ಸಮಾಜದ ಏಳ್ಗೆ-ಬಡವರ ಕಲ್ಯಾಣದಲ್ಲಿ ನೆಮ್ಮದಿ ಕಾಣಲು ಸಲಹೆ


Team Udayavani, Sep 11, 2017, 2:54 PM IST

vij-2.jpg

ಹೂವಿನಹಿಪ್ಪರಗಿ: ಸಮಾಜದ ಏಳ್ಗೆಗಾಗಿ ಹಾಗೂ ಬಡವರ ಕಲ್ಯಾಣವೇ ನಿಜವಾದ ಸಂಪತ್ತು. ತ್ಯಾಗದಲ್ಲಿ ನಿಜವಾದ ಸುಖವಿದೆ ಎಂದು ಕುದರಿಸಾಲವಾಡಗಿ ಮಲೈಮಹದೇಶ್ವರ ಮಠದ ಶಿವಬಸವ ಸ್ವಾಮೀಜಿ ಅಭಿಪ್ರಾಯಪಟ್ಟರು.

ರವಿವಾರ ಪಟ್ಟಣದ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಸಮಾಜ ಸೇವಕ ಆನಂದ ದೊಡ್ಡಮನಿ ಫೌಂಡೇಶನ್‌ ವತಿಯಿಂದ ಸ್ಥಾಪಿಸಲಾದ ಉಚಿತ ಇ-ಸೇವಾ ಕೇಂದ್ರದ ಉದ್ಘಾಟನೆ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ಸಮಾಜಸೇವೆಯಿಂದ ಮಾತ್ರವೇ ಉಳ್ಳವರ ನಿಜವಾದ ಸಂಪತ್ತು ಸದುಪಯೋಗವಾಗುತ್ತದೆ. ಇಂದಿನ ರಾಜಕಾರಣಿಗಳು ಒಮ್ಮೆ ಮತ ಕೇಳಿ ನಂತರ ಮುಂದಿನ ಚುನಾವಣೆ ಸಂದರ್ಭದಲ್ಲಿಯೇ ಭೇಟಿಯಾಗುವ ಪರರಪಾಟ ಹೊಂದಿದ್ದಾರೆ. ಈ ದಿನಗಳಲ್ಲಿ ಜಾತ್ಯತೀತವಾಗಿ, ಪರಾತೀತವಾಗಿ ಸರ್ಕಾರದ ಯೋಜನೆಗಳನ್ನು ಬಡವರ ಮನೆ
ಬಾಗಿಲಿಗೆ ತಲುಪಿಸುತ್ತಿರುವ ಫೌಂಡೇಶನ್‌ ಮೊದಲು ಕೆಲಸ ಮಾಡಿ ನಂತರ ಜನರ ಹತ್ತಿರ ತೆರಳುವ ಇದರ
ಸೇವೆಯನ್ನು ಸದ್ಬಳಕೆ ಮಾಡಿಕೊಳ್ಳಿರಿ ಎಂದರು.

ಫೌಂಡೇಶನ್‌ ರೂವಾರಿ ಆನಂದಗೌಡ ದೊಡ್ಡಮನಿ ಮಾತನಾಡಿ, ಭಾರತ ದೇಶ ಹಳ್ಳಿಗಳಿಂದ ಕೂಡಿದ ದೇಶದಲ್ಲಿ ಗ್ರಾಮೀಣ ಭಾಗದ ಜನರಿಗೆ ಗಣಕೀಕೃತ ವ್ಯವಸ್ಥೆಯನ್ನು ನಿಜವಾದ ಬಡವರಿಗೆ ತಲುಪಿಸುವುದೇ ನಮ್ಮ ಫೌಂಡೇಶನ್‌
ಉದ್ದೇಶವಾಗಿದೆ. ಭಗವಂತ ನೀಡಿದ ಅಪಾರ ಸಂಪತ್ತನ್ನು ಜನಸೇವೆ ಮೂಲಕ ಕೆಲಸ ಮಾಡಲು ನನಗೊಂದು ಅವಕಾಶ ಕೊಡಿರಿ.

