ಸ್ವಾಮಿ, ಧರ್ಮಣ್ಣ ವ್ಯವಸ್ಥಾಪಕರು ಇದ್ದರು.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.