ನಾಡಹಬ್ಬಕ್ಕೆ ಅಣಿಯಾಗುತ್ತಿದೆ ಉಡುಪಿ


Team Udayavani, Sep 4, 2017, 8:30 AM IST

nada-habba.jpg

ಉಡುಪಿ: ಶ್ರೀಕೃಷ್ಣ ಮಠದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸೆ. 13 ಮತ್ತು 14ರಂದು ವಿಜೃಂಭಣೆಯಿಂದ ಜರಗಲಿದ್ದು, ಸಕಲ ಸಿದ್ಧತೆಗಳು ನಡೆಯುತ್ತಿವೆ.

ಆ. 14ರಂದು ನಡೆದ ಚಾಂದ್ರಮಾನ ಅಷ್ಟಮಿ ಶ್ರೀಕೃಷ್ಣ ಮಠದಲ್ಲಿ ನಡೆದಿದ್ದು, ಎಂದಿನಂತೆ ಸೌರಾಷ್ಟಮಿಯ ಸಂಭ್ರಮಕ್ಕೆ ಸಿದ್ಧತೆಯಾಗುತ್ತಿದೆ. ಶ್ರೀ ಪೇಜಾವರ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರ ಪಂಚಮ ಪರ್ಯಾಯದ ಎರಡನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿಯೂ ಇದಾಗಿದೆ. ಹೀಗಾಗಿ ಈ ಜನ್ಮಾಷ್ಟಮಿ ಮಹತ್ವದ್ದಾಗಿದೆ. 

ಸೆ. 13ರ ಮಧ್ಯರಾತ್ರಿ 12.34ಕ್ಕೆ ಪೇಜಾವರ ಸಹಿತ ಎಲ್ಲ ಸ್ವಾಮೀಜಿಯವರು ಶ್ರೀಕೃಷ್ಣನಿಗೆ ಅಘÂì ಪ್ರದಾನ ಮಾಡ ಲಿದ್ದು, ಸೆ. 14ರಂದು ಅಪರಾಹ್ನ 3 ಗಂಟೆಯಿಂದ ಶ್ರೀಕೃಷ್ಣನ ಮೃಣ್ಮಯ ಪ್ರತಿಮೆಯ ರಥೋತ್ಸವ, ವಿಟ್ಲಪಿಂಡಿ ಉತ್ಸವ (ಶ್ರೀಕೃಷ್ಣ ಲೀಲೋತ್ಸವ) ನಡೆಯಲಿದೆ. ಕೆಲವು ಬಾರಿ ಚಾತುರ್ಮಾಸ್ಯದ ಕಾರಣ ಇತರ ಸ್ವಾಮೀಜಿ ಯವ ರಿಗೆ ಕೃಷ್ಣಾಷ್ಟಮಿಗಾಗಿ ಉಡುಪಿಗೆ ಬರಲಾಗುತ್ತಿರಲಿಲ್ಲ. ಆದರೆ ಈ ಬಾರಿ ಜನ್ಮಾಷ್ಟಮಿ ಸಂದರ್ಭ ಚಾತುರ್ಮಾಸ್ಯ ಕಾಲ ಮುಗಿಯ ಲಿದ್ದು ಇತರ ಸ್ವಾಮೀಜಿಯವರೂ ಭಾಗವಹಿಸಲಿದ್ದಾರೆ. 

