ಲಂಕಾ ಸೋಲಿಗೆ ಆಕ್ರೋಶ: ಲಂಕಾ ಕ್ರಿಕೆಟ್‌ ತಂಡದ ಬಸ್‌ ತಡೆದು ಪ್ರತಿಭಟನೆ


Team Udayavani, Aug 22, 2017, 1:21 PM IST

22-SPORTS-5.jpg

ದಂಬುಲ: ಶ್ರೀಲಂಕಾ ಕ್ರಿಕೆಟಿಗರ ಮತ್ತೂಂದು ಹೀನಾಯ ಪ್ರದರ್ಶನದಿಂದ ರೊಚ್ಚಿಗೆದ್ದ ಅಭಿಮಾನಿಗಳು ತಂಡದ ಕ್ರಿಕೆಟ್‌ ಬಸ್ಸನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದ ಘಟನೆ ಭಾನುವಾರ ರಾತ್ರಿ ಸಂಭವಿಸಿದೆ. ಭಾರತದೆದುರಿನ ದಂಬುಲ ಏಕದಿನ ಪಂದ್ಯವನ್ನು ಸೋತ ಬಳಿಕ ತೀವ್ರ ಆಕ್ರೋಶಗೊಂಡ ಅಭಿಮಾನಿಗಳು ಶ್ರೀಲಂಕಾ ತಂಡದ ಬಸ್‌ ನಿಂತಿದ್ದ ಜಾಗಕ್ಕೆ ತೆರಳಿ ಮುತ್ತಿಗೆ ಹಾಕಿದರು. 

ತವರಿನ ಕ್ರಿಕೆಟಿಗರ ಹಾಗೂ ಕ್ರಿಕೆಟ್‌ ಆಡಳಿತ ಮಂಡಳಿ ವಿರುದ್ಧ ಧಿಕ್ಕಾರ ಕೂಗಿದರು. “ನಮಗೆ ನಮ್ಮ ಕ್ರಿಕೆಟ್‌ ಮರಳಿಸಿ, 1996 ದಿನಗಳ ಕ್ರಿಕೆಟ್‌ ಮರಳಲಿ…’ ಎಂದು ಬೊಬ್ಬಿರಿದರು. ಬಳಿಕ ಪೊಲೀಸರು ಸ್ಥಳಕ್ಕೆ ಧಾವಿಸಿ ಅಭಿಮಾನಿಗಳನ್ನು ಚದುರಿಸಿದರು. ಇದರಿಂದ ಶ್ರೀಲಂಕಾ ಕ್ರಿಕೆಟಿಗರ ಪ್ರಯಾಣ ಅರ್ಧ ಗಂಟೆ ವಿಳಂಬ ಗೊಂಡಿತು. ಈ ಘಟನೆಯ ಬಳಿಕ ಲಂಕೆಯ ಮಾಜಿ ಕ್ರಿಕೆಟಿಗ ಕುಮಾರ ಸಂಗಕ್ಕರ ಅವರು ಅಭಿಮಾನಿಗಳನ್ನು
ಸಮಾಧಾನ ಪಡಿಸುವ ಪ್ರಯತ್ನಕ್ಕೆ ಮುಂದಾಗಿದ್ದಾರೆ.

“ನಾವು ಗೆದ್ದಾಗ ನೀವು ಸಂಭ್ರಮಿಸುತ್ತೀರಿ. ಸೋತಾಗ ನೀವು ನಮ್ಮ ಕೈಹಿಡಿಯುವ ಕೆಲಸ ಮಾಡಬೇಕು. ತಂಡ ಸಂಕಟದಲ್ಲಿದ್ದಾಗಲಂತೂ ನಿಮ್ಮಂಥ ಅಭಿಮಾನಿಗಳ ಬೆಂಬಲ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಬೇಕಾಗುತ್ತದೆ. ಈಗ ನಿಮ್ಮಿಂದ ನಮ್ಮ ಕ್ರಿಕೆಟಿಗರು ನಿರೀಕ್ಷಿಸುವುದು ಇದನ್ನೇ. ಬೆಂಬಲ, ಪ್ರೀತಿ, ತಾಳ್ಮೆ ಮತ್ತು ಪರಿಶ್ರಮ. ನಾವೆಲ್ಲ ತಂಡದ ಗೆಲುವಿಗಾಗಿ ಹಾರೈಸೋಣ, ತಂಡವನ್ನು ಬೆಂಬಲಿಸೋಣ…’ ಎಂದು ಸಂಗಕ್ಕರ ಸಮಾಜಿಕ ಜಾಲತಾಣದಲ್ಲಿ ವಿನಂತಿಸಿಕೊಂಡಿದ್ದಾರೆ.

ಇತ್ತೀಚೆಗೆ ಶ್ರೀಲಂಕಾ ತಂಡ ಸತತವಾಗಿ ವಿಫ‌ಲವಾಗುತ್ತಿದೆ. ಕ್ರಿಕೆಟ್‌ನ ಅತ್ಯಂತ ದುರ್ಬಲ ಎನಿಸಿಕೊಂಡಿರುವ ಜಿಂಬಾಬ್ವೆ ಎದುರು ತನ್ನದೇ ನೆಲದಲ್ಲಿ 3-2ರಿಂದ ಏಕದಿನ ಸರಣಿ ಸೋತಿತ್ತು. ಅದರ ಬೆನ್ನಲ್ಲೇ ಭಾರತ ವಿರುದ್ಧ ಟೆಸ್ಟ್‌ ಸರಣಿಯಲ್ಲಿ 3-0ಯಿಂದ ವೈಟ್‌ವಾಷ್‌ ಸೋಲನುಭವಿಸಿತು.
ಇದು ಅಭಿಮಾನಿಗಳನ್ನು ಕೆರಳುವಂತೆ ಮಾಡಿದೆ.

ಟಾಪ್ ನ್ಯೂಸ್

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.