ಗೌರಿ ಹಂತಕರ ಬಂಧನಕ್ಕೆ ಆಗ್ರಹ


Team Udayavani, Sep 9, 2017, 12:26 PM IST

hub5.jpg

ಕುಂದಗೋಳ: ಪತ್ರಕರ್ತೆ ಗೌರಿ ಲಂಕೇಶ ಹತ್ಯೆಕೋರರನ್ನು ಕೂಡಲೇ ಬಂಧಿಸಿ ಶಿಕ್ಷಿಸಬೇಕೆಂದು ಆಗ್ರಹಿಸಿ ತಾಲೂಕು ಕಲಾವಿದರ ಸಂಘ, ಕಸಾಪ ಮತ್ತು ಶಸಾಪ ಪ್ರಗತಿಪರ ಹೋರಾಟಗಾರರು ತಹಶೀಲ್ದಾರ ಮೂಲಕ ರಾಜ್ಯಪಾಲರಿಗೆ ಶುಕ್ರವಾರ ಮನವಿ ಸಲ್ಲಿಸಿದರು. 

ಈ ವೇಳೆ ಕಸಾಪ ತಾಲೂಕು ಗೌರವಾಧ್ಯಕ್ಷ ಎ.ಬಿ. ಉಪ್ಪಿನ ಮತ್ತು ಕಲಾವಿದ ಎಸ್‌.ಎಸ್‌. ಹಿರೇಮಠ ಮಾತನಾಡಿ, ದೇಶದಲ್ಲಿ ಭ್ರಷ್ಟರನ್ನು ಬಯಲಿಗೆಳೆಯುವವರೆ ಪತ್ರಕರ್ತರು. ಅಲ್ಲದೇ ಸಮಾಜಮುಖೀ ಅನೇಕ ಚಿಂತನೆಗಳನ್ನು ಜನರಿಗೆ ತಲುಪಿಸುವ  ಹೊಣೆಗಾರಿಕೆ ಹೊತ್ತ ಇಂತಹ ಪತ್ರಕರ್ತರಿಗೆ ಬೆದರಿಕೆ, ಹತ್ಯೆ ನಡೆಯುತ್ತಿರುವುದು ಸಾಮಾನ್ಯವಾಗುತ್ತಿದೆ.

ರಾಜ್ಯ ಸರ್ಕಾರ ಪತ್ರಕರ್ತರಿಗೆ ಭದ್ರತೆ ನೀಡಬೇಕು ಎಂದು ಆಗ್ರಹಿಸಿದರು. ರುದ್ರಸ್ವಾಮಿ ನಾವಳ್ಳಿ ಮಾತನಾಡಿದರು. ವೀರೇಶ ಬಡಿಗೇರಿ, ಈಶ್ವರ ಅರಳಿ, ಬಿ.ಎಲ್‌. ಪಾಟೀಲ, ರವಿ ಶಿರಸಂಗಿ, ಎಂ.ಎಂ. ಘೋಡಕೆ, ರುದ್ರಸ್ವಾಮಿ ನಾವಳ್ಳಿ, ಎಂ.ಕೆ. ಹಿರೇಗೌಡ್ರ. ಎಸ್‌.ಎನ್‌. ಅರಳಿಕಟ್ಟಿ, ಚಂದ್ರಶೇಖರ ಪಾಟೀಲ, ಮಲ್ಲಪ್ಪ ಮುಳಗುಂದ ಇದ್ದರು. 

ಧಾರವಾಡ: ಗೌರಿ ಲಂಕೇಶ ಹಂತಕರನ್ನು ಆದಷ್ಟು ಬೇಗ ಬಂಧಿಸುವಂತೆ ಆಗ್ರಹಿಸಿ ಉತ್ತರ ಕರ್ನಾಟಕ ಛಲವಾದಿ ಮಹಾಸಭಾ ವತಿಯಿಂದ ಜಿಲ್ಲಾಧಿಕಾರಿ ಮೂಲಕ ಸಿಎಂಗೆ ಮನವಿ ಸಲ್ಲಿಸಲಾಯಿತು. ನಗರದ ಡಿಸಿ ಕಚೇರಿಗೆ ಶುಕ್ರವಾರ ಆಗಮಿಸಿದ ಮಹಾಸಭಾ ಕಾರ್ಯಕರ್ತರು, ಗೌರಿ ಲಂಕೇಶ ಅವರನ್ನು ಹತ್ಯೆಗೈಯ್ಯುವ ಮೂಲಕ ಪತ್ರಿಕಾ ಅಭಿವ್ಯಕ್ತಿ ಸ್ವಾತಂತ್ರದ ಕಗ್ಗೊಲೆ ಮಾಡಲಾಗುತ್ತಿದೆ.