ಉಂಡೆ, ಲಡ್ಡು  ತಯಾರಿಕೆ…
ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಸಾಂಪ್ರದಾಯಿಕ ಲಡ್ಡು, ಉಂಡೆ ತಯಾರಿ ಸೆ. 13ರಂದು ನಡೆಯಲಿದೆ. ಮಠದಿಂದ ಬಿಸಿಯೂಟ ನೀಡುವ ಶಾಲೆಗಳಿಗೆ ನೀಡುವ ಲಡ್ಡು, ಉಂಡೆ ತಯಾರಿ ಎರಡು ದಿನ ಹಿಂದೆಯೇ ಪ್ರಾರಂಭವಾಗುತ್ತದೆ. ಸೆ. 14ರಂದು ಸಾರ್ವಜನಿಕರಿಗೆ ವಿಶೇಷ ಅನ್ನಸಂತರ್ಪಣೆ ಮಠದ ವತಿಯಿಂದ ನೀಡಲಾಗುತ್ತದೆ. ಬಿಸಿಯೂಟ ನೀಡುತ್ತಿರುವ 110 ಶಾಲೆಗಳ 24,000 ಮಕ್ಕಳಿಗೆ ಮುದ್ದುಕೃಷ್ಣ ವೇಷ ಸ್ಪರ್ಧೆಗಳನ್ನು ನಡೆಸಲಾಗುತ್ತಿದೆ. ಸ್ಪರ್ಧೆಯಲ್ಲಿ ವಿಜೇತ ಮಕ್ಕಳಿಗೆ ಶಾಲೆಯಲ್ಲೇ ಬಹುಮಾನ ನೀಡಲಾಗುತ್ತಿದೆ. 

ಉಡುಪಿಯಲ್ಲಿ ಸೌರಾಷ್ಟಮಿ
ಚಾಂದ್ರಮಾನ ಮತ್ತು ಸೌರಮಾನ ಎಂಬ ಎರಡು ತಿಂಗಳು ಹಿಂದಿನಿಂದಲೂ ಚಾಲ್ತಿಯಲ್ಲಿದೆ. ಚಾಂದ್ರಮಾನ ತಿಂಗಳು ಅಮಾವಾಸ್ಯೆ ಮರುದಿನದಿಂದ, ಸೌರಮಾನ ತಿಂಗಳು ಸಂಕ್ರಾಂತಿಯ ಮರುದಿನದಿಂದ ಪ್ರಾರಂಭವಾಗುತ್ತವೆ. ಚಾಂದ್ರಮಾನ ಕ್ರಮದಂತೆ ಕೃಷ್ಣಾಷ್ಟಮಿಯು ಆಗಸ್ಟ್‌ ತಿಂಗಳಲ್ಲಿ ಹಾಗೂ ಸೌರಮಾನದ ಅಷ್ಟಮಿ ಸೆಪ್ಟಂಬರ್‌ ತಿಂಗಳಲ್ಲಿ ಬರುತ್ತದೆ. ಕರಾವಳಿ ಕರ್ನಾಟಕದಲ್ಲಿ ಹಿಂದಿನಿಂದಲೂ ಸೌರಮಾನ ಅಷ್ಟಮಿಯನ್ನು ಆಚರಿಸಲಾಗುತ್ತಿದೆ.

ರಾಜಾಂಗಣದ ನವೀಕರಣ
ರಾಜಾಂಗಣದ ನವೀಕರಣಕ್ಕೆ ಕಾಲ ಕೂಡಿಬಂದಿದೆ. ಸುಮಾರು 3 ಕೋಟಿ ರೂ. ವೆಚ್ಚದಲ್ಲಿ ಸೆ. 4ರಿಂದ ರಾಜಾಂ ಗಣದ ಛಾವಣಿಯ ಹಳೆಯ ಶೀಟ್‌ ತೆಗೆದು ಮೊದಲ ಮಹಡಿ ನಿರ್ಮಾಣಕ್ಕೆ ಚಾಲನೆ ನೀಡಲಾಗುವುದು. ಈಗಿರುವ ತಳಭಾಗ, ಗ್ಯಾಲರಿ, ವೇದಿಕೆ ಅದೇ ರೀತಿ ಇರಲಿದೆ. ಬೆಂಗ ಳೂರಿನ ಕಂಪೆನಿಗೆ ಮಹಡಿ ನಿರ್ಮಾಣದ ಹೊಣೆಗಾರಿಕೆ ನೀಡಲಾಗಿದೆ. ನೂತನವಾಗಿ ನಿರ್ಮಾಣವಾಗುವ ಪ್ರಥಮ ಮಹಡಿಯನ್ನು ಸಾರ್ವಜನಿಕ ಅನ್ನಸಂತರ್ಪಣೆ ವ್ಯವಸ್ಥೆಗೆ ಪೂರಕವಾಗುವಂತೆ ರೂಪಿಸಲಾಗುವುದು. ಪೂರ್ಣ ಕೆಲಸಕ್ಕಾಗಿ ಎರಡು ತಿಂಗಳ ಕಾಲಾವಕಾಶ ಬೇಕಾಗಿದೆ. ನವೆಂಬರ್‌ ತಿಂಗಳಲ್ಲಿ ಧರ್ಮಸಂಸತ್‌ ನಡೆಯಲಿರುವುದರಿಂದ ತ್ವರಿತವಾಗಿ ಕೆಲಸ ಮುಗಿಯಬೇಕಾಗಿದೆ.

