ತುಮಕೂರು ಬಯಲು ಶೌಚ ಮುಕ್ತವಿಲ್ಲ


Team Udayavani, Oct 2, 2017, 5:31 PM IST

4-b.jpg

ತುಮಕೂರು: ಗ್ರಾಮೀಣ ಪ್ರದೇಶದ ಜನರ ಜೀವನಶೈಲಿ, ಆರೋಗ್ಯಮಟ್ಟ ಸುಧಾರಣೆಯಾಗಬೇಕಾದರೆ ಕುಟುಂಬದ ಸದಸ್ಯರ ವೈಯಕ್ತಿಕ ಶುಚಿತ್ವ ಹಾಗೂ ಗ್ರಾಮದಲ್ಲಿ ಉತ್ತಮ ನೈರ್ಮಲ್ಯ ಉಂಟಾಗಬೇಕಾದರೆ ಪ್ರತಿ ಗ್ರಾಮವನ್ನೂ ಬಯಲು ಶೌಚಾಲಯ ಮುಕ್ತ ಗ್ರಾಮವನ್ನಾಗಿ ಮಾಡಬೇಕೆನ್ನುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ 2004 ರಿಂದ ನಿರ್ಮಲ ಗ್ರಾಮ ಯೋಜನೆಯನ್ನು ಜಾರಿಗೆ ತಂದಿದ್ದು, ಅಲ್ಲಿಂದ ಇಲ್ಲಿಯವರೆಗೆ ಪ್ರಯತ್ನ ನಡೆಯುತ್ತಿದ್ದರೂ ಜಿಲ್ಲೆಯನ್ನು ಬಯಲು ಶೌಚಾಲಯ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಸಾಧ್ಯವಾಗಿಲ್ಲ.

ಗ್ರಾಮೀಣ ಪ್ರದೇಶದಲ್ಲಿ ಬಯಲು ಮಲ ವಿಸರ್ಜನೆ ಪದ್ಧತಿ ಇರುವುದರಿಂದ ಅನೇಕ ರೀತಿಯ ತೊಂದರೆಗಳು ಉಂಟಾಗುತ್ತಿರುವುದು ಸರ್ವೇ ಸಾಮಾನ್ಯವಾಗಿದೆ. ಪ್ರತಿ ವರ್ಷ ಅನೇಕ ಜನರು ವಿಷಜಂತುಗಳ ಕಡಿತದಿಂದ ಹಾಗೂ ಕಾಡು ಪ್ರಾಣಿಗಳ ದಾಳಿಯಿಂದ ತೊಂದರೆ ಅನುಭವಿಸುತ್ತಲೇ ಇದ್ದಾರೆ. ಆದರೂ ಜಿಲ್ಲೆಯ ಗ್ರಾಮೀಣ ಜನರು ಮನೆಯಲ್ಲಿ ಶೌಚಾಲಯ ನಿರ್ಮಾಣ ಮಾಡುವಲ್ಲಿ ಹಿಂದೇಟು ಹಾಕುತ್ತಿದ್ದಾರೆ.

ಜಿಲ್ಲೆಯಲ್ಲಿ 2004-05 ರಿಂದ ನಿರ್ಮಲ ಗ್ರಾಮ ಯೋಜನೆ ಮೂಲಕ ಶೌಚಾಲಯ ನಿರ್ಮಾಣ ಮಾಡುವ ಕಾರ್ಯಕ್ಕೆ ಚಾಲನೆ ದೊರೆಯಿತು ನಂತರ ಸಂಪೂರ್ಣ ಸ್ವತ್ಛತಾ ಆಂದೋಲನ ಮೂಲಕ ಶೌಚಾಲಯ ನಿರ್ಮಾಣಕ್ಕೆ ಪುಷ್ಟಿ ನೀಡಲಾಯಿತು. ಅದಾದನಂತರ ನಿರ್ಮಲ ಭಾರತ ಅಭಿಯಾನದ ಮೂಲಕ ಚಾಲನೆ ದೊರೆತು ಈಗ ಸ್ವತ್ಛ ಭಾರತ್‌ ಮಿಷನ್‌ ಅಡಿಯಲ್ಲಿ ಕಾರ್ಯನಿರ್ವಹಿಸಲಾಗುತ್ತಿದ್ದು ಈಗ ಜಿಲ್ಲೆಯಲ್ಲಿ 1.85,000 ಮಾತ್ರ ಶೌಚಾಲಯ ಹೊಂದಿರದ ಮನೆಗಳಿದ್ದು ಈ ವರ್ಷ ಜಿಲ್ಲೆಯನ್ನು ಸಂಪೂರ್ಣ ಬಯಲು ಶೌಚಮುಕ್ತ ಜಿಲ್ಲೆಯನ್ನಾಗಿ ಮಾಡಬೇಕು ಎನ್ನುವ ಗುರಿಯನ್ನು ಅಧಿಕಾರಿಗಳು ಹೊಂದಿದ್ದಾರೆ.

