ಜಾಹೀರಾತು ಬೈಲಾ ಸರ್ಕಾರದ ಅಂಗಳಕ್ಕೆ


Team Udayavani, Sep 16, 2017, 1:15 PM IST

mys1.jpg

ಮೈಸೂರು: ಪಾರಂಪರಿಕ ನಗರಿ ಮೈಸೂರಿನಲ್ಲಿ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಜಾಹೀರಾತುಗಳ ನಿಷೇಧ, ನಿಯಂತ್ರಣ ಹಾಗೂ ಕ್ರಮಬದ್ಧತೆ ತರುವ ನಿಟ್ಟಿನಲ್ಲಿ ರಚಿಸಲಾಗಿರುವ ಜಾಹೀರಾತು ಉಪವಿಧಿ(ಬೈಲಾ)ಗೆ ಅನುಮೋದನೆ ನೀಡಲು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಕೌನ್ಸಿಲ್‌ ಸಭೆಯಲ್ಲಿ ನಿರ್ಧರಿಸಲಾಯಿತು.

ಮೈಸೂರು ಮಹಾನಗರ ಪಾಲಿಕೆ ನಾಲ್ವಡಿ ಕೃಷ್ಣರಾಜ ಒಡೆಯರ್‌ ಸಭಾಂಗಣದಲ್ಲಿ ಶುಕ್ರವಾರ ಮಧ್ಯಾಹ್ನ ಮೇಯರ್‌ ಎಂ.ಜೆ.ರವಿಕುಮಾರ್‌ ಅಧ್ಯಕ್ಷತೆಯಲ್ಲಿ ನಡೆದ ಕೌನ್ಸಿಲ್‌ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಯಿತು. ಸಭೆಯಲ್ಲಿ ಕರ್ನಾಟಕ ಮುನಿಸಿಪಲ್‌ ಕಾರ್ಪೊàರೇಷನ್‌ ಕಾಯ್ದೆ 1976ರ ಸೆಕ್ಷನ್‌ 423(24)ರ ಅಡಿಯಲ್ಲಿ ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಜಾಹೀರಾತುಗಳ ನಿಷೇಧ,

ನಿಯಂತ್ರಣ ಹಾಗೂ ಕ್ರಮಬದ್ಧತೆಗೆ ಸಂಬಂಧಿಸಿದಂತೆ ರಚಿಸಲಾಗಿರುವ ಬೈಲಾವನ್ನು ಮಂಡಿಸಲಾಯಿತು. ಈ ಬಗ್ಗೆ ನಡೆದ ಸುದೀರ್ಘ‌ ಚರ್ಚೆಯಲ್ಲಿ ಪಾಲಿಕೆ ಸದಸ್ಯರು ಪರ-ವಿರೋಧದ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. ಮೊದಲಿಗೆ ಮಾತನಾಡಿದ ಪಾಲಿಕೆ ಸದಸ್ಯ ಆರ್‌.ನಾಗರಾಜು, ಜಾಹೀರಾತುಗಳಿಂದ ಬರುವ 5-6 ಕೋಟಿ ರೂ.ಗಳ ಆದಾಯದಿಂದ ನಗರದ ಅಭಿವೃದ್ಧಿ ಮಾಡಲು ಮುಂದಾಗುವುದು ನಾಚಿಕೆಗೇಡಿನ ಸಂಗತಿ.

ಈ ಹಿಂದೆ ನಗರದಲ್ಲಿ ಜಾಹೀರಾತುಗಳನ್ನು ಅಳವಡಿಸುವುದರಿಂದ ಅಪಘಾತಗಳ ಪ್ರಮಾಣ ಹೆಚ್ಚಲಿದೆ ಹಾಗೂ ನಗರದ ಸೌಂದರ್ಯ ಹಾಳಾಗಲಿದೆ ಎಂಬ ಕಾರಣದಿಂದ ಜಾಹೀರಾತು ಫ‌ಲಕಗಳನ್ನು ಅಳವಡಿಸುವುದು ಬೇಡವೆಂದು ಕೌನ್ಸಿಲ್‌ನಲ್ಲಿ ತೀರ್ಮಾನಿಸಲಾಗಿದ್ದು, ಹೀಗಾಗಿ ಇದಕ್ಕೆ ಅವಕಾಶ ನೀಡುವುದು ಬೇಡವೆಂಬ ಅಭಿಪ್ರಾಯ ವ್ಯಕ್ತಪಡಿಸಿದರು. ಇದಕ್ಕೆ ಸಾಥ್‌ ನೀಡಿದ ಮತ್ತೂಬ್ಬ ಸದಸ್ಯ ಜಗದೀಶ್‌, ಜಾಹೀರಾತುಗಳನ್ನು ಅಳವಡಿಸುವುದರಿಂದ ನಗರದ ಪಾರಂಪರಿಕತೆಗೆ ಧಕ್ಕೆಯಾಗಲಿಬಾರದು ಎಂಬ ಅಭಿಪ್ರಾಯ ಮಂಡಿಸಿದರು.

