ಮಕ್ಕಳ ಕೈಗೆ ಪೊರಕೆ ಬದಲು ಲೇಖನಿ ಕೊಡಿ 


Team Udayavani, Oct 3, 2017, 1:34 PM IST

ms6.jpg

ಹುಣಸೂರು: ಪೌರಕಾರ್ಮಿಕರ ಮಕ್ಕಳ ಕೈಗೆ ಪೊರಕೆ ಬದಲಿಗೆ ಲೇಖನಿ ಕೊಡಿಸಿದರೆ ಮಕ್ಕಳು ಸಮಾಜದಲ್ಲಿ ಉನ್ನತ ಸ್ಥಾನಕ್ಕೇರಿ ಸಮಬಾಳು ಸಮಪಾಲಿಗೆ ನೈಜ ಅರ್ಥ ಬರಲಿದೆ ಎಂದು ನಗರಸಭೆ ಅಧ್ಯಕ್ಷ ಕೆ.ಲಕ್ಷ್ಮಣ್‌ ಅಭಿಪ್ರಾಯಪಟ್ಟರು. ನಗರದ ಪಿ.ಕೆ.ಕಾಲೋನಿಯಲ್ಲಿ ಗಾಂಧಿ ಜಯಂತಿ ಅಂಗವಾಗಿ ನಗರಸಭೆ ಸತ್ಯ ಎಂಎಎಸ್‌ ಫೌಂಡೇಶನ್‌ ವತಿಯಿಂದ ಆಯೋಜಿಸಿದ್ದ ಬಡಾವಣೆ ಸ್ವತ್ಛತೆ, ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಪೌರ ಕಾರ್ಮಿಕರ ಕಾಲೋನಿಯಲ್ಲಿ ಕಾರ್ಯಕ್ರಮ ಹಮ್ಮಿಕೊಂಡು ಗಾಂಧೀಜಿಯವರ ಕನಸನ್ನು ನನಸು ಮಾಡಲು ಪಣತೊಟ್ಟಿರುವುದು ಒಳ್ಳೆಯ ಬೆಳವಣಿಗೆ. ಗಾಂಧೀಜಿಯವರು ದಲಿತ ಕೇರಿಗಳಿಗೆ ಭೇಟಿ ನೀಡುವ ಮೂಲಕ ಜಾಗೃತಿ ಮೂಡಿಸುವ ಕೆಲಸ ಪ್ರಾರಂಭಿಸಿದ್ದರು. ಅವರ ಆದರ್ಶಗಳಿಗೆ ಸೇವಾ ಕಾರ್ಯಕ್ರಮಗಳು ಪೂರಕವಾಗಿವೆ ಎಂದು ಹೇಳಿದರು. ಮಕ್ಕಳನ್ನು ಕೂಲಿ ಕೆಲಸಕ್ಕೆ ಹಚ್ಚದೆ ವಿದ್ಯಾಭ್ಯಾಸ ಕೊಡಿಸುವತ್ತ ಚಿಂತಿಸಬೇಕಿದ್ದು ಕುಡಿತದ ಚಟಕ್ಕಿಂಟಿಕೊಂಡವರು ಚಟ ಬಿಡುವ ಪ್ರತಿಜ್ಞೆ ಮಾಡಬೇಕೆಂದರು. 

ಸತ್ಯ ಫೌಂಡೇಶನ್‌ ಅಧ್ಯಕ್ಷ ಸತ್ಯಪ್ಪ, ಪೌರಕಾರ್ಮಿಕ ಮಕ್ಕಳು ಮೂಲ ವೃತ್ತಿಯನ್ನು ಬಿಟ್ಟು ಬೇರೆ ಬೇರೆ ಕ್ಷೇತ್ರಗಳಲ್ಲಿ ತೊಡಗಿಕೊಳ್ಳಬೇಕೆಂದರು. ಪೌರಕಾರ್ಮಿಕರ ಮಕ್ಕಳು ಐಎಎಸ್‌, ಐಪಿಎಸ್‌ ಸ್ಪರ್ಧಾತ್ಮಕ ಹುದ್ದೆಗಳಿಗೆ ಹೋಗುವ ಮೂಲಕ ಸಮಾಜದಲ್ಲಿ ಪರಿವರ್ತನೆ ತರಬೇಕು. ಪ್ರಪಂಚದಲ್ಲಿ ಎಲ್ಲಾ ಮಹಿಳೆಯರಿಗೂ ಎಲ್ಲಾ ಕ್ಷೇತ್ರಗಳಲ್ಲೂ ಸಮಾನತೆ ದೊರೆಯಬೇಕು ಎಂದು ತಿಳಿಸಿದರು.

