ಸರ್ಕಾರಿ ಹಾಸ್ಟೆಲ್ಗಿಂತ ಜೈಲೇವಾಸಿ!
Team Udayavani, Aug 24, 2017, 3:34 PM IST
ಚಿಂತಾಮಣಿ: ನಮ್ಮ ರಾಜ್ಯದಲ್ಲಿ ಸರ್ಕಾರಿ ಹಾಸ್ಟೆಲ್ಗಳಿಗಿಂತ ಜೈಲುಗಳಲ್ಲಿ ಎಲ್ಲಾ ರೀತಿಯ ಸೌಲಭ್ಯಗಳನ್ನು ನೀಡುತ್ತಾರೆ. ನಮಗೆ ಜೈಲುಗಳಲ್ಲಿಯೇ ಅವಕಾಶ ಮಾಡಿಕೊಡಿ. ನಾವು
ಅಲ್ಲಿಯೇ ತಿಂಡಿ ಊಟ ಮಾಡಿಕೊಂಡು ಓದಿಕೊಳ್ಳುತ್ತೇವೆ ಎಂದು ನಗರದ ಬಂಬೂ ಬಜಾರ್ನಲ್ಲಿರುವ ಪರಿಶಿಷ್ಟ ಪಂಗಡ ಬಾಲಕರ ವಿದ್ಯಾರ್ಥಿನಿಲಯದ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದ ಸಮಾಜ ಕಲ್ಯಾಣ ಇಲಾಖೆ ಕಚೇರಿಗೆ ಬುಧವಾರ ಮುತ್ತಿಗೆ ಹಾಕಿ ಮಾತನಾಡಿದ ವಿದ್ಯಾರ್ಥಿಗಳು, ತಾಲೂಕಿನ ಜೈಲುನಲ್ಲಿರುವ ಖೈದಿಗಳಿಗೆ ಉತ್ತಮ ಆಹಾರ ನೀಡಿ ಎಲ್ಲಾ ರೀತಿಯ ಮೂಲಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಅಪರಾಧ ಮಾಡಿದ ಖೈದಿಗಳನ್ನು ಸುರಕ್ಷಿತವಾಗಿ ನೋಡಿ
ಕೊಳ್ಳುತ್ತಿರುವ ಈ ಸರ್ಕಾರ ವಿದ್ಯಾರ್ಥಿಗಳ ಜೀವನದ ಬಗ್ಗೆ ಕಾಳಜಿ ವಹಿಸದೆ ನಿರ್ಲಕ್ಷಿಸಿದೆ ಎಂದು ದೂರಿದರು. ಅಧಿಕಾರಿಗಳ ನಿರ್ಲಕ್ಷ್ಯಾ: ನಗರದ ಬಂಬೂ ಬಜಾರ್ನಲ್ಲಿರುವ ಪರಿಶಿಷ್ಟ ಪಂಗಡ ವಿದ್ಯಾರ್ಥಿ ನಿಲಯದಲ್ಲಿ ಕುಡಿಯುವ ನೀರಿನ ಸಮಸ್ಯೆ, ಕಳಪೆ ಆಹಾರ ವಿತರಣೆ, ಮೆನು ಕಡೆಗಣಿಸಿ ಊಟ
ವಿತರಣೆ ಸೇರಿದಂತೆ ಹಲವು ಮೂಲಭೂತ ಸಮಸ್ಯೆಗಳಿವೆ. ಇವನ್ನು ಪರಿಹರಿಸಲು ಒತ್ತಾಯಿಸಿ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿದ್ದರೂ ಯಾವುದೆ ಅಧಿಕಾರಿ, ನಮ್ಮ ಬಗ್ಗೆ ಅಥವಾ ನಮ್ಮ ಸಮಸ್ಯೆ ಬಗ್ಗೆ ಕ್ರಮ ಕೈಗೊಂಡಿಲ್ಲ ಎಂದು ವಿದ್ಯಾರ್ಥಿಗಳು ತಮ್ಮ ಆಳಲು ತೋಡಿಕೊಂಡಿದ್ದಾರೆ.
ಜೈಲುಗಳಲ್ಲೇ ಹೆಚ್ಚು ಸೌಲಭ್ಯ: ಜೈಲುಗಳಲ್ಲಿರುವ ಪ್ರತಿ ಖೈದಿಗೆ ದಿನದ ಆಹಾರ ಖರ್ಚಿಗೆಂದು 75 ರೂ. ನೀಡುತ್ತಾರೆ. ಆದರೆ, ವಿದ್ಯಾರ್ಥಿಗಳಿಗೆ ಮಾತ್ರ 42 ರೂ. ನೀಡುತ್ತಾರೆ. ಅಪರಾಧ ಮಾಡಿದ ವ್ಯಕ್ತಿಗಳಿಗೆ ಹೆಚ್ಚಿನ ಅನುದಾನ ನೀಡುತ್ತಿದ್ದು, ವಿದ್ಯಾಭ್ಯಾಸ ಮಾಡಿ, ದೇಶ ಕಟ್ಟುವ ವಿದ್ಯಾರ್ಥಿಗಳಿಗೆ ಕಡಿಮೆ ಅನುದಾನ ನೀಡಿ ಸರ್ಕಾರ ತಾರತಮ್ಯ ನೀತಿ ಅನುಸರಿಸುತ್ತಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದರು. ಸ್ಪಂದಿಸದ ನಿಲಯ ಪಾಲಕರು: ನಿಲಯದಲ್ಲಿ ಹಲವು ಸಮಸ್ಯೆಗಳು ವಿದ್ಯಾರ್ಥಿಗಳನ್ನು ಕಾಡುತ್ತಿದ್ದರೂ ನಿಲಯ ಪಾಲಕರು ಮಾತ್ರ ಯಾವುದೇ ಕ್ರಮ ಕೈಗೊಂಡಿಲ್ಲ. ನಾವು ಸಮಸ್ಯೆ ಇದೆ ಎಂದು ಹೇಳಿದರೆ ವಿದ್ಯಾರ್ಥಿಗಳನ್ನು ಬಯ್ಯುತ್ತಾರೆಂದು ನೋವು ತೋಡಿಕೊಂಡರು. ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳನ್ನು ಒಂದೇ ಹಾಸ್ಟೆಲ್ಗಳಿಗೆ ಸೇರಿಸಬೇಕು. ಒಂದೇ ಕಡೆ ಒಂದೇ ರೀತಿಯ ಸೌಲಭ್ಯಗಳನ್ನು ಒದಗಿಸಬೇಕೆಂದು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ
Karnataka ರಾಜ್ಯದಲ್ಲಿ ಆರ್ಟಿಇ ಸೀಟಿಗಿಲ್ಲ ಕಿಮ್ಮತ್ತು!
Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ
Chikkaballapur: ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರ ಕೊರತೆ!
Chikkaballapur: ಪೋಕ್ಸೋ ಆರೋಪಿ ಜತೆಗೆ 16 ವರ್ಷದ ಬಾಲಕಿ ಆತ್ಮಹತ್ಯೆ!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.