ಸದಸ್ಯ ಮ.ವಿ.ರಾಂಪ್ರಸಾದ್‌, ಜಾಹೀರಾತು ಅಳವಡಿಕೆಗೆ ಅವಕಾಶ ನೀಡದ ಕಾರಣ ಇತ್ತೀಚಿನ ದಿನಗಳಲ್ಲಿ ಪಾಲಿಕೆಗೆ ಬರುವ ಆದಾಯಗಳು ತಪ್ಪುತ್ತಿದ್ದು, ಈ ಆದಾಯ ಬೇರೆಯವರ ಪಾಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇದಕ್ಕೆ ಅವಕಾಶ ನೀಡಬೇಕೆಂದು ಹೇಳಿದರು. ಇದಕ್ಕೆ ಸಹಮತ ವ್ಯಕ್ತಪಡಿಸಿದ ಬಿಜೆಪಿ ಸದಸ್ಯ ಶಿವಕುಮಾರ್‌, ನಗರದ ಸೌಂದರ್ಯ, ಪಾರಂಪರಿಕತೆಗೆ ಧಕ್ಕೆಯಾಗಲಿದೆ ಎಂಬ ಕಾರಣದಿಂದ ಜಾಹೀರಾತು ಉಪವಿಧಿ ರದ್ದುಪಡಿಸಲಾಗಿದೆ ಎಂದು ಹೇಳಿದರು. ಫ್ಲೆಕ್ಸ್‌ ಹಾಗೂ ಜಾಹೀರಾತು ಪಲಕಗಳ ನಡುವೆ ಸಾಕಷ್ಟು ವ್ಯತ್ಯಾಸವಿರುವುದರಿಂದ ಬೈಲಾಗೆ ಒಪ್ಪಿಗೆ ನೀಡಬೇಕಿದ್ದು ಇದರಿಂದ ಪಾಲಿಕೆ ಆದಾಯ ಸಹ ಹೆಚ್ಚಲಿದೆ ಎಂದು ಸದಸ್ಯ ಗಿರೀಶ್‌ ಪ್ರಸಾದ್‌ ತಿಳಿಸಿದರು.

ಆರ್ಥಿಕ ಸ್ಥಿತಿ ಅರಿತುಕೊಳ್ಳಿ: ಕಾಂಗ್ರೆಸ್‌ ಸದಸ್ಯ ಅಯ್ಯೂಬ್‌ಖಾನ್‌, ನಗರ ಪಾಲಿಕೆಯನ್ನು ನಡೆಸಲು ಕೇವಲ ಮುಖ್ಯಮಂತ್ರಿಗಳು ನೀಡುವ ಅನುದಾನವನ್ನು ಅವಲಂಬಿಸಲು ಸಾಧ್ಯವಿಲ್ಲ. ಅಲ್ಲದೆ ಜಾಹೀರಾತು ಬೇಡವೆಂದರೆ ದೊಡ್ಡ ಮಾಲ್‌ಗ‌ಳಲ್ಲಿ ಜಾಹೀರಾತುಗಳನ್ನು ಪ್ರದರ್ಶಿಸಲು ಆದಾಯ ಪಡೆಯಲಾಗುತ್ತಿದೆ. ಹೀಗಾದರೆ ನಗರ ಪಾಲಿಕೆ ನಿರ್ವಹಣೆಗೆ ಆದಾಯದ ಮೂಲವೇನು? ಎಂದು ಪ್ರಶ್ನಿಸಿದ ಅವರು, ಸರ್ಕಾರದ ಅನೇಕ ಯೋಜನೆ ಮತ್ತು ಕಾರ್ಯಕ್ರಮಗಳ ಬಗ್ಗೆ ಜಾಹೀರಾತುಗಳ ಮೂಲಕವೇ ಜನರಿಗೆ ಮಾಹಿತಿ ನೀಡಲಾಗುತ್ತಿದೆ ಎಂದರು.

