ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬಿವಿಎಸ್‌ ಧರಣಿ


Team Udayavani, Aug 29, 2017, 5:41 PM IST

yad-2.jpg

ಶಹಾಪುರ: ತಾಲೂಕಿನ ಸಮಾಜ ಕಲ್ಯಾಣ ಬಿಸಿಎಂ ಇಲಾಖೆಗಳ ಅಡಿಯಲ್ಲಿ ನಡೆಯುತ್ತಿರುವ ವಸತಿ ನಿಲಯಗಳಿಗೆ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಇಲ್ಲಿನ ಬಹುಜನ ವಿದ್ಯಾರ್ಥಿ ಸಂಘ (ಬಿವಿಎಸ್‌) ನಗರದ ಬಸವೇಶ್ವರ ವೃತ್ತದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿತು. ತಾಲೂಕಿನ ಹಿಂದುಳಿದ, ಅಲ್ಪಸಂಖ್ಯಾತ ಮತ್ತು ಎಸ್‌ಸಿ-ಎಸ್‌ಟಿ ವಸತಿ ನಿಲಯಗಳು ಮೂಲ ಸೌಲಭ್ಯವಿಲ್ಲದೆ ನರಳುತ್ತಿವೆ ಎಂದು ಆರೋಪಿಸಿದರು. ವಸತಿ ನಿಲಯಗಳಲ್ಲಿ ಕುಡಿಯುವ ನೀರು, ಶೌಚಾಲಯ ಸೇರಿದಂತೆ ಸಮರ್ಪಕ ವಿದ್ಯುತ್‌ ಸರಬರಾಜು ವ್ಯವಸ್ಥೆ ಇಲ್ಲದೆ ವಿದ್ಯಾರ್ಥಿಗಳ ಅಭ್ಯಾಸಕ್ಕೆ ತೊಂದರೆ ಆಗುತ್ತಿದೆ. ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಅಲ್ಲದೆ ಪ್ರತಿ ವಸತಿ ನಿಲಯದಲ್ಲಿ ವಾಸಿಸುವ ವಿದ್ಯಾರ್ಥಿಗಳು ಮೂಲ ಸೌಕರ್ಯದಿಂದ ವಂಚಿತಗೊಂಡಿದ್ದಾರೆ. ಈ ಕುರಿತು ಮೇಲ್ವಿಚಾರಕರಿಗೆ ತಿಳಿಸಿದರು ಯಾವುದೇ ಪ್ರಯೋಜನವಾಗಿಲ್ಲ. ಪ್ರತಿ ವಸತಿ ನಿಲಯದಲ್ಲಿ ವಿದ್ಯಾರ್ಥಿಗಳಿಗೆ ನೀಡುವ ಸಾಬೂನು, ಎಣ್ಣೆ ಯಾವುದೇ ವಸ್ತುಗಳು ಸಮರ್ಪಕವಾಗಿ ವಿತರಿಸುವುದಿಲ್ಲ. ಊಟದಲ್ಲೂ ತಾರತಮ್ಯ ಇದೆ. ಒಟ್ಟಾರೆ ಮೂಲ ಸೌಕರ್ಯಗಳಿಲ್ಲದೆ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು. ನಗರದ ಹೊರವಲಯಗಳಲ್ಲಿರುವ ವಸತಿ ನಿಲಯಗಳಲ್ಲಿನ ವಿದ್ಯಾರ್ಥಿಗಳು ಕಾಲೇಜಿಗೆ ಬರವದಾದಲ್ಲಿ ಮಾಸಿಕ ನೂರಾರು ರೂಗಳನ್ನು ಖರ್ಚು ಮಾಡಬೇಕಾದಂತ ಸ್ಥಿತಿ ನಿರ್ಮಾಣವಾಗಿದೆ. ತಾಲೂಕಿನ ಬಹುತೇಕ ವಸತಿ ನಿಲಯಗಳು ಅವ್ಯವಸ್ಥೆಗಳ ಆಗರವಾಗಿವೆ ಎಂದು ಆರೋಪಿಸಿದರು. ಅಲ್ಲದೆ ಪ್ರಸಕ್ತ ವರ್ಷದಲ್ಲಿ ಭೀಮರಾಯನ ಗುಡಿಗೆ ಮಂಜೂರಾದ ವಸತಿ ನಿಲಯವನ್ನು ಸ್ಥಳೀಯವಾಗಿ ನಗರದಲ್ಲಿಯೇ ನಿರ್ಮಾಣ ಮಾಡಬೇಕು. ಮತ್ತು ಬಹುತೇಕ ವಸತಿ ನಿಲಯಗಳಿಗೆ ಸ್ವಂತ ಕಟ್ಟಡವಿರದ ಕಾರಣ ತೊಂದರೆಯಾಗಿದೆ. ಕಾರಣ ಕೂಡಲೇ ಸರ್ಕಾರಿ ವಸತಿ ಕಟ್ಟಡ ನಿರ್ಮಾಣ ಮಾಡಬೇಕು ಎಂದು ಒತ್ತಾಯಿಸಿದರು. ತಾಲೂಕಿನ ಎಲ್ಲಾ ವಸತಿ ನಿಲಯಗಳಿಗೆ ಕುಡಿಯುವ ನೀರು, ಶೌಚಾಲಯ ಮತ್ತು ಗ್ರಂಥಾಲಯಗಳ ಅನುಕೂಲ ಕಲ್ಪಿಸಬೇಕು. ಎಲ್ಲಾ ಸಮುದಾಯದ ವಿದ್ಯಾರ್ಥಿಗಳಿಗೆ ಬಸ್‌ ಪಾಸ್‌ ಉಚಿತವಾಗಿ ವಿತರಿಸಬೇಕೆಂದು ಮನವಿ ಮಾಡಿದರು.
