ಗಾಂಧಿ ಕಟ್ಟೆ : ಗಾಂಧಿ ಪ್ರತಿಮೆಗೆ ಗೌರವಾರ್ಪಣೆ
Team Udayavani, Oct 3, 2017, 3:17 PM IST
ನಗರ: ಮಹಾತ್ಮಾ ಗಾಂಧೀಜಿಯವರು ಪುತ್ತೂರಿಗೆ ಭೇಟಿ ನೀಡಿದ್ದ ಸಂದರ್ಭ ಅವರು ಸ್ವಾತಂತ್ರ್ಯ ಹೋರಾಟಗಾರರನ್ನು ಉದ್ದೇಶಿಸಿ ಮಾತನಾಡಿದ್ದ ಚಾರಿತ್ರಿಕ ಗಾಂಧಿ ಕಟ್ಟೆಯಲ್ಲಿ ಸೋಮವಾರ ಗಾಂಧಿ ಪ್ರತಿಮೆಗೆ ಗೌರವಾರ್ಪಣೆ ಕಾರ್ಯಕ್ರಮ ನಡೆಯಿತು.
ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಮತ್ತು ಗಾಂಧಿ ಕಟ್ಟೆ ಅಭಿವೃದ್ಧಿ ಸಮಿತಿಯ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ಪ್ರತಿಮೆಗೆ ಹಾರಾರ್ಪಣೆ ಮಾಡಿದರು.
ಸಹಾಯಕ ಕಮಿಷನರ್ ಡಾ| ರಘುನಂದನ ಮೂರ್ತಿ, ತಹಶೀಲ್ದಾರ್ ಅನಂತ ಶಂಕರ್, ತಾ. ಪಂ. ಅಧ್ಯಕ್ಷೆ ಭವಾನಿ ಚಿದಾನಂದ, ನಗರಸಭೆ ಅಧ್ಯಕ್ಷೆ ಜಯಂತಿ ಬಲ್ನಾಡು , ಪೌರಾಯುಕ್ತೆ ರೂಪಾ ಟಿ. ಶೆಟ್ಟಿ, ಪುತ್ತೂರು ನಗರ ಯೋಜನ ಪ್ರಾಧಿಕಾರದ ಅಧ್ಯಕ್ಷ ಪ್ರಸಾದ್ ಕೌಶಲ್ ಶೆಟ್ಟಿ, ಕ್ಷೇತ್ರ ಶಿಕ್ಷಣಾಧಿಕಾರಿ ಸುಕನ್ಯಾ, ಹಿರಿಯ ನ್ಯಾಯವಾದಿ ಬಿ. ಪುರಂದರ ಭಟ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್
ಬಡಗನ್ನೂರು, ನಗರ ಕಾಂಗ್ರೆಸ್ ಅಧ್ಯಕ್ಷ ಸೂತ್ರಬೆಟ್ಟು ಜಗನ್ನಾಥ ರೈ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ವಿಶಾಲಾಕ್ಷಿ ಬನ್ನೂರು, ಮಾಜಿ ನಗರಸಭಾ ಅಧ್ಯಕ್ಷ ನೆಲ್ಲಿಕಟ್ಟೆ ಜಗದೀಶ್ ಶೆಟ್ಟಿ, ಸೇವಾದಳದ ಮುಖಂಡ ಜೋಕಿಂ ಡಿ’ಸೋಜಾ, ಮಾನವ ಬಂಧುತ್ವ ವೇದಿಕೆಯ ತಾಲೂಕು ಸಂಚಾಲಕ ಅಮಲ ರಾಮಚಂದ್ರ, ತಾ| ವಕೀಲರ ಸಂಘದ ಅಧ್ಯಕ್ಷ ಭಾಸ್ಕರ ಕೋಡಿಂಬಾಳ, ಗಾಂಧಿಕಟ್ಟೆ ಅಭಿವೃದ್ಧಿ ಸಮಿತಿಯ ಕೃಷ್ಣ ಪ್ರಸಾದ್ ಶೆಟ್ಟಿ, ಸೀತಾರಾಮ ಶೆಟ್ಟಿ ಉಪಸ್ಥಿತರಿದ್ದರು.
ನ್ಯಾಯವಾದಿ ಕುಂಬ್ರ ದುರ್ಗಾಪ್ರಸಾದ್ ರೈ ವಂದಿಸಿದರು. ರಮೇಶ್ ಬಾಬು ಕಾರ್ಯಕ್ರಮ ನಿರ್ವಹಿಸಿದರು.
ಗಾಂಧಿ ಕಟ್ಟೆ ಅಭಿವೃದ್ಧಿ: ಚರ್ಚೆ
ಗಾಂಧಿ ಕಟ್ಟೆ ಅಭಿವೃದ್ಧಿ ಕುರಿತು ಈ ಸಂದರ್ಭ ಶಾಸಕರು ಸಹಾಯಕ ಕಮಿಷನರ್ ಜತೆ ಮಾತುಕತೆ ನಡೆಸಿದರು. ಅಶ್ವತ್ಥ ಮರದ ರೆಂಬೆಗಳನ್ನು ಮಾತ್ರ ಕಡಿಯುವುದು ಮತ್ತು ಗಾಂಧಿ ಕಟ್ಟೆಯನ್ನು ಅಭಿವೃದ್ಧಿ ಪಡಿಸುವುದು ಉತ್ತಮ ಎಂದು ಶಾಸಕರು ಹೇಳಿದರು. ಗಾಂಧಿ ಕಟ್ಟೆಯನ್ನು ಈಗಿನ ಸ್ಥಳದಿಂದ ಐದು ಅಡಿ ಹಿಂದಕ್ಕೆ ಕೊಂಡೊಯ್ದು ನಿರ್ಮಿಸುವ ಪ್ರಸ್ತಾವನೆ ಇದೆ ಎಂದು ಹಿಂದೂಸ್ಥಾನ್ ಪ್ರಮೋಟರ್ಸ್ ಆ್ಯಂಡ್ ಬಿಲ್ಡರ್ಸ್ ಸಂಸ್ಥೆಯ ಪ್ರತಿನಿಧಿ ನೆಲ್ಲಿಕಟ್ಟೆ ಜಗದೀಶ್ ಶೆಟ್ಟಿ ಹೇಳಿದರು. ಮರು ನಿರ್ಮಾಣ ಯೋಜನೆಗೆ ಸರಕಾರದ ಕಡೆಯಿಂದ ಅನುದಾನ ಒದಗಿಸಿ ಕೊಡುವಂತೆ ಗಾಂಧಿ ಕಟ್ಟೆ ಅಭಿವೃದ್ಧಿ ಸಮಿತಿಯ ಕೃಷ್ಣ ಪ್ರಸಾದ್ ಆಳ್ವ ಅವರು ಸಹಾಯಕ ಕಮಿಷನರ್ ಅವರಿಗೆ ವಿನಂತಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Desi Swara: ಮೊಂತಿ ಆಚರಣೆ- ವರ್ಷದ ಮೊದಲ ಸುಗ್ಗಿ ಸಂಭ್ರಮ
Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು
Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ
Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ
Artificial Intelligence: ಕೃತಕ ಬುದ್ಧಿಮತ್ತೆ ಕ್ರಾಂತಿ- ಹೊಸ ಸಂಗಾತಿ ಹೊಸ ಅವಕಾಶ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.