ದೇಶವನ್ನು ಬಯಲು ಶೌಚಾಲಯ ಮುಕ್ತವನ್ನಾಗಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಜಾರಿಗೆ ತಂದಿರುವ ನಿರ್ಮಲ್‌ ಭಾರತ ಮಿಷನ್‌ ಅಡಿಯಲ್ಲಿ 2004 ರಿಂದ 2011-12ರವರೆಗೆ ಕೇವಲ 82 ಸಾವಿರ ಶೌಚಾಲಯ ನಿರ್ಮಾಣವಾಗಿ ಪ್ರಗತಿಯಲ್ಲಿ ಕುಂಠಿತ ಕಂಡಿತ್ತು.

ಶೌಚಾಲಯ ನಿರ್ಮಾಣ ಪ್ರಗತಿ: ಕಳೆದ 2012-13 ರಿಂದ ಶೌಚಾಲಯ ನಿರ್ಮಾಣದಲ್ಲಿ ಪ್ರಗತಿ ಕಂಡು ಬಂದಿದ್ದು, ಒಂದು ವರ್ಷದಲ್ಲಿ 26216, 2013-14ರಲ್ಲಿ 34164, 2014-15ರಲ್ಲಿ 23815, 2015-16 ರಲ್ಲಿ 24,670, 2016-17 ರಲ್ಲಿ 30.640 ಶೌಚಾಲಯಗಳನ್ನು ನಿರ್ಮಾಣ ಮಾಡುವಲ್ಲಿ ಜಿಲ್ಲಾ ಪಂಚಾಯ್ತಿ ಯಶಸ್ವಿಯಾಗಿದ್ದು ಜಿಪಂ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಕೆ.ಜಿ.ಶಾಂತರಾಮ್‌ ಜಿಲ್ಲೆಯಲ್ಲಿ ಶೌಚಾಲಯ ನಿರ್ಮಾಣದಲ್ಲಿ ಉತ್ತಮ ಪ್ರಗತಿ ಸಾಧಿಸಬೇಕು ಎಂದು ಗ್ರಾಮ ಪಂಚಾಯ್ತಿ ಅಧಿಕಾರಿಗಳಿಗೆ ಮತ್ತು ತಾಲೂಕು ಪಂಚಾಯ್ತಿ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.

1.85 ಲಕ್ಷ ಕುಟುಂಬಗಳಿಗೆ ಶೌಚಾಲಯವಿಲ್ಲ: ಜಿಲ್ಲೆಯ ಒಟ್ಟು 6.40ಲಕ್ಷ ಕುಟುಂಬಗಳಲ್ಲಿ 321 ಗ್ರಾಮಪಂಚಾಯ್ತಿ ಗಳಲ್ಲಿ 495769ಲಕ್ಷ ಮನೆಗಳಲ್ಲಿ 2017 ಇಂದಿನವರೆಗೆ 3,10,769 ಮನೆಗಳಲ್ಲಿ ಶೌಚಾಲಯ ನಿರ್ಮಾಣಗೊಂಡಿದ್ದು, ಇನ್ನೂ 1.85 ಲಕ್ಷ ಕುಟುಂಬಗಳಲ್ಲಿ ಶೌಚಾಲಯವಿಲ್ಲ ಎನ್ನುವುದೇ ವಿಪರ್ಯಾಸವಾಗಿದೆ.

ಜನರಲ್ಲಿ ಇಚ್ಛಾಶಕ್ತಿಯ ಕೊರತೆ: ಸ್ವತ್ಛ ಭಾರತ ಮಿಷನ್‌ ಅಡಿಯಲ್ಲಿ ಸರಕಾರ ಪ್ರತಿ ಮನೆಗೆ ಶೌಚಾಲಯ ನಿರ್ಮಿಸಬೇಕು ಯಾರೂ ಬಯಲಲ್ಲಿ ಶೌಚ ಮಾಡಬಾರದು ಎನ್ನುವ ಉದ್ದೇಶ ಹೊಂದಿದೆ. ಇದಕ್ಕೆ ನಾಗರಿಕರು ತಮ್ಮ ಮನೆಗಳ ಬಳಿ ಶೌಚಾಲಯ ನಿರ್ಮಿಸಿಕೊಳ್ಳಲುಮುಂದಾಗಬೇಕು ಬಿಪಿಎಲ್‌ ಕುಟುಂಬಕ್ಕೆ 15 ಸಾವಿರ ರೂ ಸಹಾಯಧನ ನೀಡುತ್ತಿದೆ. ಈ ವಿಚಾರವನ್ನು ಜಿಲ್ಲೆಯ 321 ಗ್ರಾಮಪಂಚಾಯಿತಿಗಳಲ್ಲಿ ಬೀದಿನಾಟಕ, ಕರಪತ್ರ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರ ಮೂಲಕ ವ್ಯಾಪಕ ಪ್ರಚಾರ ಮಾಡಲಾಗಿದೆ.

