ತಿಲಕರ ಸ್ವರಾಜ್ಯ ಕಲ್ಪನೆ ಇಂದಿಗೂ ಪ್ರಸ್ತುತ: ಡಾ| ದೀಪಕ್‌ ಜೆ. ತಿಲಕ್‌


Team Udayavani, Aug 28, 2017, 7:30 AM IST

Dr-Deepak-J.-Tilak.jpg

ಉಡುಪಿ: ಬಾಲ ಗಂಗಾಧರ ತಿಲಕರು ರಾಷ್ಟ್ರದೇವೋಭವ ಎನ್ನುವ ರಾಷ್ಟ್ರಕ್ಕಾಗಿ ಸಮರ್ಪಿಸುವ ಧ್ಯೇಯವನ್ನು ಪ್ರತಿಪಾದಿಸಿದರು. ಅವರ ಸ್ವದೇಶೀ, ಸ್ವರಾಜ್ಯ ಕಲ್ಪನೆ ಇಂದಿಗೂ ಪ್ರಸ್ತುತವಾಗಿದೆ ಎಂದು ತಿಲಕರ ಮರಿಮಗ, ಪುಣೆಯ ತಿಲಕ್‌ ಮಹಾರಾಷ್ಟ್ರ ವಿದ್ಯಾಪೀಠದ ಕುಲಪತಿ ಡಾ| ದೀಪಕ್‌ ಜೆ. ತಿಲಕ್‌ ಹೇಳಿದರು.

ಪರ್ಕಳ ಶ್ರೀ ಗಣೇಶೋತ್ಸವ ಸಮಿತಿ ಸುವರ್ಣ ಮಹೋತ್ಸವದ ಅಂಗವಾಗಿ ರವಿವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ತಿಲಕರು 125 ವರ್ಷಗಳ ಹಿಂದೆ ಎಲ್ಲ ಜಾತಿ, ಧರ್ಮದವರನ್ನು ಒಟ್ಟುಗೂಡಿಸಲು ಗಣೇಶೋ ತ್ಸವವನ್ನು ಆರಂಭಿಸಿದರು. ಈಗಲೂ ಇದೇ ಆಶಯದ ಅಗತ್ಯವಿದೆ ಎಂದರು.

ಸ್ವಾತಂತ್ರ್ಯಪೂರ್ವದಲ್ಲಿ ಒಂದು ರಾಷ್ಟ್ರವೆಂಬ ಕಲ್ಪನೆ ಇರಲಿಲ್ಲ ಎನ್ನುತ್ತಿದ್ದಾಗ ನಾವು ರಾಷ್ಟ್ರಕ್ಕಾಗಿ ಹೋರಾಡುತ್ತಿದ್ದೇವೆಂದು ತಿಲಕರು ಹೇಳಿದರು. ಸಾಮಾನ್ಯ ಜನರಿಗೆ ಸ್ವಾತಂತ್ರ್ಯ, ಸ್ವರಾಜ್ಯದ ಕಲ್ಪನೆಯೇ ಇರಲಿಲ್ಲ. ಇದೇ ಕಾರಣಕ್ಕಾಗಿ ರಾಷ್ಟ್ರಕ್ಕಾಗಿ ಬದುಕುವ ರಾಷ್ಟ್ರದೇವೋಭವ= ರಾಷ್ಟ್ರಸೇವೆಯೇ ದೇವರ ಸೇವೆ ಎಂದು ಕರೆ ನೀಡಿದರು. ಗೀತೆಯಲ್ಲಿ ಹೇಳಿದ ನಿಷ್ಕಾಮ ಕರ್ಮವೆಂದರೆ ಫ‌ಲಾಪೇಕ್ಷೆ ಇಲ್ಲದೆ ದೇಶಕ್ಕಾಗಿ ಮಾಡುವ ಸೇವೆ ಎಂದು ತಿಲಕರು ಹೇಳಿ ದರು.  ಎಲ್ಲವೂ ಯಾಂತ್ರೀಕೃತವಾಗುವಾಗ ಮುಂದಿನ ಪೀಳಿಗೆಗೆ ಉದ್ಯೋಗ ಸಿಗದ ಸ್ಥಿತಿ ಬರಬಹುದು. ಆಗ ತಿಲಕರು ಹೇಳಿದ ಸ್ವದೇಶೀ ತಂತ್ರಜ್ಞಾನದ ಮಹತ್ವ ಅರಿವಿಗೆ ಬರಬಹುದು ಎಂದು ದೀಪಕ್‌ ಎಚ್ಚರಿಸಿದರು.

