ಕುಡಿದು ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ¨
Team Udayavani, Aug 26, 2017, 12:23 PM IST
ಚಿಂತಾಮಣಿ/ಚಿಕ್ಕಬಳ್ಳಾಪುರ: ಕಾಮುಕನೊಬ್ಬ ಅಪ್ರಾಪ್ತ ಬಾಲಕಿಯನ್ನು ಮನೆಯಿಂದ ಕರೆದೊಯ್ದು ನಿರ್ಜನ ಪ್ರದೇಶದಲ್ಲಿ ಅತ್ಯಾಚಾರವೆಸಗಿ ಬಳಿಕ ಕತ್ತು ಹಿಸುಕಿ ಕೊಲೆ ಮಾಡಿರುವ ಪೈಶಾಚಿಕ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕಿನ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ದ್ವಾರಪಲ್ಲಿ ಗ್ರಾಮದಲ್ಲಿ ನಡೆದಿದ್ದು, ಪ್ರಕರಣ ಗುರುವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಆರೋಪಿ ಬಂಧನ: ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಆರೋಪಿಯನ್ನು ಅದೇ ಗ್ರಾಮದ ಆನಂದ್ (26) ಎಂದು ಗುರುತಿಸಲಾಗಿದ್ದು,
ಚಿಂತಾಮಣಿ ಗ್ರಾಮಾಂತರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿ ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾರೆ. ನಾಪತ್ತೆಯಾಗಿದ್ದ ಬಾಲಕಿ: ಶಾಲೆಯಿಂದ ಬಂದು ಮನೆಗೆಲಸದಲ್ಲಿ ತೊಡಿಗಿಸಿಕೊಂಡಿದ್ದ ಬಾಲಕಿ ಸಂಜೆ 7 ಗಂಟೆ ನಂತರ ನಾಪತ್ತೆಯಾಗಿದ್ದಳು. ಇದರಿಂದ ಆತಂಕಗೊಂಡ ಬಾಲಕಿಯ ಪೋಷಕರು ಗ್ರಾಮದಲ್ಲಿ ಹುಡುಕಾಟ ನಡೆಸಿದರೂ ಪತ್ತೆಯಾಗಿರಲಿಲ್ಲ. ಮನೆಯಿಂದ ನಾಪತ್ತೆಯಾಗಿದ್ದ ಬಾಲಕಿ ಗ್ರಾಮದ ಹೊರ ವಲಯದಲ್ಲಿ ಗುರುವಾರ ಬೆಳಗ್ಗೆ ಶವವಾಗಿ ಪತ್ತೆಯಾಗಿರುವುದು ಕಂಡು ಬಂದಿದೆ. ತಕ್ಷಣ ಸ್ಥಳಕ್ಕೆ ಧಾವಿಸಿ ಬಂದ ಪೋಷಕರು ಮಗುವನ್ನು ಗುರುತಿಸಿದ್ದಾರೆ. ಅತ್ಯಾಚಾರವೆಸಗಿ ಕೊಲೆ: ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಚಿಂತಾಮಣಿ ಗ್ರಾಮಾಂತರ ಠಾಣೆ ಪೊಲೀಸರು ಕೂಡಲೇ ಸ್ಥಳಕ್ಕೆ ಆಗಮಿಸಿ ಕೊಲೆಗೀಡಾದ ಬಾಲಕಿಯ ಪೋಷಕರೊಂದಿಗೆ ಮಾತುಕತೆ ನಡೆಸಿ ಸಂಶಯಾಸ್ಪದ ಹಿನ್ನೆಲೆಯಲ್ಲಿ ಅದೇ ಗ್ರಾಮದ ಆನಂದ್ ಎಂಬಾತನನ್ನು ಬಂಧಿಸಿ ತೀವ್ರ ವಿಚಾರಣೆ ನಡೆಸಿದಾಗ ತಾನೇ ಅತ್ಯಾಚಾರ ನಡೆಸಿ ಕೊಲೆ ಮಾಡಿರುವುದಾಗಿ ಪ್ಪೊಪ್ಪಿಕೊಂಡಿದ್ದಾನೆಂದು ಪೊಲೀಸ್ ಮೂಲಗಳು ತಿಳಿಸಿವೆ. ಅತ್ಯಾಚಾರ ಪ್ರಕರಣ ತಿಳಿದ ಕೂಡಲೇ ಗ್ರಾಮಕ್ಕೆ ಚಿಂತಾಮಣಿ ತಾಲೂಕು ತಹಶೀಲ್ದಾರ್ ಎಂ.