ಜೆಡಿಎಸ್ನಲ್ಲಿ ಹಣವಂತರಿಗೆ ಮಣೆ
Team Udayavani, Sep 19, 2017, 11:47 AM IST
ಕೆ.ಆರ್.ಪುರ: ಜೆಡಿಎಸ್ಗಾಗಿ 25 ವರ್ಷಗಳ ಕಾಲ ಸಲ್ಲಿಸಿದ ಪ್ರಮಾಣಿಕ ಸೇವೆ ಪರಿಗಣಿಸದೆ ಬೇರೊಬ್ಬರಿಗೆ ಅಧ್ಯಕ್ಷ ಸ್ಥಾನ ನೀಡಿರುವುದರಿಂದ ಬೇಸರಗೊಂಡು ಅಧ್ಯಕ್ಷ ಸ್ಥಾನ ಮತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವುದಾಗಿ ಎಂ.ಸಿ ಪ್ರಬಾಕರ ರೆಡ್ಡಿ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಪಕ್ಷದ ಪ್ರಾಥಮಿಕ ಸದಸ್ಯತ್ವವನ್ನೂ ಪಡೆಯದ, ಕೇವಲ ಹಣಬಲ ಹೊಂದಿರುವ ಪ್ರಭಾವಿಗಳಿಗೆ ಕೆ.ಆರ್.ಪುರ ಕ್ಷೇತ್ರದ ಜೆಡಿಎಸ್ ಘಟಕದ ಅಧ್ಯಕ್ಷ ಸ್ಥಾನ ನೀಡಲಾಗಿದೆ. ತಳಮಟ್ಟದಿಂದ ಪಕ್ಷ ಕಟ್ಟಿರುವ ಕಾರ್ಯಕರ್ತರಿಗೆ ಬೆಲೆ ನೀಡದೇ ಹೈಕಮಾಂಡ್ àಕಪಕ್ಷೀಯ ತೀರ್ಮಾನ ಕೈಗೊಂಡಿರುವುದು ಸರಿಯಲ್ಲ,’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
“ನಮ್ಮದೇ ಪಕ್ಷದ ಮುಖಂಡರು ನನ್ನ ಬಗ್ಗೆ ವರಿಷ್ಠರಿಗೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಇದನ್ನೇ ನಂಬಿರುವ ವರಿಷ್ಠರು ನನ್ನನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿದ್ದಾರೆ. ಚುನಾವಣೆ ಮೂಲಕ ಆಯ್ಕೆಯಾದ ನನ್ನ ಅವಧಿ ಮುಗಿಯುವ ಮುನ್ನವೇ ನನ್ನ ಗಮನಕ್ಕೂ ತಾರದೆ ಬೇರೊಬ್ಬರನ್ನು ನನ್ನ ಹುದ್ದೆಗೆ ಆಯ್ಕೆ ಮಾಡಿರುವುದು ಅಸಾಂವಿಧಾನಿಕ ಕ್ರಮ.
ಇನ್ನು ಮೂರು ದಿನಗಳಲ್ಲಿ ನನ್ನನ್ನು ಮತ್ತೆ ಅಧ್ಯಕ್ಷನನ್ನಾಗಿ ಮುಂದುವರಿಸದಿದ್ದರೆ ವಾರ್ಡ್ ಅಧ್ಯಕ್ಷರು ಸೇರಿದಂತೆ ಎಲ್ಲರೂ ಸಾಮೂಹಿಕ ರಾಜೀನಾಮೆ ನೀಡುತ್ತೇವೆ,’ ಎಂದು ಎಚ್ಚರಿಕೆ ನೀಡಿದರು. “ಕೆ.ಆರ್.ಪುರ ಕ್ಷೇತ್ರದ ಜೆಡಿಎಸ್ ಅಧ್ಯಕ್ಷರನ್ನಾಗಿ ದೇವರಾಜ್ ಅವರನ್ನು ಆಯ್ಕೆ ಮಾಡಿರುವುದರ ಹಿಂದೆ ಡಿ.ಎ.ಗೋಪಾಲ್ ಅವರ ಕುತಂತ್ರ ಅಡಗಿದೆ.
ಈಬಗ್ಗೆ ಬೇಸರಗೊಂಡು ರಾಜೀನಾಮೆ ಪತ್ರವನ್ನು ಕ್ಷೇತ್ರದ ಪ್ರಧಾನ ಕಾರ್ಯದರ್ಶಿಗೆ ಸಲ್ಲಿಸಿದ್ದು, ಅದನ್ನು ಕೂಡಲೆ ಜಿಲ್ಲಾಧ್ಯಕ್ಷರು ಮತ್ತು ಪಕ್ಷದ ರಾಜ್ಯಾಧ್ಯಕ್ಷರಿಗೆ ತಲುಪಿಸುವಂತೆ ಮನವಿ ಮಾಡಲಾಗಿದೆ.’ ಎಂದರು. ಜೆಡಿಎಸ್ ರಾಜ್ಯ ಕಾರ್ಯದರ್ಶಿ ಆರ್.ಕೃಷ್ಣಮೂರ್ತಿ, ನಗರ ಪ್ರಧಾನ ಕಾರ್ಯದರ್ಶಿ ಸೋಮಶೇಖರ್ ಮೊದಲಾದವರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್ ಫೋನ್ ಅಂಗಡಿ!
Bengaluru; ಬಸ್ ಡ್ರೈವರ್ಗೆ ಎದೆನೋವು: ಬ್ರೇಕ್ ಹಾಕಿ ಅಪಾಯ ತಪಿಸಿದ ಎಎಸ್ಐ
Flipkart Big Billion Day ಸೆ. 27 ರಿಂದ ಆರಂಭ
Bengaluru: ನಮ್ಮ ಕ್ಲಿನಿಕ್ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ
Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್ಸರ್ವೀಸ್ ಸೆಂಟರ್ಗೆ 12 ಸಾವಿರ ದಂಡ!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್ ಪ್ರಕರಣ: ಲೋಕಾಯುಕ್ತದಿಂದ ಬಿಎಸ್ವೈ ವಿಚಾರಣೆ
Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ
Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್ ಸೀಮಿತ: ಆರ್. ಅಶೋಕ್
Udupi: ಜಿಲ್ಲೆಯಲ್ಲಿ ಕಾಲರಾ 8 ಪ್ರಕರಣ ಸಕ್ರಿಯ
Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.