ಜಾಹೀರಾತಿನಿಂದ ಆದಾಯಬೇಕಿಲ್ಲ: ಜೆಡಿಎಸ್‌ ಸದಸ್ಯ ಕೆಂಪಣ್ಣ, ಈ ಹಿಂದೆ ನಗರದಲ್ಲಿ ಫ್ಲೆಕ್ಸ್‌ ಹಾಗೂ ಹೋಲ್ಡಿಂಗ್ಸ್‌ಗಳನ್ನು ಅಳವಡಿಸಬಾರದೆಂದು ಕೌನ್ಸಿಲ್‌ನಲ್ಲಿ ನಿರ್ಧರಿಸಲಾಗಿದ್ದು, ಹೀಗಾಗಿ ಮತ್ತೆ ಜಾಹೀರಾತು ತರಬೇಕೆ. ಹೀಗಾಗಿ ಜಾಹೀರಾತು ಸಂಬಂಧ ರಚಿಸಿರುವ ಬೈಲಾಗೆ ತಮ್ಮ ವಿರೋಧವಿದೆ ಎಂದು ಹೇಳಿದರು.

ಸರ್ಕಾರಕ್ಕೆ ಕಳುಹಿಸೋಣ: ಹಿರಿಯ ಸದಸ್ಯ ಎಚ್‌.ಎನ್‌.ಶ್ರೀಕಂಠಯ್ಯ ಮಾತನಾಡಿ,  ಬೈಲಾ ಅನುಮೋದನೆಗೆ ಸರ್ಕಾರಕ್ಕೆ ಕಳುಹಿಸೋಣ. ಆದರೆ ಸ್ಥಳೀಯ ಸಂಸ್ಥೆಗಳ ಆರ್ಥಿಕ ಸ್ಥಿತಿಯನ್ನು ಉತ್ತಮಪಡಿಸುವ ಸಲುವಾಗಿ 15 ಅಂಶಗಳಿಗೆ ಶುಲ್ಕ ಸಂಗ್ರಹಕ್ಕೆ ಸರ್ಕಾರದಿಂದ ಅವಕಾಶ ನೀಡಲಾಯಿತು. ಹೀಗಾಗಿ ಈ ವಿಷಯಕ್ಕೂ ಸರ್ಕಾರದಿಂದ ಒಪ್ಪಿಗೆ ದೊರೆತಿದ್ದೇ ಆದಲ್ಲಿ, ಪಾಲಿಕೆ ಆದಾಯ ಬರುವುದನ್ನು ತಪ್ಪಿಸಲು ಯಾವುದೇ ಸದಸ್ಯರಿಗೂ ಅವಕಾಶವಿಲ್ಲ ಎಂದು ತಿಳಿಸಿದರು. 

ಸರ್ಕಾರಕ್ಕೆ ಕಳುಹಿಸಲಾಗುವುದು: ಬೈಲಾಗೆ ಸದಸ್ಯರಿಂದ ಕೇಳಿಬಂದ ಪರ-ವಿರೋಧದ ಅಭಿಪ್ರಾಯಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಮಾತನಾಡಿದ ಮೇಯರ್‌ ಎಂ.ಜೆ.ರವಿಕುಮಾರ್‌, ಬೈಲಾಗೆ ಅಗತ್ಯವಿರುವ ತಿದ್ದುಪಡಿ ಹಾಗೂ ಪರಿಶೀಲನೆ ಮಾಡುವ ಬಗ್ಗೆ ಸರ್ಕಾರಕ್ಕೆ ಕಳುಹಿಸಲಾಗುವುದು ಎಂದು ತಿಳಿಸಿದರು. ಸಭೆಯಲ್ಲಿ ಉಪ ಮೇಯರ್‌ ರತ್ನಾಲಕ್ಷ್ಮಣ್‌ ಇದ್ದರು.

ಸರ್ಕಾರಿ ಅಥವಾ ಖಾಸಗಿ ಜಾಗದಲ್ಲಿ ಜನರಿಗೆ ಕಾಣುವಂತೆ ಹಾಕಲಾಗುವ ಜಾಹೀರಾತುಗಳಿಗೆ ತೆರಿಗೆ ಸಂಗ್ರಹಿಸಲು ಕಾಯ್ದೆಯಲ್ಲಿ ಅವಕಾಶವಿದೆ. ಆದರೆ ಜಾಹೀರಾತುಗಳ ನಿಷೇಧ, ನಿಯಂತ್ರಣ ಹಾಗೂ ಕ್ರಮಬದ್ಧತೆ ತರುವ ನಿಟ್ಟಿನಲ್ಲಿ ರಚಿಸಿರುವ ಬೈಲಾದಲ್ಲಿ ಸುಪ್ರೀಂಕೋರ್ಟ್‌ನ ಆದೇಶದಂತೆ ಯಾವುದೇ ಜಾಹೀರಾತು ಅಳವಡಿಸುವ ವೇಳೆ ವಾಹನ ಸವಾರರಿಗೆ ತೊಂದರೆಯಾಗಬಾರದು ಎಂಬ ನಿಯಮಗಳನ್ನು ಅಳವಡಿಸಲಾಗಿದೆ.
-ಜಿ.ಜಗದೀಶ್‌, ಪಾಲಿಕೆ ಆಯುಕ್ತ 

