ವಿಜ್ಞಾನ-ತಂತ್ರಜ್ಞಾನದಿಂದ ದೇಶದ ಅಭಿವೃದ್ಧಿ
Team Udayavani, Sep 13, 2017, 11:56 AM IST
ಮೈಸೂರು: ವಿಜ್ಞಾನ ಮತ್ತು ತಂತ್ರಜ್ಞಾನದ ನಡುವೆ ಅವಿನಾಭಾವ ಸಂಬಂಧವಿದ್ದು, ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದ ಪ್ರಗತಿಯಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ವಿಕ್ರಮ್ ಸಾರಾಬಾಯ್ ಬಾಹ್ಯಾಕಾಶ ಕೇಂದ್ರದ ಮಾಜಿ ಅಧ್ಯಕ್ಷ ಡಾ.ಬಿ.ಎಸ್.ಸುರೇಶ್ ಹೇಳಿದರು.
ನಗರದ ಕೌಟಿಲ್ಯ ವಿದ್ಯಾಲಯದಲ್ಲಿ ನೀತಿ ಆಯೋಗದ ಅಟಲ್ ಇನ್ನೋವೇಷನ್ ಮಿಷನ್ ಅಡಿಯಲ್ಲಿ ಆರಂಭಿಸಲಾಗಿರುವ ಅಟಲ್ ಟಿಂಕರಿಂಗ್ ಲ್ಯಾಬ್ ಉದ್ಘಾಟಿಸಿ ಮಾತನಾಡಿದರು. ಅಮೆರಿಕಾ ಸೇರಿದಂತೆ ವಿಶ್ವದ ಹಲವು ರಾಷ್ಟ್ರಗಳು ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಪ್ರಗತಿ ಸಾಧಿಸುವ ಮೂಲಕ ಅಭಿವೃದ್ಧಿ ಹೊಂದಿವೆ.
ಹೀಗಾಗಿ ಭಾರತವೂ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಪ್ರಗತಿ ಸಾಧಿಸಬೇಕಿದೆ. 2020ರ ವೇಳೆಗೆ ಭಾರತ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಪ್ರಗತಿ ಸಾಧಿಸಿ, ಅಭಿವೃದ್ಧಿ ಹೊಂದಲಿದೆ ಎಂಬುದು ಕಲಾಂ ಅವರ ನಿರೀಕ್ಷೆಯಾಗಿತ್ತು. ಹೀಗಾಗಿ ವಿಶ್ವದಲ್ಲೇ ಅತಿ ಹೆಚ್ಚಾಗಿರುವ ಭಾರತದ ಯುವಜನತೆ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಪ್ರಗತಿ ಸಾಧಿಸಬೇಕಿದೆ ಎಂದರು.
ಶಿಸ್ತು-ಶ್ರಮ ಮೈಗೂಡಿಸಿಕೊಳ್ಳಿ: ಟಿಂಕರಿಂಗ್ ಲ್ಯಾಬ್ ಜತೆಗೆ ಹೊಸ ತಂತ್ರಜ್ಞಾನಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವ ಕೆಲಸ ಆಗಬೇಕು. ಆ ಮೂಲಕ ಭಾರತಕ್ಕೆ ಮತ್ತೂಮ್ಮೆ ನೋಬೆಲ್ ಪ್ರಶಸ್ತಿ ಲಭಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಶ್ರಮಿಸಬೇಕು. ಇದಕ್ಕಾಗಿ ಜೀವನದಲ್ಲಿ ಗಮನ, ಸ್ಪಷ್ಟತೆ, ಒಳಗೊಳ್ಳುವಿಕೆ, ಶಿಸ್ತು ಹಾಗೂ ಶ್ರಮವನ್ನು ಮೈಗೂಡಿಸಿಕೊಳ್ಳಿ ಎಂದು ಸಲಹೆ ನೀಡಿದರು.
ಈ ವೇಳೆ ಡಾ.ಬಿ.ಎಸ್.ಸುರೇಶ್ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಜಿಲ್ಲಾಧಿಕಾರಿ ರಂದೀಪ್ ಡಿ., ಶಾಲೆಯ ಸಂಸ್ಥಾಪಕ ಅಧ್ಯಕ್ಷ ಆರ್.ರಘು, ವಿಜ್ಞಾನ ವಿಭಾಗದ ಮುಖ್ಯಸ್ಥ ಸಿ.ಡಿ.ಪ್ರಸಾದ್, ಪ್ರಾಂಶುಪಾಲರಾದ ಎಲ್.ಸವಿತಾ ಇದ್ದರು.
