ಸರ್ ಎಂವಿ ಅಧ್ಯಯನ ಕೇಂದ್ರ ಸ್ಥಾಪನೆಗೆ ಒತ್ತಾಯ
Team Udayavani, Sep 19, 2017, 11:47 AM IST
ಕೆಂಗೇರಿ: ಭಾರತ ರತ್ನ ಸರ್ ಎಂ. ವಿಶ್ವೇಶ್ವರಯ್ಯ ಅವರ ಕುರಿತ ಸಮಗ್ರ ಅಧ್ಯಯನಕ್ಕೆ ಪ್ರತ್ಯೇಕ ಅಧ್ಯಯನ ಕೇಂದ್ರ ಸ್ಥಾಪಿಸಿ ಮುಂದಿನ ಪೀಳಿಗೆಗೆ ಅವರ ವಿಚಾರಧಾರೆ ಕೊಂಡೊಯ್ಯುವ ಕಾರ್ಯಕ್ಕೆ ಮುಂದಾಗಬೇಕು ಎಂದು ತಾಂತ್ರಿಕ ಶಿಕ್ಷಣ ಇಲಾಖೆ ಮಾಜಿ ಜಂಟಿ ನಿರ್ದೇಶಕ ಡಾ.ಕೆ.ಎನ್.ವೆಂಕಟಕೃಷ್ಣರಾವ್ ಒತ್ತಾಯಿಸಿದರು.
ಮೈಸೂರು ಬೆಂಗಳೂರು ಮುಖ್ಯರಸ್ತೆಯ ಕುಂಬಳಗೋಡು ಡಾನ್ ಬಾಸ್ಕೋ ತಾಂತ್ರಿಕ ಮಹಾ ವಿದ್ಯಾಲಯದಲ್ಲಿ ಶಿಕ್ಷಕರ ಹಾಗೂ ಇಂಜಿನಿಯರ್ಗಳ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸರ್ ಎಂ.ವಿ ವಿಶ್ವೇಶ್ವರಯ್ಯ ಅವರ ದೂರದೃಷ್ಟಿ ಹಾಗೂ ಚಿಂತನೆಯ ಫಲವಾಗಿ ರಾಜ್ಯದಲ್ಲಿ ಶಿಕ್ಷಣ, ವಿದ್ಯುತ್, ಕೃಷಿ, ವಾಣಿಜ್ಯ, ಕೈಗಾರಿಕಾ ಕ್ಷೇತ್ರಗಳ ಪ್ರಗತಿ ಸಾಧ್ಯವಾಗಿದೆ ಎಂದರು.
ಉತ್ತಮ ಸಾಧನೆ ತೋರಿದ ಉಪನ್ಯಾಸಕರಿಗೆ ಸಮಾರಂಭದಲ್ಲಿ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು. ಡಾನ್ ಬಾಸ್ಕೋ ತಾಂತ್ರಿಕ ಮಹಾ ವಿದ್ಯಾಲಯದ ನಿರ್ದೇಶಕ ಡಾ.ಆರ್.ಕೃಷ್ಣ, ಪ್ರಾಂಶುಪಾಲ ಡಾ.ಎಂ.ಮುರಳಿಧರ ರಾವ್, ಉಪನ್ಯಾಸಕಾರಾದ ಡಾ.ಆರ್.ಪ್ರಕಾಶ್, ಶರ್ಮಿಳಾ ಆರ್.ಎಸ್, ನಂದಿನಿ ಸುಧೀರ್, ರಫೀಕ್ ಅಹಮದ್, ರೂಪಾ ಬಿ.ಎಸ್. ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್ ಫೋನ್ ಅಂಗಡಿ!
Bengaluru; ಬಸ್ ಡ್ರೈವರ್ಗೆ ಎದೆನೋವು: ಬ್ರೇಕ್ ಹಾಕಿ ಅಪಾಯ ತಪಿಸಿದ ಎಎಸ್ಐ
Flipkart Big Billion Day ಸೆ. 27 ರಿಂದ ಆರಂಭ
Bengaluru: ನಮ್ಮ ಕ್ಲಿನಿಕ್ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ
Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್ಸರ್ವೀಸ್ ಸೆಂಟರ್ಗೆ 12 ಸಾವಿರ ದಂಡ!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು
School; ಶೀಘ್ರವೇ ಶಾಲಾ ಮಕ್ಕಳಿಗೆ ಆ್ಯಪ್ ಆಧಾರಿತ ಹಾಜರಾತಿ?
Kundapura: ಮುಳುಗುತ್ತಿದ್ದ ಬೋಟ್ ರಕ್ಷಣೆ: 6 ಮೀನುಗಾರರು ಪಾರು
Government Failure: ಹಿಂದೂಗಳ ಮೇಲೆ ಕಾಂಗ್ರೆಸ್ ಸರಕಾರ ದಬ್ಬಾಳಿಕೆ: ಬಿಜೆಪಿ
Daily Horoscope; ಈ ರಾಶಿಯ ಅವಿವಾಹಿತರಿಗೆ ಬಾಳ ಸಂಗಾತಿ ಲಭಿಸುವ ಚಿಂತೆ.
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.