ಅಭಿವೃದ್ಧಿಯಲ್ಲಿ ಸಂಘಟನೆಯ ಪಾತ್ರ ಮಹತ್ವದ್ದು: ರಘು ಆಚಾರ್‌


Team Udayavani, Sep 4, 2017, 7:55 AM IST

raghu-achar.jpg

ಕಾಪು: ಸಮಾಜದ ಅಭಿವೃದ್ಧಿಗೆ ದುಡ್ಡೇ ಮುಖ್ಯವಲ್ಲ. ನಮ್ಮಲ್ಲಿರುವ ಸಂಘಟನ ಶಕ್ತಿ ಪ್ರಮುಖ ಪಾತ್ರ ವಹಿಸುತ್ತದೆ. ನಮ್ಮ ಸಮಾಜದ ಅಭಿವೃದ್ಧಿಗಾಗಿ ಮೊದಲು ನಾವು ಸಂಘಟಿತರಾಗಬೇಕು. ನಾವು ಸಂಘಟಿತರಾಗಿ ಎಲ್ಲ ಪಕ್ಷದವರೊಂದಿಗೂ ಉತ್ತಮ ರೀತಿಯ ಸಂಬಂಧವನ್ನು ಇರಿಸಿಕೊಂಡು ಬಂದಲ್ಲಿ ಸಮಾಜದ ಅಭಿವೃದ್ಧಿಗೆ ಎಲ್ಲ ಮೂಲಗಳಿಂದಲೂ ಸವಲತ್ತು-ಸಹಕಾರಗಳನ್ನು ಪಡೆಯಲು ಸಾಧ್ಯ ಎಂದು ವಿಧಾನ ಪರಿಷತ್‌ ಸದಸ್ಯ ಜಿ. ರಘು ಆಚಾರ್‌ ಹೇಳಿದರು.

ಕಟಪಾಡಿ ವೇಣುಗಿರಿ ಶ್ರೀ ಕಾಳಿಕಾಂಬಾ ವಿಶ್ವಕರ್ಮೇಶ್ವರ ದೇವಸ್ಥಾನದ ಸಭಾಭವನದಲ್ಲಿ ಕಾಪು ವಿಧಾನಸಭಾ ಕ್ಷೇತ್ರ ವಿಶ್ವ ಬ್ರಾಹ್ಮಣ ಯುವ ಸಂಘಟನೆಯ ವಾರ್ಷಿಕೋತ್ಸವದ ಅಂಗವಾಗಿ ಸೆ. 3ರಂದು ನಡೆದ ಸಾಮೂಹಿಕ ಚಂಡಿಕಾ ಹೋಮ ಹಾಗೂ ಸಾಮೂಹಿಕ ವಿವಾಹ ಸಮಾರಂಭದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ರಾಜಕಾರಣದಲ್ಲಿ ಯಾರೂ ಶಾಶ್ವತರಲ್ಲ. ಎಲ್ಲವೂ ಶಾಶ್ವತವಲ್ಲ. ಆದರೆ ಅಧಿಕಾರದಲ್ಲಿದ್ದಾಗ ನಡೆಸುವ ಸೇವಾ ಕಾರ್ಯಗಳು ಮಾತ್ರ ಜನರ ಮನಃಪಟಲದಲ್ಲಿ ಶಾಶ್ವತವಾಗಿ ಉಳಿಯುತ್ತವೆ. ರಾಜಕಾರಣವನ್ನು ಸೇವೆಗಾಗಿ ಮೀಸಲಿಡಬೇಕೇ ಹೊರತು, ಅದನ್ನೇ ಬದುಕನ್ನಾಗಿಸಿ ಕೊಳ್ಳಬಾರದು. ನಾವು ಪ್ರಾಮಾಣಿಕರಾಗಿದ್ದಲ್ಲಿ ನಮ್ಮನ್ನು ಎಲ್ಲರೂ ನಂಬುತ್ತಾರೆ. ಜನ ನಂಬುವ ರೀತಿಯಲ್ಲಿ ನಾವು ಮುನ್ನಡೆಯಬೇಕಿದೆ ಎಂದರು.

ವೇ| ಮೂ| ಬ್ರಹ್ಮಶ್ರೀ ಪುರೋಹಿತ ವಿಶ್ವನಾಥ ಆಚಾರ್ಯ ಉದ್ಯಾವರ ಮತ್ತು ಪುರೋಹಿತ ಪಿ. ಕೆ. ಶ್ರೀಧರಾಚಾರ್ಯ ಪಾದೂರು ಅವರ ಆಚಾರ್ಯತ್ವ ಹಾಗೂ ಇನ್ನಿತರ ವೈದಿಕ ಮಾರ್ಗದರ್ಶನದೊಂದಿಗೆ ದಾನಿಗಳ ನೆರವಿನಿಂದ ಸಾಮೂಹಿಕ ಚಂಡಿಕಾ ಹೋಮ ಮತ್ತು ಸಾಮೂಹಿಕ ವಿವಾಹ ಸಮಾರಂಭ ನೆರವೇರಿತು.