ಎಲ್ಲಾ ಶಾಲೆ ಮಕ್ಕಳಿಗೂ ಮುಕ್ತ ಅವಕಾಶ: ವಿದ್ಯಾರ್ಥಿಗಳಲ್ಲಿ ವೃತ್ತಿಪರ ಮತ್ತು ವೈಯಕ್ತಿಕ ಕೌಶಲ್ಯವನ್ನು ಅಭಿವೃದ್ಧಿಗೊಳಿಸುವ ಉದ್ದೇಶದಿಂದ ನೀತಿ ಆಯೋಗ ದೇಶಾದ್ಯಂತ ಅಟಲ್ ಇನ್ನೋವೇಷನ್ ಮಿಷನ್ನಡಿ ಅಟಲ್ ಟಿಂಕರಿಂಗ್ ಲ್ಯಾಬ್ಗಳನ್ನು ಆರಂಭಿಸುತ್ತಿದೆ. ಕೌಟಿಲ್ಯ ಶಾಲೆಯಲ್ಲಿ ಆರಂಭಿಸಿರುವ ಲ್ಯಾಬ್ನಲ್ಲಿ ಪ್ರಮುಖವಾಗಿ ಎಲೆಕ್ಟ್ರಾನಿಕ್ ಸೆನ್ಸರ್, ಮೆಕ್ಯಾನಿಕಲ್ ಟೂಲ್ಸ್ ಯೂನಿಟ್, ಸಾಲ್ಡರಿಂಗ್ ಯೂನಿಟ್, 3ಡಿ ಪ್ರಿಂಟರ್, ಡ್ರೆಮೆಲ್ ಟೂಲ್ ಕಿಟ್, ಗ್ಲೂಗನ್ ಇತ್ಯಾದಿ ಉಪಕರಣಗಳನ್ನು ಇಡಲಾಗಿದೆ.
ಮೈಸೂರಿನಲ್ಲಿ ಪ್ರಥಮವಾಗಿ ಅಟಲ್ ಟಿಂಕರಿಂಗ್ ಲ್ಯಾಬ್ ಆರಂಭಿಸಲಾಗಿದ್ದು, ಈ ಲ್ಯಾಬ್ ನಿತ್ಯ ಬೆಳಗ್ಗೆ 10ರಿಂದ ಸಂಜೆ 6 ಗಂಟೆವರೆಗೆ ನಡೆಯಲಿದೆ. ಕೇವಲ ಕೌಟಿಲ್ಯ ಶಾಲೆಯ ಮಕ್ಕಳು ಮಾತ್ರವಲ್ಲದೆ ನಗರದಲ್ಲಿರುವ ಯಾವುದೇ ಶಾಲೆಯ ವಿದ್ಯಾರ್ಥಿಗಳು ಪೋಷಕರೊಂದಿಗೆ ಲ್ಯಾಬ್ಗ ಭೇಟಿ ನೀಡಿ ವಿಷಯಗಳನ್ನು ತಿಳಿದುಕೊಳ್ಳಬಹುದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ
Hunsur: ಹಂದಿಫಾರ್ಮ್ ನಲ್ಲಿ ಕಾರ್ಮಿಕನಿಂದ ಮ್ಯಾನೇಜರ್ ಬರ್ಬರ ಹ*ತ್ಯೆ
Mysuru Dasara: ಖಾಸಗಿ ದರ್ಬಾರ್ಗೆ ಸ್ವರ್ಣ ಖಚಿತ ಸಿಂಹಾಸನ ಜೋಡಣೆ
MUDA Case: ನ್ಯಾಯ ನನ್ನ ಪರವಿದೆ, ರಾಜಕೀಯ ಪ್ರೇರಿತ ಕೇಸ್ ಎದುರಿಸಿ ಗೆಲ್ಲುವೆ: ಸಿಎಂ
MUDA Scam: ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್ ಸಾಧ್ಯತೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Mangaluru: ಕೌನ್ ಬನೇಗಾ ಕರೋಡ್ಪತಿಯಲ್ಲಿ 6.40 ಲ.ರೂ. ಗೆದ್ದ ಅಪೂರ್ವಾ ಶೆಟ್ಟಿ
IPL Retentions: ಐಪಿಎಲ್ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ
MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ
Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ
leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.