ಮುಂದಿನ ದಿನಗಳಲ್ಲಿ ಸರ್ಕಾರಿ ಸೇವೆಗಳಾದ ವಿಧವಾ ವೇತನ, ಸ್ಕಾಲರಶಿಫ್‌ ಸೇರಿದಂತೆ ಅನೇಕ ಯೋಜನೆಗಳ ಕುರಿತಾಗಿ ನಮ್ಮ ಸಿಬ್ಬಂದಿಯವರು ನಿಮ್ಮ ಮನೆಗಳಿಗೆ ಬಂದು ಸಹಾಯ ನೀಡುತ್ತಾರೆ.

ಈ ಭಾಗದ ಪ್ರತಿ ಗ್ರಾಮದಲ್ಲೂ ಘಟಕಗಳನ್ನು ತೆರೆದು ಸದಸ್ಯತ್ವ ಪಡೆದುಕೊಳ್ಳಲಾಗುವುದು. ಸ್ವಾವಲಂಬಿ ಹಾಗೂ ಸ್ವಾಭಿಮಾನದ ಬದುಕು ನಮ್ಮ ಹಳ್ಳಿಗರದ್ದಾಗಬೇಕು ಎನ್ನುವ ಉದ್ದೇಶದಿಂದ ಸಮಾಜ ಸೇವೆಗೆ ಇಳಿದಿರುವೆ ಎಂದರು.

ಶ್ರೀಶೈಲ ಸಜ್ಜನ ಮಾತನಾಡಿ, ಮುಂದಿನ ತಿಂಗಳಿನಿಂದ ಇ-ಸೇವೆ ಕಾರ್ಯಕ್ರಮವನ್ನು ಸಂಪೂರ್ಣವಾಗಿ ಕ್ಷೇತ್ರದ
32 ಗ್ರಾಪಂಗಳಲ್ಲಿ ಸ್ಥಾಪಿಸಿ, ಪ್ರತಿ ಕುಟುಂಬಕ್ಕೆ ಕಾಗದ ಪತ್ರಗಳನ್ನು ಜೋಪಾನವಾಗಿಟ್ಟುಕೊಳ್ಳಲು ಫೈಲ್‌
ನೀಡಲಾಗುವುದು ಎಂದರು. ಸಾಹೇಬಗೌಡ ಬಿರಾದಾರ ಫೌಂಡೇಶನ್‌ ಕಾರ್ಯಗಳ ಕುರಿತಾಗಿ ತಿಳಿಸಿದರು.

ಸಂಗನಗೌಡ ಬಿರಾದಾರ, ತಾಪಂ ಮಾಜಿ ಸದಸ್ಯ ರಂಜಾನ್‌ ಮುಜಾವರ, ಗ್ರಾಪಂ ಸದಸ್ಯರಾದ ಹನುಮಂತ್ರಾಯ ಗುಣಕಿ, ಮಲ್ಲಣ್ಣ ಲಚ್ಯಾಣ, ರಾಮಣ್ಣ ಹೊರಗಿನಮನಿ, ಮಲ್ಲನಗೌಡ ಪಾಟೀಲ, ಮಂಜುನಾಥ ಶಿವಾನಂದ ಗೊಳಸಂಗಿ, ರಾಮನಗೌಡ ಬಾಗೇವಾಡಿ, ಸಂಗಮೇಶ ಕೋಲಕಾರ, ಮಂಜು ತುಂಬಗಿ, ಶಂಕ್ರು ಶಂಕ್ರಪ್ಪಗೋಳ ಸೇರಿದಂತೆ
ಅನೇಕರಿದ್ದರು. ಮಹಾಂತೇಶ ನಾಡಗೌಡ ಸ್ವಾಗತಿಸಿದರು. ಅಮರಯ್ಯಸ್ವಾಮಿ ಜಾಲಿಬೆಂಚಿ ನಿರೂಪಿಸಿದರು.

