ಮರ ಕಡಿಯದೆ ರಸ್ತೆ ಅಭಿವೃದ್ಧಿಗೆ ಪರಿಸರವಾದಿಗಳ ಆಗ್ರಹ
Team Udayavani, Sep 20, 2017, 12:31 PM IST
ಧಾರವಾಡ: ಮೀರಜ್ ಮತ್ತು ಸಾಂಗ್ಲಿ ಮಧ್ಯೆ ಗಿಡಗಳನ್ನು ಕಡಿಯದೆ ರಸ್ತೆ ಅಗಲೀಕರಣ ಮಾಡಿದ್ದು, ಅದೇ ಮಾದರಿಯಲ್ಲಿ ನರೇಂದ್ರ ಕ್ರಾಸ್ನಿಂದ ನಗರದ ಜುಬಿಲಿ ವೃತ್ತದ ವರೆಗಿನ ರಸ್ತೆ ಅಗಲೀಕರಣದ ಸಮಯದಲ್ಲಿ ಯಾವುದೇ ಗಿಡಗಳನ್ನು ಕಡಿಯದೆ ರಸ್ತೆ ಅಭಿವೃದ್ಧಿಗೊಳಿಸಬೇಕು ಎಂದು ಸುಸ್ಥಿರ ಅಭಿವೃದ್ಧಿ ವೇದಿಕೆ ಸಂಚಾಲಕ ಡಾ| ಸಂಜೀವ ಕುಲಕರ್ಣಿ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.
ಕಳೆದ ಎರಡು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ರಸ್ತೆ ಇದೀಗ ಅಗಲೀಕರಣವಾಗುತ್ತಿದೆ. ಆದರೆ, ಈ ರಸ್ತೆಯಲ್ಲಿ 1500 ವಿವಿಧ ಜಾತಿಯ ಗಿಡಮರಗಳಿದ್ದು, ಪಕ್ಷಿ ವೈವಿಧ್ಯಕ್ಕೆ ಅನುಕೂಲವಾಗಿವೆ. ನೆರಳು, ಹಕ್ಕಿಗಳಿಗೆ ಆವಾಸ ನೀಡುವ 450ಕ್ಕೂ ಅಧಿ ಕ ಮರಗಳು ನಾಶವಾಗುತ್ತಿವೆ. ಅದಕ್ಕೆ ನಗರದ ಪ್ರಜ್ಞಾವಂತ ನಾಗರಿಕರು ಅವಕಾಶ ನೀಡುವುದಿಲ್ಲ ಎಂದು ಹೇಳಿದರು.
ಶಾಸಕ ಬೆಲ್ಲದ್ ಮಾತು ತಪ್ಪಿದ್ದಾರೆ: ಈ ಹಿಂದೆ ಕವಿಸಂದಲ್ಲಿ ಆಯೋಜಿಸಿದ್ದ ಸಾರ್ವಜನಿಕ ಸಭೆಯಲ್ಲಿ ಶಾಸಕ ಅರವಿಂದ ಬೆಲ್ಲದ ಜತೆಗೆ ಈ ಕುರಿತು ಚರ್ಚಿಸಲಾಗಿತ್ತು. ಅವರು ರಸ್ತೆ ಪಕ್ಕದ ಮರಗಳನ್ನು ಉಳಿಸಿಕೊಂಡೇ ಹೆದ್ದಾರಿ ಅಗಲೀಕರಣ ಯೋಜನೆ ಕಾರ್ಯಗತ ಮಾಡುವುದಾಗಿ ಹಾಗೂ ಎರಡು ತಿಂಗಳಲ್ಲಿ ಈ ಬಗ್ಗೆ ಸಭೆ ಕರೆಯುವುದಾಗಿ ವಾಗ್ಧಾನ ಮಾಡಿದ್ದರು.
ಆದರೆ, ಕಳೆದ ಕೆಲ ದಿನಗಳಿಂದ ಯಾರೊಬ್ಬರಿಗೂ ತಿಳಿಸದೆ ಕಾಮಗಾರಿ ಪ್ರಾರಂಭಿಸಿರುವುದು ಗಮನಕ್ಕೆ ಬಂದಿದೆ. ಹಲವು ಸಂದೇಹಗಳನ್ನು ಹುಟ್ಟ ಹಾಕಿದೆ ಎಂದರು. ಡಾ| ಪ್ರಕಾಶ ಭಟ್ ಮಾತನಾಡಿ, ಅಗಲೀಕರಣ ವೇಳೆ ಮರ ಕಡಿಯುವುದಿಲ್ಲ ಎಂದು ಹೇಳುತ್ತಿದ್ದಾರೆಯೇ ಹೊರತು ಪ್ರತ್ಯಕ್ಷದಲ್ಲಿ ಸಭೆ ಕರೆಯುತ್ತಿಲ್ಲ.
ರಸ್ತೆ ಅಗಲೀಕರಣ ಕುರಿತು ಕಾನೂನು ಪ್ರಕಾರ ಸಾರ್ವಜನಿಕ ಜಾಗೃತಿ, ಅಹವಾಲು ಸ್ವೀಕಾರ ನಡೆದಿಲ್ಲ. ಅರಣ್ಯ ಇಲಾಖೆಯಿಂದ ಅನುಮತಿ ಪಡೆಯದಿರುವಂತ ಅನೇಕ ಸಂಶಯಗಳು ಹುಟ್ಟಿಕೊಂಡಿವೆ ಎಂದರು. ಪಿ.ಬಿ. ಹಿರೇಮಠ, ಶಿವಾಜಿ ಸೂರ್ಯವಂಶಿ, ಓಟಿಲಿ ಆಯಾನೆಬೆನ್, ಪ್ರಕಾಶ ಗೌಡರ, ಅನೀಲ ಅಳ್ಳೋಳ್ಳಿ ಸುದ್ದಿಗೋಷ್ಠಿಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ
Hubli; ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ
ಅಪರಾಧ ರಹಿತ ಸಮಾಜ ನಿರ್ಮಾಣಕ್ಕೆ ಮುಂದಾಗಿ-ನ್ಯಾ| ಸಂತೋಷ ಹೆಗ್ಡೆ
Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಭೈರಪ್ಪ
Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’
PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್ ಚೌಟ
Bellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ
Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್ ಸೂಪರ್ ಶತಕ; ಡಿಕ್ಲೇರ್ ಘೋಷಿಸಿದ ಭಾರತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.