ಮೃತನ ಪರಿಹಾರದ ಹಣಕ್ಕೆ ಹಗ್ಗಜಗ್ಗಾಟ


Team Udayavani, Sep 20, 2017, 11:43 AM IST

bbmp-check.jpg

ಬೆಂಗಳೂರು: ಈಚೆಗೆ ಕಾರಿನ ಮೇಲೆ ಮರಬಿದ್ದು ಮೃತಪಟ್ಟ ಜಗದೀಶ್‌ ಅವರ ಕುಟುಂಬಕ್ಕೆ ಬಿಬಿಎಂಪಿ ನೀಡಿದ್ದ ಪರಿಹಾರ ಮೊತ್ತದ ಹಂಚಿಕೆ ವಿಚಾರದಲ್ಲಿ ಜಗದೀಶ್‌ ಪತ್ನಿ ಹಾಗೂ ಪೋಷಕರ ನಡುವೆ ತಿಕ್ಕಾಟ ಶುರುವಾಗಿದೆ. 

ಕಳೆದ ಸೆ. 8ರಂದು ಸಂಜೆ ನಗರದಲ್ಲಿ ಸುರಿದ ಗಾಳಿಸಹಿತ ಭಾರಿ ಮಳೆಗೆ ಕಾರಿನ ಮೇಲೆ ಮರಬಿದ್ದು ಜಗದೀಶ್‌ ಸೇರಿದಂತೆ ಒಂದೇ ಕುಟುಂಬದ ಮೂವರು ಮೃತ ಪಟ್ಟಿದ್ದರು. ಆಗ ಬಿಬಿಎಂಪಿಯು ಮೃತ ಕುಟುಂಬಕ್ಕೆ ತಲಾ ಐದು ಲಕ್ಷ ರೂಪಾಯಿ ಪರಿಹಾರ ಹಾಗೂ ಉದ್ಯೋಗ ನೀಡುವ ಭರವಸೆ ನೀಡಿತ್ತು. ಬಳಿಕ ಸೆ. 11ರಂದು ಮೇಯರ್‌ ಜಿ. ಪದ್ಮಾವತಿ, ಜಗದೀಶ್‌ ಪತ್ನಿ ರೂಪಾಗೆ ಐದು ಲಕ್ಷ  ರೂಪಾಯಿ ಪರಿಹಾರದ ಚೆಕ್‌ ವಿತರಿಸಿದ್ದರು. 

ನಂತರದಲ್ಲಿ ರೂಪಾ ಹಾಗೂ ಜಗದೀಶ್‌ ಫೋಷಕರ ನಡುವೆ ಪರಿಹಾರದ ಮೊತ್ತಕ್ಕಾಗಿ ಪರಸ್ಪರ ತಿಕ್ಕಾಟ ಶುರುವಾಗಿದೆ. ಈ ಮಧ್ಯೆ ಮೇಯರ್‌ ಅವರನ್ನು ಭೇಟಿ ಮಾಡಿದ ಜಗದೀಶ್‌ ತಂದೆ-ತಾಯಿ, “ಇರುವ ಒಬ್ಬ ಮಗ ಜಗದೀಶ್‌ ಮೃತಪಟ್ಟಿದ್ದಾನೆ. ನಮ್ಮನ್ನು ನೋಡಿಕೊಳ್ಳುವವರು ಯಾರೂ ಇಲ್ಲ. ಹಾಗಾಗಿ,ಪರಿಹಾರದ ಮೊತ್ತದಲ್ಲಿ ತಮಗೂ ಪಾಲು ನೀಡಬೇಕು’ ಎಂದು ಮನವಿ ಮಾಡಿದರು. 

ಈ ಹಿನ್ನೆಲೆಯಲ್ಲಿ ಮೇಯರ್‌ ಹಾಗೂ ಬಿಬಿಎಂಪಿ ಆಯುಕ್ತ ಎನ್‌. ಮಂಜುನಾಥ್‌ ಪ್ರಸಾದ್‌, ಜಗದೀಶ್‌ ತಂದೆ-ತಾಯಿಯ ಜವಾಬ್ದಾರಿ ವಹಿಸಿಕೊಳ್ಳಬೇಕು. ಹಾಗೂ ಪರಿಹಾರದ ಮೊತ್ತದಲ್ಲಿ ಪೋಷಕರಿಗೂ ಸ್ವಲ್ಪ ಹಣ ನೀಡುವಂತೆ ರೂಪಾಗೆ ತಿಳಿಸಿದರು. ಆದರೆ, ಇದಕ್ಕೆ ಒಪ್ಪದ ರೂಪಾ, ತಮಗೂ ಮಕ್ಕಳು ಇರುವುದರಿಂದ ಅವರನ್ನು ಸಾಕುವ ಹೊಣೆ ಇದೆ. ಹಾಗಾಗಿ, ಸಂಪೂರ್ಣ ಪರಿಹಾರ ಮೊತ್ತವನ್ನು ತನಗೇ ನೀಡಬೇಕು ಎಂದು ಮನವಿ ಮಾಡಿದರು. 

