ಉಡುಪಿಯಲ್ಲೊಂದು ಪ್ಲಾಸ್ಟಿಕ್‌ ರಹಿತ ವಿವಾಹ


Team Udayavani, Sep 4, 2017, 8:20 AM IST

plastic.jpg

ಉಡುಪಿ: ಮದುವೆ ಅಂದರೆ ಪ್ರತಿಷ್ಠೆಯ ಸಂಕೇತವಾಗಿರುವ ಈ ಕಾಲಘಟ್ಟದಲ್ಲಿ ಉಡುಪಿ ಜಿಲ್ಲೆಯ ಉಚ್ಚಿಲದ ಶ್ರೀಮತಿ ತುಂಬೆ ಕರ್ಕೆರಾ ಸಭಾಭವನದಲ್ಲಿ ರವಿವಾರ ನಡೆದ ವಿವಾಹವೊಂದು ಹೊಸ ಇತಿಹಾಸಕ್ಕೆ ನಾಂದಿ ಹಾಡಿದ್ದಲ್ಲದೆ, ಆಮಂತ್ರಣ ಪತ್ರಿಕೆಯಿಂದ ಹಿಡಿದು ಊಟದ ವ್ಯವಸ್ಥೆಯವರೆಗೂ ಪ್ಲಾಸ್ಟಿಕ್‌ ಬಳಸದೆ ನಡೆದ ಮದುವೆ ಮಾದರಿಯಾಯಿತು.

ಕುತ್ಪಾಡಿ ದಿ| ಚಪ್ಪರ ಗುರಿಕಾರರ ಪುತ್ರ ಸುಧಾಕರ ಮತ್ತು ಪಕ್ಷಿಕೆರೆ ಕಾಪಿಕಾಡು ದಿ| ಸೋಮಯ್ಯ ಅವರ ಪುತ್ರಿ ಹರಿಣಾಕ್ಷಿ ಅವರ ವಿವಾಹವೇ ಈ ಹೊಸ ಅಧ್ಯಾಯಕ್ಕೆ ಮುನ್ನುಡಿ ಬರೆಯಿತು. 

2018ರ ಅ.2ರೊಳಗೆ ತ್ಯಾಜ್ಯಮುಕ್ತ ಜಿಲ್ಲೆಯನ್ನಾಗಿಸಲು, ಸ್ವತ್ಛ ಉಡುಪಿ ಮಿಷನ್‌ ವರ್ಷದ ಕೌಂಟ್‌ಡೌನ್‌ ಆರಂಭಗೊಂಡಿದ್ದು, ಆ ನೆಲೆಯಲ್ಲಿ ಜಿ. ಪಂ. ಅಧ್ಯಕ್ಷ ದಿನಕರ ಬಾಬು ನೇತೃತ್ವದಲ್ಲಿ ಹಸಿರು ಶಿಷ್ಟಾಚಾರ ಪಾಲಿಸಿ ಹಾಗೂ ಆಚರಿಸಿ ಎನ್ನುವ ಸಂದೇಶದೊಂದಿಗೆ ನಡೆದ ವಿವಾಹ ಕಾರ್ಯಕ್ರಮಕ್ಕೆ ಸುಮಾರು 700 ಮಂದಿ ಸಾಕ್ಷಿಯಾದರು. 

