ಕಸಾಯಿಖಾನೆಗೆ 10ಲಕ್ಷ:ಬಿಜೆಪಿಯಿಂದ ಪ್ರತಿಭಟನೆ
Team Udayavani, Aug 31, 2017, 10:37 AM IST
ಕಲಬುರಗಿ: ಬಕ್ರಿದ್ ಹಬ್ಬದ ಪ್ರಯುಕ್ತ ಮಹಾಪೌರ ಶರಣುಮೋದಿ ಕಸಾಯಿಖಾನೆ ಸ್ವತ್ಛತೆಗೆ 10 ಲಕ್ಷ ರೂ. ಖರ್ಚು ಮಾಡಲು ನಿರ್ಧರಿಸಿರುವುದನ್ನು ಕೂಡಲೇ ಕೈಬಿಡಬೇಕು ಎಂದು ಆಗ್ರಹಿಸಿ ಬುಧವಾರ ಬಿಜೆಪಿ ಉತ್ತರ ಮಂಡಲದ ಸದಸ್ಯರು ಪಾಲಿಕೆ ಎದುರು ಪ್ರತಿಭಟನೆ ನಡೆಸಿದರು. ಪ್ರತಿಭಟನೆ ವೇಳೆ ಪಾಲಿಕೆ ಆಯುಕ್ತ ಸುನೀಲಕುಮಾರ ಅವರಿಗೆ ಮನವಿ ಸಲ್ಲಿಸಿದರು. ಬಕ್ರಿದ್ ಹಬ್ಬದ ಅಂಗವಾಗಿ ಕಸಾಯಿಖಾನೆಗಳಲ್ಲಿ ಸ್ವತ್ಛತೆ ಕಾಪಾಡುವ ನಿಟ್ಟಿನಲ್ಲಿ ಪಾಲಿಕೆ ವತಿಯಿಂದ 10 ಲಕ್ಷ ರೂ. ಖರ್ಚು ಮಾಡಲು ನಿರ್ಧರಿಸಲಾಗಿದೆ ಎಂದು ಹೇಳಿರುವ ಪಾಲಿಕೆ ಮಹಾಪೌರರು ಒಂದು ಸಮುದಾಯದ ಜನರ ಸಂತೋಷಕ್ಕಾಗಿ ಮತ್ತು ಮಹಾಪೌರರನ್ನಾಗಿ ಆಯ್ಕೆ ಮಾಡಿರುವುದಕ್ಕೆ ಋಣತೀರಿಸುವುದಕ್ಕಾಗಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಆರೋಪಿಸಿದರು. ಪ್ರತಿಭಟನೆಯಲ್ಲಿ ಬಿಜೆಪಿ ನಗರ ಅಧ್ಯಕ್ಷ ಬಿ.ಜಿ. ಪಾಟೀಲ, ಬಿಜೆಪಿ ಉತ್ತರ ಮಂಡಲ ಚನ್ನವೀರ ಲಿಂಗನವಾಡಿ, ಸುಭಾಷ ಬಿರಾದಾರ, ಶಿವಶರಣಪ್ಪ ನಿಗ್ಗುಡಗಿ, ಆರ್.ಎಸ್. ಪಾಟೀಲ, ದಯಾಘನ ಧಾರವಾಡಕರ್, ರಾಜು ವಾಡೀಕರ್, ಉಮೇಶ ಪಾಟೀಲ ಮತ್ತಿತರರು ಈ ಸಂದರ್ಭದಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aland: ಆಟೋ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಸಾವು
Chincholi: ಸಾಲ ಭಾದೆ, ಮುಂಗಾರು ಬೆಳೆ ಹಾನಿಯಿಂದ ಮನನೊಂದು ರೈತ ಆತ್ಮಹತ್ಯೆ
Chittapur: 120 ಮನೆಗಳಿಗೆ ನುಗ್ಗಿದ ಮಳೆ ನೀರು; ಅಪಾರ ಹಾನಿ
Kalaburagi: ಕೊಲೆಯಲ್ಲಿ ಅಂತ್ಯವಾಯ್ತು ಮದುವೆ ಮಾತುಕತೆ: ಆರು ಆರೋಪಿಗಳ ಬಂಧನ
ರಾಜ್ಯದಲ್ಲಿ ಮುಸ್ಲಿಂ ಸರ್ಕಾರವಿದೆ! ಕಾಂಗ್ರೆಸ್ನವರು ಸಂಘದ ಟ್ರೈನಿಂಗ್ ತಗೊಳ್ಳಿ: ಸೂಲಿಬೆಲೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Mangaluru: ಕೌನ್ ಬನೇಗಾ ಕರೋಡ್ಪತಿಯಲ್ಲಿ 6.40 ಲ.ರೂ. ಗೆದ್ದ ಅಪೂರ್ವಾ ಶೆಟ್ಟಿ
IPL Retentions: ಐಪಿಎಲ್ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ
MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ
Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ
leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.