ಮಳೆ ಸೂರು ಇಲ್ಲದಂತೆ ಮಾಡಿತು!


Team Udayavani, Sep 1, 2017, 11:36 AM IST

gul-8.jpg

ವಾಡಿ: ಹೆಣ್ಣುಮಕ್ಕಳು ಹಸೆಮಣೆ ಏರಿ ಗಂಡನ ಮನೆ ಸೇರಿಕೊಂಡರೆ, ಗಂಡು ಮಗ ಮಡದಿಯೊಂದಿಗೆ ಮಹಾನಗರ ಸೇರಿಕೊಂಡಿದ್ದಾನೆ. ಕೈ ಹಿಡಿದ ಗಂಡ ಪರಲೋಕ ಸೇರಿದ ಮೇಲೆ ನಿರಾಶ್ರಿತರಾದ
ತಾಯಿ ಮತ್ತು ಮಗಳು ಅಕ್ಷರಶಃ ಕಣ್ಣೀರಿನಲ್ಲಿ ಕೈ ತೊಳೆಯುತ್ತಿದ್ದಾರೆ.

ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದ ಪುರಸಭೆ ವ್ಯಾಪ್ತಿಯ ವಿಜಯನಗರ ಬಡಾವಣೆಯ ಆಶ್ರಯ ಕಾಲೋನಿಯಲ್ಲಿ ಕ್ಯಾನ್ಸರ್‌ ಪೀಡಿತ ಮಗಳೊಂದಿಗೆ ವಾಸವಿರುವ ದುರ್ಗಮ್ಮ ಬಸವರಾಜ ಸೈದಾಪುರ
ಎನ್ನುವ ಬಡ ಮಹಿಳೆ, ಕಳೆದ ಹಲವು ವರ್ಷಗಳಿಂದ ಸರಕಾರದ ಅನ್ನಭಾಗ್ಯ ಹಾಗೂ ಮಾಸಿಕ ಪಿಂಚಣಿ ಆಸರೆಯಲ್ಲಿ ಬದುಕು ದೂಡುತ್ತಿದ್ದಾಳೆ.

ಆ.29 ರಂದು ಸುರಿದ ಧಾರಾಕಾರ ಮಳೆಗೆ ಮನೆ ಗೋಡೆಗಳು ಉರುಳಿ ಬಿದ್ದಿವೆ. ಈಗ ಸೂರಿನ ಆಸರೆಯೂ ಇಲ್ಲವಾಗಿ, ತಾಯಿ ಮತ್ತು ಮಗಳು ಪರಸ್ಪರ ಮುಖ ನೋಡಿಕೊಂಡು ಕಣ್ಣೀರು ಹಾಕುತ್ತಿದ್ದಾರೆ. ಇವರ ಬದುಕು ಹತ್ತಿರದಿಂದ ನೋಡಲು ಹೋದರೆ ಎಂತವರ ಮನಸ್ಸು ಕರಗದೇ
ಇರಲಾರದು.

ಅಸ್ತಮಾ ಪೀಡಿತ ದುರ್ಗಮ್ಮಳಿಗೆ ಒಟ್ಟು ಐವರು ಮಕ್ಕಳು. ನಾಲ್ವರು ಹೆಣ್ಣು ಮಕ್ಕಳಲ್ಲಿ ಮೂವರಿಗೆ ವಿವಾಹವಾಗಿದ್ದು, ತವರು ಮನೆಯಲ್ಲಿದ್ದಾರೆ. ಇದ್ದ ಒಬ್ಬ ಮಗ ಆಸರೆಯಾಗದೆ ಮಡದಿಯೊಂದಿಗೆ ಮನೆ
ತೊರೆದು ನಗರ ಸೇರಿಕೊಂಡಿದ್ದಾನೆ. ಬೆನ್ನು ಮೂಳೆಯ ಕ್ಯಾನ್ಸರ್‌ ನಿಂದ ಬಳಲಿ ಹಾಸಿಗೆ ಹಿಡಿದಿರುವ 21ರ ರೇಣುಕಾ ದುರ್ಗಮ್ಮಳ ಕೊನೆಯ ಮಗಳು. ಈಕೆಯೇ ದುಡಿದು ಮೂವರು ಅಕ್ಕಂದಿರ ಮದುವೆ ಮಾಡಿದ್ದಾಳೆ. ಅನಾರೋಗ್ಯದಲ್ಲಿದ್ದ ತಾಯಿಯನ್ನು ಸಾಕಲು ಪಣ ತೊಟ್ಟಿದ್ದ ರೇಣುಕಾ, ಈಗ ತಾನೇ
ಅನಾರೋಗ್ಯಕ್ಕೆ ಒಳಗಾಗಿ ಹಾಸಿಗೆ ಹಿಡಿದಿದ್ದಾಳೆ. ಬಡಾವಣೆಯ ಯುವ ಮುಖಂಡ ಮಲ್ಲಿಕಾರ್ಜುನ ಸೈದಾಪುರ, ಬಸವರಾಜ ಕೂಡಲೂರ ಹಾಗೂ ಇನ್ನಿತರರು ಇವರ ಕಷ್ಟಕ್ಕೆ ಮರುಗಿ ಪಡಿತರ ಚೀಟಿ ಮಾಡಿಸಿಕೊಟ್ಟು ಅನ್ನಭಾಗ್ಯದ ಗಂಜಿ ದಕ್ಕುವಂತೆ ಮಾಡಿದ್ದಾರೆ. ವಿಧವಾ ವೇತನ ಜಾರಿಗೊಳಿಸಿ ಬದುಕಿಗೆ ಆಸರೆ ಒದಗಿಸಿದ್ದಾರೆ.