ನಗರಸಭೆ ಸದಸ್ಯ ಎಚ್‌.ಮಹದೇವ್‌, ಆರೋಗ್ಯಾಧಿಕಾರಿ ಸತೀಶ್‌, ಮೋಹನ್‌, ಪುರಸಭಾ ಮಾಜಿ ಸದಸ್ಯ ವರದರಾಜು, ಟಿಂಬರ್‌ ಮರ್ಚೆಂಟ್‌ ಅಸೋಷಿಯೇಶನ್‌ ಅಧ್ಯಕ್ಷ ದೇವರಾಜು, ಪುಸಭಾ ಮಾಜಿ ಅಧ್ಯಕ್ಷ ಚಂದ್ರನಾಯ್ಕ, ರೈತ ಸಂಘದ ಅಧ್ಯಕ್ಷ ಬೆಟ್ಟೇಗೌಡ, ಜಿಲ್ಲಾಧ್ಯಕ್ಷ ಹೊಸೂರು ಕೃಷ್ಣಕುಮಾರ್‌, ಪರಿಸರ ಎಂಜಿನಿಯರ್‌ ರವಿಕುಮಾರ್‌ ಮಾತನಾಡಿದರು.

ಕಾಲೋನಿ ಮುಖಂಡ ಕುಮಾರ್‌, ಚಿಕ್ಕಯಜಮಾನ ವೀರಯ್ಯ, ಕಾರ್ಯದರ್ಶಿ ಮಣಿಕಂಠ, ಸಫಾಯಿ ಕರ್ಮಚಾರಿ ಮಹಿಳಾ ಸಂಘದ ಅಧ್ಯಕ್ಷೆ ಬನ್ನಮ್ಮ, ಗುತ್ತಿಗೆ ಪೌರಕಾರ್ಮಿಕ ಸಂಘದ ಅಧ್ಯಕ್ಷ ಎಚ್‌.ಸಿ.ಮಾದ, ಬಿ.ಆರ್‌.ಅಂಬೇಡ್ಕರ್‌ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಮುರುಗೇಶ, ಪೌರಕಾರ್ಮಿಕರ ಅಭಿವೃದ್ಧಿ ಸಂಘದ ಅಧ್ಯಕ್ಷರಾದ ಸಿ.ಎಚ್‌.ರಾಮ, ಶಾಂತಮ್ಮ, ಪಾರ್ವತಿ ಮತ್ತಿತರರಿದ್ದರು.

ಕಾಲೋನಿ ಮಕ್ಕಳ ಶಿಕ್ಷಣಕ್ಕಾಗಿ ಈಗಾಗಲೇ ಶಾಸಕ ಮಂಜುನಾಥ್‌ರೊಂದಿಗೆ ಚರ್ಚಿಸಿದ್ದೇನೆ. ದೇವಸ್ಥಾನದ ಜಾಗದಲ್ಲಿ ಅಂಗನವಾಡಿ ಕೇಂದ್ರ ತೆರೆಯಲಾಗುವುದು, ಸಂಜೆ ವೇಳೆ ಇತರೆ ಮಕ್ಕಳಿಗೆ ಉಚಿತವಾಗಿ ಪಾಠ ಹೇಳಿಕೊಡಲಾಗುವುದು.
-ಕೆ.ಲಕ್ಷ್ಮಣ್‌, ನಗರಸಭೆ ಅಧ್ಯಕ್ಷ

ಟಾಪ್ ನ್ಯೂಸ್

1-asss-bg

Baba Siddique;ಪ್ರಕರಣ ರಾಜಕೀಯಗೊಳಿಸಬೇಡಿ: ನ್ಯಾಯಬೇಕು ಎಂದ ಪುತ್ರ

Emergency

Film Censor: ‘ಎಮರ್ಜೆನ್ಸಿ’ ಸಿನಿಮಾಕ್ಕೆ ಕೊನೆಗೂ ಸಿಕ್ಕಿತು ಸೆನ್ಸಾರ್‌ ಪ್ರಮಾಣಪತ್ರ!