ಪ್ಲಾಸ್ಟಿಕ್‌ ಮುಕ್ತ ಮದುವೆ
ಈ ವಿವಾಹ ಕಾರ್ಯಕ್ರಮದಲ್ಲಿ ಆಮಂತ್ರಣ ಪತ್ರಿಕೆಯಿಂದ ಊಟದ ವ್ಯವಸ್ಥೆಯವರೆಗೂ ಎಲ್ಲಿಯೂ ಪ್ಲಾಸ್ಟಿಕ್‌ ಬಳಕೆ ಕಂಡುಬರಲಿಲ್ಲ. ಅದಲ್ಲದೇ ಮದುವೆಯ ಅನಂತರ ಪರಿಸರಕ್ಕೆ ಹಾನಿಯಾಗುವ ಯಾವುದೇ ತ್ಯಾಜ್ಯ ಉತ್ಪತ್ತಿಯಾಗದಂತೆ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಲಾಗಿತ್ತು. ಕಲ್ಯಾಣ ಮಂಟಪವನ್ನು ಬಟ್ಟೆಯಿಂದ ತಯಾರಿಸಿದ ಹೂ ಮತ್ತು ನೈಸರ್ಗಿಕ ಹೂಗಳಿಂದಲೇ ಸಿಂಗರಿಸಲಾಗಿತ್ತು. ನೀರು ಕುಡಿಯಲು ಸ್ಟೀಲ್‌ ಲೋಟಗಳು ಮತ್ತು ಊಟಕ್ಕೆ ಪಿಂಗಾಣಿ ತಟ್ಟೆಗಳನ್ನು ಬಳಸಲಾಯಿತು.

ಈ ವಿವಾಹದಲ್ಲಿ ಪ್ಲಾಸ್ಟಿಕ್‌ ಬಳಕೆ ಮತ್ತು ತ್ಯಾಜ್ಯ ಸೃಷ್ಟಿಸುವ ವಸ್ತುಗಳ ಬಳಕೆ ಮಾಡುವುದರ ಕುರಿತು ಪರಿಶೀಲಿಸುವ ಉದ್ದೇಶದಿಂದ ಮದುಮಕ್ಕಳು ಆಗಮಿಸುವ ಮುನ್ನವೇ ಇಬ್ಬರು ಪಿಡಿಒಗಳು ಪರಿಶೀಲಿಸಿ, ಸಂಪೂರ್ಣ ವರದಿಯನ್ನು
 ಡಿಸಿಗೆ ಸಲ್ಲಿಸಿದರು. ವರದಿ ಪರಿಶೀಲಿಸಿದ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌ ಖುದ್ದಾಗಿ ವಿವಾಹ ಮಹೋತ್ಸವಕ್ಕೆ ಆಗಮಿಸಿ ನವ ದಂಪತಿಯನ್ನು ಅಭಿನಂದಿಸಿದರು. ನವಚೇತನ ಯುವಕ ಮಂಡಲ ಮತ್ತು ನವಚೇತನ ಯುವತಿ ಮಂಡಲ ಕಟ್ಟೆಗುಡ್ಡೆ ಸಂಘದ ಸದಸ್ಯ ಸುಧಾಕರ ಅವರ ವಿವಾಹವನ್ನು ಪ್ಲಾಸ್ಟಿಕ್‌ ರಹಿತವಾಗಿ ಮಾಡಿ, ಎಲ್ಲರಿಗೂ ಮಾದರಿಯಾಗುವುದಾಗಿ ಜಿ.ಪಂ. ಅಧ್ಯಕ್ಷ ದಿನಕರ ಬಾಬು ತಿಳಿಸಿದ್ದರು. ಅದರಂತೆ ವಿವಾಹ ನೆರವೇರಿದೆ. ಪ್ರತಿಯೊಬ್ಬರಿಗೂ ಮಾದರಿಯಾಗಲಿ ಎಂದರು.

ಜಿ.ಪಂ. ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್‌, ಉಡುಪಿ ತಾ.ಪಂ. ಎಡಿ ಹರಿಕೃಷ್ಣ ಶಿವತ್ತಾಯ, ಸ್ವತ್ಛ ಭಾರತ್‌ ಅಭಿಯಾನದ ಜಿಲ್ಲಾ ಸಮಾಲೋಚಕ ಸುಧೀರ್‌, ಪಿಡಿಒಗಳಾದ ರಮಾನಂದ ಪುರಾಣಿಕ್‌, ಸಿದ್ದೇಶ್‌ ಮದುವೆಗೆ ಸಾಕ್ಷಿಯಾದರು. 

