ಅಕ್ಟೋಬರ್ 10ಕ್ಕೆ ನಿಖಿಲ್ ಹೊಸ ಚಿತ್ರ 4 ಭಾಷೆಗಳಲ್ಲಿ ನಿರ್ಮಾಣ!
Team Udayavani, Aug 30, 2017, 10:32 AM IST
ಅಂತೂ ನಿಖಿಲ್ ಅಭಿನಯದ ಹೊಸ ಚಿತ್ರಕ್ಕೆ ವೇದಿಕೆ ಸಿದ್ಧವಾಗಿದೆ. ನಿಖಿಲ್ ಅಭಿನಯದ ಚಿತ್ರಕ್ಕೆ ಕಥೆ ಬರೆಯುವುದಕ್ಕೆ ಮಹೇಶ್ ರಾವ್, ಗೋಪಿಮೋಹನ್ ಮತ್ತು ಮೆಹರ್ ರಮೇಶ್ ಅವರಿಗೆ ಜವಾಬ್ದಾರಿ ನೀಡಲಾಗಿತ್ತು. ಈ ಪೈಕಿ ಮಹೇಶ್ ರಾವ್ ಅವರ ಕಥೆಯೇ ಓಕೆಯಾಗಿದ್ದು, ಈಗಾಗಲೇ ಕಥೆ-ಚಿತ್ರಕಥೆ ಬರೆಯುವ ಕೆಲಸ ಸದ್ದಿಲ್ಲದೆ ಮುಗಿದಿದೆ.
ಇನ್ನು ಚಿತ್ರವು ಅಕ್ಟೋಬರ್ 10ರಂದು ಪ್ರಾರಂಭವಾಗಲಿದೆ ಎಂಬ ಮಾಹಿತಿ ಬಂದಿದೆ. ಹೌದು, ನಿಖಿಲ್ ಅಭಿನಯದ ಮೂರನೆ ಹಾಗೂ ಚೆನ್ನಾಂಬಿಕ ಫಿಲಂಸ್ ಲಾಂಛನದ ಏಳನೆಯ ಚಿತ್ರವು ಅಕ್ಟೋಬರ್ 10ರಂದು ಪ್ರಾರಂಭವಾಗಲಿದೆ. ಈ ಚಿತ್ರಕ್ಕೆ ಮಹೇಶ್ ರಾವ್ ಕಥೆ ಮತ್ತು ಚಿತ್ರಕಥೆ ಬರೆಯುವುದರ ಜೊತೆಗೆ ನಿರ್ದೇಶನದ ಜವಾಬ್ದಾರಿಯನ್ನು ವಹಿಸಿಕಕೊಂಡಿದ್ದಾರೆ.
ಇನ್ನು ಗುರುರಾಜ್ ದೇಸಾಯಿ ಅವರು ಚಿತ್ರಕ್ಕೆ ಸಂಭಾಷಣೆ ಬರೆಯುವುದರ ಜೊತೆಗೆ ಸಹನಿರ್ದೇಶನವನ್ನೂ ಮಾಡಲಿದ್ದಾರಂತೆ. ಚಿತ್ರಕ್ಕೆ ಗಾಜುಲ ಶಿವ ಅವರು ಛಾಯಾಗ್ರಹಣ ಮಾಡಿದರೆ, ವಿ. ಹರಿಕೃಷ್ಣ ಸಂಗೀತ ಸಂಯೋಜಿಸುತ್ತಿದ್ದಾರೆ. ಇನ್ನು ಚಿತ್ರಕ್ಕೆ ಉಳಿದ ಕಲಾವಿದರು ಮತ್ತು ತಂತ್ರಜ್ಞರ ಆಯ್ಕೆ ನಡೆಯುತ್ತಿದೆ. ಈ ಚಿತ್ರವು ಕನ್ನಡ, ತೆಲುಗು, ತಮಿಳು ಮತ್ತು ಹಿಂದಿಯಲ್ಲಿ ಏಕಕಾಲಕ್ಕೆ ನಿರ್ಮಾಣವಾಗುತ್ತಿರುವುದು ವಿಶೇಷ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
ಪ್ರತೀ ಪೇಜರ್ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್ನ ಮೊಸಾದ್?
Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್!
Mohana Singh: ತೇಜಸ್ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್ ಆಗಿ ಮೋಹನಾ ಸಿಂಗ್ ನೇಮಕ
Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ
Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.