ಸರ್ಕಾರದಿಂದ ಭರವಸೆ: ಆಶಾ ಮುಷ್ಕರ ಅಂತ್ಯ


Team Udayavani, Sep 9, 2017, 6:00 AM IST

170908kpn82.jpg

ಬೆಂಗಳೂರು: ರಾಜ್ಯ ಸರ್ಕಾರ ಮಾಸಿಕ ಮೂರೂವರೆ ಸಾವಿರ ರೂ. ಪ್ರೋತ್ಸಾಹಧನ ನೀಡುವುದಾಗಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ಆಶಾ ಕಾರ್ಯಕರ್ತೆಯರು ಎರಡು ದಿನಗಳ ಧರಣಿಯನ್ನು ಶುಕ್ರವಾರ ರಾತ್ರಿ ಕೈಬಿಟ್ಟರು.

ಔಷಧ ನಿಯಂತ್ರಣಾಲಯ ಇಲಾಖೆ ಕಚೇರಿಯಲ್ಲಿ ರಾಜ್ಯ ಆಶಾ ಕಾರ್ಯಕರ್ತೆಯರ ಸಂಘದ ಪದಾಧಿಕಾರಿಗಳೊಂದಿಗೆ ಆರೋಗ್ಯ ಸಚಿವ ರಮೇಶ್‌ಕುಮಾರ್‌ ಸತತ ಎರಡು ತಾಸು ಸಂಧಾನ ಸಭೆ ನಡೆಸಿದರು. ಸರ್ಕಾರ ಮೂರು ಸಾವಿರ ರೂ. ನೀಡುವುದಾಗಿ ಹೇಳಿದರೆ, ಕಾರ್ಯಕರ್ತೆಯರು ಆರು ಸಾವಿರ ರೂ.ಗಳಿಗೆ ಪಟ್ಟುಹಿಡಿದರು. ಅಂತಿಮವಾಗಿ ಸರ್ಕಾರ ಮೂರೂವರೆ ಸಾವಿರ ನೀಡುವುದಾಗಿ ಹೇಳಿತು. ಇದಕ್ಕೆ ಸಮ್ಮತಿಸಿದ ಕಾರ್ಯಕರ್ತೆಯರು ಮುಷ್ಕರ ಹಿಂಪಡೆದರು.

ಕಲ್ಯಾಣ ಮಂಟಪ,ನಿಲ್ದಾಣಗಳಲ್ಲಿ ಆಶ್ರಯ
ಈ ಹಿನ್ನೆಲೆಯಲ್ಲಿ ಎಲ್ಲ ಕಾರ್ಯಕರ್ತೆಯರು ತಮ್ಮ ಊರುಗಳತ್ತ ಮುಖಮಾಡಿದರು. ಆದರೆ, ರಾತ್ರಿ 9.30ಕ್ಕೆ ಮುಷ್ಕರ ಹಿಂಪಡೆಯುವ ನಿರ್ಧಾರ ಕೈಗೊಂಡಿದ್ದರಿಂದ ದೂರದಿಂದ ಬಂದಿದ್ದ ಅನೇಕರಿಗೆ ರಾತ್ರಿ ಊರಿಗೆ ತೆರಳಲು ಸಾಧ್ಯವಾಗಲಿಲ್ಲ. ಹಾಗಾಗಿ, ಕಾಯ್ದಿರಿಸಿದ್ದ  ಕಲ್ಯಾಣ ಮಂಟಪಗಳಲ್ಲಿ ಕಾರ್ಯಕರ್ತೆಯರು ಆಶ್ರಯ ಪಡೆದರು.
ಗಾಳಿಸಹಿತ ಮಳೆಯ ನಡುವೆಯೇ ಮಕ್ಕಳು-ಮರಿಗಳೊಂದಿಗೆ ಸಹಸ್ರಾರು ಆಶಾ ಕಾರ್ಯಕರ್ತೆಯರು ಸ್ವಾತಂತ್ರ್ಯ ಉದ್ಯಾನದಿಂದ ರೈಲು ನಿಲ್ದಾಣ, ಮೆಜೆಸ್ಟಿಕ್‌ಗಳಿಗೆ ತೆರಳಿದರು. ಆದರೆ, ಅಲ್ಲಿ ಸಾರಿಗೆ ವ್ಯವಸ್ಥೆ ಕೆಲವರಿಗೆ ಸಿಕ್ಕಿತು, ಇನ್ನು ಕೆಲವರು ಅದೇ ನಿಲ್ದಾಣದಲ್ಲಿ ಮಲಗಿದ್ದ ದೃಶ್ಯ ಕಂಡುಬಂದಿತು.