ದುಷ್ಕರ್ಮಿಗಳು ರಾಜಾರೋಷವಾಗಿ ಪತ್ರಕರ್ತರನ್ನು, ಕ್ರಾಂತಿಕಾರಿ ಸಾಹಿತಿಗಳನ್ನು, ಪ್ರಗತಿಪರ ಚಿಂತಕರನ್ನು ಕೊಲ್ಲಲು ಮುಂದಾಗಿದ್ದಾರೆ. ಗೌರಿ ಲಂಕೇಶರ ಹತ್ಯೆ ಕೇವಲ ಹತ್ಯೆಯಲ್ಲ. ಇದು ಪ್ರಜಾಪ್ರಭುತ್ವದ ಕಗ್ಗೊಲೆ ಆಗಿದೆ ಎಂದು ದೂರಿದರು. ಇತ್ತೀಚೆಗೆ ರಾಜ್ಯದಲ್ಲಿ ಬುದ್ಧಿಜೀವಿಗಳ ಹತ್ಯೆ ನಡೆಯುತ್ತಿರುವುದು ನಾಗರಿಕ ಸಮಾಜ ತಲೆ ತಗ್ಗಿಸುವಂತೆ ಮಾಡಿದೆ.

ಹೀಗಾಗಿ ರಾಜ್ಯ ಸರ್ಕಾರ ಗೌರಿ ಲಂಕೇಶ ಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು. ಅಲ್ಲದೆ ಹಂತಕರನ್ನು ಕೂಡಲೇ ಬಂಧಿಸಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು. ಚಂದ್ರಪ್ಪ ಹಡಗಲಿ, ಶರಣಪ್ಪ ಹೊಸಮನಿ, ಸುರೇಶ ನವಲೂರ, ನಾಗನಗೌಡ ಪಾಟೀಲ, ಸಂತೋಷ ಹಾದಿಮನಿ, ನಿಂಗಪ್ಪ ದಿವಟಗಿ, ರಾಜಪ್ಪ ಕಾಳೆ, ರಾಜು ನರೇಗಲ್‌ ಇತರರಿದ್ದರು.  

ಟಾಪ್ ನ್ಯೂಸ್

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

1-darshan

Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್

Air Force Chief: ವಾಯುಪಡೆ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

Air Force Chief: ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

crime (2)

Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!

1-muni

BJP MLA ಮುನಿರತ್ನಗೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ

Ayodhya: 8 ಕಾಲುಳ್ಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

Ayodhya: 8 ಕಾಲುಗಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

Vijayapura: ತಿರುಪತಿ ಲಡ್ಡು ಪಾವಿತ್ರ‍್ಯತೆ ಹಾಳು ಮಾಡಿದವರನ್ನು ಗಲ್ಲಿಗೇರಿಸಬೇಕು: ಯತ್ನಾಳ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ

Hubli; ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ

ಅಪರಾಧ ರಹಿತ ಸಮಾಜ ನಿರ್ಮಾಣಕ್ಕೆ ಮುಂದಾಗಿ-ನ್ಯಾ| ಸಂತೋಷ ಹೆಗ್ಡೆ

ಅಪರಾಧ ರಹಿತ ಸಮಾಜ ನಿರ್ಮಾಣಕ್ಕೆ ಮುಂದಾಗಿ-ನ್ಯಾ| ಸಂತೋಷ ಹೆಗ್ಡೆ

Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಬೈರಪ್ಪ

Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಭೈರಪ್ಪ

basavaraj

Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

1-darshan

Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್

ಕಳಸಾ ನಾಲಾದಲ್ಲಿ ರಾಜಕೀಯ ಕೊಳಕು: ಸರ್ವ ಪಕ್ಷ ನಿಯೋಗ ಒಯ್ಯುವ ಚಕಾರವೇ ಇಲ್ಲ!

ಕಳಸಾ ನಾಲಾದಲ್ಲಿ ರಾಜಕೀಯ ಕೊಳಕು: ಸರ್ವ ಪಕ್ಷ ನಿಯೋಗ ಒಯ್ಯುವ ಚಕಾರವೇ ಇಲ್ಲ!

Air Force Chief: ವಾಯುಪಡೆ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

Air Force Chief: ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

crime (2)

Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.