ಜಮ್ಮು ಕಾಶ್ಮೀರ ಎನ್ಕೌಂಟರ್: ಇಬ್ಬರು ಉಗ್ರರ ಹತ್ಯೆ
Team Udayavani, Sep 4, 2017, 11:41 AM IST
ಹೊಸದಿಲ್ಲಿ : ಜಮ್ಮು ಕಾಶ್ಮೀರದ ಸೋಪೋರ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಎನ್ಕೌಂಟರ್ ಸಾಗಿದ್ದು ಇಬ್ಬರು ಉಗ್ರರನ್ನು ಹತ್ಯೆಗೈಯಲಾಗಿದೆ.
ಆರಂಭಿಕ ಮಾಹಿ ತಿಗಳ ಪ್ರಕಾರ ಹತ ಉಗ್ರರು ಹಿಜ್ಬುಲ್ ಮುಜಾಹಿದೀನ್ ಉಗ್ರ ಸಂಘಟನೆಗೆ ಸೇರಿದವರಾಗಿದ್ದಾರೆ. ಇವರ ಕೈಯಲ್ಲಿದ್ದ ಎಕೆ 47 ರೈಫಲ್ಗಳನ್ನು ಭದ್ರತಾ ಪಡೆಗಳು ವಶಪಡಿಸಿಕೊಂಡಿವೆ. ಈ ಉಗ್ರರ ಗುರುತು ಇನ್ನೂ ದೃಢಪಟ್ಟಿಲ್ಲ.
ಸೋಪೋರ್ನಲ್ಲಿ ಉಗ್ರರು ಅಡಗಿಕೊಂಡಿದ್ದಾರೆ ಎಂಬ ಖಚಿತ ಗುಪ್ತಚರ ಮಾಹಿತಿಯನ್ನು ಪಡೆದ ಪ್ರಕಾರ ಭದ್ರತಾ ಸಿಬಂದಿಗಳು ಸ್ಥಳಕ್ಕೆ ಧಾವಿಸಿ ಇಡಿಯ ಪ್ರದೇಶವನ್ನು ಸುತ್ತು ವರಿದು ಶೋಧ ಕಾರ್ಯಾಚರಣೆ ಕೈಗೊಂಡವು.
ಭಾರತದ ಗಡಿಯೊಳಗೆ ಉಗ್ರರನ್ನು ನುಸುಳಿಸುವ ತನ್ನ ಯತ್ನದ ಅಂಗವಾಗಿ ಪಾಕ್ ಸೇನೆ ನಿನ್ನೆ ಭಾನುವಾರ ಜಮ್ಮು ಕಾಶ್ಮೀರದ ಕುಪ್ವಾರಾ ಜಿಲ್ಲೆಯ ಆಮ್ರೋದಿನ್, ಚತ್ಕಾಡಿ ಮತ್ತು ಶಾದಿಪುರ ಪ್ರದೇಶಗಳ ಮೇಲೆ ಅಪ್ರಚೋದಿತವಾಗಿ ಭಾರೀ ಗುಂಡಿನ ದಾಳಿ ನಡೆಸಿದ್ದವು.
ಇದೇ ರೀತಿ ಪೂಂಚ್ ಎಲ್ಓಸಿಯಲ್ಲಿನ ಮಾನ್ಕೋಟ್ ನಲ್ಲಿ ಪಾಕ್ ಸೇನೆ ಕದನ ವಿರಾಮ ಉಲ್ಲಂಘನೆ ಮಾಡಿದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.