ಅಭಿನಂದನಾ ಪತ್ರ : ಡಿಸಿ
ಈ ವಿವಾಹ ಕಾರ್ಯಕ್ರಮಕ್ಕೆ ಕ್ಯಾಟರಿಂಗ್‌ ವ್ಯವಸ್ಥೆ ಮಾಡಿದ ಅಂಬಾಗಿಲಿನ ಎಕ್ಸಲೆಂಟ್‌ ಕ್ಯಾಟರರ್‌ನ ದೀಕ್ಷಿತ್‌ ಶೆಟ್ಟಿ ಅವರನ್ನು ಅಭಿನಂದಿಸಿದ ಡಿಸಿ, ಮುಂದೆ ಎಲ್ಲ ವಿವಾಹಗಳಲ್ಲಿಯೂ ಇದೇ ರೀತಿ ಪ್ಲಾಸ್ಟಿಕ್‌ ರಹಿತ, ಪರಿಸರಕ್ಕೆ ಪೂರಕವಾದ ವಸ್ತುಗಳನ್ನು ಬಳಸಿ ಆಹಾರ ಸರಬರಾಜು ಮಾಡುವಂತೆ ತಿಳಿಸಿದರು. ಜಿಲ್ಲೆಯಲ್ಲಿ ಹಸಿರು ಶಿಷ್ಟಾಚಾರ ಪಾಲಿಸಿ, ಪ್ಲಾಸ್ಟಿಕ್‌ ಬಳಕೆ ಮಾಡದೇ ವಿವಾಹವಾಗುವ ದಂಪತಿಗೆ, ಸಭಾಭವನಗಳ ಮುಖ್ಯಸ್ಥರು, ಆಹಾರ ತಯಾರಿಕೆ/ಸರಬರಾಜು ಮಾಡುವವರಿಗೆ ಜಿಲ್ಲಾಡಳಿದ ವತಿಯಿಂದ ಅಭಿನಂದನಾ ಪತ್ರ ನೀಡಲಾಗುವುದು ಎಂದು ಡಿಸಿ ಹೇಳಿದರು.

ಟಾಪ್ ನ್ಯೂಸ್

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

CM Siddaramaiah slams BJP about Ganeshotsav riot

Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

ಶಸ್ತ್ರಾಸ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಕೇಂದ್ರ ಸಚಿವ ಅಮಿತ್ ಶಾ ಮನವಿ

Surrender Arms: ಶಸ್ತ್ರಾಸ್ತ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಅಮಿತ್ ಶಾ ಮನವಿ

Supreme Court slams Karnataka High Court judge for Pakistan statement

Karnataka HC: ಪಾಕಿಸ್ತಾನ ಹೇಳಿಕೆ ನೀಡಿದ ಹೈಕೋರ್ಟ್‌ ಜಡ್ಜ್‌ ಗೆ ಸುಪ್ರೀಂ ಕೋರ್ಟ್ ತರಾಟೆ

NS2

Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ

Hubli; ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Belve ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬುಲೆನ್ಸ್‌ ಬೇಕು

Belve ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬುಲೆನ್ಸ್‌ ಬೇಕು

ಕೊರಗ ಸಮುದಾಯದಿಂದ ಅಹೋರಾತ್ರಿ ಧರಣಿ

Mulki: ಕೊರಗ ಸಮುದಾಯದಿಂದ ಅಹೋರಾತ್ರಿ ಧರಣಿ

ಸಣ್ಣ-ಮಧ್ಯಮ ಕೈಗಾರಿಕೆಗೆ ಸಿಗಲಿ ಪ್ರೋತ್ಸಾಹ-ಸಂಸದ ಗೋವಿಂದ ಕಾರಜೋಳ

ಸಣ್ಣ-ಮಧ್ಯಮ ಕೈಗಾರಿಕೆಗೆ ಸಿಗಲಿ ಪ್ರೋತ್ಸಾಹ-ಸಂಸದ ಗೋವಿಂದ ಕಾರಜೋಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.