86.5 ಲ.ರೂ. ವಿದ್ಯಾರ್ಥಿ ಸಹಾಯಧನ ವಿತರಣೆ


Team Udayavani, Aug 28, 2017, 7:30 AM IST

270817Astro03.jpg

ಉಡುಪಿ: ವಿದ್ಯಾರ್ಥಿಗಳಿಗೆ ಪೋಷಕ ಸ್ಥಾನದಲ್ಲಿ ನಿಂತು ಸಹಾಯ ನೀಡುತ್ತಿರುವ ವಿದ್ಯಾಪೋಷಕ್‌ನಿಂದ ಪ್ರಸಕ್ತ ಸಾಲಿನಲ್ಲಿ 1,165 ವಿದ್ಯಾರ್ಥಿಗಳಿಗೆ ಒಟ್ಟು 86.5 ಲ.ರೂ. ಸಹಾಯಧನ ವಿತರಿಸಲಾಯಿತು.

ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಪರ್ಯಾಯ ಪೇಜಾವರ ಮಠಾಧೀಶ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ಸಾಂಕೇತಿಕವಾಗಿ ವಿದ್ಯಾರ್ಥಿ ಸಹಾಯಧನವನ್ನು ವಿತರಿಸಿದರು.

ವಿದ್ಯೆ ಮತ್ತು ಕಲೆ ಸೂರ್ಯ ಚಂದ್ರರಿದ್ದಂತೆ. ಇವುಗಳಿಂದ ದೇಶದ ಪ್ರಗತಿ ಸಾಧ್ಯವಾಗುತ್ತದೆ ಸಕಾಲದಲ್ಲಿ ಸಹಾಯ ಪಡೆದ ವಿದ್ಯಾರ್ಥಿಗಳು ಮುಂದೆ ಸ್ವಾವಲಂಬಿಗಳಾದ ಮೇಲೆ ಮರು ಸಮರ್ಪಣೆ ಮಾಡುವುದು ವಿದ್ಯಾಪೋಷಕ್‌ನ ಬಹುದೊಡ್ಡ ಆಸ್ತಿ ಎಂದು ಪೇಜಾವರ ಶ್ರೀಗಳು ಹಾರೈಸಿದರು.

ಅಧ್ಯಕ್ಷತೆ ವಹಿಸಿದ್ದ ಜಿ. ಶಂಕರ ಫ್ಯಾಮಿಲಿ ಟ್ರಸ್ಟ್‌ ಅಧ್ಯಕ್ಷ ನಾಡೋಜ ಡಾ| ಜಿ. ಶಂಕರ್‌ ಅವರು ಮಾತನಾಡಿ, ವಿದ್ಯಾರ್ಥಿಗಳು ಸಮಾಜದ ಪರವಾಗಿ ಸಹಾಯ ಮಾಡುವ ಕಡೆಗೆ ಚಿಂತನೆ ನಡೆಸಬೇಕೆಂದು ಕೋರಿದರು.

ನೆರವು ವಿತರಣೆ
ಇದೇ ಸಂದರ್ಭದಲ್ಲಿ ಸೋಲಾರ್‌ ದೀಪಗಳ ಕೊಡುಗೆ, ಲ್ಯಾಪ್‌ಟಾಪ್‌ಮತ್ತು ಅಕ್ಷತಾ ದೇವಾಡಿಗ ಸ್ಮರಣಾರ್ಥ ಎಸ್‌ಪಿ ಅಣ್ಣಾಮಲೈ ಅವರು ಕೊಡ ಮಾಡುವ ವಿಶೇಷ ಪಾರಿತೋಷಕವನ್ನು ಹಸ್ತಾಂತರಿಸಲಾಯಿತು. ಜಿಲ್ಲೆಯ ಜನರ ಸಹಾಯಕ್ಕಾಗಿ ವಿಶೇಷ ನಿಧಿಯನ್ನು ತೆಗೆದಿರಿಸಿರುವ ಅದಾನಿ ಸಮೂಹದಿಂದ 25 ಲ.ರೂ. ಸಹಾಯಧನ ನೀಡುವುದಾಗಿ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಕಿಶೋರ್‌ ಆಳ್ವ ಪ್ರಕಟಿಸಿದರು.

