ಆಲಮಟ್ಟಿ ಜಲಾಶಯಕ್ಕೆ ಮುಖ್ಯಮಂತ್ರಿ ಬಾಗಿನ ಅರ್ಪಣೆ


Team Udayavani, Aug 19, 2017, 7:10 AM IST

KAR-CM.jpg

ಬಾಗಲಕೋಟೆ: ಆಲಮಟ್ಟಿಯ ಲಾಲ್‌ ಬಹದ್ದೂರ್‌ ಶಾಸ್ತ್ರಿ ಅಣೆಕಟ್ಟೆ ಭರ್ತಿಯಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಬಾಗಿನ ಅರ್ಪಿಸಿದರು.

ಕೃಷ್ಣಾ ಭಾಗ್ಯ ಜಲ ನಿಗಮದಿಂದ ನಿರ್ಮಿಸಿದ ಈ ಬೃಹತ್‌ ಜಲಾಶಯದಲ್ಲಿ ಶುಕ್ರವಾರ 123 ಟಿಎಂಸಿ ಅಡಿ ನೀರು
ಸಂಗ್ರಹವಾಗಿತ್ತು. ಒಟ್ಟು 519.60 ಮೀಟರ್‌ (123 ಟಿಎಂಸಿ) ಸಾಮರ್ಥಯದ ಜಲಾಶಯದಲ್ಲಿ ಪೂರ್ಣ ಪ್ರಮಾಣದಲ್ಲಿ ನೀರು ಸಂಗ್ರಹವಾಗಿತ್ತು.

ಸಚಿವರಾದ ಎಂ.ಬಿ.ಪಾಟೀಲ ಹಾಗೂ ಉಮಾಶ್ರೀ, ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್‌. ಆರ್‌.ಪಾಟೀಲ, ಬಾಗಲಕೋಟೆ ಜಿಪಂ ಅಧ್ಯಕ್ಷೆ ವೀಣಾ ಕಾಶಪ್ಪನವರ, ವಿಜಯಪುರ ಜಿಪಂ ಅಧ್ಯಕ್ಷೆ ನೀಲಮ್ಮ ಮೇಟಿ, ಶಾಸಕರಾದ ಶಿವಾನಂದ ಪಾಟೀಲ, ಯಶವಂತರಾಯಗೌಡ ಪಾಟೀಲ, ಬಿ.ಬಿ.ಚಿಮ್ಮನಕಟ್ಟಿ, ವಿಜಯಾನಂದ ಕಾಶಪ್ಪನವರ ಮುಂತಾದವರು ಇದ್ದರು.

ಹಲವು ಶಾಸಕರ ಗೈರು: ಬಾಗಲಕೋಟೆ ಶಾಸಕ ಎಚ್‌.ವೈ. ಮೇಟಿ, ನಾಗಠಾಣ ಶಾಸಕ ಪ್ರೊ. ರಾಜು ಆಲಗೂರ, ವಿಜಯಪುರ ನಗರ ಶಾಸಕ ಡಾ. ಮಕುಲ್‌ ಬಾಗವಾನ, ಮುದ್ದೇಬಿಹಾಳ ಶಾಸಕ ಹಾಗೂ ಸರ್ಕಾರದ ದೆಹಲಿ ಪ್ರತಿನಿಧಿ ಸಿ.ಎಸ್‌. ನಾಡಗೌಡ,ಕಾಂಗ್ರೆಸ್‌ ಬಂಡಾಯ ಶಾಸಕ -ದೇವರಹಿಪ್ಪರಗಿಯ ಎ.ಎಸ್‌. ಪಾಟೀಲ (ನಡಹಳ್ಳಿ), ಸಿಂದಗಿಯ ಬಿಜೆಪಿ ಶಾಸಕ ರಮೇಶ ಭೂಸನೂರ ಗೈರಾಗಿದ್ದರು. ಬಾಗಲಕೋಟೆ ಜಿಲ್ಲೆಯ ಜಮಖಂಡಿಯ ಸಿದ್ದು ನ್ಯಾಮಗೌಡ, ಮುಧೋಳದ ಬಿಜೆಪಿ ಶಾಸಕ ಗೋವಿಂದ ಕಾರಜೋಳ ಗೈರಾಗಿದ್ದರು.