ಪಾದಯಾತ್ರೆ: ತಾಳೀಕೋಟೆ ಕ್ರಾಸ್‌ನಿಂದ ಆನಂದ ಫೌಂಡೇಶನ್‌ನ ನೂರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಪಾದಯಾತ್ರೆ ಮೂಲಕ ಪರಮಾನಂದ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ ನಂತರ ಸಿಂಡಿಕೇಟ್‌ ಬ್ಯಾಂಕ್‌ ಹತ್ತಿರ ತೆರೆದ ಇ-ಸೇವಾ ಕೇಂದ್ರವನ್ನು ಉದ್ಘಾಟಿಸಲಾಯಿತು.

ಟಾಪ್ ನ್ಯೂಸ್

HDK (3)

MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

1-satyendrar

ED ಯಿಂದ ಬಂಧನಕ್ಕೊಳಗಾಗಿದ್ದ ಆಪ್ ನಾಯಕ ಸತ್ಯೇಂದ್ರ ಜೈನ್‌ ಗೆ ಜಾಮೀನು

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

sanjay-raut

Maharashtra; ಕೈ ನಾಯಕರಿಗೆ ಸಾಮರ್ಥ್ಯವಿಲ್ಲ..: ಸೀಟು ಹಂಚಿಕೆ ಕುರಿತು ರಾವತ್ ಅಸಮಾಧಾನ

UP: ಟೊಮ್ಯಾಟೋ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೋ ಕಾದು ಕೂತ ಪೊಲೀಸರು

UP: ಟೊಮ್ಯಾಟೊ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೊ ಕಾದು ಕೂತ ಪೊಲೀಸರು

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Vijayapura: 2-year-old child passed away after falling into Raj canal

Vijayapura: ರಾಜಕಾಲುವೆಗೆ ಬಿದ್ದು 2 ವರ್ಷದ ಮಗು ಸಾವು

Vijayapura: ವಕ್ಫ್ ಕಾಯ್ದೆ ರದ್ದತಿಗೆ ಆಗ್ರಹಿಸಿ ಯತ್ನಾಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

Vijayapura: ವಕ್ಫ್ ಕಾಯ್ದೆ ರದ್ದತಿಗೆ ಆಗ್ರಹಿಸಿ ಯತ್ನಾಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

Basangouda Patil Yatnal: ಫಸ್ಟ್‌ ಲೈನ್‌ ನಾಯಕರ ಆಸ್ತಿ ಬಗ್ಗೆ ತನಿಖೆ ಆಗಲಿ

Basangouda Patil Yatnal: ಫಸ್ಟ್‌ ಲೈನ್‌ ನಾಯಕರ ಆಸ್ತಿ ಬಗ್ಗೆ ತನಿಖೆ ಆಗಲಿ

I don’t know about Kharge returned plot : Minister MB Patil

Vijayapura: ಖರ್ಗೆ ಕುಟುಂಬ ನಿವೇಶನ ವಾಪಸ್ ಕೊಟ್ಟಿದ್ದು ಗೊತ್ತಿಲ್ಲ: ಸಚಿವ ಎಂ.ಬಿ.ಪಾಟೀಲ್

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

ಟಿಕೆಟ್‌ ಕೊಡಿಸದೆ ವಂಚನೆ: ಸಚಿವ ಜೋಶಿ ಸೋದರ, ಸೋದರಿ, ಅಳಿಯನ ವಿರುದ್ಧ ಕೇಸ್‌

ಟಿಕೆಟ್‌ ಕೊಡಿಸದೆ ವಂಚನೆ: ಸಚಿವ ಜೋಶಿ ಸೋದರ, ಸೋದರಿ, ಅಳಿಯನ ವಿರುದ್ಧ ಕೇಸ್‌

HDK (3)

MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

1-satyendrar

ED ಯಿಂದ ಬಂಧನಕ್ಕೊಳಗಾಗಿದ್ದ ಆಪ್ ನಾಯಕ ಸತ್ಯೇಂದ್ರ ಜೈನ್‌ ಗೆ ಜಾಮೀನು

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.