ಸಭೆಯಲ್ಲಿ ಕೇಂದ್ರ ಸರ್ಕಾರದ ಪ್ರೋತ್ಸಾಹಧನ ಹೊರತುಪಡಿಸಿ, ರಾಜ್ಯ ಸರ್ಕಾರ ಆರು ಸಾವಿರ ರೂ. ನೀಡಬೇಕು ಎಂದು ಆಶಾ ಕಾರ್ಯಕರ್ತೆಯರ ಸಂಘದ ಪದಾಧಿಕಾರಿಗಳು ಒತ್ತಾಯಿಸಿದರು. ಆದರೆ ಸಚಿವರು, ಮೂರು ಸಾವಿರ ರೂ. ನೀಡುವುದಾಗಿ ಹೇಳಿದರು. ಆದರೆ, ಪದಾಧಿಕಾರಿಗಳು ಬಿಗಿಪಟ್ಟುಹಿಡಿದರು. ಆರು ಸಾವಿರ ರೂ. ನೀಡುವುದಾಗಿ ಘೋಷಿಸುವವರೆಗೂ ಮುಷ್ಕರ ಹಿಂಪಡೆಯುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು. ಹಾಗಾಗಿ, ಮತ್ತೆ 500 ರೂ. ಹೆಚ್ಚಿಸುವ ಭರವಸೆ ಸರ್ಕಾರದಿಂದ ಬಂದಿತು.

ಸರ್ಕಾರದ ಭರವಸೆಗಳು
ಪ್ರಸ್ತುತ ರಾಜ್ಯ ಸರ್ಕಾರ ಈಗ ಸಾವಿರ ರೂ. ಪ್ರೋತ್ಸಾಹಧನ ನೀಡುತ್ತಿದೆ. ಇದನ್ನು ಮೂರು ಸಾವಿರ ರೂ.ಗಳಿಗೆ ಹೆಚ್ಚಿಸಲಾಗುವುದು. ಹಾಗೂ ಕೇಂದ್ರದಿಂದ ಆಯಾ ಚಟುವಟಿಕೆಗಳಿಗೆ ಅನುಗುಣವಾಗಿ ಪ್ರೋತ್ಸಾಹಧನ ಕೂಡ ಬರಲಿದೆ. ಜತೆಗೆ ಆಶಾ ಕಾರ್ಯಕರ್ತೆಯರಿಗೆ ಉಚಿತ ಬಸ್‌ ಪಾಸ್‌ ವಿತರಿಸಲಾಗುವುದು. ಸ್ವಸಹಾಯ ಸಂಘಗಳಿಂದ 2 ಲಕ್ಷ ರೂ. ವರೆಗೆ ಸ್ವ-ಉದ್ಯೋಗಕ್ಕೆ ಬಡ್ಡಿರಹಿತ ಸಾಲ ನೀಡಲಾಗುವುದು. ಇದನ್ನು ಕಂತುಗಳಲ್ಲಿ ಪಾವತಿಸಬೇಕು. ಆರು ಸಾವಿರ ಆಶಾ ಕಾರ್ಯಕರ್ತೆಯರಿಗೆ ನಿವೇಶನ ನೀಡಲಾಗುವುದು. ಅಪಘಾತ ಅಥವಾ ಕಾಯಿಲೆಯಿಂದ ಅಕಾಲಿಕ ಸಾವನ್ನಪ್ಪಿದ ಕಾರ್ಯಕರ್ತೆಯರಿಗೆ ತಲಾ 50 ಸಾವಿರ ರೂ. ನೀಡುವುದಾಗಿ ಸಚಿವರು ತಿಳಿಸಿದರು.