ಸೂರಿನ ಸೌಲಭ್ಯ ಒದಗಿಸಬೇಕಾದ ಪುರಸಭೆ ಅಧಿಕಾರಿಗಳು, ರಾಜೀವಗಾಂಧಿ ವಸತಿ ಯೋಜನೆಯಡಿ ಸಲ್ಲಿಸಲಾಗಿದ್ದ ಇವರ ಅರ್ಜಿಯನ್ನು ಕಸದ ಬುಟ್ಟಿಗೆ ಎಸೆದಿದ್ದಾರೆ. ಇದ್ದ ಎರಡು ಕೋಣೆಗಳಲ್ಲಿ ಒಂದು ಕೋಣೆಯ ಎರಡು ಗೋಡೆಗಳು ಕುಸಿದು ಬಿದ್ದಿವೆ. ಇರುವ ಒಂದು ಕೋಣೆಯೂ
ಶಿಥಿಲಗೊಂಡಿದೆ. ಕ್ಷೇತ್ರದ ಶಾಸಕರು, ತಹಶೀಲ್ದಾರರು ಇವರಿಗೊಂದು ಸೂರು ಕಲ್ಪಿಸಿಕೊಡಬೇಕು ಎಂದು ವಿಜಯನಗರ ಬಡಾವಣೆ ನಿವಾಸಿಗಳು ಕಳಕಳಿಯ ಮನವಿ ಮಾಡಿದ್ದಾರೆ.ಮನೆ ಗೋಡೆಗಳು ಕುಸಿದು ಬಿದ್ದಿವೆ. 

„ಮಡಿವಾಳಪ್ಪ ಹೇರೂರ

ಟಾಪ್ ನ್ಯೂಸ್

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

1-hejb

Israel ಸರ್ಜಿಕಲ್‌ ಸ್ಟ್ರೈಕ್‌: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್‌ ಬಾಂಬ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-aland

Aland: ಆಟೋ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಸಾವು

5-chincholi

Chincholi: ಸಾಲ ಭಾದೆ, ಮುಂಗಾರು ಬೆಳೆ ಹಾನಿಯಿಂದ ‌ಮನನೊಂದು ರೈತ ಆತ್ಮಹತ್ಯೆ

11-

Chittapur: 120 ಮನೆಗಳಿಗೆ ನುಗ್ಗಿದ ಮಳೆ ನೀರು; ಅಪಾರ ಹಾನಿ

Kalaburagi: ಕೊಲೆಯಲ್ಲಿ ಅಂತ್ಯವಾಯ್ತು ಮದುವೆ ಮಾತುಕತೆ: ಆರು ಆರೋಪಿಗಳ ಬಂಧನ

Kalaburagi: ಕೊಲೆಯಲ್ಲಿ ಅಂತ್ಯವಾಯ್ತು ಮದುವೆ ಮಾತುಕತೆ: ಆರು ಆರೋಪಿಗಳ ಬಂಧನ

Chakravarthy Sulibele

ರಾಜ್ಯದಲ್ಲಿ ಮುಸ್ಲಿಂ ಸರ್ಕಾರವಿದೆ! ಕಾಂಗ್ರೆಸ್‌ನವರು ಸಂಘದ ಟ್ರೈನಿಂಗ್ ತಗೊಳ್ಳಿ: ಸೂಲಿಬೆಲೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.