ಈ ಬಗ್ಗೆ  ಪ್ರತಿಕ್ರಿಯಿಸಿದ ಮೇಯರ್‌ ಜಿ. ಪದ್ಮಾವತಿ, ಮೃತ ಜಗದೀಶ್‌ಗೆ ವೃದ್ಧ ತಂದೆ-ತಾಯಿಗಳಿದ್ದಾರೆ. ಅವರಿಗೆ ಬೇರೆ ಯಾರೂ ಇಲ್ಲ. ಹಾಗಾಗಿ, ಅವರಿಗೂ ನೆರವು ನೀಡುವ ಉದ್ದೇಶದಿಂದ ಪರಿಹಾರದ ಮೊತ್ತ ಡ್ರಾ ಮಾಡಿಕೊಳ್ಳದಂತೆ ತಡೆಹಿಡಿಯಲಾಗಿದೆ. ಉಳಿದಂತೆ ಅಂದಿನ ಘಟನೆಯಲ್ಲಿ ಮೃತಪಟ್ಟ ಅರುಣ್‌, ಭಾರತಿ, ರಮೇಶ್‌ ಅವರಿಗೆ ನೀಡಿದ್ದ ಪರಿಹಾರದ ಮೊತ್ತ ಬಿಡುಗಡೆ ಮಾಡಲಾಗಿದೆ. ಜಗದೀಶ್‌ ತಂದೆ ಮತ್ತು ತಾಯಿಗೆ ತಲಾ 50 ಸಾವಿರ ರೂಪಾಯಿ ಹಾಗೂ ಜಗದೀಶ್‌ ಪತ್ನಿಗೆ 4 ಲಕ್ಷ ರೂಪಾಯಿ, ರೂಪಾಗೆ ಉದ್ಯೋಗದ ಭರವಸೆ ನೀಡಲಾಗಿದೆ ಎಂದರು. 

ಮೃತ ಜಗದೀಶ್‌ ತಂದೆ ತಾಯಿ ಪರಿಹಾರ ವಿಚಾರದಲ್ಲಿ ತಕರಾರು ಅರ್ಜಿ ಸಲ್ಲಿಸಿದ ಹಿನ್ನೆಯಲ್ಲಿ ಪರಿಹಾರವನ್ನು ತಡೆಹಿಡಿಯಲಾಗಿದೆ. ಪಾಲಿಕೆಯಲ್ಲಿ ಹಣದ ಲಭ್ಯತೆಯಿದ್ದು. ಯಾವುದೇ ಚೆಕ್‌ಗಳು ಬೌನ್ಸ್‌ ಆಗಿಲ್ಲ. 
-ಮಹದೇವ್‌ ಮುಖ್ಯ ಲೆಕ್ಕಾಧಿಕಾರಿ ಬಿಬಿಎಂಪಿ

ನನಗೆ ಇಬ್ಬರೂ ಮಕ್ಕಳಿದ್ದಾರೆ ಅವರ ಭವಿಷ್ಯ ನೋಡಬೇಕಾಗಿದೆ. ಬೇರೆ ಯಾವುದೇ ಆದಾಯವಿಲ್ಲ. ಜಗದೀಶ್‌ ಬದುಕಿದ್ದ ಸಂದರ್ಭದಲ್ಲಿ ಯಾರೂ ನಮ್ಮನ್ನು  ನೀಡಿಲ್ಲ. ಈಗ ಪರಿಹಾರಕ್ಕಾಗಿ ಬಂದಿದ್ದಾರೆ. 
-ರೂಪಾ (ಮೃತ ಜಗದೀಶ್‌ ಪತ್ನಿ)

ಟಾಪ್ ನ್ಯೂಸ್

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

1-darshan

Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್

Air Force Chief: ವಾಯುಪಡೆ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

Air Force Chief: ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

crime (2)

Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!

1-muni

BJP MLA ಮುನಿರತ್ನಗೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ

Ayodhya: 8 ಕಾಲುಳ್ಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

Ayodhya: 8 ಕಾಲುಗಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

Vijayapura: ತಿರುಪತಿ ಲಡ್ಡು ಪಾವಿತ್ರ‍್ಯತೆ ಹಾಳು ಮಾಡಿದವರನ್ನು ಗಲ್ಲಿಗೇರಿಸಬೇಕು: ಯತ್ನಾಳ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

parappana agrahara prison

Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್‌ ಫೋನ್‌ ಅಂಗಡಿ!

Alert Cop Averts Mishap After Bmtc Bus Driver  got chest pain

Bengaluru; ಬಸ್‌ ಡ್ರೈವರ್‌ಗೆ ಎದೆನೋವು: ಬ್ರೇಕ್‌ ಹಾಕಿ ಅಪಾಯ ತಪಿಸಿದ ಎಎಸ್‌ಐ

16-flipkart

Flipkart Big Billion Day ಸೆ. 27 ರಿಂದ ಆರಂಭ

13-bng

Bengaluru: ನಮ್ಮ ಕ್ಲಿನಿಕ್‌ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ

10-bng

Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್‌ಸರ್ವೀಸ್‌ ಸೆಂಟರ್‌ಗೆ 12 ಸಾವಿರ ದಂಡ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

1-darshan

Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್

ಕಳಸಾ ನಾಲಾದಲ್ಲಿ ರಾಜಕೀಯ ಕೊಳಕು: ಸರ್ವ ಪಕ್ಷ ನಿಯೋಗ ಒಯ್ಯುವ ಚಕಾರವೇ ಇಲ್ಲ!

ಕಳಸಾ ನಾಲಾದಲ್ಲಿ ರಾಜಕೀಯ ಕೊಳಕು: ಸರ್ವ ಪಕ್ಷ ನಿಯೋಗ ಒಯ್ಯುವ ಚಕಾರವೇ ಇಲ್ಲ!

Air Force Chief: ವಾಯುಪಡೆ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

Air Force Chief: ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

crime (2)

Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.