ಆಗ, ಈ ಬಗ್ಗೆ ಯೋಚಿಸಲು ಸಮಯಾವಕಾಶ ಕೇಳಿದ ಪದಾಧಿಕಾರಿಗಳು, ಕಾರ್ಯಕರ್ತೆಯರೊಂದಿಗೆ ಮತ್ತೂಂದು ಸುತ್ತಿನ ಮಾತುಕತೆ ನಡೆಸಿದರು. ಅಂತಿಮವಾಗಿ ಮುಷ್ಕರ ಹಿಂಪಡೆಯುವ ನಿರ್ಧಾರ ಪ್ರಕಟಿಸಿದರು. ಒಮ್ಮೆಲೇ ಸಹಸ್ರಾರು ಕಾರ್ಯಕರ್ತೆಯರು ನಿಲ್ದಾಣಗಳತ್ತ ಹೊರಟಿದ್ದರಿಂದ ಹಾಗೂ ಮಳೆ ಕೂಡ ಇದ್ದುದರಿಂದ ಸಂಚಾರದಟ್ಟಣೆ ಉಂಟಾಯಿತು.

ಮಳೆ ನಡುವೆಯೂ ಮುಷ್ಕರ
ಈ ಮಧ್ಯೆ ಎರಡನೇ ದಿನ ಸಂಘದ ಪದಾಧಿಕಾರಿಗಳು ನಿರ್ಧಾರ ಪ್ರಕಟಿಸುವವರೆಗೂ ಕಾರ್ಯಕರ್ತೆಯರು ಜಾಗಬಿಟ್ಟು ಕದಲಲಿಲ್ಲ. ಬೆಳಿಗ್ಗೆ ಹತ್ತಿರದ ಚೌಲಿó ಮತ್ತು ಸುಲಭ ಶೌಚಾಲಯಗಳಲ್ಲಿ ಬೆಳಗಿನ ಕಾರ್ಯಗಳನ್ನು ಪೂರೈಸಿ ಮತ್ತೆ ಸ್ವಾತಂತ್ರ್ಯ ಉದ್ಯಾನಕ್ಕೆ ಬಂದು ಧರಣಿಯಲ್ಲಿ ಪಾಲ್ಗೊಂಡರು. ಮಳೆ-ಗಾಳಿ ನಡುವೆ ರಾತ್ರಿಯಿಡೀ ಫ‌ುಟ್‌ಪಾತ್‌ಗಳಲ್ಲಿ ಕಳೆದರೂ, ಕರಗದ ಸರ್ಕಾರದ ಧೋರಣೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

“ಸರ್ಕಾರದ ಆರೋಗ್ಯ ಯೋಜನೆಗಳ ಬಹುತೇಕ ಯಶಸ್ಸು ನಮ್ಮ ಶ್ರಮವನ್ನು ಅವಲಂಬಿಸಿದೆ. ಆದೆರ, ನಮ್ಮ ಬಗ್ಗೆ ಸರ್ಕಾರಕ್ಕೆ ಕರುಣೆಯೇ ಇಲ್ಲ. ಮಕ್ಕಳು-ಮರಿಗಳನ್ನು ಕಟ್ಟಿಕೊಂಡು ಸತತ ಎರಡು ದಿನ ಇಲ್ಲಿ ಬಿದ್ದಿದ್ದೇವೆ. ನೂರಾರು ಕಾರ್ಯಕರ್ತೆಯರು ಅಸ್ವಸ್ಥಗೊಂಡಿದ್ದಾರೆ. ಚಿಕಿತ್ಸೆ ತೆಗೆದುಕೊಂಡು ಮತ್ತೆ ಧರಣಿಯಲ್ಲಿ ಕುಳಿತಿದ್ದಾರೆ’ ಎಂದು ಮಂಡ್ಯದ ಆಶಾ ಕಾರ್ಯಕರ್ತೆ ಲಕ್ಷ್ಮೀ ಆಕ್ರೋಶ ವ್ಯಕ್ತಪಡಿಸಿದರು.

ಸಭೆಯಲ್ಲಿ ಪದಾಧಿಕಾರಿಗಳಾದ ಸೋಮಶೇಖರ್‌, ನಾಗಲಕ್ಷ್ಮಿ, ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್‌ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

ಕಾಳಿಂಗ ನಾವಡ ಪ್ರಶಸ್ತಿಗೆ ಕೋಟ ಶಿವಾನಂದ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kota-shivanand

ಕಾಳಿಂಗ ನಾವಡ ಪ್ರಶಸ್ತಿಗೆ ಕೋಟ ಶಿವಾನಂದ ಆಯ್ಕೆ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

BYV

Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ

COngress-Meet

Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

Suside-Boy

Health Problem: ಮಲಗಿದ್ದ ವೇಳೆ ಮೃತಪಟ್ಟ ವ್ಯಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.