ಮುಸ್ಲಿಮರ ವಿರುದ್ಧವಲ್ಲ : ಗಣೇಶೋತ್ಸವಗಳು ಮುಸ್ಲಿಮರ ವಿರುದ್ಧ ಎಂದು ಬ್ರಿಟಿಷರು ಪ್ರತಿಬಿಂಬಿಸಲು ಯತ್ನಿಸಿದರು. ಇದು ಮುಸ್ಲಿಂ ವಿರೋಧಿಯಲ್ಲ ಎಂದು ತಿಲಕರು ಮುಸ್ಲಿಮರಿಗೆ ತಿಳಿಸಿ ಅವರನ್ನೂ ಉತ್ಸವಕ್ಕೆ ಕರೆದರು. ಈಗಲೂ ಬ್ರಿಟಿಷರಂತೆ ವ್ಯವಹರಿಸುವವರಿದ್ದಾರೆ ಎಂದು ದೀಪಕ್‌ ಎಚ್ಚರಿಸಿದರು.ಆಶೀರ್ವಚನ ನೀಡಿದ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಅವರು, ಧರ್ಮವೆಂದರೆ ಬದುಕಿನ ಸಂವಿಧಾನ. ಧರ್ಮ ದಂತೆ ನಡೆದರೆ ಧರ್ಮ ಸಂಸ್ಥಾಪನೆಯಾಗುತ್ತದೆ ಎಂದರು.

ಸಾವಿರಾರು ವರ್ಷಗಳ ಹಿಂದಿನ ನಾಗರಿಕತೆ ಎಂದು ಗಾಂಧೀಜಿಯವರೇ ಹೇಳಿದ್ದರು. ಪಶು, ಪಕ್ಷಿ, ಕ್ರಿಮಿ, ಕೀಟಗಳಲ್ಲಿಯೂ ಭಗವಂತನನ್ನು ಕಾಣುವ ನಮ್ಮ ನಾಗರಿಕತೆಗೆ ಸರಿಯಾಗಿ ನಾವು ಸಹಿಷ್ಣುತೆಯನ್ನು ಬೆಳೆಸಿಕೊಳ್ಳಬೇಕು. ತಂದೆ, ತಾಯಿಗಳನ್ನು ಚೆನ್ನಾಗಿ ಆರೈಕೆ ಮಾಡಬೇಕು ಎಂದು ದಿಲ್ಲಿಯ ಜಿಎಸ್‌ಟಿ ಆಯುಕ್ತ ಎಚ್‌. ರಾಜೇಶಪ್ರಸಾದ್‌ ಕರೆ ನೀಡಿದರು.
 
ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸರ್ವೋದಯ ಶೆಟ್ಟಿಗಾರ್‌, ಡಿವೈಎಸ್ಪಿ ಕುಮಾರಸ್ವಾಮಿ ಶುಭ ಕೋರಿದರು. 
ಸುವರ್ಣ ಮಹೋತ್ಸವ ಸಮಿತಿ ಅಧ್ಯಕ್ಷ ಮಹೇಶ್‌ ಠಾಕೂರ್‌ ಸ್ವಾಗತಿಸಿ ಪ್ರ. ಕಾರ್ಯದರ್ಶಿ ದಿನಕರ ಶೆಟ್ಟಿ ಪ್ರಸ್ತಾವನೆಗೈದರು. ಗಣೇಶ ಪಾಟೀಲ್‌ ಕಾರ್ಯಕ್ರಮ ನಿರ್ವಹಿಸಿ ಮುರಳೀಧರ ನಕ್ಷತ್ರಿ ವಂದಿಸಿದರು. ಗೌರವಾಧ್ಯಕ್ಷರಾದ ಶ್ರೀನಿವಾಸ ಉಪಾಧ್ಯಾಯ, ಜಯರಾಜ ಹೆಗ್ಡೆ, ದಿನೇಶ್‌ ಶೆಟ್ಟಿ ಹೆರ್ಗ, ಬಾಲಕೃಷ್ಣ ನಾಯಕ್‌, ಉದ್ಯಮಿಗಳಾದ ದಿನೇಶ್‌ ಹೆಗ್ಡೆ ಆತ್ರಾಡಿ, ಜಯರಾಜ ಶೆಟ್ಟಿ, ಪುಣೆಯ ರಂಜಿತ್‌ ಶೆಟ್ಟಿ ,ಕಟ್ಟಡ ಸಮಿತಿಯ ಅಧ್ಯಕ್ಷ ದಿಲೀಪ್‌ರಾಜ್‌ ಹೆಗ್ಡೆ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

13

Udupi: ಅಪಾಯಕಾರಿಯಾಗಿ ಬಸ್‌ ಚಾಲನೆ: ಪ್ರಕರಣ ದಾಖಲು

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

sand

Malpe: ಮರಳು ಅಕ್ರಮ ಸಂಗ್ರಹ, ಕೇಸು ದಾಖಲು

kurkalu: ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ

kurkalu: ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

1-wewewqeqwewqe

Edible oil; ದಾಸ್ತಾನಿದ್ದರೂ ಖಾದ್ಯ ತೈಲ ಬೆಲೆ ಏರಿಸಿದ್ದೇಕೆ: ಸರಕಾರ ಪ್ರಶ್ನೆ

Madikeri ಭಾಗದ ಅಪರಾಧ ಸುದ್ದಿಗಳು

Madikeri ಭಾಗದ ಅಪರಾಧ ಸುದ್ದಿಗಳು

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.