ಕರೆಂಟ್ ಕಳ್ಳರಿಗೆ ಈ ಅಧಿಕಾರಿ ಶಾಕ್
Team Udayavani, Sep 13, 2017, 8:05 AM IST
ಲಕ್ನೊ: ದೇಶದಲ್ಲಿ ವಿದ್ಯುತ್ ಕಳವಿನಿಂದ ಉಂಟಾಗುತ್ತಿರುವ ನಷ್ಟವೆಷ್ಟು? ಸುಮಾರು 10 ಸಾವಿರ ಕೋಟಿ ರೂ.? ಉತ್ತರ ಪ್ರದೇಶದ ಮಹಿಳಾ ಐಎಎಸ್ ಅಧಿಕಾರಿ ರಿತು ಮಾಹೇಶ್ವರಿ ಪ್ರಕಾರ ಪ್ರತಿ ವರ್ಷ ದೇಶದಲ್ಲಿ ವಿದ್ಯುತ್ ಕಳವಿನಿಂದ ಉಂಟಾಗುವ ನಷ್ಟ 60 ಸಾವಿರ ಕೋಟಿ ರೂ. ಅದನ್ನು ತಡೆಯಲು ಅವರು ಈಗ ಹೋರಾಟವನ್ನೇ ಆರಂಭಿಸಿದ್ದಾರೆ. ಕಾನ್ಪುರ ವಿದ್ಯುತ್ ಸರಬರಾಜು ಕಂಪನಿಯ ಮುಖ್ಯಾಧಿಕಾರಿಯಾಗಿ 2011ರಲ್ಲಿ ನೇಮಕಗೊಂಡ ಅವರು ಗ್ರಾಹಕರ ಮತ್ತು ಕೈಗಾರಿಕಾ ಘಟಕಗಳಿಗೆ ಮೀಟರ್ ಅಳವಡಿಸಿದ್ದರು. ವಿದ್ಯುತ್ ಸೋರಿಕೆ ಪತ್ತೆ ಹಚ್ಚುತ್ತಿದ್ದಂತೆ ಅವರನ್ನು ಅಲ್ಲಿಂದ ವರ್ಗಾಯಿಸಲಾಯಿತು. ಈ ಸಂದರ್ಭದಲ್ಲಿ ಅವರು ಉತ್ತರ ಪ್ರದೇಶದಲ್ಲಿ ಮನೆ ಮಾತಾಗಿದ್ದರು.
ಆದರೂ ಅವರು ಹೋರಾಟ ಕೈಬಿಡಲಿಲ್ಲ. ಇದೀಗ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಉದಯ್ ಯೋಜನೆಯಲ್ಲಿ ಪ್ರಮುಖವಾಗಿ ಭಾಗಿಯಾಗಿದ್ದಾರೆ. ವಿವಿಧ ರಾಜ್ಯಗಳ ವಿದ್ಯುತ್ ಸುಧಾರಣಾ ಕಂಪನಿಗಳು ಹೊಂದುತ್ತಿರುವ ನಷ್ಟ ಮತ್ತು ಅವುಗಳಿಂದ ಪಾರು ಮಾಡುವ ಬಗ್ಗೆ ಅವರು ಈಗ ಪ್ರಧಾನ ಪಾತ್ರ ವಹಿಸಲಿದ್ದಾರೆ. ಈ ಯೋಜನೆ ಜಾರಿಯಾದ ಬಳಿಕ ಶೇ.22ರಷ್ಟು ವಿದ್ಯುತ್ ಕಳವನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ಅವರು ಹೇಳಿದ್ದಾರೆ. ಕಳೆದ ವರ್ಷ 1,60,000 ಇದ್ದ ಮೀಟರ್ಗಳನ್ನು 5 ಲಕ್ಷಕ್ಕೆ ಹೆಚ್ಚಿಸಲಾಗಿದೆ ಎಂದಿದ್ದಾರೆ. ಇಂಥ ಕಠಿಣ ಕ್ರಮದಿಂದ ಹಾಲಿ ವರ್ಷ ವಿದ್ಯುತ್ ಕಳವಿನ ಪ್ರಮಾಣದಲ್ಲಿ ತಗ್ಗಲಿದೆ ಎಂಬ ವಿಶ್ವಾಸ ಅವರದ್ದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Quad Summit; ನಾವು ಯಾರ ವಿರುದ್ದವೂ ಅಲ್ಲ…: ಕ್ವಾಡ್ ಸಭೆಯಲ್ಲಿ ಪ್ರಧಾನಿ ಮೋದಿ
US Tour; ಭಾರತೀಯ ಸಮುದಾಯವು ಸಕಾರಾತ್ಮಕ ಪರಿಣಾಮ ಬೀರುತ್ತಿದೆ: ಅಮೇರಿಕಾದಲ್ಲಿ ಪ್ರಧಾನಿ ಮೋದಿ
Tirupati; ಶೀಘ್ರ ಕಲಬೆರಕೆ ಪತ್ತೆ ಯಂತ್ರ ಅಳವಡಿಸಲು ನಿರ್ಧಾರ
J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ
Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Quad Summit; ನಾವು ಯಾರ ವಿರುದ್ದವೂ ಅಲ್ಲ…: ಕ್ವಾಡ್ ಸಭೆಯಲ್ಲಿ ಪ್ರಧಾನಿ ಮೋದಿ
Koppala; ತುಂಗಭದ್ರಾ ಜಲಾಶಯಕ್ಕಿಂದು ಬಾಗಿನ ಅರ್ಪಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ
US Tour; ಭಾರತೀಯ ಸಮುದಾಯವು ಸಕಾರಾತ್ಮಕ ಪರಿಣಾಮ ಬೀರುತ್ತಿದೆ: ಅಮೇರಿಕಾದಲ್ಲಿ ಪ್ರಧಾನಿ ಮೋದಿ
Nervous Disease: ಕರಾವಳಿಯಲ್ಲೂ ಬ್ರೈನ್ ಹೆಲ್ತ್ ಕ್ಲಿನಿಕ್ ಕಾರ್ಯಾರಂಭ
Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.