ಬಿಎಸ್ವೈ ಸ್ಪರ್ಧೆ ವಿಜಯಪುರ ಅಥವಾ ಬಾಗಲಕೋಟೆಯಿಂದ!
Team Udayavani, Sep 19, 2017, 8:30 AM IST
ಕಲಬುರಗಿ: ‘ಉತ್ತರ ಕರ್ನಾಟಕದ ವಿಜಯಪುರ ಇಲ್ಲವೇ ಬಾಗಲಕೋಟೆ ಜಿಲ್ಲೆಯಿಂದ ಮುಂದಿನ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಇಚ್ಛಿಸಿದ್ದು, ಅಂತಿಮ ನಿರ್ಧಾರ ಹೈಕಮಾಂಡ್ಗೆ ಬಿಟ್ಟಿದ್ದು’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ತಮ್ಮ ಸ್ಪರ್ಧೆಯಿಂದ ಉತ್ತರ ಕರ್ನಾಟಕ ಹೈದ್ರಾಬಾದ್-ಕರ್ನಾಟಕ ಭಾಗದಲ್ಲಿ ಪಕ್ಷಕ್ಕೆ ಹೆಚ್ಚು ಅನುಕೂಲವಾಗಲಿದೆ. ಉತ್ತರ ಕರ್ನಾಟಕದಲ್ಲಿ ತಮ್ಮೆದುರು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧಿಸಲು ಬರುವುದಾದರೆ ಬರಲಿ, ಸ್ವಾಗತವಿದೆ’ ಎಂದು ಹೇಳಿದರು. ರಾಜ್ಯ ಸರಕಾರ, ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಸೆ.23 ಇಲ್ಲವೇ 24ರಂದು ಸಿಎಂ ಸಿದ್ದರಾಮಯ್ಯ ಕುಟುಂಬ ಹಾಗೂ ನಾಲ್ಕೈದು ಸಚಿವರು, ಶಾಸಕರು, ಅಧಿಕಾರಿಗಳ ಭ್ರಷ್ಟಾಚಾರದ ಆರೋಪ ಪಟ್ಟಿ ಬಿಡುಗಡೆ ಮಾಡುವುದಾಗಿ ಹೇಳಿದರು. ನ.1ರಂದು ಕರ್ನಾಟಕ ಪರಿವರ್ತನಾ ರ್ಯಾಲಿಗೆ ಪ್ರಧಾನಿ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು.
ಸೂರ್ಯಕಾಂತ ನಾಗಮಾರಪಳ್ಳಿ ಬಿಜೆಪಿಗೆ
ಬೀದರ್: ಮಾಜಿ ಸಚಿವ ದಿ| ಗುರುಪಾದಪ್ಪ ನಾಗಮಾರಪಳ್ಳಿ ಅವರ ಪುತ್ರ ಸೂರ್ಯಕಾಂತ ಹಾಗೂ ಅವರ ಬೆಂಬಲಿಗರು ಸೋಮವಾರ ಇಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಬಿಜೆಪಿಗೆ ಸೇರ್ಪಡೆಯಾದರು. ಈ ವೇಳೆ ಮಾತನಾಡಿದ ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಆಯಾ ಕ್ಷೇತ್ರಗಳಲ್ಲಿ ಜನಪ್ರಿಯತೆ ಗಳಿಸಿರುವ ಮತ್ತು ಗೆಲ್ಲುವ ಸಾಮರ್ಥ್ಯವುಳ್ಳ ಅಭ್ಯರ್ಥಿಗಳಿಗೆ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನೀಡಲಾಗುವುದು ಎಂದರು. ಮಾಜಿ ಡಿಸಿಎಂ ಆರ್. ಅಶೋಕ್, ಮಾಜಿ ಸಚಿವ ಶ್ರೀರಾಮುಲು, ಸಂಸದ ಭಗವಂತ ಖೂಬಾ, ಶಾಸಕರಾದ ಪ್ರಭು ಚವ್ಹಾಣ, ರಘುನಾಥ ರಾವ್ ಮಲ್ಕಾಪುರ ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Doctor-Patient relationship: ವೈದ್ಯ – ರೋಗಿ ಸಂಬಂಧ ಮುಂದೇನು?
Vidya Balan; ಮತ್ತೆ ಬಂದಳು ಮಂಜುಳಿಕಾ!
Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ
Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ
Kuloor: ಮೊಯ್ದೀನ್ ಬಾವಾ ಸೋದರ ಮಮ್ತಾಜ್ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.