ಶಾಸಕರಿಗಾಗಿ ಕಾದರು ಸಿಎಂ!
ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಣೆ ವೇಳೆ, ಶಾಸಕರ ಬರುವಿಕೆಗಾಗಿ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಕೆಲ
ಸಮಯ ಕಾದು ನಿಂತ ಪ್ರಸಂಗ ನಡೆಯಿತು. ಬೆಳಗ್ಗೆ 11.40ಕ್ಕೆ ಹೆಲಿಕಾಪ್ಟರ್‌ ಆಲಮಟ್ಟಿಯ ಹೆಲಿಪ್ಯಾಡ್‌ಗೆ ಬಂದಿಳಿಯಿತು. ಅಲ್ಲಿ
ವಿಜಯಪುರ ಜಿಲ್ಲಾಡಳಿತದಿಂದ ಮುಖ್ಯಮಂತ್ರಿಗಳನ್ನು ಬರ ಮಾಡಿಕೊಳ್ಳಲಾಯಿತು. ಅಲ್ಲಿಂದ 12.15ಕ್ಕೆ ಸಿಎಂ  ಆಲಮಟ್ಟಿ 
ಜಲಾಶಯದ ಮೇಲೆ ಬಂದರೂ ಯಾವುದೇ ಸಚಿವರು, ಶಾಸಕರು ಬಂದಿರಲಿಲ್ಲ. ತಮ್ಮ ಕಾರಿನಲ್ಲಿದ್ದ ಜಲ ಸಂಪನ್ಮೂಲ ಸಚಿವರಿಗೆ “ಏ ಶಾಸಕರೆಲ್ಲ ಬರ್ಲಿ ಇರಪ್ಪಾ’ ಎಂದು ಸಚಿವ ಪಾಟೀಲರಿಗೆ ಹೇಳಿದ ಸಿಎಂ, ಸುಮಾರು ಮೂರು ನಿಮಿಷಗಳ ಕಾಲ ಕಾದರು. ಆಗ ಶಾಸಕರಾದ ವಿಜಯಾನಂದ ಕಾಶಪ್ಪನವರ, ಶಿವಾನಂದ ಪಾಟೀಲ, ಯಶವಂತರಾಯಗೌಡ ಪಾಟೀಲ,ಜೆ.ಟಿ. ಪಾಟೀಲ, ಬಿ.ಬಿ. ಚಿಮ್ಮನಕಟ್ಟಿ, ಸಚಿವೆ ಉಮಾಶ್ರೀ ಒಬ್ಬೊಬ್ಬರಾಗಿ ಬಂದರು. “ಏ ಶಾಸಕರು ಬೇಗ ಬರ್ರಪ್ಪಾ’ ಎಂದು ಸಿಎಂ ಕರೆಯುತ್ತಿದ್ದರು. ಎಲ್ಲರೂ ಬಂದ ಬಳಿಕ, ಬಾಗಿನ ಅರ್ಪಿಸಲು ವ್ಯವಸ್ಥೆ ಕಲ್ಪಿಸಿದ್ದ ಸ್ಥಳಕ್ಕೆ ಸಿಎಂ ಹೋದರು.

ಟಾಪ್ ನ್ಯೂಸ್

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Kumara-Parvatha

New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ

Malpe-See-Ambulance

Tender Open: ತುರ್ತು ಸೇವೆಗೆ ಬರಲಿದೆ ಮೂರು ಸೀ ಆ್ಯಂಬುಲೆನ್ಸ್‌

Bus-Travel-1

Mangaluru: ಖಾಸಗಿ ಬಸ್ಸಿಗೆ “ಇಸ್ರೇಲ್‌’ ಹೆಸರು; ಆಕ್ಷೇಪದ ಬಳಿಕ “ಜೆರುಸಲೇಂ”!

T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್‌ 

T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್‌ 

Cap-Brijesh-Chowta

Putturu: ವಿದೇಶಗಳಿಂದ ಅಡಿಕೆ ಆಮದು ಪರಿಣಾಮ ಅಧ್ಯಯನ: ಸಂಸದ ಕ್ಯಾ.ಬ್ರಿಜೇಶ್‌ ಚೌಟ

kunita-bhajane

Kaup: ಉಚ್ಚಿಲ ದಸರಾ: ಐತಿಹಾಸಿಕ ದಾಖಲೆ ಬರೆದ ಸಾಮೂಹಿಕ ಕುಣಿತ ಭಜನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kb

Land; ಬಗರ್‌ ಹುಕುಂ ಅರ್ಜಿ: ಎರಡು ತಿಂಗಳು ಗಡುವು

Kharge (2)

Karnataka Politics; ದಲಿತ ಸಿಎಂ ಚರ್ಚೆಗೆ ಮತ್ತೆ ರೆಕ್ಕೆಪುಕ್ಕ

1-vara

Dowry; ವರದಕ್ಷಿಣೆ ಕಿರುಕುಳ: ಕುಂದಾಪುರ ಮೂಲದ ಮಹಿಳಾ ಟೆಕಿ ಆತ್ಮಹ *ತ್ಯೆ

bjp jds

BJP, JDS ಮೈತ್ರಿ ಕಾಂಗ್ರೆಸ್‌ ಲೋಕಸಭಾ ಸೋಲಿಗೆ ಕಾರಣ!

AANE 2

Elephant; ರಾಜ್ಯದಲ್ಲಿ 9 ತಿಂಗಳಲ್ಲಿ 59 ಆನೆ ಸಾ*ವು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Kumara-Parvatha

New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ

Malpe-See-Ambulance

Tender Open: ತುರ್ತು ಸೇವೆಗೆ ಬರಲಿದೆ ಮೂರು ಸೀ ಆ್ಯಂಬುಲೆನ್ಸ್‌

Bus-Travel-1

Mangaluru: ಖಾಸಗಿ ಬಸ್ಸಿಗೆ “ಇಸ್ರೇಲ್‌’ ಹೆಸರು; ಆಕ್ಷೇಪದ ಬಳಿಕ “ಜೆರುಸಲೇಂ”!

T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್‌ 

T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್‌ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.