1-cccc

Haryana; ಸೋಲಿನ ಬೆನ್ನಲ್ಲೇ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ ಕ್ಯಾಪ್ಟನ್ ಅಜಯ್ ಯಾದವ್

Congress Govt.,: ವಾಲ್ಮೀಕಿ ಸಮಾಜದ ಕ್ಷಮೆ ಕೇಳಲಿ: ಆರಗ ಜ್ಞಾನೇಂದ್ರ

Congress Govt.,: ವಾಲ್ಮೀಕಿ ಸಮಾಜದ ಕ್ಷಮೆ ಕೇಳಲಿ: ಆರಗ ಜ್ಞಾನೇಂದ್ರ

Vimana 2

Hoax bomb calls; ಕ್ರಮ ತೆಗೆದುಕೊಳ್ಳಲಾಗುತ್ತಿದೆ:ಸಚಿವ ರಾಮ್ ಮೋಹನ್ ನಾಯ್ಡು

Flight: ಹುಬ್ಬಳ್ಳಿ-ಅಹ್ಮದಾಬಾದ್‌ ವಿಮಾನ ಸೇವೆ ಆರಂಭಕ್ಕೆ ಜೋಶಿ,ನಾಯ್ಡು ಚರ್ಚೆ

Flight: ಹುಬ್ಬಳ್ಳಿ-ಅಹ್ಮದಾಬಾದ್‌ ವಿಮಾನ ಸೇವೆ ಆರಂಭಕ್ಕೆ ಜೋಶಿ,ನಾಯ್ಡು ಚರ್ಚೆ

Pushpa 2: ರಿಲೀಸ್‌ಗೂ ಮೊದಲೇ 900 ಕೋಟಿ ರೂ. ಕಲೆಕ್ಷನ್‌ ಮಾಡಿದ ಅಲ್ಲು ಅರ್ಜುನ್‌ ʼಪುಷ್ಪ-2ʼ

Pushpa 2: ರಿಲೀಸ್‌ಗೂ ಮೊದಲೇ 900 ಕೋಟಿ ರೂ. ಕಲೆಕ್ಷನ್‌ ಮಾಡಿದ ಅಲ್ಲು ಅರ್ಜುನ್‌ ʼಪುಷ್ಪ-2ʼ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur-1

Hunsur: ತಂಬಾಕು ಬೆಳೆಗಾರರ ರಕ್ಷಣೆಗೆ ಬದ್ದ: ಸಂಸದ ಯದುವೀರ್ ಒಡೆಯರ್

ಮುಡಾ ಅಧ್ಯಕ್ಷ ಕೆ.ಮರಿಗೌಡ ತಲೆದಂಡ?

MUDA Chairman: ಕೆ.ಮರಿಗೌಡ ತಲೆದಂಡ? ಇಂದು ಅಥವಾ ನಾಳೆ ರಾಜೀನಾಮೆ ನೀಡುವ ಸಾಧ್ಯತೆ

Mysuru: ದೀಪಾಲಂಕಾರ ವಿಸ್ತರಣೆ: ವಾಹನ ಸಂಚಾರ ನಿರ್ಬಂಧವೂ ಮುಂದುವರಿಕೆ

Mysuru: ದೀಪಾಲಂಕಾರ ವಿಸ್ತರಣೆ: ವಾಹನ ಸಂಚಾರ ನಿರ್ಬಂಧವೂ ಮುಂದುವರಿಕೆ

MUDA Case: ಸಾಕ್ಷ್ಯನಾಶ ಮಾಡಲು ಅದೇನು ಕೊಲೆ ಕೇಸಾ?: ಎಂ.ಲಕ್ಷ್ಮಣ್‌

MUDA Case: ಸಾಕ್ಷ್ಯನಾಶ ಮಾಡಲು ಅದೇನು ಕೊಲೆ ಕೇಸಾ?: ಎಂ.ಲಕ್ಷ್ಮಣ್‌

Mysuru: ಮರಳಿ ಕಾಡಿನತ್ತ ಪ್ರಯಾಣ ಬೆಳೆಸಿದ ಗಜಪಡೆ

Mysuru: ಮರಳಿ ಕಾಡಿನತ್ತ ಪ್ರಯಾಣ ಬೆಳೆಸಿದ ಗಜಪಡೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

1-asss-bg

Baba Siddique;ಪ್ರಕರಣ ರಾಜಕೀಯಗೊಳಿಸಬೇಡಿ: ನ್ಯಾಯಬೇಕು ಎಂದ ಪುತ್ರ

17

Belthangady: ಕಾಶಿಬೆಟ್ಟು: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು

Emergency

Film Censor: ‘ಎಮರ್ಜೆನ್ಸಿ’ ಸಿನಿಮಾಕ್ಕೆ ಕೊನೆಗೂ ಸಿಕ್ಕಿತು ಸೆನ್ಸಾರ್‌ ಪ್ರಮಾಣಪತ್ರ!

complaint

Kundapura: ಪತಿಯಿಂದ ಹಲ್ಲೆ, ಬೆದರಿಕೆ; ದೂರು

accident

Davanagere; ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃ*ತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.