ಆದರೆ ಜನರಲ್ಲಿನ ಇಚ್ಛಾಶಕ್ತಿಯ ಕೊರತೆಯಿಂದ ಶೌಚಾಲಯ ನಿರ್ಮಾಣ ಕೊಂಚ ವಿಳಂಬವಾಗಿದೆ. ಒಂದು ಮನೆಯಲ್ಲಿ ಎರಡೆರಡು ಮೊಬೈಲ್‌ ಪೋನ್‌ ಇಟ್ಟುಕೊಳ್ಳುವ ಗ್ರಾಮೀಣ ಜನತೆ ಜಾತ್ರೆ, ಉತ್ಸವ, ಹಬ್ಬ ಹರಿದಿನಗಳಿಗಾಗಿ ಸಾವಿರಾರು ರೂ. ಖರ್ಚು ಮಾಡುತ್ತಾರೆ. ತಮ್ಮ ಗ್ರಾಮದ ಪರಿಸರ ಹಾಗೂ ಕುಟುಂಬದ ಮಹಿಳೆಯರು ಮಲವಿಸರ್ಜನೆಗಾಗಿ ಚೆಂಬು ಹಿಡಿದುಕೊಂಡು ಬೇಲಿ ಸಾಲು, ತೆರೆಮರೆಗಳಿಗೆ ಹೋದಾಗ ಅನೇಕ ಅವಘಡಗಳು ಸಂಭವಿಸುವುದರ ಜೊತೆಗೆ ರೋಗ ರುಜನುಗಳು ಕಂಡು ಬರುತ್ತಿದ್ದರೂ ಜನರು ಶೌಚಾಲಯ ಕಟ್ಟಿಸಿಕೊಳ್ಳಲು ಹಿಂಜರಿಯುತ್ತಿರುವುದು ದುರದೃಷ್ಟ ಕರ ಸಂಗತಿಯಾಗಿದೆ.

ಜಿಲ್ಲೆಯ 321 ಗ್ರಾಮಪಂಚಾಯಿತಿಗಳಲ್ಲಿ ಜಿಲ್ಲೆಯ 10 ಗ್ರಾಮ ಪಂಚಾಯ್ತಿ ಗಳು ಶೇ100 ರಷ್ಟು ಸಂಪೂರ್ಣ ಬಯಲು ಶೌಚಮುಕ್ತ ಗ್ರಾಮ ಪಂಚಾಯ್ತಿ ಗಳಾಗಿವೆ ಅವುಗಳಲ್ಲಿ ತುಮಕೂರು ತಾಲೂಕಿನ 7 ಗ್ರಾಮ ಪಂಚಾಯ್ತಿಗಳಾದ ಅರಕೆರೆ, ಊರುಕೆರೆ, ಬೆಳಗುಂಬ, ಬುಗುಡನಹಳ್ಳಿ, ಹಿರೇಹಳ್ಳಿ, ಸೌಂದೇನಹಳ್ಳಿ, ಹೆಗ್ಗೆರೆ ಗ್ರಾಮಪಂಚಾಯ್ತಿಗಳು, ತುರುವೇಕೆರೆಯ ತಾಲೂಕಿನ ಮಾಯುಸಂದ್ರ, ಅಮ್ಮಸಂದ್ರ, ಕುಣಿಗಲ್‌ ತಾಲೂಕಿನ ಬೇಗೂರು ಗ್ರಾಮ ಪಂಚಾಯ್ತಿಗಳು ಶೇ.100 ಸಾಧನೆ ಮಾಡಿವೆ.

