ಜಿಲ್ಲಾಸ್ಪತ್ರೆ ಅವ್ಯವಸ್ಥೆ:ಬಿಜೆಪಿರಾಜ್ಯಾಧ್ಯಕ್ಷರಿಗೆ ವರದಿ
Team Udayavani, Sep 1, 2017, 11:13 AM IST
ಕಲಬುರಗಿ: ಜಿಲ್ಲಾಸ್ಪತ್ರೆ ಅವ್ಯವಸ್ಥೆ ಹಾಗೂ ಶಿಶು ಸಾವಿನ ಪ್ರಕರಣ ಕುರಿತು ಬಿಜೆಪಿ ರಾಜ್ಯಾಧ್ಯಕ್ಷರಿಗೆ
ಸಮಗ್ರ ವರದಿ ಸಲ್ಲಿಸುವುದಾಗಿ ಬಿಜೆಪಿ ಶಿಶು ಮರಣ ಅಧ್ಯಯನ ಸಮಿತಿ ಪ್ರಮುಖ, ಶಾಸಕ ಸುರೇಶಕುಮಾರ ತಿಳಿಸಿದರು.
ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ನಂತರ ಸಮಿತಿ ಸದಸ್ಯರೊಂದಿಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ
ಅವರು, ಆಸ್ಪತ್ರೆಯ ನವಜಾತ ಶಿಶುಗಳ ತುರ್ತು ಚಿಕಿತ್ಸಾ ಘಟಕದಲ್ಲಿ ಒಂದೇ ಬೆಡ್ ಮೇಲೆ
ಮೂರ್ನಾಲ್ಕು ಮಕ್ಕಳನ್ನು ಮಲಗಿಸಿ ಚಿಕಿತ್ಸೆ ನೀಡುತ್ತಿರುವುದರಿಂದ ಒಂದು ಮಗುವಿನ ಸೊಂಕು
ಮತ್ತೂಂದು ಮಗುವಿಗೆ ತಗುಲುತ್ತಿದೆ. ಪ್ರಮುಖವಾಗಿ ಮಕ್ಕಳಿಗೆ ನೀಡಲಾಗುವ ಸಪೆìಕ್ಟರ್
ಚುಚ್ಚುಮದ್ದು ಇಲ್ಲದೇ ಇರುವುದು ಶಿಶುಗಳ ಸಾವಿಗೆ ಕಾರಣವಾಗಿದೆ ಎನ್ನುವುದು ಗಮನಕ್ಕೆ ಬಂದಿದೆ
ಎಂದು ವಿವರಿಸಿದರು.
ಶಿಶುಗಳ ತುರ್ತು ಘಟಕದಲ್ಲಿ 22 ಬೆಡ್ಗಳಿದ್ದರೂ ಕೇವಲ ಮೂರು ವೆಂಟಿಲೇಟರ್ ಇವೆ. ಸಿಬ್ಬಂದಿ ಕೊರತೆಯೂ ಹೆಚ್ಚಿನ ಪ್ರಮಾಣದಲ್ಲಿದೆ. ಆರೋಗ್ಯ ಸಚಿವರ ಜಿಲ್ಲೆ ಕೋಲಾರದಲ್ಲಿ ಒಂದು ನಿಟ್ಟಿನ ಅವ್ಯವಸ್ಥೆಯಿದ್ದರೆ, ವೈದ್ಯಕೀಯ ಶಿಕ್ಷಣ ಸಚಿವರ ಜಿಲ್ಲೆ ಕಲಬುರಗಿ ಜಿಲ್ಲೆಯಲ್ಲಿ ಮಗದೊಂದು ನಿಟ್ಟಿನಲ್ಲಿ
ಸಮಸ್ಯೆಯಿದೆ. ಇದು ಸರ್ಕಾರದ ಆಡಳಿತ ವೈಖರಿ ನಿರೂಪಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಯಶಸ್ವಿನಿ, ವಾಜಪೇಯಿ ಆರೋಗ್ಯ ಶ್ರೀ ಸೇರಿದಂತೆ ಸರ್ಕಾರ ಎಲ್ಲ ಆರೋಗ್ಯ ಸೇವಾ ಕಾರ್ಯಕ್ರಮಗಳನ್ನು ವಿಲೀನಗೊಳಿಸಿ ಏಕರೂಪದ ಆರೋಗ್ಯ ಭಾಗ್ಯ ನೀಡುವ ಯೋಜನೆ ರೂಪುರೇಷೆ ಇನ್ನೂ ಸಂಪೂರ್ಣ ಗೊತ್ತಾಗಿಲ್ಲ. ಬಹುಶಃ ವಾಜಪೇಯಿ ಅವರ ಹೆಸರು ಹೆಸರು ತೆಗೆದು ಹಾಕುವ ಏಕೈಕ ಉದ್ದೇಶವೂ ಇರಬಹುದು ಎನ್ನುವ ಶಂಕೆ ಕಾಡಲಾರಂಭಿಸಿದೆ ಎಂದು ಹೇಳಿದರು.
ಶಾಸಕರಾದ ಭಾರತಿ ಶೆಟ್ಟಿ, ಅಶ್ವತ್ಥ್ನಾರಾಯಣ, ದತ್ತಾತ್ರೇಯ ಪಾಟೀಲ ರೇವೂರ, ಅಮರನಾಥ ಪಾಟೀಲ, ಮಾಜಿ ಶಾಸಕರಾದ ದೊಡ್ಡಪ್ಪಗೌಡ ಪಾಟೀಲ ನರಿಬೋಳ, ಶಶೀಲ ನಮೋಶಿ, ಡಾ| ಈರಣ್ಣ ಹೀರಾಪುರ, ಎಸ್. ಪ್ರಕಾಶ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aland: ಆಟೋ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಸಾವು
Chincholi: ಸಾಲ ಭಾದೆ, ಮುಂಗಾರು ಬೆಳೆ ಹಾನಿಯಿಂದ ಮನನೊಂದು ರೈತ ಆತ್ಮಹತ್ಯೆ
Chittapur: 120 ಮನೆಗಳಿಗೆ ನುಗ್ಗಿದ ಮಳೆ ನೀರು; ಅಪಾರ ಹಾನಿ
Kalaburagi: ಕೊಲೆಯಲ್ಲಿ ಅಂತ್ಯವಾಯ್ತು ಮದುವೆ ಮಾತುಕತೆ: ಆರು ಆರೋಪಿಗಳ ಬಂಧನ
ರಾಜ್ಯದಲ್ಲಿ ಮುಸ್ಲಿಂ ಸರ್ಕಾರವಿದೆ! ಕಾಂಗ್ರೆಸ್ನವರು ಸಂಘದ ಟ್ರೈನಿಂಗ್ ತಗೊಳ್ಳಿ: ಸೂಲಿಬೆಲೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Mangaluru: ಕೌನ್ ಬನೇಗಾ ಕರೋಡ್ಪತಿಯಲ್ಲಿ 6.40 ಲ.ರೂ. ಗೆದ್ದ ಅಪೂರ್ವಾ ಶೆಟ್ಟಿ
IPL Retentions: ಐಪಿಎಲ್ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ
MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ
Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ
leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.