ಕಟಪಾಡಿ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರ ಸದಾಶಿವ ಆಚಾರ್ಯ ಪಡು ಕುತ್ಯಾರು, ಕರ್ನಾಟಕ ವಿಶ್ವಕರ್ಮ ಸಮುದಾಯ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷೆ ಬಿ. ಪಿ. ಸತ್ಯವತಿ, ಸ್ವರ್ಣೋದ್ಯಮಿ ಧನಂಜಯ ಪಾಲ್ಕೆ, ಮಾಜಿ ಆಡಳಿತ ಮೊಕ್ತೇಸರ ವಿಶ್ವನಾಥ ಆಚಾರ್ಯ ಕರಂಬಳ್ಳಿ, ವಿಶ್ವಕರ್ಮ ಒಕ್ಕೂಟದ ಅಧ್ಯಕ್ಷ ಯು. ಕೆ. ಎಸ್‌. ಸೀತಾರಾಮ್‌ ಆಚಾರ್ಯ, ಗೌರವಾಧ್ಯಕ್ಷ ಅಲೆವೂರು ಯೋಗೀಶ್‌ ಆಚಾರ್ಯ, ಗಣ್ಯರಾದ ಕೆ. ವಿಶ್ವನಾಥ್‌ ರಾವ್‌, ಕೃಷ್ಣ ವಿ. ಆಚಾರ್ಯ ಮುಂಬೈ, ಪ್ರಕಾಶ್‌ ಆಚಾರ್ಯ ಕಾರ್ಕಳ, ಶೇಖರ್‌ ಆಚಾರ್ಯ ಕಾಪು, ನಾಗರಾಜ್‌ ಆಚಾರ್ಯ ಅಲೆವೂರು, ಪ್ರಸಾದ್‌ ಅತ್ತಾವರ, ಗೋಪಾಲ್‌ ಆಚಾರ್ಯ ಪಾಣೆ ಮಂಗಳೂರು, ಬಾಲಕೃಷ್ಣ ಆಚಾರ್ಯ ಕಪ್ಪೆಟ್ಟು, ಕೇಶವ ಆಚಾರ್ಯ ಸಗ್ರಿ, ಕಟಪಾಡಿ ಕಾಳಿ ಕಾಂಬಾ ದೇವಸ್ಥಾನದ ತಂತ್ರಿ ವಿಶ್ವನಾಥ ಪುರೋಹಿತ್‌ ಮುಖ್ಯ ಅತಿಥಿಗಳಾಗಿದ್ದರು.
ಸಮಾಜದ ಸಾಧಕ ಗಣ್ಯರಾದ ಬಿ. ಅನಂತಯ್ಯ ಆಚಾರ್ಯ ಮಣಿಪಾಲ, ಎಂ. ಡಿ. ಶ್ಯಾಮರಾಯ ಆಚಾರ್ಯ ಬಂಟ್ವಾಳ, ಡಿ. ಪದ್ಮನಾಭ ಕುಮಾರ್‌, ರಾಜಗೋಪಾಲ ಆಚಾರ್ಯ ಕೋಟೇಶ್ವರ, ಪಿ. ಎನ್‌. ಆಚಾರ್ಯ ಉಡುಪಿ, ಹರೀಶ್‌ ಆಚಾರ್ಯ  ಕಲ್ಲಮುಂಡ್ಕೂರು, ಸೌಮ್ಯಾ ಜಿ. ಆಚಾರ್ಯ ಹಿರೇಬೆಟ್ಟು ಅವರನ್ನು ಸಮ್ಮಾನಿಸಲಾಯಿತು. ವಿಶ್ವಕರ್ಮ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಘಟನೆಯ ಅಧ್ಯಕ್ಷ ವೈ. ಗಣೇಶ ಆಚಾರ್ಯ ಉಚ್ಚಿಲ ಸ್ವಾಗತಿಸಿ, ಪ್ರಸ್ತಾವನೆಗೈದರು. ರಾಜೇಶ್‌ ಬಿಳಿಯಾರು ವಂದಿಸಿದರು. ಎನ್‌. ಆರ್‌. ದಾಮೋದರ್‌ ಶರ್ಮಾ ಕಾರ್ಯಕ್ರಮ ನಿರೂಪಿಸಿದರು. 

13 ಜೋಡಿ;  7 ಸಾವಿರಕ್ಕೂ ಅಧಿಕ ಮಂದಿ ಭಾಗಿ
ವಿಶ್ವಕರ್ಮ ಯುವ ಸಂಘಟನೆಯ ಮೂಲಕ ಎರಡು ವರ್ಷಗಳ ಹಿಂದೆ ನಡೆಸಿದ ವಧು-ವರರ ಸಮಾವೇಶದ ಮುಂದುವರಿದ ಭಾಗವಾಗಿ ಆಯೋಜಿಸಲಾಗದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ 13 ಜೋಡಿ ಸಪ್ತಪದಿಯನ್ನು ತುಳಿದು ಸತಿ-ಪತಿಗಳಾದರು. ವಧುವಿಗೆ ಚಿನ್ನದ ತಾಳಿಗುಂಡು, ಬೆಳ್ಳಿ ಕರಿಮಣಿ ಸರ, ಕಾಲುಂಗುರ, ಸೀರೆ ಮತ್ತು ರವಿಕೆ, ವರನಿಗೆ ಪಂಚೆ, ಶಾಲು, ಪೇಟ, ಬಾಸಿಂಗ ಸಹಿತ ವಿವಿಧ ಕೊಡುಗೆಗಳನ್ನು ನೀಡಲಾಯಿತು. ಏಳು ಸಾವಿರಕ್ಕೂ ಅಧಿಕ ಮಂದಿ ಅನ್ನಸಂರ್ತಣೆ ಸ್ವೀಕರಿಸಿದರು.

ಟಾಪ್ ನ್ಯೂಸ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.