ಮುಂಚಿತವಾಗಿ ವಿದ್ಯಾರ್ಥಿಗಳು ಸಿಬಿ ಕಮಾನದಿಂದ ಬಸವೇಶ್ವರ ವೃತ್ತದವರೆಗೆ ಪ್ರತಿಭಟನೆ ಮೆರವಣಿಗೆ ನಡೆಸಿದರು. ನಂತರ ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ ಸೋಮಶೇಖರ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಬಿ.ವಿ.ಎಸ್‌. ಜಿಲ್ಲಾ ಸಂಯೋಜಕ ಪರಶುರಾಮ. ಜಿಲ್ಲಾ ಉಪಾಧ್ಯಕ್ಷ ಸೈಯದ್‌ ಮೂಸಾ, ಜಿಲ್ಲಾಧ್ಯಕ್ಷ ಸಿದ್ದಣ್ಣ ಪೂಜಾರಿ, ಗುರುಲಿಂಗಪ್ಪ, ಅಮಾತೆಪ್ಪ ನಾಟೇಕಾರ, ಸಂತೋಷ ಗುಡಿಮನಿ, ಶ್ರೀನಿವಾಸ ಗೊಬ್ಬೂರ, ಶ್ರವಣಕುಮಾರ, ಮೈನೋದ್ದೀನ್‌, ಶಕುಂತಲಾ, ಮಲ್ಲಣ್ಣ, ಶರಣು ಮದ್ರಿಕಿ, ಮಲ್ಲು ಸಲಾದಪುರ, ಮಲ್ಲು ಆರಬೋಳ, ಸಂತೋಷ ದೋರನಳ್ಳಿ ಸೇರಿದಂತೆ ವಿವಿಧ ವಸತಿ ನಿಲಯದ ವಿದ್ಯಾರ್ಥಿ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.

ಟಾಪ್ ನ್ಯೂಸ್

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

7-lokayuktha

Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

6-ptr

Puttur: ಬಸ್ – ಬೈಕ್‌ ಅಪಘಾತ; ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

YDR-Assult

Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

7-shahapur

Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

6

Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

5(1

Kota: ಕಸ ಎಸೆಯುವ ಜಾಗದಲ್ಲಿ ನಿರ್ಮಾಣವಾಯಿತು ಪೌರ ಕಾರ್ಮಿಕನ ಪಾರ್ಕ್‌!

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

4

Karkala: ಈ ರಸ್ತೆಯಲ್ಲಿ ಬಸ್‌ ತಂಗುದಾಣಗಳೇ ಇಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.