ವಿನೋಬಾ ಚಂದ್ರಶೇಖರ್‌ ಶೆಟ್ಟಿ ಕಾಪು ಪ್ರತಿಷ್ಠಾನದ ವಿಶ್ವಸ್ತರಾದ ಸೀಮಾ ಹರೀಶ್‌ ರೈ, ದುಬಾೖ ಫಾರ್ಚೂನ್‌ ಗ್ರೂಪ್‌ ಆಫ್ ಹೊಟೇಲ್ಸ್‌ನ ಪ್ರವೀಣ್‌ ಶೆಟ್ಟಿ, ಉಜ್ವಲ್‌ ಡೆವಲಪರ್ಸ್‌ನ ಪುರುಷೋತ್ತಮ ಶೆಟ್ಟಿ, ಅಮೆರಿಕದ ಡಾ| ಚಂದ್ರ ಕಾಪು, ಮಂಗಳೂರು ಇನ್ಫೋಸಿಸ್‌ ಪ್ರೇರಣಾದ ರಾಮ್‌ಪ್ರಸಾದ್‌, ತಲ್ಲೂರು ಫ್ಯಾಮಿಲಿ ಟ್ರಸ್ಟ್‌ನ ತಲ್ಲೂರು ಶಿವರಾಮ ಶೆಟ್ಟಿ, ಹೊಟೇಲ್‌ ಕಿದಿಯೂರಿನ ಆಡಳಿತ ನಿರ್ದೇಶಕ ಭುವನೇಂದ್ರ ಕಿದಿಯೂರು, ಕೋಟ-ಮಣೂರು ಗೀತಾನಂದ ಪ್ರತಿಷ್ಠಾನದ ಅಧ್ಯಕ್ಷ ಆನಂದ ಸಿ. ಕುಂದರ್‌, ಮೈಸೂರಿನ ಜಯರಾಮ್‌ ಪಾಟೀಲ್‌, ಉಡುಪಿ ಭವಾನಿ ಎಂಟರ್‌ಪ್ರೈಸಸ್‌ನ ಪುರುಷೋತ್ತಮ ಪಾಟೀಲ್‌, ಪ್ರೈಮ್‌ ಸಂಸ್ಥೆಯ ರತ್ನಕುಮಾರ್‌, ಉಡುಪಿ ರಾಮಭವನದ ಯು. ವಿಶ್ವನಾಥ ಶೆಣೈ, ಮಲ್ಪೆ ಉದ್ಯಮಿ ಆನಂದ ಪಿ. ಸುವರ್ಣ, ಮಲ್ಪೆ ಕಾರ್ತಿಕ್‌ ಎಂಟರ್‌ಪ್ರೈಸಸ್‌ನ ಹರಿಯಪ್ಪ ಕೋಟ್ಯಾನ್‌, ಉದ್ಯಾವರ ಯಶಸ್ವಿ ಫಿಶ್‌ಮೀಲ್‌ನ ಸಾಧು ಸಾಲಿಯಾನ್‌, ಯಕ್ಷಗಾನ ಕಲಾರಂಗದ ಎಸ್‌.ವಿ. ಭಟ್‌, ಗಂಗಾಧರ ರಾವ್‌ ಮತ್ತಿತರರು ಉಪಸ್ಥಿತರಿದ್ದರು.ಯಕ್ಷಗಾನ ಕಲಾರಂಗದ ಅಧ್ಯಕ್ಷರಾದ ಕೆ. ಗಣೇಶ್‌ ರಾವ್‌ ಸ್ವಾಗತಿಸಿ, ಸದಾಶಿವ ರಾವ್‌ ವಂದಿಸಿದರು. ಕಾರ್ಯದರ್ಶಿ ಮುರಲಿ ಕಡೆಕಾರ್‌ ಕಾರ್ಯಕ್ರಮ ನಿರೂಪಿಸಿದರು. ನಾರಾಯಣ ಹೆಗಡೆ ಸಂದೇಶ ವಾಚಿಸಿದರು. ವಿ.ವಿ. ಶೆಟ್ಟಿ ಪ್ರಮಾಣ ವಚನ ಬೋಧಿಸಿದರು.
 

ಟಾಪ್ ನ್ಯೂಸ್

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

laTirumala Tirupa ಲಡ್ಡು ಪ್ರಸಾದ ಪ್ರಮಾದ!

Tirumala Tirupa ಲಡ್ಡು ಪ್ರಸಾದ ಪ್ರಮಾದ!

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

Daily Horoscope:

Daily Horoscope: ಹೇಗಿದೆ ನೋಡಿ ಶನಿವಾರದ ನಿಮ್ಮ ಗ್ರಹಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

Udupi: ಮದ್ಯ ಸೇವಿಸಿ ಬಸ್‌ ಚಾಲನೆ: ಪ್ರಕರಣ ದಾಖಲು

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

13

Udupi: ಅಪಾಯಕಾರಿಯಾಗಿ ಬಸ್‌ ಚಾಲನೆ: ಪ್ರಕರಣ ದಾಖಲು

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

sand

Malpe: ಮರಳು ಅಕ್ರಮ ಸಂಗ್ರಹ, ಕೇಸು ದಾಖಲು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

laTirumala Tirupa ಲಡ್ಡು ಪ್ರಸಾದ ಪ್ರಮಾದ!

Tirumala Tirupa ಲಡ್ಡು ಪ್ರಸಾದ ಪ್ರಮಾದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.