ದಸರಾ ಮಹೋತ್ಸವ :ಮಾವುತರು, ಕಾವಾಡಿಗಳಿಗೆ ಜ್ವರ
Team Udayavani, Oct 2, 2017, 7:40 AM IST
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಕಳೆದ ಹತ್ತು ದಿನಗಳ ಪ್ರವಾಸಿಗರಿಂದ ತುಂಬಿ
ಗೌಜು-ಗದ್ದಲಗಳಿಂದ ಕೂಡಿದ್ದ ಮೈಸೂರು ನಗರ ಇದೀಗ ಸಹಜ ಸ್ಥಿತಿಗೆ ಮರಳಿದೆ. ಆದರೆ, ಇನ್ನೂ ಒಂದು ವಾರಗಳ
ಕಾಲ ಮೈಸೂರು ಅರಮನೆ ಸೇರಿ ಇಡೀ ನಗರ ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸಲಿದೆ.
ಈ ಮಧ್ಯೆ, ನಾಡಹಬ್ಬ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂಸವಾರಿಯ 2 ತಂಡಗಳಲ್ಲಿ ನಾಗರಹೊಳೆ ಹಾಗೂ ಬಂಡೀಪುರ ರಾಷ್ಟ್ರೀಯ ಉದ್ಯಾನಗಳ ವಿವಿಧ ಆನೆ ಶಿಬಿರಗಳಿಂದ ಕರೆತರಲಾಗಿದ್ದ 15 ಆನೆಗಳು ಭಾನುವಾರ ಸಂಪೂರ್ಣ ವಿಶ್ರಾಂತಿಯಲ್ಲಿದ್ದವು. ಆದರೆ, ಗಜಪಡೆ ಮಾವುತರು ಹಾಗೂ ಕಾವಾಡಿಗಳು ಈಗ ಜ್ವರದಿಂದ ಬಳಲುತ್ತಿದ್ದಾರೆ.
ತುರ್ತು ಭೂಸ್ಪರ್ಶ: ದಸರಾ ಅಂಗವಾಗಿ ನಡೆಯುತ್ತಿರುವ ಹೆಲಿರೈಡ್ನ ಹೆಲಿಕಾಪ್ಟರ್ಗೆ ಭಾನುವಾರ ಪಕ್ಷಿಯೊಂದು ಡಿಕ್ಕಿ ಹೊಡೆದ ಹಿನ್ನೆಲೆಯಲ್ಲಿ ಹೆಲಿಕಾಪ್ಟರ್ನ ವಿಂಡ್ಶೀಡ್(ಮುಂದಿನ ಗಾಜು) ಒಡೆದಿದೆ. ಸಮಯಪ್ರಜ್ಞೆ ಮೆರೆದ ಪೈಲಟ್ ಹೆಲಿಕಾಪ್ಟರ್ನ್ನು ತುರ್ತಾಗಿ ಭೂಸ್ಪರ್ಶ ಮಾಡಿ, ಹೆಚ್ಚಿನ ಅನಾಹುತ ತಪ್ಪಿಸಿದ. ಖಾಸಗಿ ವಿಮಾನಯಾನ ಸಂಸ್ಥೆ ಪವನ್ ಹನ್ಸ್ಗೆ ಸೇರಿದ ಹೆಲಿಕಾಪ್ಟರ್ಗಳು ದಸರೆಯ ಅಂಗವಾಗಿ ಲಲಿತಮಹಲ್ ಹೆಲಿಪ್ಯಾಡ್ನಲ್ಲಿ ಆಯೋಜಿಸಿರುವ ಹೆಲಿರೈಡ್ನಲ್ಲಿ ಹಾರಾಟ ನಡೆಸುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.