ಗಂಗಪ್ಪ ಭೇಟಿ ನೀಡಿ ಪರಿಶೀಲಿಸಿದರು. ತಹಶೀಲ್ದಾರ್ ಸಮ್ಮುಖದಲ್ಲಿ ಬಾಲಕಿಯರ ಮರಣೋತ್ತರ ಪರೀಕ್ಷೆಯನ್ನು ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆಸಲಾಯಿತು. ಘಟನೆಯ ಕುರಿತು ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಐಜಿಪಿ, ಎಸ್ಪಿ ಭೇಟಿ: 8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಘಟನೆ ಬೆಳಕಿಗೆ ಬರುತ್ತಿದ್ದಂತೆ ಘಟನಾ ಸ್ಥಳಕ್ಕೆ ಕೇಂದ್ರ ವಲಯದ ಐಜಿಪಿ ಅಮೃತ್ ಪಾಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕರೆಡ್ಡಿ ಖುದ್ದು ಭೇಟಿ ನೀಡಿ ಪರಿಶೀಲಿಸಿದರು. ಘಟನೆಯ ಸಂಬಂದ ಆರೋಪಿ ವಿರುದ್ಧª ಕ್ರಮ ಕೈಗೊಳ್ಳುವಂತೆ ಚಿಂತಾಮಣಿ ಉಪ ವಿಭಾಗದ ಡಿವೈಎಸ್ಪಿ ಜಿ.ಕೃಷ್ಣಮೂರ್ತಿ, ಚಿಂತಾಮಣಿ ಗ್ರಾಮಾಂತರ ಠಾಣೆ ಆರಕ್ಷಕ ವೃತ್ತ ನಿರೀಕ್ಷಕ ಆನಂದ್ ಕುಮಾರ್ಗೆ ಸೂಚಿಸಿದರು. ಕುಡಿದ ಅಮಲಿನಲ್ಲಿ ಕೃತ್ಯ: ಜಿಲ್ಲೆಯ ಚಿಂತಾಮಣಿ ತಾಲೂಕಿನ ದ್ವಾರಪಲ್ಲಿಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂದಿಸಿದ್ದಂತೆ ಈಗಾಗಲೇ ಅದೇ ಗ್ರಾಮದ ಆರೋಪಿ ಆನಂದ್ (26) ಎಂಬಾತನನ್ನು ಬಂಧಿಸಲಾಗಿದೆ. ಆರೋಪಿ ಕುಡಿದ ಅಮಲಿನಲ್ಲಿ ಈ ಕೃತ್ಯವೆಸಗಿದ್ದಾನೆ. ಆರೋಪಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾನೆ ಎಂದು ಕೇಂದ್ರ ವಲಯದ ಐಜಿಪಿ ಅಮೃತ್ಪಾಲ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ
Karnataka ರಾಜ್ಯದಲ್ಲಿ ಆರ್ಟಿಇ ಸೀಟಿಗಿಲ್ಲ ಕಿಮ್ಮತ್ತು!
Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ
Chikkaballapur: ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರ ಕೊರತೆ!
Chikkaballapur: ಪೋಕ್ಸೋ ಆರೋಪಿ ಜತೆಗೆ 16 ವರ್ಷದ ಬಾಲಕಿ ಆತ್ಮಹತ್ಯೆ!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.