ಹೊಸ ವೇದಿಕೆಯಲ್ಲಿ ಕಲಾ ಪ್ರದರ್ಶನ
ವಿಟ್ಲಪಿಂಡಿಯಂದು ಅಪರಾಹ್ನ 3 ಗಂಟೆಯಿಂದ ಹುಲಿವೇಷ ಸ್ಪರ್ಧೆ, ಜನಪದ ಕಲೆಗಳ ಪ್ರದರ್ಶನ ರಾಜಾಂಗಣದಲ್ಲಿ ನಡೆಯುವುದಿಲ್ಲ. ರಾಜಾಂಗಣದ ಮೊದಲ ಮಹಡಿಯ ನಿರ್ಮಾಣದ ಕಾರ್ಯ ಚಾಲ್ತಿಯಲ್ಲಿರುವುದರಿಂದ ಸಾಂಸ್ಕೃತಿಕ ಕಾರ್ಯಗಳಿಗೆ ನೂತನ ವೇದಿಕೆ ಮಠದ ರಥಬೀದಿ ಅಥವಾ ಪಾರ್ಕಿಂಗ್‌ ವ್ಯಾಪ್ತಿಯಲ್ಲಿ ಸಿದ್ಧವಾಗಲಿದೆ. ಮುಂಬಯಿಯ ಜನಪದ ತಂಡಗಳೂ ವಿಟ್ಲಪಿಂಡಿ ಉತ್ಸವದಲ್ಲಿ  ಭಾಗವಹಿಸಲಿವೆ.

ಸಾರ್ವಜನಿಕರಿಗೆ ಸಾಕಷ್ಟು ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದ್ದು, ಸೆ. 2ರಂದು ಚಾಲನೆ ದೊರೆ ತಿದೆ. ಭಕ್ತಿ ಸಂಗೀತ, ಪ್ರಬಂಧ, ನೃತ್ಯ ಸ್ಪರ್ಧೆಗಳು ವಿವಿಧ ವಿಭಾಗ ಗಳಲ್ಲಿ, ಮಠದ ರಾಜಾಂಗಣದಲ್ಲಿ ನಡೆಯುತ್ತಿವೆ. 
ಸೆ. 14ರ ವರೆಗೂ ಸ್ಪರ್ಧೆಗಳು ನಡೆಯಲಿವೆ.

ಟಾಪ್ ನ್ಯೂಸ್

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

1-gttt

Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್‌ ಗಾಂಧಿ

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

16-flipkart

Flipkart Big Billion Day ಸೆ. 27 ರಿಂದ ಆರಂಭ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

ಸಂಸದ ಜಗದೀಶ್ ಶೆಟ್ಟರ್

Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ‌: ಶೆಟ್ಟರ್

15-ankola

Ankola: ಶಿರೂರು ಗುಡ್ಡ ಕುಸಿತ ಪ್ರಕರಣ; ಗೋವಾದಿಂದ ಯಂತ್ರ; ಇಂದಿನಿಂದ ಶೋಧ ಕಾರ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe: ಪೊಟ್ಟುಕೆರೆ ಅಭಿವೃದ್ಧಿಪಡಿಸಿದರೆ ಶಾಶ್ವತ ನೀರಿನ ಒರತೆ

Malpe: ಪೊಟ್ಟುಕೆರೆ ಅಭಿವೃದ್ಧಿಪಡಿಸಿದರೆ ಶಾಶ್ವತ ನೀರಿನ ಒರತೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

1-gttt

Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್‌ ಗಾಂಧಿ

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

16-flipkart

Flipkart Big Billion Day ಸೆ. 27 ರಿಂದ ಆರಂಭ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.