ಟಾಪ್ ನ್ಯೂಸ್

Shimoga; ಈ ಸರ್ಕಾರಕ್ಕೆ ಶೀಘ್ರ ಜನ ಸರಿಯಾದ ಪಾಠ ಕಲಿಸುತ್ತಾರೆ: ಬಿ.ವೈ.ರಾಘವೇಂದ್ರ

Shimoga; ಈ ಸರ್ಕಾರಕ್ಕೆ ಶೀಘ್ರ ಜನ ಸರಿಯಾದ ಪಾಠ ಕಲಿಸುತ್ತಾರೆ: ಬಿ.ವೈ.ರಾಘವೇಂದ್ರ

10-health

Asthma: ಎತ್ತರ ಪ್ರದೇಶಗಳು ಮತು ಅಸ್ತಮಾ

Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ

Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ

9-bbk11

BBK-11: ಬಿಗ್ ಬಾಸ್ ಮನೆಗೆ ನಾಲ್ವರು ಎಂಟ್ರಿ; ಉಳಿದ ಸ್ಪರ್ಧಿಗಳು ಇವರೇನಾ?

8-health

Iron Deficiency: ರಕ್ತಹೀನತೆ ಇಲ್ಲದ ಕಬ್ಬಿಣದಂಶ ಕೊರತೆ

ಬೈಕ್‌ ನಲ್ಲಿದ್ದ ಪೊಲೀಸ್‌ ಗೆ ಡಿಕ್ಕಿ ಹೊಡೆದ ಕಾರು; ಅಕ್ರಮ ಮದ್ಯ ದಂಧೆ ಶಂಕೆ

Delhi: ಬೈಕ್‌ ನಲ್ಲಿದ್ದ ಪೊಲೀಸ್‌ ಗೆ ಡಿಕ್ಕಿ ಹೊಡೆದ ಕಾರು; ಅಕ್ರಮ ಮದ್ಯ ದಂಧೆ ಶಂಕೆ

7-social-media-2

Social Media: ಮಾನಸಿಕ ಆರೋಗ್ಯದ ಮೇಲೆ ಸಾಮಾಜಿಕ ಮಾಧ್ಯಮಗಳ ಪರಿಣಾಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

crime (2)

Hunsur: ಹಂದಿಫಾರ್ಮ್ ನಲ್ಲಿ ಕಾರ್ಮಿಕನಿಂದ ಮ್ಯಾನೇಜರ್ ಬರ್ಬರ ಹ*ತ್ಯೆ

Mysuru-Simhasana

Mysuru Dasara: ಖಾಸಗಿ ದರ್ಬಾರ್‌ಗೆ ಸ್ವರ್ಣ ಖಚಿತ ಸಿಂಹಾಸನ ಜೋಡಣೆ

Mysore-Sidda

MUDA Case: ನ್ಯಾಯ ನನ್ನ ಪರವಿದೆ, ರಾಜಕೀಯ ಪ್ರೇರಿತ ಕೇಸ್‌ ಎದುರಿಸಿ ಗೆಲ್ಲುವೆ: ಸಿಎಂ

CM-Mysore1

MUDA Scam: ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್‌ ಸಾಧ್ಯತೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Shimoga; ಈ ಸರ್ಕಾರಕ್ಕೆ ಶೀಘ್ರ ಜನ ಸರಿಯಾದ ಪಾಠ ಕಲಿಸುತ್ತಾರೆ: ಬಿ.ವೈ.ರಾಘವೇಂದ್ರ

Shimoga; ಈ ಸರ್ಕಾರಕ್ಕೆ ಶೀಘ್ರ ಜನ ಸರಿಯಾದ ಪಾಠ ಕಲಿಸುತ್ತಾರೆ: ಬಿ.ವೈ.ರಾಘವೇಂದ್ರ

10-health

Asthma: ಎತ್ತರ ಪ್ರದೇಶಗಳು ಮತು ಅಸ್ತಮಾ

Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ

Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ

9-bbk11

BBK-11: ಬಿಗ್ ಬಾಸ್ ಮನೆಗೆ ನಾಲ್ವರು ಎಂಟ್ರಿ; ಉಳಿದ ಸ್ಪರ್ಧಿಗಳು ಇವರೇನಾ?

8-health

Iron Deficiency: ರಕ್ತಹೀನತೆ ಇಲ್ಲದ ಕಬ್ಬಿಣದಂಶ ಕೊರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.