ಸರ್ಕಾರ ಏನೆಲ್ಲಾ ಹೊಸ ಹೊಸ ಯೋಜನೆಗಳನ್ನು ಜಾರಿಗೆ ತಂದರೂ ಜಾರಿಗೊಳಿಸುವ ಅಧಿಕಾರಿಗಳ ಇಚ್ಛಾಶಕ್ತಿಯ ಜೊತೆಗೆ ನಾಗರೀಕರ ಸಹಭಾಗಿತ್ವವೂ ಮುಖ್ಯವಾಗಿದ್ದು, ಜಿಲ್ಲೆಯಲ್ಲಿ ಬಯಲು ಶೌಚಾಲಯದಿಂದ ಹಲವು ಜನರು ಸಂಕಷ್ಟ ಅನುಭವಿಸುತ್ತಲೇ ಇದ್ದಾರೆ. ಇದಕ್ಕೆ ಮುಕ್ತಿ ಎಂದು?

ತುಮಕೂರು ಜಿಲ್ಲೆಯನ್ನು ಬಯಲು ಶೌಚಾಲಯ ಮುಕ್ತ ವಾಗಿಸಲು ವ್ಯಾಪಕ ಪ್ರಚಾರ ಮಾಡಿ ಜನರಲ್ಲಿ ಅರಿವು ಮೂಡಿಸಲಾಗುತ್ತಿದೆ. ಗ್ರಾಮೀಣ ಪ್ರದೇಶದ ನಾಗರಿಕರು ಶೌಚಾಲಯ ನಿರ್ಮಾಣ ಮಾಡಿಕೊಳ್ಳಲು ಮುಂದೆ ಬರುತ್ತಿಲ್ಲ. ಜನರು ಮನಸ್ಸು ಮಾಡದ ಹೊರತು ಯಾವುದೇ ಯೋಜನೆಗಳು ಫ‌ಲಪ್ರದವಾಗುವುದಿಲ್ಲ. ಉತ್ತಮ ಪರಿಸರ ನಿರ್ಮಾಣ ಮಾಡಬೇಕಾದರೆ ನಾಗರಿಕರ ಸಹಭಾಗಿತ್ವವೂ ಮುಖ್ಯ
-ಕೆ.ಜಿ.ಶಾಂತರಾಮ್‌, ಜಿಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ 

ಜಿಲ್ಲೆಯನ್ನು ಸಂಪೂರ್ಣ ಬಯಲು ಶೌಚಾಲಯ ಮುಕ್ತಗೊಳಿಸುವ ಗುರಿ ಹೊಂದಿದ್ದೇವೆ. ಈ ವರ್ಷ ಈವರೆಗೆ 30,000 ಶೌಚಾಲಯ ನಿರ್ಮಾಣ ಮಾಡಿದ್ದೇವೆ.ಬರುವ ಮಾರ್ಚ್‌ ಒಳಗೆ ಜಿಲ್ಲೆಯಲ್ಲಿ ಉಳಿದಿರುವ 1,85,000 ಶೌಚಾಲಯ ನಿರ್ಮಾಣ ಮಾಡುವ ಗುರಿ ಹೊಂದಿದ್ದೇವೆ. 
-ಪಿ.ಕೃಷ್ಣಪ್ಪ ಜಿಪಂ ಉಪ ಕಾರ್ಯದರ್ಶಿ 

* ಚಿ.ನಿ. ಪುರುಷೋತ್ತಮ್‌

ಟಾಪ್ ನ್ಯೂಸ್

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

1-hejb

Israel ಸರ್ಜಿಕಲ್‌ ಸ್ಟ್ರೈಕ್‌: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್‌ ಬಾಂಬ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

V.-Somanna

Railway Development: ರಾಜ್ಯದಲ್ಲಿ ರೈಲ್ವೇ ಕ್ರಾಂತಿಗೆ ಬದ್ಧ: ಕೇಂದ್ರ ಸಚಿವ ಸೋಮಣ್ಣ

1-cantar

Kunigal; ಬೈಕ್ ಗೆ ಕ್ಯಾಂಟರ್ ಡಿಕ್ಕಿ:ಇಬ್ಬರು ಯುವಕರು ಸ್ಥಳದಲ್ಲೇ ಮೃ*ತ್ಯು

12-madhugiri

Tumkur:ಕೌಟುಂಬಿಕ ಕಲಹಕ್ಕೆ ಬೇಸತ್ತು ಇಬ್ಬರು ಮಕ್ಕಳೊಂದಿಗೆ ತಾಯಿ ಕೆರೆಗೆ ಬಿದ್ದು ಆತ್ಮಹತ್ಯೆ

9-koratagere

Koratagere: ನರೇಗಾ ಕಾಮಗಾರಿ ಹಣ ದುರುಪಯೋಗ, ಗ್ರಾ.ಪಂ. ಪಿಡಿಓ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.